Homeದಲಿತ್ ಫೈಲ್ಸ್ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ಬುಧವಾರ ನಡೆದ ಘಟನೆಯ ಕುರಿತು ಅಶ್ರಿನ್‌ ಎನ್‌ಡಿಟಿವಿಯೊಂದಿಗೆ ಹಂಚಿಕೊಂಡಿದ್ದು, “ದಾಳಿಯನ್ನು ನೋಡುತ್ತಿದ್ದ ಜನರು ವಿಡಿಯೊ ಮಾಡುತ್ತ ನಿಂತಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಹೈದರಾಬಾದ್‌ನ ಜನನಿಬಿಡ ರಸ್ತೆಯೊಂದರಲ್ಲಿ ಆಕೆಯ ಪತಿಯನ್ನು ಕಬ್ಬಿಣದ ರಾಡುಗಳಿಂಡ ಹೊಡೆದು ಸಾಯಿಸಲಾಯಿತು. ಜನರಲ್ಲಿ ಸಹಾಯಕ್ಕಾಗಿ ಬೇಡಿಕೊಂಡರೂ ಗಂಡನನ್ನು ಕಾಪಾಡಲು ಸಾಧ್ಯವಾಗಲಿಲ್ಲ. “ನನ್ನ ಸಹೋದರ ಮತ್ತು ಆತನ ಸ್ನೇಹಿತರೇ ಹಂತಕರು” ಎಂದು ಸೈಯದ್ ಅಶ್ರಿನ್ ಸುಲ್ತಾನಾ ಪೊಲೀಸರಿಗೆ ಹೇಳಿಕೆ ನೀಡಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಬಯಸಿದ್ದಾರೆ.

ಎರಡು ದಿನಗಳ ಹಿಂದೆ ಪತಿ ಬಿ.ನಾಗರಾಜು ನಿಧನರಾದ ನಂತರ ಅಶ್ರಿನ್‌ ಮೊದಲ ಬಾರಿಗೆ ಗಂಡನ ಮನೆಗೆ ಬಂದರು. ನಾಗರಾಜು ಹುಟ್ಟಿ ಬೆಳೆದ ಮನೆಯಲ್ಲಿಯೇ, ಆತನ ನೆನಪುಗಳೊಂದಿಗೆ ಸಾಯುವವರೆಗೂ ಬದುಕುತ್ತೇನೆ ಎಂದಿದ್ದಾರೆ ಸುಲ್ತಾನಾ.

ದಲಿತ ಜಾತಿಗೆ ಸೇರಿದ ನಾಗರಾಜು ಅವರು ತನ್ನ ಮುಸ್ಲಿಂ ಪತ್ನಿಯ ಸಹೋದರ ನಡೆಸಿದ ಭೀಕರ ದಾಳಿಯಿಂದ ಸಾವನ್ನಪ್ಪಿದ್ದಾರೆ.

ನೋವಿನಿಂದ ಜರ್ಜರಿತರಾಗಿರುವ ಸುಲ್ತಾನಾ (21), ಬುಧವಾರ ಸಂಜೆ ನಡೆದ ಘಟನೆಯ ಭಯಾನಕತೆಯ ಕುರಿತು ಎನ್‌ಡಿಟಿವಿ ಜೊತೆಯಲ್ಲಿ ಹಂಚಿಕೊಂಡಿದ್ದಾರೆ.

“ನಾನು ಮತ್ತು ನನ್ನ ಪತಿ ಬೈಕಿನಲ್ಲಿ ಹೋಗುತ್ತಿದ್ದೆವು. ರಸ್ತೆ ದಾಟಲು ಸ್ವಲ್ಪ ವೇಗವನ್ನು ಕಡಿಮೆ ಮಾಡಿದರು. ಇದ್ದಕ್ಕಿದ್ದಂತೆ ಎರಡು ಬೈಕುಗಳು ಬಂದವು. ಅದರಲ್ಲಿ ನನ್ನ ಸಹೋದರನು ಒಬ್ಬನಿದ್ದನೆಂದು ಭಾವಿಸಿರಲಿಲ್ಲ. ಅವರು ನನ್ನ ಗಂಡನನ್ನು ತಳ್ಳಿದರು. ನನ್ನ ಗಂಡ ಬಿದ್ದರು. ಅವರು ಹೊಡೆಯಲು ಪ್ರಾರಂಭಿಸಿದರು. ನಾನು ಗಂಡನನ್ನು ರಕ್ಷಿಸಲು ಪ್ರಯತ್ನಿಸಿದಾಗ, ನನ್ನ ಸಹೋದರನ ಸ್ನೇಹಿತರು ನನ್ನನ್ನೂ ತಳ್ಳಿದರು. ನಾನು ಸಹಾಯಕ್ಕಾಗಿ ಮನವಿ ಮಾಡಿದೆ. ಆದರೆ ಜನರು ವೀಡಿಯೊಗಳನ್ನು ಮಾಡಿಕೊಳ್ಳುತ್ತಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಎಲ್ಲವೂ ಮುಗಿದುಹೋಯಿತು. ಆದರೆ ಜನರು ಮಧ್ಯಪ್ರವೇಶಿಸಿ ಘಟನೆಯನ್ನು ತಡೆಯಲು ಸಾಕಷ್ಟು ಅವಕಾಶವಿತ್ತು ಎನ್ನುತ್ತಾರೆ ಸುಲ್ತಾನಾ. ಸಹಾಯಕ್ಕಾಗಿ ಅಂಗಲಾಚುತ್ತಾ ಸಮಯವನ್ನು ವ್ಯರ್ಥ ಮಾಡಿದೆ ಎಂದು ಭಾವಿಸುತ್ತಾರೆ ಅವರು.

