Homeಮುಖಪುಟದಲಿತ, ಒಬಿಸಿ ಅಥವಾ ಬ್ರಾಹ್ಮಣ: ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರು ಯಾರಾಗುತ್ತಾರೆ?

ದಲಿತ, ಒಬಿಸಿ ಅಥವಾ ಬ್ರಾಹ್ಮಣ: ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರು ಯಾರಾಗುತ್ತಾರೆ?

ಮುಂದಿನ ಲೋಕಸಭಾ ಚುನಾವಣೆಯ ದೃಷ್ಟಿಯಲ್ಲಿ ಬಿಜೆಪಿ ಜಾತಿ ಸಮೀಕರಣದ ಲೆಕ್ಕಾಚಾರ ಹಾಕುತ್ತಿದೆ. ಯುಪಿ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಇತ್ತ ಬ್ರಾಹ್ಮಣ ಲಾಬಿಯೂ ನಡೆಯುತ್ತಿದೆ.

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರಾಗಿರುವ ಸ್ವತಂತ್ರದೇವ್ ಸಿಂಗ್ ಅವರ ಮೂರು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡಿದೆ. ರಾಜಕೀಯವಾಗಿ ಪ್ರಮುಖ ಪಾತ್ರ ವಹಿಸುವ ಉತ್ತರ ಪ್ರದೇಶದಲ್ಲಿ ಮುಂದಿನ ಬಿಜೆಪಿ ಅಧ್ಯಕ್ಷರು ಯಾರಾಗುತ್ತಾರೆಂಬ ಕುತೂಹಲ ಕೆರಳಿದೆ. ರಾಜ್ಯದಲ್ಲಿನ ಸಂಕೀರ್ಣ ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸುವ ಗುರುತರ ಜವಾಬ್ದಾರಿಯನ್ನು ಬಿಜೆಪಿ ಈಗ ಎದುರಿಸಬೇಕಾಗಿದೆ.

ಸ್ವತಂತ್ರದೇವ್ ಅವರ ನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಯಾರು ಪಕ್ಷವನ್ನು ಮುನ್ನಡೆಸುತ್ತಾರೆ ಎಂಬ ಕಾರಣದಿಂದ ಈ ಆಯ್ಕೆಯು ಪ್ರಮುಖ ಪಾತ್ರ ವಹಿಸಿದೆ.

ಮೂರು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಐದನೇ ರಾಜ್ಯ ಬಿಜೆಪಿ ಮುಖ್ಯಸ್ಥ ಸ್ವತಂತ್ರದೇವ್, ಯೋಗಿ ಆದಿತ್ಯನಾಥ್ ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದಿರುವ ಪ್ರಭಾವಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ನಾಯಕರೂ ಆಗಿದ್ದಾರೆ. ಅವರು ಉತ್ತರ ಪ್ರದೇಶ ವಿಧಾನ ಪರಿಷತ್ತಿನ ನಾಯಕರೂ ಹೌದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯೋಗಿ ಸರ್ಕಾರವು ಎರಡನೇ ಅವಧಿಗೆ ಅಧಿಕಾರ ಹಿಡಿದ ಬಳಿಕ ಸ್ವತಂತ್ರದೇವ್ ಅವರು ಕಳೆದ ನಾಲ್ಕು ತಿಂಗಳಿನಿಂದ ಮಂತ್ರಿಯಾಗಿದ್ದಾರೆ. ಆದರೆ ಬಿಜೆಪಿಯು ‘ಒಂದು ಸದಸ್ಯ-ಒಂದು ಹುದ್ದೆ’ ಎಂಬ ತತ್ವವನ್ನು ಹೇಳುತ್ತಿದೆ. ಇದರ ನಡುವೆ ಶನಿವಾರ ಯುಪಿ ಬಿಜೆಪಿ ಮುಖ್ಯಸ್ಥರಾಗಿ ತಮ್ಮ ಅಧಿಕಾರಾವಧಿಯನ್ನು ಸ್ವತಂತ್ರದೇವ್ ಪೂರ್ಣಗೊಳಿಸಿದ್ದಾರೆ.

“ಹೊಸ ಬಿಜೆಪಿ ಅಧ್ಯಕ್ಷರ ಆಯ್ಕೆ ವಿಳಂಬಕ್ಕೆ ಎರಡು ಕಾರಣಗಳಿವೆ. ಪಕ್ಷದೊಳಗಿನ ಆಂತರಿಕ ಚುನಾವಣೆಗಳು ಶೀಘ್ರದಲ್ಲೇ ನಡೆಯಲಿರುವುದರಿಂದ ಪಕ್ಷದ ಹೊಸ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯ ಜೊತೆಗೆ ಉತ್ತರ ಪ್ರದೇಶದ ಹೊಸ ಮುಖ್ಯಸ್ಥರನ್ನು ಆಯ್ಕೆ ಮಾಡಲು ಬಿಜೆಪಿ ಚಿಂತಿಸಿದೆ. ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಅವರ ಮೂರು ವರ್ಷಗಳ ಅವಧಿ ಈ ವರ್ಷಾಂತ್ಯಕ್ಕೆ ಮುಗಿಯಲಿದೆ” ಎಂದು ಕೇಂದ್ರ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

“ಮುಖ್ಯ ಕಾರಣವೆಂದರೆ ಬಿಜೆಪಿಯು ಬ್ರಾಹ್ಮಣ ಅಥವಾ ಒಬಿಸಿ ಎಂಬ ಎರಡು ಮುಖಗಳ ಆಯ್ಕೆಯ ಗೊಂದಲವನ್ನು ಎದುರಿಸುತ್ತಿದೆ. ಇದಕ್ಕಾಗಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಯುಪಿ ನಾಯಕರೊಂದಿಗೆ ಸಮಾಲೋಚನೆ ಪೂರ್ಣಗೊಂಡಿಲ್ಲ” ಎಂದು ಬಿಜೆಪಿ ನಾಯಕರೊಬ್ಬರು ‘ದಿ ಪ್ರಿಂಟ್‌’ ಜಾಲತಾಣಕ್ಕೆ ತಿಳಿಸಿದ್ದಾರೆ. ಬ್ರಾಹ್ಮಣರನ್ನು ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವಂತೆ ಬ್ರಾಹ್ಮಣ ಲಾಬಿಯೂ ಒತ್ತಡ ಹೇರುತ್ತಿದೆ ಎಂದು ಅವರು ಹೇಳಿದ್ದಾರೆ.

