Homeದಲಿತ್ ಫೈಲ್ಸ್ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ಬುಧವಾರ ನಡೆದ ಘಟನೆಯ ಕುರಿತು ಅಶ್ರಿನ್‌ ಎನ್‌ಡಿಟಿವಿಯೊಂದಿಗೆ ಹಂಚಿಕೊಂಡಿದ್ದು, “ದಾಳಿಯನ್ನು ನೋಡುತ್ತಿದ್ದ ಜನರು ವಿಡಿಯೊ ಮಾಡುತ್ತ ನಿಂತಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಹೈದರಾಬಾದ್‌ನ ಜನನಿಬಿಡ ರಸ್ತೆಯೊಂದರಲ್ಲಿ ಆಕೆಯ ಪತಿಯನ್ನು ಕಬ್ಬಿಣದ ರಾಡುಗಳಿಂಡ ಹೊಡೆದು ಸಾಯಿಸಲಾಯಿತು. ಜನರಲ್ಲಿ ಸಹಾಯಕ್ಕಾಗಿ ಬೇಡಿಕೊಂಡರೂ ಗಂಡನನ್ನು ಕಾಪಾಡಲು ಸಾಧ್ಯವಾಗಲಿಲ್ಲ. “ನನ್ನ ಸಹೋದರ ಮತ್ತು ಆತನ ಸ್ನೇಹಿತರೇ ಹಂತಕರು” ಎಂದು ಸೈಯದ್ ಅಶ್ರಿನ್ ಸುಲ್ತಾನಾ ಪೊಲೀಸರಿಗೆ ಹೇಳಿಕೆ ನೀಡಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಬಯಸಿದ್ದಾರೆ.

ಎರಡು ದಿನಗಳ ಹಿಂದೆ ಪತಿ ಬಿ.ನಾಗರಾಜು ನಿಧನರಾದ ನಂತರ ಅಶ್ರಿನ್‌ ಮೊದಲ ಬಾರಿಗೆ ಗಂಡನ ಮನೆಗೆ ಬಂದರು. ನಾಗರಾಜು ಹುಟ್ಟಿ ಬೆಳೆದ ಮನೆಯಲ್ಲಿಯೇ, ಆತನ ನೆನಪುಗಳೊಂದಿಗೆ ಸಾಯುವವರೆಗೂ ಬದುಕುತ್ತೇನೆ ಎಂದಿದ್ದಾರೆ ಸುಲ್ತಾನಾ.

ದಲಿತ ಜಾತಿಗೆ ಸೇರಿದ ನಾಗರಾಜು ಅವರು ತನ್ನ ಮುಸ್ಲಿಂ ಪತ್ನಿಯ ಸಹೋದರ ನಡೆಸಿದ ಭೀಕರ ದಾಳಿಯಿಂದ ಸಾವನ್ನಪ್ಪಿದ್ದಾರೆ.

ನೋವಿನಿಂದ ಜರ್ಜರಿತರಾಗಿರುವ ಸುಲ್ತಾನಾ (21), ಬುಧವಾರ ಸಂಜೆ ನಡೆದ ಘಟನೆಯ ಭಯಾನಕತೆಯ ಕುರಿತು ಎನ್‌ಡಿಟಿವಿ ಜೊತೆಯಲ್ಲಿ ಹಂಚಿಕೊಂಡಿದ್ದಾರೆ.

“ನಾನು ಮತ್ತು ನನ್ನ ಪತಿ ಬೈಕಿನಲ್ಲಿ ಹೋಗುತ್ತಿದ್ದೆವು. ರಸ್ತೆ ದಾಟಲು ಸ್ವಲ್ಪ ವೇಗವನ್ನು ಕಡಿಮೆ ಮಾಡಿದರು. ಇದ್ದಕ್ಕಿದ್ದಂತೆ ಎರಡು ಬೈಕುಗಳು ಬಂದವು. ಅದರಲ್ಲಿ ನನ್ನ ಸಹೋದರನು ಒಬ್ಬನಿದ್ದನೆಂದು ಭಾವಿಸಿರಲಿಲ್ಲ. ಅವರು ನನ್ನ ಗಂಡನನ್ನು ತಳ್ಳಿದರು. ನನ್ನ ಗಂಡ ಬಿದ್ದರು. ಅವರು ಹೊಡೆಯಲು ಪ್ರಾರಂಭಿಸಿದರು. ನಾನು ಗಂಡನನ್ನು ರಕ್ಷಿಸಲು ಪ್ರಯತ್ನಿಸಿದಾಗ, ನನ್ನ ಸಹೋದರನ ಸ್ನೇಹಿತರು ನನ್ನನ್ನೂ ತಳ್ಳಿದರು. ನಾನು ಸಹಾಯಕ್ಕಾಗಿ ಮನವಿ ಮಾಡಿದೆ. ಆದರೆ ಜನರು ವೀಡಿಯೊಗಳನ್ನು ಮಾಡಿಕೊಳ್ಳುತ್ತಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಎಲ್ಲವೂ ಮುಗಿದುಹೋಯಿತು. ಆದರೆ ಜನರು ಮಧ್ಯಪ್ರವೇಶಿಸಿ ಘಟನೆಯನ್ನು ತಡೆಯಲು ಸಾಕಷ್ಟು ಅವಕಾಶವಿತ್ತು ಎನ್ನುತ್ತಾರೆ ಸುಲ್ತಾನಾ. ಸಹಾಯಕ್ಕಾಗಿ ಅಂಗಲಾಚುತ್ತಾ ಸಮಯವನ್ನು ವ್ಯರ್ಥ ಮಾಡಿದೆ ಎಂದು ಭಾವಿಸುತ್ತಾರೆ ಅವರು.