“10 ರಿಂದ 15 ನಿಮಿಷಗಳಲ್ಲಿ, ನನ್ನ ಗಂಡನಿಗೆ ರಾಡ್‌ನಿಂದ 30 ರಿಂದ 35 ಬಾರಿ ಹೊಡೆದರು. ಅವರು ನನ್ನ ಗಂಡನ ಮೆದುಳಿಗೆ ಹೊಡೆದರು, ಅವರು ಕೊನೆಯುಸಿರೆಳೆದರು. ಅವರ ಮೆದುಳು ಹೊರಚೆಲ್ಲಿತ್ತು. ಸಮಾಜವನ್ನು ನಂಬಿ ಜನರ ಸಹಾಯ ಕೇಳುತ್ತಾ ಸಮಯ ಹಾಳು ಮಾಡುತ್ತಿದ್ದೆ. ಆ ಸಮಯವನ್ನು ನನ್ನ ಪತಿಗೆ ಏನಾದರೂ ಸಹಾಯ ಮಾಡಬಹುದಿತ್ತು. ನನ್ನ ಅಣ್ಣ ಕೊಂದಿದ್ದು ನನ್ನ ಪತಿಗೂ ತಿಳಿದಿರಲಿಲ್ಲ. ಇಪ್ಪತ್ತು ಜನ ನಾಲ್ಕು ಜನರನ್ನು ತಡೆಯಬಹುದಿತ್ತು” ಎಂದು ತಿಳಿಸಿದ್ದಾರೆ.

ಅಂತರ್‌ ಧರ್ಮೀಯ ವಿವಾಹಕ್ಕೆ ಹುಡುಗಿಯ ಕುಟುಂಬ ವಿರೋಧ ವ್ಯಕ್ತಪಡಿಸಿತ್ತು. ಇದನ್ನು ಧಿಕ್ಕರಿಸಿ 25 ವರ್ಷ ವಯಸ್ಸಿನ ಕಾರು ಮಾರಾಟಗಾರ ನಾಗರಾಜು ಮತ್ತು ಸುಲ್ತಾನಾ ಜನವರಿ 31 ರಂದು ವಿವಾಹವಾದರು. ನಾಗರಾಜು ದಲಿತ ಜಾತಿಗೆ ಸೇರಿದವರಾಗಿದ್ದಾರೆ.

ಆದರೆ ಇಬ್ಬರೂ ಶಾಲಾ ದಿನಗಳಿಂದಲೇ ಪರಿಚಿತರು. ಹುಚ್ಚರಂತೆ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿ ಮೇಲುಗೈ ಸಾಧಿಸುತ್ತದೆ ಹಾಗೂ ಗೆದ್ದೇಗೆಲ್ಲುತ್ತೇವೆ ಎಂದು ಭಾವಿಸಿದ್ದರು. ಧರ್ಮವು ಅವರನ್ನು ಹಿಂದೆಂದೂ ಕಾಡಿರಲಿಲ್ಲ.

“ನನ್ನ ಮನೆಯವರಿಂದ ಯಾವಾಗಲೂ ಬೆದರಿಕೆ ಇತ್ತು, ಸಮಸ್ಯೆ ಇರುವುದರಿಂದ ಬೇರೆ ಮದುವೆಯಾಗಲು ನಾನು ರಾಜುಗೆ ಹೇಳಿದ್ದೆ. ನಾನು ಅವರ ಮನವೊಲಿಸಲು ಎರಡು ತಿಂಗಳು ಪ್ರಯತ್ನಿಸಿದೆ. ಆದರೆ ರಾಜು- ನಾವು ಒಟ್ಟಿಗೆ ಬದುಕುತ್ತೇವೆ ಮತ್ತು ಒಟ್ಟಿಗೆ ಸಾಯುತ್ತೇವೆ- ಎಂದಿದ್ದರು. ನಾನು ನಿನಗಾಗಿ ಸಾಯಲು ಸಿದ್ಧನಿದ್ದೇನೆ ಎಂದಿದ್ದರು. ಇಂದು ನನ್ನ ಪತಿ ನನ್ನಿಂದಾಗಿ ಸಾವಿಗೀಡಾಗಿದ್ದಾರೆ. ರಾಜು ಬೇರೆಯವರನ್ನು ಮದುವೆಯಾಗಲು ಬಿಟ್ಟಿದ್ದರೆ, ಅವರು ಬದುಕುತ್ತಿದ್ದರು ಎಂದು ನನಗೆ ಅನಿಸುತ್ತದೆ” ಎಂದಿದ್ದಾರೆ ಸುಲ್ತಾನಾ.

“ರಾಜು ಹುಟ್ಟಿ ಬೆಳೆದ ಮನೆಯಲ್ಲಿ ನಾನೀಗ ಇದ್ದೇನೆ, ರಾಜು ಜೊತೆಯಲ್ಲಿಯೇ ಇದ್ದಾರೆಂಬ ಭಾವನೆ ಬರುತ್ತಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...