Homeದಲಿತ್ ಫೈಲ್ಸ್ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ಬುಧವಾರ ನಡೆದ ಘಟನೆಯ ಕುರಿತು ಅಶ್ರಿನ್‌ ಎನ್‌ಡಿಟಿವಿಯೊಂದಿಗೆ ಹಂಚಿಕೊಂಡಿದ್ದು, “ದಾಳಿಯನ್ನು ನೋಡುತ್ತಿದ್ದ ಜನರು ವಿಡಿಯೊ ಮಾಡುತ್ತ ನಿಂತಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಹೈದರಾಬಾದ್‌ನ ಜನನಿಬಿಡ ರಸ್ತೆಯೊಂದರಲ್ಲಿ ಆಕೆಯ ಪತಿಯನ್ನು ಕಬ್ಬಿಣದ ರಾಡುಗಳಿಂಡ ಹೊಡೆದು ಸಾಯಿಸಲಾಯಿತು. ಜನರಲ್ಲಿ ಸಹಾಯಕ್ಕಾಗಿ ಬೇಡಿಕೊಂಡರೂ ಗಂಡನನ್ನು ಕಾಪಾಡಲು ಸಾಧ್ಯವಾಗಲಿಲ್ಲ. “ನನ್ನ ಸಹೋದರ ಮತ್ತು ಆತನ ಸ್ನೇಹಿತರೇ ಹಂತಕರು” ಎಂದು ಸೈಯದ್ ಅಶ್ರಿನ್ ಸುಲ್ತಾನಾ ಪೊಲೀಸರಿಗೆ ಹೇಳಿಕೆ ನೀಡಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಬಯಸಿದ್ದಾರೆ.

ಎರಡು ದಿನಗಳ ಹಿಂದೆ ಪತಿ ಬಿ.ನಾಗರಾಜು ನಿಧನರಾದ ನಂತರ ಅಶ್ರಿನ್‌ ಮೊದಲ ಬಾರಿಗೆ ಗಂಡನ ಮನೆಗೆ ಬಂದರು. ನಾಗರಾಜು ಹುಟ್ಟಿ ಬೆಳೆದ ಮನೆಯಲ್ಲಿಯೇ, ಆತನ ನೆನಪುಗಳೊಂದಿಗೆ ಸಾಯುವವರೆಗೂ ಬದುಕುತ್ತೇನೆ ಎಂದಿದ್ದಾರೆ ಸುಲ್ತಾನಾ.

ದಲಿತ ಜಾತಿಗೆ ಸೇರಿದ ನಾಗರಾಜು ಅವರು ತನ್ನ ಮುಸ್ಲಿಂ ಪತ್ನಿಯ ಸಹೋದರ ನಡೆಸಿದ ಭೀಕರ ದಾಳಿಯಿಂದ ಸಾವನ್ನಪ್ಪಿದ್ದಾರೆ.

ನೋವಿನಿಂದ ಜರ್ಜರಿತರಾಗಿರುವ ಸುಲ್ತಾನಾ (21), ಬುಧವಾರ ಸಂಜೆ ನಡೆದ ಘಟನೆಯ ಭಯಾನಕತೆಯ ಕುರಿತು ಎನ್‌ಡಿಟಿವಿ ಜೊತೆಯಲ್ಲಿ ಹಂಚಿಕೊಂಡಿದ್ದಾರೆ.

“ನಾನು ಮತ್ತು ನನ್ನ ಪತಿ ಬೈಕಿನಲ್ಲಿ ಹೋಗುತ್ತಿದ್ದೆವು. ರಸ್ತೆ ದಾಟಲು ಸ್ವಲ್ಪ ವೇಗವನ್ನು ಕಡಿಮೆ ಮಾಡಿದರು. ಇದ್ದಕ್ಕಿದ್ದಂತೆ ಎರಡು ಬೈಕುಗಳು ಬಂದವು. ಅದರಲ್ಲಿ ನನ್ನ ಸಹೋದರನು ಒಬ್ಬನಿದ್ದನೆಂದು ಭಾವಿಸಿರಲಿಲ್ಲ. ಅವರು ನನ್ನ ಗಂಡನನ್ನು ತಳ್ಳಿದರು. ನನ್ನ ಗಂಡ ಬಿದ್ದರು. ಅವರು ಹೊಡೆಯಲು ಪ್ರಾರಂಭಿಸಿದರು. ನಾನು ಗಂಡನನ್ನು ರಕ್ಷಿಸಲು ಪ್ರಯತ್ನಿಸಿದಾಗ, ನನ್ನ ಸಹೋದರನ ಸ್ನೇಹಿತರು ನನ್ನನ್ನೂ ತಳ್ಳಿದರು. ನಾನು ಸಹಾಯಕ್ಕಾಗಿ ಮನವಿ ಮಾಡಿದೆ. ಆದರೆ ಜನರು ವೀಡಿಯೊಗಳನ್ನು ಮಾಡಿಕೊಳ್ಳುತ್ತಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಎಲ್ಲವೂ ಮುಗಿದುಹೋಯಿತು. ಆದರೆ ಜನರು ಮಧ್ಯಪ್ರವೇಶಿಸಿ ಘಟನೆಯನ್ನು ತಡೆಯಲು ಸಾಕಷ್ಟು ಅವಕಾಶವಿತ್ತು ಎನ್ನುತ್ತಾರೆ ಸುಲ್ತಾನಾ. ಸಹಾಯಕ್ಕಾಗಿ ಅಂಗಲಾಚುತ್ತಾ ಸಮಯವನ್ನು ವ್ಯರ್ಥ ಮಾಡಿದೆ ಎಂದು ಭಾವಿಸುತ್ತಾರೆ ಅವರು.

