Homeದಲಿತ್ ಫೈಲ್ಸ್ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ಬುಧವಾರ ನಡೆದ ಘಟನೆಯ ಕುರಿತು ಅಶ್ರಿನ್‌ ಎನ್‌ಡಿಟಿವಿಯೊಂದಿಗೆ ಹಂಚಿಕೊಂಡಿದ್ದು, “ದಾಳಿಯನ್ನು ನೋಡುತ್ತಿದ್ದ ಜನರು ವಿಡಿಯೊ ಮಾಡುತ್ತ ನಿಂತಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಹೈದರಾಬಾದ್‌ನ ಜನನಿಬಿಡ ರಸ್ತೆಯೊಂದರಲ್ಲಿ ಆಕೆಯ ಪತಿಯನ್ನು ಕಬ್ಬಿಣದ ರಾಡುಗಳಿಂಡ ಹೊಡೆದು ಸಾಯಿಸಲಾಯಿತು. ಜನರಲ್ಲಿ ಸಹಾಯಕ್ಕಾಗಿ ಬೇಡಿಕೊಂಡರೂ ಗಂಡನನ್ನು ಕಾಪಾಡಲು ಸಾಧ್ಯವಾಗಲಿಲ್ಲ. “ನನ್ನ ಸಹೋದರ ಮತ್ತು ಆತನ ಸ್ನೇಹಿತರೇ ಹಂತಕರು” ಎಂದು ಸೈಯದ್ ಅಶ್ರಿನ್ ಸುಲ್ತಾನಾ ಪೊಲೀಸರಿಗೆ ಹೇಳಿಕೆ ನೀಡಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಬಯಸಿದ್ದಾರೆ.

ಎರಡು ದಿನಗಳ ಹಿಂದೆ ಪತಿ ಬಿ.ನಾಗರಾಜು ನಿಧನರಾದ ನಂತರ ಅಶ್ರಿನ್‌ ಮೊದಲ ಬಾರಿಗೆ ಗಂಡನ ಮನೆಗೆ ಬಂದರು. ನಾಗರಾಜು ಹುಟ್ಟಿ ಬೆಳೆದ ಮನೆಯಲ್ಲಿಯೇ, ಆತನ ನೆನಪುಗಳೊಂದಿಗೆ ಸಾಯುವವರೆಗೂ ಬದುಕುತ್ತೇನೆ ಎಂದಿದ್ದಾರೆ ಸುಲ್ತಾನಾ.

ದಲಿತ ಜಾತಿಗೆ ಸೇರಿದ ನಾಗರಾಜು ಅವರು ತನ್ನ ಮುಸ್ಲಿಂ ಪತ್ನಿಯ ಸಹೋದರ ನಡೆಸಿದ ಭೀಕರ ದಾಳಿಯಿಂದ ಸಾವನ್ನಪ್ಪಿದ್ದಾರೆ.

ನೋವಿನಿಂದ ಜರ್ಜರಿತರಾಗಿರುವ ಸುಲ್ತಾನಾ (21), ಬುಧವಾರ ಸಂಜೆ ನಡೆದ ಘಟನೆಯ ಭಯಾನಕತೆಯ ಕುರಿತು ಎನ್‌ಡಿಟಿವಿ ಜೊತೆಯಲ್ಲಿ ಹಂಚಿಕೊಂಡಿದ್ದಾರೆ.

“ನಾನು ಮತ್ತು ನನ್ನ ಪತಿ ಬೈಕಿನಲ್ಲಿ ಹೋಗುತ್ತಿದ್ದೆವು. ರಸ್ತೆ ದಾಟಲು ಸ್ವಲ್ಪ ವೇಗವನ್ನು ಕಡಿಮೆ ಮಾಡಿದರು. ಇದ್ದಕ್ಕಿದ್ದಂತೆ ಎರಡು ಬೈಕುಗಳು ಬಂದವು. ಅದರಲ್ಲಿ ನನ್ನ ಸಹೋದರನು ಒಬ್ಬನಿದ್ದನೆಂದು ಭಾವಿಸಿರಲಿಲ್ಲ. ಅವರು ನನ್ನ ಗಂಡನನ್ನು ತಳ್ಳಿದರು. ನನ್ನ ಗಂಡ ಬಿದ್ದರು. ಅವರು ಹೊಡೆಯಲು ಪ್ರಾರಂಭಿಸಿದರು. ನಾನು ಗಂಡನನ್ನು ರಕ್ಷಿಸಲು ಪ್ರಯತ್ನಿಸಿದಾಗ, ನನ್ನ ಸಹೋದರನ ಸ್ನೇಹಿತರು ನನ್ನನ್ನೂ ತಳ್ಳಿದರು. ನಾನು ಸಹಾಯಕ್ಕಾಗಿ ಮನವಿ ಮಾಡಿದೆ. ಆದರೆ ಜನರು ವೀಡಿಯೊಗಳನ್ನು ಮಾಡಿಕೊಳ್ಳುತ್ತಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಎಲ್ಲವೂ ಮುಗಿದುಹೋಯಿತು. ಆದರೆ ಜನರು ಮಧ್ಯಪ್ರವೇಶಿಸಿ ಘಟನೆಯನ್ನು ತಡೆಯಲು ಸಾಕಷ್ಟು ಅವಕಾಶವಿತ್ತು ಎನ್ನುತ್ತಾರೆ ಸುಲ್ತಾನಾ. ಸಹಾಯಕ್ಕಾಗಿ ಅಂಗಲಾಚುತ್ತಾ ಸಮಯವನ್ನು ವ್ಯರ್ಥ ಮಾಡಿದೆ ಎಂದು ಭಾವಿಸುತ್ತಾರೆ ಅವರು.