“10 ರಿಂದ 15 ನಿಮಿಷಗಳಲ್ಲಿ, ನನ್ನ ಗಂಡನಿಗೆ ರಾಡ್‌ನಿಂದ 30 ರಿಂದ 35 ಬಾರಿ ಹೊಡೆದರು. ಅವರು ನನ್ನ ಗಂಡನ ಮೆದುಳಿಗೆ ಹೊಡೆದರು, ಅವರು ಕೊನೆಯುಸಿರೆಳೆದರು. ಅವರ ಮೆದುಳು ಹೊರಚೆಲ್ಲಿತ್ತು. ಸಮಾಜವನ್ನು ನಂಬಿ ಜನರ ಸಹಾಯ ಕೇಳುತ್ತಾ ಸಮಯ ಹಾಳು ಮಾಡುತ್ತಿದ್ದೆ. ಆ ಸಮಯವನ್ನು ನನ್ನ ಪತಿಗೆ ಏನಾದರೂ ಸಹಾಯ ಮಾಡಬಹುದಿತ್ತು. ನನ್ನ ಅಣ್ಣ ಕೊಂದಿದ್ದು ನನ್ನ ಪತಿಗೂ ತಿಳಿದಿರಲಿಲ್ಲ. ಇಪ್ಪತ್ತು ಜನ ನಾಲ್ಕು ಜನರನ್ನು ತಡೆಯಬಹುದಿತ್ತು” ಎಂದು ತಿಳಿಸಿದ್ದಾರೆ.

ಅಂತರ್‌ ಧರ್ಮೀಯ ವಿವಾಹಕ್ಕೆ ಹುಡುಗಿಯ ಕುಟುಂಬ ವಿರೋಧ ವ್ಯಕ್ತಪಡಿಸಿತ್ತು. ಇದನ್ನು ಧಿಕ್ಕರಿಸಿ 25 ವರ್ಷ ವಯಸ್ಸಿನ ಕಾರು ಮಾರಾಟಗಾರ ನಾಗರಾಜು ಮತ್ತು ಸುಲ್ತಾನಾ ಜನವರಿ 31 ರಂದು ವಿವಾಹವಾದರು. ನಾಗರಾಜು ದಲಿತ ಜಾತಿಗೆ ಸೇರಿದವರಾಗಿದ್ದಾರೆ.

ಆದರೆ ಇಬ್ಬರೂ ಶಾಲಾ ದಿನಗಳಿಂದಲೇ ಪರಿಚಿತರು. ಹುಚ್ಚರಂತೆ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿ ಮೇಲುಗೈ ಸಾಧಿಸುತ್ತದೆ ಹಾಗೂ ಗೆದ್ದೇಗೆಲ್ಲುತ್ತೇವೆ ಎಂದು ಭಾವಿಸಿದ್ದರು. ಧರ್ಮವು ಅವರನ್ನು ಹಿಂದೆಂದೂ ಕಾಡಿರಲಿಲ್ಲ.

“ನನ್ನ ಮನೆಯವರಿಂದ ಯಾವಾಗಲೂ ಬೆದರಿಕೆ ಇತ್ತು, ಸಮಸ್ಯೆ ಇರುವುದರಿಂದ ಬೇರೆ ಮದುವೆಯಾಗಲು ನಾನು ರಾಜುಗೆ ಹೇಳಿದ್ದೆ. ನಾನು ಅವರ ಮನವೊಲಿಸಲು ಎರಡು ತಿಂಗಳು ಪ್ರಯತ್ನಿಸಿದೆ. ಆದರೆ ರಾಜು- ನಾವು ಒಟ್ಟಿಗೆ ಬದುಕುತ್ತೇವೆ ಮತ್ತು ಒಟ್ಟಿಗೆ ಸಾಯುತ್ತೇವೆ- ಎಂದಿದ್ದರು. ನಾನು ನಿನಗಾಗಿ ಸಾಯಲು ಸಿದ್ಧನಿದ್ದೇನೆ ಎಂದಿದ್ದರು. ಇಂದು ನನ್ನ ಪತಿ ನನ್ನಿಂದಾಗಿ ಸಾವಿಗೀಡಾಗಿದ್ದಾರೆ. ರಾಜು ಬೇರೆಯವರನ್ನು ಮದುವೆಯಾಗಲು ಬಿಟ್ಟಿದ್ದರೆ, ಅವರು ಬದುಕುತ್ತಿದ್ದರು ಎಂದು ನನಗೆ ಅನಿಸುತ್ತದೆ” ಎಂದಿದ್ದಾರೆ ಸುಲ್ತಾನಾ.

“ರಾಜು ಹುಟ್ಟಿ ಬೆಳೆದ ಮನೆಯಲ್ಲಿ ನಾನೀಗ ಇದ್ದೇನೆ, ರಾಜು ಜೊತೆಯಲ್ಲಿಯೇ ಇದ್ದಾರೆಂಬ ಭಾವನೆ ಬರುತ್ತಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...