Homeಮುಖಪುಟದಲಿತ, ಒಬಿಸಿ ಅಥವಾ ಬ್ರಾಹ್ಮಣ: ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರು ಯಾರಾಗುತ್ತಾರೆ?

ದಲಿತ, ಒಬಿಸಿ ಅಥವಾ ಬ್ರಾಹ್ಮಣ: ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರು ಯಾರಾಗುತ್ತಾರೆ?

ಮುಂದಿನ ಲೋಕಸಭಾ ಚುನಾವಣೆಯ ದೃಷ್ಟಿಯಲ್ಲಿ ಬಿಜೆಪಿ ಜಾತಿ ಸಮೀಕರಣದ ಲೆಕ್ಕಾಚಾರ ಹಾಕುತ್ತಿದೆ. ಯುಪಿ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಇತ್ತ ಬ್ರಾಹ್ಮಣ ಲಾಬಿಯೂ ನಡೆಯುತ್ತಿದೆ.

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರಾಗಿರುವ ಸ್ವತಂತ್ರದೇವ್ ಸಿಂಗ್ ಅವರ ಮೂರು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡಿದೆ. ರಾಜಕೀಯವಾಗಿ ಪ್ರಮುಖ ಪಾತ್ರ ವಹಿಸುವ ಉತ್ತರ ಪ್ರದೇಶದಲ್ಲಿ ಮುಂದಿನ ಬಿಜೆಪಿ ಅಧ್ಯಕ್ಷರು ಯಾರಾಗುತ್ತಾರೆಂಬ ಕುತೂಹಲ ಕೆರಳಿದೆ. ರಾಜ್ಯದಲ್ಲಿನ ಸಂಕೀರ್ಣ ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸುವ ಗುರುತರ ಜವಾಬ್ದಾರಿಯನ್ನು ಬಿಜೆಪಿ ಈಗ ಎದುರಿಸಬೇಕಾಗಿದೆ.

ಸ್ವತಂತ್ರದೇವ್ ಅವರ ನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಯಾರು ಪಕ್ಷವನ್ನು ಮುನ್ನಡೆಸುತ್ತಾರೆ ಎಂಬ ಕಾರಣದಿಂದ ಈ ಆಯ್ಕೆಯು ಪ್ರಮುಖ ಪಾತ್ರ ವಹಿಸಿದೆ.

ಮೂರು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಐದನೇ ರಾಜ್ಯ ಬಿಜೆಪಿ ಮುಖ್ಯಸ್ಥ ಸ್ವತಂತ್ರದೇವ್, ಯೋಗಿ ಆದಿತ್ಯನಾಥ್ ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದಿರುವ ಪ್ರಭಾವಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ನಾಯಕರೂ ಆಗಿದ್ದಾರೆ. ಅವರು ಉತ್ತರ ಪ್ರದೇಶ ವಿಧಾನ ಪರಿಷತ್ತಿನ ನಾಯಕರೂ ಹೌದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯೋಗಿ ಸರ್ಕಾರವು ಎರಡನೇ ಅವಧಿಗೆ ಅಧಿಕಾರ ಹಿಡಿದ ಬಳಿಕ ಸ್ವತಂತ್ರದೇವ್ ಅವರು ಕಳೆದ ನಾಲ್ಕು ತಿಂಗಳಿನಿಂದ ಮಂತ್ರಿಯಾಗಿದ್ದಾರೆ. ಆದರೆ ಬಿಜೆಪಿಯು ‘ಒಂದು ಸದಸ್ಯ-ಒಂದು ಹುದ್ದೆ’ ಎಂಬ ತತ್ವವನ್ನು ಹೇಳುತ್ತಿದೆ. ಇದರ ನಡುವೆ ಶನಿವಾರ ಯುಪಿ ಬಿಜೆಪಿ ಮುಖ್ಯಸ್ಥರಾಗಿ ತಮ್ಮ ಅಧಿಕಾರಾವಧಿಯನ್ನು ಸ್ವತಂತ್ರದೇವ್ ಪೂರ್ಣಗೊಳಿಸಿದ್ದಾರೆ.

“ಹೊಸ ಬಿಜೆಪಿ ಅಧ್ಯಕ್ಷರ ಆಯ್ಕೆ ವಿಳಂಬಕ್ಕೆ ಎರಡು ಕಾರಣಗಳಿವೆ. ಪಕ್ಷದೊಳಗಿನ ಆಂತರಿಕ ಚುನಾವಣೆಗಳು ಶೀಘ್ರದಲ್ಲೇ ನಡೆಯಲಿರುವುದರಿಂದ ಪಕ್ಷದ ಹೊಸ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯ ಜೊತೆಗೆ ಉತ್ತರ ಪ್ರದೇಶದ ಹೊಸ ಮುಖ್ಯಸ್ಥರನ್ನು ಆಯ್ಕೆ ಮಾಡಲು ಬಿಜೆಪಿ ಚಿಂತಿಸಿದೆ. ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಅವರ ಮೂರು ವರ್ಷಗಳ ಅವಧಿ ಈ ವರ್ಷಾಂತ್ಯಕ್ಕೆ ಮುಗಿಯಲಿದೆ” ಎಂದು ಕೇಂದ್ರ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

“ಮುಖ್ಯ ಕಾರಣವೆಂದರೆ ಬಿಜೆಪಿಯು ಬ್ರಾಹ್ಮಣ ಅಥವಾ ಒಬಿಸಿ ಎಂಬ ಎರಡು ಮುಖಗಳ ಆಯ್ಕೆಯ ಗೊಂದಲವನ್ನು ಎದುರಿಸುತ್ತಿದೆ. ಇದಕ್ಕಾಗಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಯುಪಿ ನಾಯಕರೊಂದಿಗೆ ಸಮಾಲೋಚನೆ ಪೂರ್ಣಗೊಂಡಿಲ್ಲ” ಎಂದು ಬಿಜೆಪಿ ನಾಯಕರೊಬ್ಬರು ‘ದಿ ಪ್ರಿಂಟ್‌’ ಜಾಲತಾಣಕ್ಕೆ ತಿಳಿಸಿದ್ದಾರೆ. ಬ್ರಾಹ್ಮಣರನ್ನು ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವಂತೆ ಬ್ರಾಹ್ಮಣ ಲಾಬಿಯೂ ಒತ್ತಡ ಹೇರುತ್ತಿದೆ ಎಂದು ಅವರು ಹೇಳಿದ್ದಾರೆ.