“10 ರಿಂದ 15 ನಿಮಿಷಗಳಲ್ಲಿ, ನನ್ನ ಗಂಡನಿಗೆ ರಾಡ್‌ನಿಂದ 30 ರಿಂದ 35 ಬಾರಿ ಹೊಡೆದರು. ಅವರು ನನ್ನ ಗಂಡನ ಮೆದುಳಿಗೆ ಹೊಡೆದರು, ಅವರು ಕೊನೆಯುಸಿರೆಳೆದರು. ಅವರ ಮೆದುಳು ಹೊರಚೆಲ್ಲಿತ್ತು. ಸಮಾಜವನ್ನು ನಂಬಿ ಜನರ ಸಹಾಯ ಕೇಳುತ್ತಾ ಸಮಯ ಹಾಳು ಮಾಡುತ್ತಿದ್ದೆ. ಆ ಸಮಯವನ್ನು ನನ್ನ ಪತಿಗೆ ಏನಾದರೂ ಸಹಾಯ ಮಾಡಬಹುದಿತ್ತು. ನನ್ನ ಅಣ್ಣ ಕೊಂದಿದ್ದು ನನ್ನ ಪತಿಗೂ ತಿಳಿದಿರಲಿಲ್ಲ. ಇಪ್ಪತ್ತು ಜನ ನಾಲ್ಕು ಜನರನ್ನು ತಡೆಯಬಹುದಿತ್ತು” ಎಂದು ತಿಳಿಸಿದ್ದಾರೆ.

ಅಂತರ್‌ ಧರ್ಮೀಯ ವಿವಾಹಕ್ಕೆ ಹುಡುಗಿಯ ಕುಟುಂಬ ವಿರೋಧ ವ್ಯಕ್ತಪಡಿಸಿತ್ತು. ಇದನ್ನು ಧಿಕ್ಕರಿಸಿ 25 ವರ್ಷ ವಯಸ್ಸಿನ ಕಾರು ಮಾರಾಟಗಾರ ನಾಗರಾಜು ಮತ್ತು ಸುಲ್ತಾನಾ ಜನವರಿ 31 ರಂದು ವಿವಾಹವಾದರು. ನಾಗರಾಜು ದಲಿತ ಜಾತಿಗೆ ಸೇರಿದವರಾಗಿದ್ದಾರೆ.

ಆದರೆ ಇಬ್ಬರೂ ಶಾಲಾ ದಿನಗಳಿಂದಲೇ ಪರಿಚಿತರು. ಹುಚ್ಚರಂತೆ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿ ಮೇಲುಗೈ ಸಾಧಿಸುತ್ತದೆ ಹಾಗೂ ಗೆದ್ದೇಗೆಲ್ಲುತ್ತೇವೆ ಎಂದು ಭಾವಿಸಿದ್ದರು. ಧರ್ಮವು ಅವರನ್ನು ಹಿಂದೆಂದೂ ಕಾಡಿರಲಿಲ್ಲ.

“ನನ್ನ ಮನೆಯವರಿಂದ ಯಾವಾಗಲೂ ಬೆದರಿಕೆ ಇತ್ತು, ಸಮಸ್ಯೆ ಇರುವುದರಿಂದ ಬೇರೆ ಮದುವೆಯಾಗಲು ನಾನು ರಾಜುಗೆ ಹೇಳಿದ್ದೆ. ನಾನು ಅವರ ಮನವೊಲಿಸಲು ಎರಡು ತಿಂಗಳು ಪ್ರಯತ್ನಿಸಿದೆ. ಆದರೆ ರಾಜು- ನಾವು ಒಟ್ಟಿಗೆ ಬದುಕುತ್ತೇವೆ ಮತ್ತು ಒಟ್ಟಿಗೆ ಸಾಯುತ್ತೇವೆ- ಎಂದಿದ್ದರು. ನಾನು ನಿನಗಾಗಿ ಸಾಯಲು ಸಿದ್ಧನಿದ್ದೇನೆ ಎಂದಿದ್ದರು. ಇಂದು ನನ್ನ ಪತಿ ನನ್ನಿಂದಾಗಿ ಸಾವಿಗೀಡಾಗಿದ್ದಾರೆ. ರಾಜು ಬೇರೆಯವರನ್ನು ಮದುವೆಯಾಗಲು ಬಿಟ್ಟಿದ್ದರೆ, ಅವರು ಬದುಕುತ್ತಿದ್ದರು ಎಂದು ನನಗೆ ಅನಿಸುತ್ತದೆ” ಎಂದಿದ್ದಾರೆ ಸುಲ್ತಾನಾ.

“ರಾಜು ಹುಟ್ಟಿ ಬೆಳೆದ ಮನೆಯಲ್ಲಿ ನಾನೀಗ ಇದ್ದೇನೆ, ರಾಜು ಜೊತೆಯಲ್ಲಿಯೇ ಇದ್ದಾರೆಂಬ ಭಾವನೆ ಬರುತ್ತಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...