“10 ರಿಂದ 15 ನಿಮಿಷಗಳಲ್ಲಿ, ನನ್ನ ಗಂಡನಿಗೆ ರಾಡ್‌ನಿಂದ 30 ರಿಂದ 35 ಬಾರಿ ಹೊಡೆದರು. ಅವರು ನನ್ನ ಗಂಡನ ಮೆದುಳಿಗೆ ಹೊಡೆದರು, ಅವರು ಕೊನೆಯುಸಿರೆಳೆದರು. ಅವರ ಮೆದುಳು ಹೊರಚೆಲ್ಲಿತ್ತು. ಸಮಾಜವನ್ನು ನಂಬಿ ಜನರ ಸಹಾಯ ಕೇಳುತ್ತಾ ಸಮಯ ಹಾಳು ಮಾಡುತ್ತಿದ್ದೆ. ಆ ಸಮಯವನ್ನು ನನ್ನ ಪತಿಗೆ ಏನಾದರೂ ಸಹಾಯ ಮಾಡಬಹುದಿತ್ತು. ನನ್ನ ಅಣ್ಣ ಕೊಂದಿದ್ದು ನನ್ನ ಪತಿಗೂ ತಿಳಿದಿರಲಿಲ್ಲ. ಇಪ್ಪತ್ತು ಜನ ನಾಲ್ಕು ಜನರನ್ನು ತಡೆಯಬಹುದಿತ್ತು” ಎಂದು ತಿಳಿಸಿದ್ದಾರೆ.

ಅಂತರ್‌ ಧರ್ಮೀಯ ವಿವಾಹಕ್ಕೆ ಹುಡುಗಿಯ ಕುಟುಂಬ ವಿರೋಧ ವ್ಯಕ್ತಪಡಿಸಿತ್ತು. ಇದನ್ನು ಧಿಕ್ಕರಿಸಿ 25 ವರ್ಷ ವಯಸ್ಸಿನ ಕಾರು ಮಾರಾಟಗಾರ ನಾಗರಾಜು ಮತ್ತು ಸುಲ್ತಾನಾ ಜನವರಿ 31 ರಂದು ವಿವಾಹವಾದರು. ನಾಗರಾಜು ದಲಿತ ಜಾತಿಗೆ ಸೇರಿದವರಾಗಿದ್ದಾರೆ.

ಆದರೆ ಇಬ್ಬರೂ ಶಾಲಾ ದಿನಗಳಿಂದಲೇ ಪರಿಚಿತರು. ಹುಚ್ಚರಂತೆ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿ ಮೇಲುಗೈ ಸಾಧಿಸುತ್ತದೆ ಹಾಗೂ ಗೆದ್ದೇಗೆಲ್ಲುತ್ತೇವೆ ಎಂದು ಭಾವಿಸಿದ್ದರು. ಧರ್ಮವು ಅವರನ್ನು ಹಿಂದೆಂದೂ ಕಾಡಿರಲಿಲ್ಲ.

“ನನ್ನ ಮನೆಯವರಿಂದ ಯಾವಾಗಲೂ ಬೆದರಿಕೆ ಇತ್ತು, ಸಮಸ್ಯೆ ಇರುವುದರಿಂದ ಬೇರೆ ಮದುವೆಯಾಗಲು ನಾನು ರಾಜುಗೆ ಹೇಳಿದ್ದೆ. ನಾನು ಅವರ ಮನವೊಲಿಸಲು ಎರಡು ತಿಂಗಳು ಪ್ರಯತ್ನಿಸಿದೆ. ಆದರೆ ರಾಜು- ನಾವು ಒಟ್ಟಿಗೆ ಬದುಕುತ್ತೇವೆ ಮತ್ತು ಒಟ್ಟಿಗೆ ಸಾಯುತ್ತೇವೆ- ಎಂದಿದ್ದರು. ನಾನು ನಿನಗಾಗಿ ಸಾಯಲು ಸಿದ್ಧನಿದ್ದೇನೆ ಎಂದಿದ್ದರು. ಇಂದು ನನ್ನ ಪತಿ ನನ್ನಿಂದಾಗಿ ಸಾವಿಗೀಡಾಗಿದ್ದಾರೆ. ರಾಜು ಬೇರೆಯವರನ್ನು ಮದುವೆಯಾಗಲು ಬಿಟ್ಟಿದ್ದರೆ, ಅವರು ಬದುಕುತ್ತಿದ್ದರು ಎಂದು ನನಗೆ ಅನಿಸುತ್ತದೆ” ಎಂದಿದ್ದಾರೆ ಸುಲ್ತಾನಾ.

“ರಾಜು ಹುಟ್ಟಿ ಬೆಳೆದ ಮನೆಯಲ್ಲಿ ನಾನೀಗ ಇದ್ದೇನೆ, ರಾಜು ಜೊತೆಯಲ್ಲಿಯೇ ಇದ್ದಾರೆಂಬ ಭಾವನೆ ಬರುತ್ತಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...