Homeಮುಖಪುಟದಲಿತ, ಒಬಿಸಿ ಅಥವಾ ಬ್ರಾಹ್ಮಣ: ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರು ಯಾರಾಗುತ್ತಾರೆ?

ದಲಿತ, ಒಬಿಸಿ ಅಥವಾ ಬ್ರಾಹ್ಮಣ: ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರು ಯಾರಾಗುತ್ತಾರೆ?

ಮುಂದಿನ ಲೋಕಸಭಾ ಚುನಾವಣೆಯ ದೃಷ್ಟಿಯಲ್ಲಿ ಬಿಜೆಪಿ ಜಾತಿ ಸಮೀಕರಣದ ಲೆಕ್ಕಾಚಾರ ಹಾಕುತ್ತಿದೆ. ಯುಪಿ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಇತ್ತ ಬ್ರಾಹ್ಮಣ ಲಾಬಿಯೂ ನಡೆಯುತ್ತಿದೆ.

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರಾಗಿರುವ ಸ್ವತಂತ್ರದೇವ್ ಸಿಂಗ್ ಅವರ ಮೂರು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡಿದೆ. ರಾಜಕೀಯವಾಗಿ ಪ್ರಮುಖ ಪಾತ್ರ ವಹಿಸುವ ಉತ್ತರ ಪ್ರದೇಶದಲ್ಲಿ ಮುಂದಿನ ಬಿಜೆಪಿ ಅಧ್ಯಕ್ಷರು ಯಾರಾಗುತ್ತಾರೆಂಬ ಕುತೂಹಲ ಕೆರಳಿದೆ. ರಾಜ್ಯದಲ್ಲಿನ ಸಂಕೀರ್ಣ ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸುವ ಗುರುತರ ಜವಾಬ್ದಾರಿಯನ್ನು ಬಿಜೆಪಿ ಈಗ ಎದುರಿಸಬೇಕಾಗಿದೆ.

ಸ್ವತಂತ್ರದೇವ್ ಅವರ ನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಯಾರು ಪಕ್ಷವನ್ನು ಮುನ್ನಡೆಸುತ್ತಾರೆ ಎಂಬ ಕಾರಣದಿಂದ ಈ ಆಯ್ಕೆಯು ಪ್ರಮುಖ ಪಾತ್ರ ವಹಿಸಿದೆ.

ಮೂರು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಐದನೇ ರಾಜ್ಯ ಬಿಜೆಪಿ ಮುಖ್ಯಸ್ಥ ಸ್ವತಂತ್ರದೇವ್, ಯೋಗಿ ಆದಿತ್ಯನಾಥ್ ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದಿರುವ ಪ್ರಭಾವಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ನಾಯಕರೂ ಆಗಿದ್ದಾರೆ. ಅವರು ಉತ್ತರ ಪ್ರದೇಶ ವಿಧಾನ ಪರಿಷತ್ತಿನ ನಾಯಕರೂ ಹೌದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯೋಗಿ ಸರ್ಕಾರವು ಎರಡನೇ ಅವಧಿಗೆ ಅಧಿಕಾರ ಹಿಡಿದ ಬಳಿಕ ಸ್ವತಂತ್ರದೇವ್ ಅವರು ಕಳೆದ ನಾಲ್ಕು ತಿಂಗಳಿನಿಂದ ಮಂತ್ರಿಯಾಗಿದ್ದಾರೆ. ಆದರೆ ಬಿಜೆಪಿಯು ‘ಒಂದು ಸದಸ್ಯ-ಒಂದು ಹುದ್ದೆ’ ಎಂಬ ತತ್ವವನ್ನು ಹೇಳುತ್ತಿದೆ. ಇದರ ನಡುವೆ ಶನಿವಾರ ಯುಪಿ ಬಿಜೆಪಿ ಮುಖ್ಯಸ್ಥರಾಗಿ ತಮ್ಮ ಅಧಿಕಾರಾವಧಿಯನ್ನು ಸ್ವತಂತ್ರದೇವ್ ಪೂರ್ಣಗೊಳಿಸಿದ್ದಾರೆ.

“ಹೊಸ ಬಿಜೆಪಿ ಅಧ್ಯಕ್ಷರ ಆಯ್ಕೆ ವಿಳಂಬಕ್ಕೆ ಎರಡು ಕಾರಣಗಳಿವೆ. ಪಕ್ಷದೊಳಗಿನ ಆಂತರಿಕ ಚುನಾವಣೆಗಳು ಶೀಘ್ರದಲ್ಲೇ ನಡೆಯಲಿರುವುದರಿಂದ ಪಕ್ಷದ ಹೊಸ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯ ಜೊತೆಗೆ ಉತ್ತರ ಪ್ರದೇಶದ ಹೊಸ ಮುಖ್ಯಸ್ಥರನ್ನು ಆಯ್ಕೆ ಮಾಡಲು ಬಿಜೆಪಿ ಚಿಂತಿಸಿದೆ. ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಅವರ ಮೂರು ವರ್ಷಗಳ ಅವಧಿ ಈ ವರ್ಷಾಂತ್ಯಕ್ಕೆ ಮುಗಿಯಲಿದೆ” ಎಂದು ಕೇಂದ್ರ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

“ಮುಖ್ಯ ಕಾರಣವೆಂದರೆ ಬಿಜೆಪಿಯು ಬ್ರಾಹ್ಮಣ ಅಥವಾ ಒಬಿಸಿ ಎಂಬ ಎರಡು ಮುಖಗಳ ಆಯ್ಕೆಯ ಗೊಂದಲವನ್ನು ಎದುರಿಸುತ್ತಿದೆ. ಇದಕ್ಕಾಗಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಯುಪಿ ನಾಯಕರೊಂದಿಗೆ ಸಮಾಲೋಚನೆ ಪೂರ್ಣಗೊಂಡಿಲ್ಲ” ಎಂದು ಬಿಜೆಪಿ ನಾಯಕರೊಬ್ಬರು ‘ದಿ ಪ್ರಿಂಟ್‌’ ಜಾಲತಾಣಕ್ಕೆ ತಿಳಿಸಿದ್ದಾರೆ. ಬ್ರಾಹ್ಮಣರನ್ನು ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವಂತೆ ಬ್ರಾಹ್ಮಣ ಲಾಬಿಯೂ ಒತ್ತಡ ಹೇರುತ್ತಿದೆ ಎಂದು ಅವರು ಹೇಳಿದ್ದಾರೆ.

