Homeಮುಖಪುಟದಲಿತ, ಒಬಿಸಿ ಅಥವಾ ಬ್ರಾಹ್ಮಣ: ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರು ಯಾರಾಗುತ್ತಾರೆ?

ದಲಿತ, ಒಬಿಸಿ ಅಥವಾ ಬ್ರಾಹ್ಮಣ: ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರು ಯಾರಾಗುತ್ತಾರೆ?

ಮುಂದಿನ ಲೋಕಸಭಾ ಚುನಾವಣೆಯ ದೃಷ್ಟಿಯಲ್ಲಿ ಬಿಜೆಪಿ ಜಾತಿ ಸಮೀಕರಣದ ಲೆಕ್ಕಾಚಾರ ಹಾಕುತ್ತಿದೆ. ಯುಪಿ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಇತ್ತ ಬ್ರಾಹ್ಮಣ ಲಾಬಿಯೂ ನಡೆಯುತ್ತಿದೆ.

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರಾಗಿರುವ ಸ್ವತಂತ್ರದೇವ್ ಸಿಂಗ್ ಅವರ ಮೂರು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡಿದೆ. ರಾಜಕೀಯವಾಗಿ ಪ್ರಮುಖ ಪಾತ್ರ ವಹಿಸುವ ಉತ್ತರ ಪ್ರದೇಶದಲ್ಲಿ ಮುಂದಿನ ಬಿಜೆಪಿ ಅಧ್ಯಕ್ಷರು ಯಾರಾಗುತ್ತಾರೆಂಬ ಕುತೂಹಲ ಕೆರಳಿದೆ. ರಾಜ್ಯದಲ್ಲಿನ ಸಂಕೀರ್ಣ ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸುವ ಗುರುತರ ಜವಾಬ್ದಾರಿಯನ್ನು ಬಿಜೆಪಿ ಈಗ ಎದುರಿಸಬೇಕಾಗಿದೆ.

ಸ್ವತಂತ್ರದೇವ್ ಅವರ ನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಯಾರು ಪಕ್ಷವನ್ನು ಮುನ್ನಡೆಸುತ್ತಾರೆ ಎಂಬ ಕಾರಣದಿಂದ ಈ ಆಯ್ಕೆಯು ಪ್ರಮುಖ ಪಾತ್ರ ವಹಿಸಿದೆ.

ಮೂರು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಐದನೇ ರಾಜ್ಯ ಬಿಜೆಪಿ ಮುಖ್ಯಸ್ಥ ಸ್ವತಂತ್ರದೇವ್, ಯೋಗಿ ಆದಿತ್ಯನಾಥ್ ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದಿರುವ ಪ್ರಭಾವಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ನಾಯಕರೂ ಆಗಿದ್ದಾರೆ. ಅವರು ಉತ್ತರ ಪ್ರದೇಶ ವಿಧಾನ ಪರಿಷತ್ತಿನ ನಾಯಕರೂ ಹೌದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯೋಗಿ ಸರ್ಕಾರವು ಎರಡನೇ ಅವಧಿಗೆ ಅಧಿಕಾರ ಹಿಡಿದ ಬಳಿಕ ಸ್ವತಂತ್ರದೇವ್ ಅವರು ಕಳೆದ ನಾಲ್ಕು ತಿಂಗಳಿನಿಂದ ಮಂತ್ರಿಯಾಗಿದ್ದಾರೆ. ಆದರೆ ಬಿಜೆಪಿಯು ‘ಒಂದು ಸದಸ್ಯ-ಒಂದು ಹುದ್ದೆ’ ಎಂಬ ತತ್ವವನ್ನು ಹೇಳುತ್ತಿದೆ. ಇದರ ನಡುವೆ ಶನಿವಾರ ಯುಪಿ ಬಿಜೆಪಿ ಮುಖ್ಯಸ್ಥರಾಗಿ ತಮ್ಮ ಅಧಿಕಾರಾವಧಿಯನ್ನು ಸ್ವತಂತ್ರದೇವ್ ಪೂರ್ಣಗೊಳಿಸಿದ್ದಾರೆ.

“ಹೊಸ ಬಿಜೆಪಿ ಅಧ್ಯಕ್ಷರ ಆಯ್ಕೆ ವಿಳಂಬಕ್ಕೆ ಎರಡು ಕಾರಣಗಳಿವೆ. ಪಕ್ಷದೊಳಗಿನ ಆಂತರಿಕ ಚುನಾವಣೆಗಳು ಶೀಘ್ರದಲ್ಲೇ ನಡೆಯಲಿರುವುದರಿಂದ ಪಕ್ಷದ ಹೊಸ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯ ಜೊತೆಗೆ ಉತ್ತರ ಪ್ರದೇಶದ ಹೊಸ ಮುಖ್ಯಸ್ಥರನ್ನು ಆಯ್ಕೆ ಮಾಡಲು ಬಿಜೆಪಿ ಚಿಂತಿಸಿದೆ. ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಅವರ ಮೂರು ವರ್ಷಗಳ ಅವಧಿ ಈ ವರ್ಷಾಂತ್ಯಕ್ಕೆ ಮುಗಿಯಲಿದೆ” ಎಂದು ಕೇಂದ್ರ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

“ಮುಖ್ಯ ಕಾರಣವೆಂದರೆ ಬಿಜೆಪಿಯು ಬ್ರಾಹ್ಮಣ ಅಥವಾ ಒಬಿಸಿ ಎಂಬ ಎರಡು ಮುಖಗಳ ಆಯ್ಕೆಯ ಗೊಂದಲವನ್ನು ಎದುರಿಸುತ್ತಿದೆ. ಇದಕ್ಕಾಗಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಯುಪಿ ನಾಯಕರೊಂದಿಗೆ ಸಮಾಲೋಚನೆ ಪೂರ್ಣಗೊಂಡಿಲ್ಲ” ಎಂದು ಬಿಜೆಪಿ ನಾಯಕರೊಬ್ಬರು ‘ದಿ ಪ್ರಿಂಟ್‌’ ಜಾಲತಾಣಕ್ಕೆ ತಿಳಿಸಿದ್ದಾರೆ. ಬ್ರಾಹ್ಮಣರನ್ನು ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವಂತೆ ಬ್ರಾಹ್ಮಣ ಲಾಬಿಯೂ ಒತ್ತಡ ಹೇರುತ್ತಿದೆ ಎಂದು ಅವರು ಹೇಳಿದ್ದಾರೆ.