ಕೆಲವು ತಿಂಗಳ ಹಿಂದೆ ಅನೌಪಚಾರಿಕವಾಗಿ ಯುಪಿ ನಾಯಕರ ಜೊತೆ ಮಾತನಾಡಲಾಗಿದೆ. ಆದರೆ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಪಕ್ಷದ ಮತ್ತೊಬ್ಬ ಹಿರಿಯ ನಾಯಕರು ಹೇಳಿದ್ದಾರೆ. “ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸುವುದರ ಸಂದಿಗ್ಧತೆಯಲ್ಲೂ ಪಕ್ಷವಿದೆ” ಎಂದು ಅವರು ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಬ್ರಾಹ್ಮಣರಾಗಿದ್ದು, ಸಿಎಂ ಕೂಡ ಮೇಲ್ಜಾತಿಯವರಾದ್ದರಿಂದ (ಠಾಕೂರ್) ಸಮುದಾಯವನ್ನು ಕಡೆಗಣಿಸಲಾಗದಿದ್ದರೂ ಮತ್ತೊಬ್ಬ ಬ್ರಾಹ್ಮಣನನ್ನು ನೇಮಿಸುವ ಅಗತ್ಯವಿಲ್ಲ ಎಂದು ಬಿಜೆಪಿ ಕಾರ್ಯಾಧ್ಯಕ್ಷರು ಹೇಳಿದ್ದಾರೆ.

ಇದನ್ನೂ ಓದಿರಿ: ಮೇಘಾಲಯ: ಬಿಜೆಪಿ ರಾಜ್ಯ ಉಪಾಧ್ಯಕ್ಷನ ರೆಸಾರ್ಟ್‌ನಲ್ಲಿ ವೇಶ್ಯಾವಾಟಿಕೆ; 6 ಮಂದಿ ಅಪ್ರಾಪ್ತರ ರಕ್ಷಣೆ

“ದಲಿತರು ಮತ್ತು ಒಬಿಸಿಗಳ ಮೇಲೆ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂಬ ಗೊಣಗಾಟ ಪಕ್ಷದಲ್ಲಿ ಮನೆ ಮಾಡಿದೆ. ಬ್ರಾಹ್ಮಣ ಮುಖದ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ. ಆದರೆ ರಾಜ್ಯ ನಾಯಕರ ಜೊತೆ ನಡೆದ, ಮೊದಲ ಸಭೆಯಲ್ಲಿ, ಬ್ರಾಹ್ಮಣರನ್ನು ಹೊರತುಪಡಿಸಿ ಬೇರೆಯವರನ್ನು ಹುಡುಕುವಂತೆ ಸಂದೇಶ ರವಾನಿಸಲಾಗಿದೆ” ಎಂದಿದ್ದಾರೆ.

ಬ್ರಾಹ್ಮಣ ಮುಖವನ್ನು ಆರಿಸಿದ್ದರೆ, ಪಕ್ಷವು ಮೊದಲೇ ಘೋಷಣೆ ಮಾಡುತ್ತಿತ್ತು ಎಂದು ಕೇಂದ್ರದ ಬಿಜೆಪಿಯ ಮತ್ತೊಬ್ಬ ನಾಯಕ ಅಭಿಪ್ರಾಯಪಟ್ಟಿದ್ದಾರೆ.

“ಪಕ್ಷವು ಬ್ರಾಹ್ಮಣ ಮುಖಗಳ ಹೊರತಾಗಿ ನೋಡುತ್ತಿದೆ. ಒಬಿಸಿ ಮತ್ತು ದಲಿತರಲ್ಲಿ ಯಾರನ್ನಾದರೂ ಆಯ್ಕೆ ಮಾಡಲು ಯೋಚಿಸುತ್ತಿದೆ. ಸ್ವತಂತ್ರದೇವ್ ಅವರು ಕುರ್ಮಿ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಅವರ ಬದಲಿಗೆ ಒಬಿಸಿ ಅಭ್ಯರ್ಥಿಯನ್ನು ನೇಮಿಸುವುದು ಜಾಣತನ. ಅಲ್ಲದೆ, ರಾಜ್ಯ ಚುನಾವಣೆಯಲ್ಲಿ ದಲಿತರು ನಮ್ಮನ್ನು ದೊಡ್ಡ ಮಟ್ಟದಲ್ಲಿ ಬೆಂಬಲಿಸಿದ್ದಾರೆ. ಆದ್ದರಿಂದ ದಲಿತ ನಾಯಕರೂ ಆಯ್ಕೆಯಾಗಬಹುದು. ಜಾತಿ ಪ್ರಾಬಲ್ಯದಿಂದ ಒಬಿಸಿಗಳೂ ಮುಖ್ಯವಾಗುತ್ತಾರೆ. ಹೀಗಾಗಿ ಯಾವುದೂ ಅಂತಿಮವಾಗಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...