ಕೆಲವು ತಿಂಗಳ ಹಿಂದೆ ಅನೌಪಚಾರಿಕವಾಗಿ ಯುಪಿ ನಾಯಕರ ಜೊತೆ ಮಾತನಾಡಲಾಗಿದೆ. ಆದರೆ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಪಕ್ಷದ ಮತ್ತೊಬ್ಬ ಹಿರಿಯ ನಾಯಕರು ಹೇಳಿದ್ದಾರೆ. “ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸುವುದರ ಸಂದಿಗ್ಧತೆಯಲ್ಲೂ ಪಕ್ಷವಿದೆ” ಎಂದು ಅವರು ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಬ್ರಾಹ್ಮಣರಾಗಿದ್ದು, ಸಿಎಂ ಕೂಡ ಮೇಲ್ಜಾತಿಯವರಾದ್ದರಿಂದ (ಠಾಕೂರ್) ಸಮುದಾಯವನ್ನು ಕಡೆಗಣಿಸಲಾಗದಿದ್ದರೂ ಮತ್ತೊಬ್ಬ ಬ್ರಾಹ್ಮಣನನ್ನು ನೇಮಿಸುವ ಅಗತ್ಯವಿಲ್ಲ ಎಂದು ಬಿಜೆಪಿ ಕಾರ್ಯಾಧ್ಯಕ್ಷರು ಹೇಳಿದ್ದಾರೆ.

ಇದನ್ನೂ ಓದಿರಿ: ಮೇಘಾಲಯ: ಬಿಜೆಪಿ ರಾಜ್ಯ ಉಪಾಧ್ಯಕ್ಷನ ರೆಸಾರ್ಟ್‌ನಲ್ಲಿ ವೇಶ್ಯಾವಾಟಿಕೆ; 6 ಮಂದಿ ಅಪ್ರಾಪ್ತರ ರಕ್ಷಣೆ

“ದಲಿತರು ಮತ್ತು ಒಬಿಸಿಗಳ ಮೇಲೆ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂಬ ಗೊಣಗಾಟ ಪಕ್ಷದಲ್ಲಿ ಮನೆ ಮಾಡಿದೆ. ಬ್ರಾಹ್ಮಣ ಮುಖದ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ. ಆದರೆ ರಾಜ್ಯ ನಾಯಕರ ಜೊತೆ ನಡೆದ, ಮೊದಲ ಸಭೆಯಲ್ಲಿ, ಬ್ರಾಹ್ಮಣರನ್ನು ಹೊರತುಪಡಿಸಿ ಬೇರೆಯವರನ್ನು ಹುಡುಕುವಂತೆ ಸಂದೇಶ ರವಾನಿಸಲಾಗಿದೆ” ಎಂದಿದ್ದಾರೆ.

ಬ್ರಾಹ್ಮಣ ಮುಖವನ್ನು ಆರಿಸಿದ್ದರೆ, ಪಕ್ಷವು ಮೊದಲೇ ಘೋಷಣೆ ಮಾಡುತ್ತಿತ್ತು ಎಂದು ಕೇಂದ್ರದ ಬಿಜೆಪಿಯ ಮತ್ತೊಬ್ಬ ನಾಯಕ ಅಭಿಪ್ರಾಯಪಟ್ಟಿದ್ದಾರೆ.

“ಪಕ್ಷವು ಬ್ರಾಹ್ಮಣ ಮುಖಗಳ ಹೊರತಾಗಿ ನೋಡುತ್ತಿದೆ. ಒಬಿಸಿ ಮತ್ತು ದಲಿತರಲ್ಲಿ ಯಾರನ್ನಾದರೂ ಆಯ್ಕೆ ಮಾಡಲು ಯೋಚಿಸುತ್ತಿದೆ. ಸ್ವತಂತ್ರದೇವ್ ಅವರು ಕುರ್ಮಿ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಅವರ ಬದಲಿಗೆ ಒಬಿಸಿ ಅಭ್ಯರ್ಥಿಯನ್ನು ನೇಮಿಸುವುದು ಜಾಣತನ. ಅಲ್ಲದೆ, ರಾಜ್ಯ ಚುನಾವಣೆಯಲ್ಲಿ ದಲಿತರು ನಮ್ಮನ್ನು ದೊಡ್ಡ ಮಟ್ಟದಲ್ಲಿ ಬೆಂಬಲಿಸಿದ್ದಾರೆ. ಆದ್ದರಿಂದ ದಲಿತ ನಾಯಕರೂ ಆಯ್ಕೆಯಾಗಬಹುದು. ಜಾತಿ ಪ್ರಾಬಲ್ಯದಿಂದ ಒಬಿಸಿಗಳೂ ಮುಖ್ಯವಾಗುತ್ತಾರೆ. ಹೀಗಾಗಿ ಯಾವುದೂ ಅಂತಿಮವಾಗಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...