Homeದಲಿತ್ ಫೈಲ್ಸ್ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ಬುಧವಾರ ನಡೆದ ಘಟನೆಯ ಕುರಿತು ಅಶ್ರಿನ್‌ ಎನ್‌ಡಿಟಿವಿಯೊಂದಿಗೆ ಹಂಚಿಕೊಂಡಿದ್ದು, “ದಾಳಿಯನ್ನು ನೋಡುತ್ತಿದ್ದ ಜನರು ವಿಡಿಯೊ ಮಾಡುತ್ತ ನಿಂತಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಹೈದರಾಬಾದ್‌ನ ಜನನಿಬಿಡ ರಸ್ತೆಯೊಂದರಲ್ಲಿ ಆಕೆಯ ಪತಿಯನ್ನು ಕಬ್ಬಿಣದ ರಾಡುಗಳಿಂಡ ಹೊಡೆದು ಸಾಯಿಸಲಾಯಿತು. ಜನರಲ್ಲಿ ಸಹಾಯಕ್ಕಾಗಿ ಬೇಡಿಕೊಂಡರೂ ಗಂಡನನ್ನು ಕಾಪಾಡಲು ಸಾಧ್ಯವಾಗಲಿಲ್ಲ. “ನನ್ನ ಸಹೋದರ ಮತ್ತು ಆತನ ಸ್ನೇಹಿತರೇ ಹಂತಕರು” ಎಂದು ಸೈಯದ್ ಅಶ್ರಿನ್ ಸುಲ್ತಾನಾ ಪೊಲೀಸರಿಗೆ ಹೇಳಿಕೆ ನೀಡಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಬಯಸಿದ್ದಾರೆ.

ಎರಡು ದಿನಗಳ ಹಿಂದೆ ಪತಿ ಬಿ.ನಾಗರಾಜು ನಿಧನರಾದ ನಂತರ ಅಶ್ರಿನ್‌ ಮೊದಲ ಬಾರಿಗೆ ಗಂಡನ ಮನೆಗೆ ಬಂದರು. ನಾಗರಾಜು ಹುಟ್ಟಿ ಬೆಳೆದ ಮನೆಯಲ್ಲಿಯೇ, ಆತನ ನೆನಪುಗಳೊಂದಿಗೆ ಸಾಯುವವರೆಗೂ ಬದುಕುತ್ತೇನೆ ಎಂದಿದ್ದಾರೆ ಸುಲ್ತಾನಾ.

ದಲಿತ ಜಾತಿಗೆ ಸೇರಿದ ನಾಗರಾಜು ಅವರು ತನ್ನ ಮುಸ್ಲಿಂ ಪತ್ನಿಯ ಸಹೋದರ ನಡೆಸಿದ ಭೀಕರ ದಾಳಿಯಿಂದ ಸಾವನ್ನಪ್ಪಿದ್ದಾರೆ.

ನೋವಿನಿಂದ ಜರ್ಜರಿತರಾಗಿರುವ ಸುಲ್ತಾನಾ (21), ಬುಧವಾರ ಸಂಜೆ ನಡೆದ ಘಟನೆಯ ಭಯಾನಕತೆಯ ಕುರಿತು ಎನ್‌ಡಿಟಿವಿ ಜೊತೆಯಲ್ಲಿ ಹಂಚಿಕೊಂಡಿದ್ದಾರೆ.

“ನಾನು ಮತ್ತು ನನ್ನ ಪತಿ ಬೈಕಿನಲ್ಲಿ ಹೋಗುತ್ತಿದ್ದೆವು. ರಸ್ತೆ ದಾಟಲು ಸ್ವಲ್ಪ ವೇಗವನ್ನು ಕಡಿಮೆ ಮಾಡಿದರು. ಇದ್ದಕ್ಕಿದ್ದಂತೆ ಎರಡು ಬೈಕುಗಳು ಬಂದವು. ಅದರಲ್ಲಿ ನನ್ನ ಸಹೋದರನು ಒಬ್ಬನಿದ್ದನೆಂದು ಭಾವಿಸಿರಲಿಲ್ಲ. ಅವರು ನನ್ನ ಗಂಡನನ್ನು ತಳ್ಳಿದರು. ನನ್ನ ಗಂಡ ಬಿದ್ದರು. ಅವರು ಹೊಡೆಯಲು ಪ್ರಾರಂಭಿಸಿದರು. ನಾನು ಗಂಡನನ್ನು ರಕ್ಷಿಸಲು ಪ್ರಯತ್ನಿಸಿದಾಗ, ನನ್ನ ಸಹೋದರನ ಸ್ನೇಹಿತರು ನನ್ನನ್ನೂ ತಳ್ಳಿದರು. ನಾನು ಸಹಾಯಕ್ಕಾಗಿ ಮನವಿ ಮಾಡಿದೆ. ಆದರೆ ಜನರು ವೀಡಿಯೊಗಳನ್ನು ಮಾಡಿಕೊಳ್ಳುತ್ತಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಎಲ್ಲವೂ ಮುಗಿದುಹೋಯಿತು. ಆದರೆ ಜನರು ಮಧ್ಯಪ್ರವೇಶಿಸಿ ಘಟನೆಯನ್ನು ತಡೆಯಲು ಸಾಕಷ್ಟು ಅವಕಾಶವಿತ್ತು ಎನ್ನುತ್ತಾರೆ ಸುಲ್ತಾನಾ. ಸಹಾಯಕ್ಕಾಗಿ ಅಂಗಲಾಚುತ್ತಾ ಸಮಯವನ್ನು ವ್ಯರ್ಥ ಮಾಡಿದೆ ಎಂದು ಭಾವಿಸುತ್ತಾರೆ ಅವರು.