ಕೆಲವು ತಿಂಗಳ ಹಿಂದೆ ಅನೌಪಚಾರಿಕವಾಗಿ ಯುಪಿ ನಾಯಕರ ಜೊತೆ ಮಾತನಾಡಲಾಗಿದೆ. ಆದರೆ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಪಕ್ಷದ ಮತ್ತೊಬ್ಬ ಹಿರಿಯ ನಾಯಕರು ಹೇಳಿದ್ದಾರೆ. “ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸುವುದರ ಸಂದಿಗ್ಧತೆಯಲ್ಲೂ ಪಕ್ಷವಿದೆ” ಎಂದು ಅವರು ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಬ್ರಾಹ್ಮಣರಾಗಿದ್ದು, ಸಿಎಂ ಕೂಡ ಮೇಲ್ಜಾತಿಯವರಾದ್ದರಿಂದ (ಠಾಕೂರ್) ಸಮುದಾಯವನ್ನು ಕಡೆಗಣಿಸಲಾಗದಿದ್ದರೂ ಮತ್ತೊಬ್ಬ ಬ್ರಾಹ್ಮಣನನ್ನು ನೇಮಿಸುವ ಅಗತ್ಯವಿಲ್ಲ ಎಂದು ಬಿಜೆಪಿ ಕಾರ್ಯಾಧ್ಯಕ್ಷರು ಹೇಳಿದ್ದಾರೆ.

ಇದನ್ನೂ ಓದಿರಿ: ಮೇಘಾಲಯ: ಬಿಜೆಪಿ ರಾಜ್ಯ ಉಪಾಧ್ಯಕ್ಷನ ರೆಸಾರ್ಟ್‌ನಲ್ಲಿ ವೇಶ್ಯಾವಾಟಿಕೆ; 6 ಮಂದಿ ಅಪ್ರಾಪ್ತರ ರಕ್ಷಣೆ

“ದಲಿತರು ಮತ್ತು ಒಬಿಸಿಗಳ ಮೇಲೆ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂಬ ಗೊಣಗಾಟ ಪಕ್ಷದಲ್ಲಿ ಮನೆ ಮಾಡಿದೆ. ಬ್ರಾಹ್ಮಣ ಮುಖದ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ. ಆದರೆ ರಾಜ್ಯ ನಾಯಕರ ಜೊತೆ ನಡೆದ, ಮೊದಲ ಸಭೆಯಲ್ಲಿ, ಬ್ರಾಹ್ಮಣರನ್ನು ಹೊರತುಪಡಿಸಿ ಬೇರೆಯವರನ್ನು ಹುಡುಕುವಂತೆ ಸಂದೇಶ ರವಾನಿಸಲಾಗಿದೆ” ಎಂದಿದ್ದಾರೆ.

ಬ್ರಾಹ್ಮಣ ಮುಖವನ್ನು ಆರಿಸಿದ್ದರೆ, ಪಕ್ಷವು ಮೊದಲೇ ಘೋಷಣೆ ಮಾಡುತ್ತಿತ್ತು ಎಂದು ಕೇಂದ್ರದ ಬಿಜೆಪಿಯ ಮತ್ತೊಬ್ಬ ನಾಯಕ ಅಭಿಪ್ರಾಯಪಟ್ಟಿದ್ದಾರೆ.

“ಪಕ್ಷವು ಬ್ರಾಹ್ಮಣ ಮುಖಗಳ ಹೊರತಾಗಿ ನೋಡುತ್ತಿದೆ. ಒಬಿಸಿ ಮತ್ತು ದಲಿತರಲ್ಲಿ ಯಾರನ್ನಾದರೂ ಆಯ್ಕೆ ಮಾಡಲು ಯೋಚಿಸುತ್ತಿದೆ. ಸ್ವತಂತ್ರದೇವ್ ಅವರು ಕುರ್ಮಿ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಅವರ ಬದಲಿಗೆ ಒಬಿಸಿ ಅಭ್ಯರ್ಥಿಯನ್ನು ನೇಮಿಸುವುದು ಜಾಣತನ. ಅಲ್ಲದೆ, ರಾಜ್ಯ ಚುನಾವಣೆಯಲ್ಲಿ ದಲಿತರು ನಮ್ಮನ್ನು ದೊಡ್ಡ ಮಟ್ಟದಲ್ಲಿ ಬೆಂಬಲಿಸಿದ್ದಾರೆ. ಆದ್ದರಿಂದ ದಲಿತ ನಾಯಕರೂ ಆಯ್ಕೆಯಾಗಬಹುದು. ಜಾತಿ ಪ್ರಾಬಲ್ಯದಿಂದ ಒಬಿಸಿಗಳೂ ಮುಖ್ಯವಾಗುತ್ತಾರೆ. ಹೀಗಾಗಿ ಯಾವುದೂ ಅಂತಿಮವಾಗಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...