ಕೆಲವು ತಿಂಗಳ ಹಿಂದೆ ಅನೌಪಚಾರಿಕವಾಗಿ ಯುಪಿ ನಾಯಕರ ಜೊತೆ ಮಾತನಾಡಲಾಗಿದೆ. ಆದರೆ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಪಕ್ಷದ ಮತ್ತೊಬ್ಬ ಹಿರಿಯ ನಾಯಕರು ಹೇಳಿದ್ದಾರೆ. “ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸುವುದರ ಸಂದಿಗ್ಧತೆಯಲ್ಲೂ ಪಕ್ಷವಿದೆ” ಎಂದು ಅವರು ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಬ್ರಾಹ್ಮಣರಾಗಿದ್ದು, ಸಿಎಂ ಕೂಡ ಮೇಲ್ಜಾತಿಯವರಾದ್ದರಿಂದ (ಠಾಕೂರ್) ಸಮುದಾಯವನ್ನು ಕಡೆಗಣಿಸಲಾಗದಿದ್ದರೂ ಮತ್ತೊಬ್ಬ ಬ್ರಾಹ್ಮಣನನ್ನು ನೇಮಿಸುವ ಅಗತ್ಯವಿಲ್ಲ ಎಂದು ಬಿಜೆಪಿ ಕಾರ್ಯಾಧ್ಯಕ್ಷರು ಹೇಳಿದ್ದಾರೆ.

ಇದನ್ನೂ ಓದಿರಿ: ಮೇಘಾಲಯ: ಬಿಜೆಪಿ ರಾಜ್ಯ ಉಪಾಧ್ಯಕ್ಷನ ರೆಸಾರ್ಟ್‌ನಲ್ಲಿ ವೇಶ್ಯಾವಾಟಿಕೆ; 6 ಮಂದಿ ಅಪ್ರಾಪ್ತರ ರಕ್ಷಣೆ

“ದಲಿತರು ಮತ್ತು ಒಬಿಸಿಗಳ ಮೇಲೆ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂಬ ಗೊಣಗಾಟ ಪಕ್ಷದಲ್ಲಿ ಮನೆ ಮಾಡಿದೆ. ಬ್ರಾಹ್ಮಣ ಮುಖದ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ. ಆದರೆ ರಾಜ್ಯ ನಾಯಕರ ಜೊತೆ ನಡೆದ, ಮೊದಲ ಸಭೆಯಲ್ಲಿ, ಬ್ರಾಹ್ಮಣರನ್ನು ಹೊರತುಪಡಿಸಿ ಬೇರೆಯವರನ್ನು ಹುಡುಕುವಂತೆ ಸಂದೇಶ ರವಾನಿಸಲಾಗಿದೆ” ಎಂದಿದ್ದಾರೆ.

ಬ್ರಾಹ್ಮಣ ಮುಖವನ್ನು ಆರಿಸಿದ್ದರೆ, ಪಕ್ಷವು ಮೊದಲೇ ಘೋಷಣೆ ಮಾಡುತ್ತಿತ್ತು ಎಂದು ಕೇಂದ್ರದ ಬಿಜೆಪಿಯ ಮತ್ತೊಬ್ಬ ನಾಯಕ ಅಭಿಪ್ರಾಯಪಟ್ಟಿದ್ದಾರೆ.

“ಪಕ್ಷವು ಬ್ರಾಹ್ಮಣ ಮುಖಗಳ ಹೊರತಾಗಿ ನೋಡುತ್ತಿದೆ. ಒಬಿಸಿ ಮತ್ತು ದಲಿತರಲ್ಲಿ ಯಾರನ್ನಾದರೂ ಆಯ್ಕೆ ಮಾಡಲು ಯೋಚಿಸುತ್ತಿದೆ. ಸ್ವತಂತ್ರದೇವ್ ಅವರು ಕುರ್ಮಿ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಅವರ ಬದಲಿಗೆ ಒಬಿಸಿ ಅಭ್ಯರ್ಥಿಯನ್ನು ನೇಮಿಸುವುದು ಜಾಣತನ. ಅಲ್ಲದೆ, ರಾಜ್ಯ ಚುನಾವಣೆಯಲ್ಲಿ ದಲಿತರು ನಮ್ಮನ್ನು ದೊಡ್ಡ ಮಟ್ಟದಲ್ಲಿ ಬೆಂಬಲಿಸಿದ್ದಾರೆ. ಆದ್ದರಿಂದ ದಲಿತ ನಾಯಕರೂ ಆಯ್ಕೆಯಾಗಬಹುದು. ಜಾತಿ ಪ್ರಾಬಲ್ಯದಿಂದ ಒಬಿಸಿಗಳೂ ಮುಖ್ಯವಾಗುತ್ತಾರೆ. ಹೀಗಾಗಿ ಯಾವುದೂ ಅಂತಿಮವಾಗಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...