Homeಮುಖಪುಟದಲಿತ, ಒಬಿಸಿ ಅಥವಾ ಬ್ರಾಹ್ಮಣ: ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರು ಯಾರಾಗುತ್ತಾರೆ?

ದಲಿತ, ಒಬಿಸಿ ಅಥವಾ ಬ್ರಾಹ್ಮಣ: ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರು ಯಾರಾಗುತ್ತಾರೆ?

ಮುಂದಿನ ಲೋಕಸಭಾ ಚುನಾವಣೆಯ ದೃಷ್ಟಿಯಲ್ಲಿ ಬಿಜೆಪಿ ಜಾತಿ ಸಮೀಕರಣದ ಲೆಕ್ಕಾಚಾರ ಹಾಕುತ್ತಿದೆ. ಯುಪಿ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಇತ್ತ ಬ್ರಾಹ್ಮಣ ಲಾಬಿಯೂ ನಡೆಯುತ್ತಿದೆ.

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರಾಗಿರುವ ಸ್ವತಂತ್ರದೇವ್ ಸಿಂಗ್ ಅವರ ಮೂರು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡಿದೆ. ರಾಜಕೀಯವಾಗಿ ಪ್ರಮುಖ ಪಾತ್ರ ವಹಿಸುವ ಉತ್ತರ ಪ್ರದೇಶದಲ್ಲಿ ಮುಂದಿನ ಬಿಜೆಪಿ ಅಧ್ಯಕ್ಷರು ಯಾರಾಗುತ್ತಾರೆಂಬ ಕುತೂಹಲ ಕೆರಳಿದೆ. ರಾಜ್ಯದಲ್ಲಿನ ಸಂಕೀರ್ಣ ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸುವ ಗುರುತರ ಜವಾಬ್ದಾರಿಯನ್ನು ಬಿಜೆಪಿ ಈಗ ಎದುರಿಸಬೇಕಾಗಿದೆ.

ಸ್ವತಂತ್ರದೇವ್ ಅವರ ನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಯಾರು ಪಕ್ಷವನ್ನು ಮುನ್ನಡೆಸುತ್ತಾರೆ ಎಂಬ ಕಾರಣದಿಂದ ಈ ಆಯ್ಕೆಯು ಪ್ರಮುಖ ಪಾತ್ರ ವಹಿಸಿದೆ.

ಮೂರು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಐದನೇ ರಾಜ್ಯ ಬಿಜೆಪಿ ಮುಖ್ಯಸ್ಥ ಸ್ವತಂತ್ರದೇವ್, ಯೋಗಿ ಆದಿತ್ಯನಾಥ್ ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದಿರುವ ಪ್ರಭಾವಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ನಾಯಕರೂ ಆಗಿದ್ದಾರೆ. ಅವರು ಉತ್ತರ ಪ್ರದೇಶ ವಿಧಾನ ಪರಿಷತ್ತಿನ ನಾಯಕರೂ ಹೌದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯೋಗಿ ಸರ್ಕಾರವು ಎರಡನೇ ಅವಧಿಗೆ ಅಧಿಕಾರ ಹಿಡಿದ ಬಳಿಕ ಸ್ವತಂತ್ರದೇವ್ ಅವರು ಕಳೆದ ನಾಲ್ಕು ತಿಂಗಳಿನಿಂದ ಮಂತ್ರಿಯಾಗಿದ್ದಾರೆ. ಆದರೆ ಬಿಜೆಪಿಯು ‘ಒಂದು ಸದಸ್ಯ-ಒಂದು ಹುದ್ದೆ’ ಎಂಬ ತತ್ವವನ್ನು ಹೇಳುತ್ತಿದೆ. ಇದರ ನಡುವೆ ಶನಿವಾರ ಯುಪಿ ಬಿಜೆಪಿ ಮುಖ್ಯಸ್ಥರಾಗಿ ತಮ್ಮ ಅಧಿಕಾರಾವಧಿಯನ್ನು ಸ್ವತಂತ್ರದೇವ್ ಪೂರ್ಣಗೊಳಿಸಿದ್ದಾರೆ.

“ಹೊಸ ಬಿಜೆಪಿ ಅಧ್ಯಕ್ಷರ ಆಯ್ಕೆ ವಿಳಂಬಕ್ಕೆ ಎರಡು ಕಾರಣಗಳಿವೆ. ಪಕ್ಷದೊಳಗಿನ ಆಂತರಿಕ ಚುನಾವಣೆಗಳು ಶೀಘ್ರದಲ್ಲೇ ನಡೆಯಲಿರುವುದರಿಂದ ಪಕ್ಷದ ಹೊಸ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯ ಜೊತೆಗೆ ಉತ್ತರ ಪ್ರದೇಶದ ಹೊಸ ಮುಖ್ಯಸ್ಥರನ್ನು ಆಯ್ಕೆ ಮಾಡಲು ಬಿಜೆಪಿ ಚಿಂತಿಸಿದೆ. ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಅವರ ಮೂರು ವರ್ಷಗಳ ಅವಧಿ ಈ ವರ್ಷಾಂತ್ಯಕ್ಕೆ ಮುಗಿಯಲಿದೆ” ಎಂದು ಕೇಂದ್ರ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