“10 ರಿಂದ 15 ನಿಮಿಷಗಳಲ್ಲಿ, ನನ್ನ ಗಂಡನಿಗೆ ರಾಡ್‌ನಿಂದ 30 ರಿಂದ 35 ಬಾರಿ ಹೊಡೆದರು. ಅವರು ನನ್ನ ಗಂಡನ ಮೆದುಳಿಗೆ ಹೊಡೆದರು, ಅವರು ಕೊನೆಯುಸಿರೆಳೆದರು. ಅವರ ಮೆದುಳು ಹೊರಚೆಲ್ಲಿತ್ತು. ಸಮಾಜವನ್ನು ನಂಬಿ ಜನರ ಸಹಾಯ ಕೇಳುತ್ತಾ ಸಮಯ ಹಾಳು ಮಾಡುತ್ತಿದ್ದೆ. ಆ ಸಮಯವನ್ನು ನನ್ನ ಪತಿಗೆ ಏನಾದರೂ ಸಹಾಯ ಮಾಡಬಹುದಿತ್ತು. ನನ್ನ ಅಣ್ಣ ಕೊಂದಿದ್ದು ನನ್ನ ಪತಿಗೂ ತಿಳಿದಿರಲಿಲ್ಲ. ಇಪ್ಪತ್ತು ಜನ ನಾಲ್ಕು ಜನರನ್ನು ತಡೆಯಬಹುದಿತ್ತು” ಎಂದು ತಿಳಿಸಿದ್ದಾರೆ.

ಅಂತರ್‌ ಧರ್ಮೀಯ ವಿವಾಹಕ್ಕೆ ಹುಡುಗಿಯ ಕುಟುಂಬ ವಿರೋಧ ವ್ಯಕ್ತಪಡಿಸಿತ್ತು. ಇದನ್ನು ಧಿಕ್ಕರಿಸಿ 25 ವರ್ಷ ವಯಸ್ಸಿನ ಕಾರು ಮಾರಾಟಗಾರ ನಾಗರಾಜು ಮತ್ತು ಸುಲ್ತಾನಾ ಜನವರಿ 31 ರಂದು ವಿವಾಹವಾದರು. ನಾಗರಾಜು ದಲಿತ ಜಾತಿಗೆ ಸೇರಿದವರಾಗಿದ್ದಾರೆ.

ಆದರೆ ಇಬ್ಬರೂ ಶಾಲಾ ದಿನಗಳಿಂದಲೇ ಪರಿಚಿತರು. ಹುಚ್ಚರಂತೆ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿ ಮೇಲುಗೈ ಸಾಧಿಸುತ್ತದೆ ಹಾಗೂ ಗೆದ್ದೇಗೆಲ್ಲುತ್ತೇವೆ ಎಂದು ಭಾವಿಸಿದ್ದರು. ಧರ್ಮವು ಅವರನ್ನು ಹಿಂದೆಂದೂ ಕಾಡಿರಲಿಲ್ಲ.

“ನನ್ನ ಮನೆಯವರಿಂದ ಯಾವಾಗಲೂ ಬೆದರಿಕೆ ಇತ್ತು, ಸಮಸ್ಯೆ ಇರುವುದರಿಂದ ಬೇರೆ ಮದುವೆಯಾಗಲು ನಾನು ರಾಜುಗೆ ಹೇಳಿದ್ದೆ. ನಾನು ಅವರ ಮನವೊಲಿಸಲು ಎರಡು ತಿಂಗಳು ಪ್ರಯತ್ನಿಸಿದೆ. ಆದರೆ ರಾಜು- ನಾವು ಒಟ್ಟಿಗೆ ಬದುಕುತ್ತೇವೆ ಮತ್ತು ಒಟ್ಟಿಗೆ ಸಾಯುತ್ತೇವೆ- ಎಂದಿದ್ದರು. ನಾನು ನಿನಗಾಗಿ ಸಾಯಲು ಸಿದ್ಧನಿದ್ದೇನೆ ಎಂದಿದ್ದರು. ಇಂದು ನನ್ನ ಪತಿ ನನ್ನಿಂದಾಗಿ ಸಾವಿಗೀಡಾಗಿದ್ದಾರೆ. ರಾಜು ಬೇರೆಯವರನ್ನು ಮದುವೆಯಾಗಲು ಬಿಟ್ಟಿದ್ದರೆ, ಅವರು ಬದುಕುತ್ತಿದ್ದರು ಎಂದು ನನಗೆ ಅನಿಸುತ್ತದೆ” ಎಂದಿದ್ದಾರೆ ಸುಲ್ತಾನಾ.

“ರಾಜು ಹುಟ್ಟಿ ಬೆಳೆದ ಮನೆಯಲ್ಲಿ ನಾನೀಗ ಇದ್ದೇನೆ, ರಾಜು ಜೊತೆಯಲ್ಲಿಯೇ ಇದ್ದಾರೆಂಬ ಭಾವನೆ ಬರುತ್ತಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...