“ಮುಖ್ಯ ಕಾರಣವೆಂದರೆ ಬಿಜೆಪಿಯು ಬ್ರಾಹ್ಮಣ ಅಥವಾ ಒಬಿಸಿ ಎಂಬ ಎರಡು ಮುಖಗಳ ಆಯ್ಕೆಯ ಗೊಂದಲವನ್ನು ಎದುರಿಸುತ್ತಿದೆ. ಇದಕ್ಕಾಗಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಯುಪಿ ನಾಯಕರೊಂದಿಗೆ ಸಮಾಲೋಚನೆ ಪೂರ್ಣಗೊಂಡಿಲ್ಲ” ಎಂದು ಬಿಜೆಪಿ ನಾಯಕರೊಬ್ಬರು ‘ದಿ ಪ್ರಿಂಟ್‌’ ಜಾಲತಾಣಕ್ಕೆ ತಿಳಿಸಿದ್ದಾರೆ. ಬ್ರಾಹ್ಮಣರನ್ನು ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವಂತೆ ಬ್ರಾಹ್ಮಣ ಲಾಬಿಯೂ ಒತ್ತಡ ಹೇರುತ್ತಿದೆ ಎಂದು ಅವರು ಹೇಳಿದ್ದಾರೆ.

ಕೆಲವು ತಿಂಗಳ ಹಿಂದೆ ಅನೌಪಚಾರಿಕವಾಗಿ ಯುಪಿ ನಾಯಕರ ಜೊತೆ ಮಾತನಾಡಲಾಗಿದೆ. ಆದರೆ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಪಕ್ಷದ ಮತ್ತೊಬ್ಬ ಹಿರಿಯ ನಾಯಕರು ಹೇಳಿದ್ದಾರೆ. “ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸುವುದರ ಸಂದಿಗ್ಧತೆಯಲ್ಲೂ ಪಕ್ಷವಿದೆ” ಎಂದು ಅವರು ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಬ್ರಾಹ್ಮಣರಾಗಿದ್ದು, ಸಿಎಂ ಕೂಡ ಮೇಲ್ಜಾತಿಯವರಾದ್ದರಿಂದ (ಠಾಕೂರ್) ಸಮುದಾಯವನ್ನು ಕಡೆಗಣಿಸಲಾಗದಿದ್ದರೂ ಮತ್ತೊಬ್ಬ ಬ್ರಾಹ್ಮಣನನ್ನು ನೇಮಿಸುವ ಅಗತ್ಯವಿಲ್ಲ ಎಂದು ಬಿಜೆಪಿ ಕಾರ್ಯಾಧ್ಯಕ್ಷರು ಹೇಳಿದ್ದಾರೆ.

ಇದನ್ನೂ ಓದಿರಿ: ಮೇಘಾಲಯ: ಬಿಜೆಪಿ ರಾಜ್ಯ ಉಪಾಧ್ಯಕ್ಷನ ರೆಸಾರ್ಟ್‌ನಲ್ಲಿ ವೇಶ್ಯಾವಾಟಿಕೆ; 6 ಮಂದಿ ಅಪ್ರಾಪ್ತರ ರಕ್ಷಣೆ

“ದಲಿತರು ಮತ್ತು ಒಬಿಸಿಗಳ ಮೇಲೆ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂಬ ಗೊಣಗಾಟ ಪಕ್ಷದಲ್ಲಿ ಮನೆ ಮಾಡಿದೆ. ಬ್ರಾಹ್ಮಣ ಮುಖದ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ. ಆದರೆ ರಾಜ್ಯ ನಾಯಕರ ಜೊತೆ ನಡೆದ, ಮೊದಲ ಸಭೆಯಲ್ಲಿ, ಬ್ರಾಹ್ಮಣರನ್ನು ಹೊರತುಪಡಿಸಿ ಬೇರೆಯವರನ್ನು ಹುಡುಕುವಂತೆ ಸಂದೇಶ ರವಾನಿಸಲಾಗಿದೆ” ಎಂದಿದ್ದಾರೆ.

ಬ್ರಾಹ್ಮಣ ಮುಖವನ್ನು ಆರಿಸಿದ್ದರೆ, ಪಕ್ಷವು ಮೊದಲೇ ಘೋಷಣೆ ಮಾಡುತ್ತಿತ್ತು ಎಂದು ಕೇಂದ್ರದ ಬಿಜೆಪಿಯ ಮತ್ತೊಬ್ಬ ನಾಯಕ ಅಭಿಪ್ರಾಯಪಟ್ಟಿದ್ದಾರೆ.

“ಪಕ್ಷವು ಬ್ರಾಹ್ಮಣ ಮುಖಗಳ ಹೊರತಾಗಿ ನೋಡುತ್ತಿದೆ. ಒಬಿಸಿ ಮತ್ತು ದಲಿತರಲ್ಲಿ ಯಾರನ್ನಾದರೂ ಆಯ್ಕೆ ಮಾಡಲು ಯೋಚಿಸುತ್ತಿದೆ. ಸ್ವತಂತ್ರದೇವ್ ಅವರು ಕುರ್ಮಿ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಅವರ ಬದಲಿಗೆ ಒಬಿಸಿ ಅಭ್ಯರ್ಥಿಯನ್ನು ನೇಮಿಸುವುದು ಜಾಣತನ. ಅಲ್ಲದೆ, ರಾಜ್ಯ ಚುನಾವಣೆಯಲ್ಲಿ ದಲಿತರು ನಮ್ಮನ್ನು ದೊಡ್ಡ ಮಟ್ಟದಲ್ಲಿ ಬೆಂಬಲಿಸಿದ್ದಾರೆ. ಆದ್ದರಿಂದ ದಲಿತ ನಾಯಕರೂ ಆಯ್ಕೆಯಾಗಬಹುದು. ಜಾತಿ ಪ್ರಾಬಲ್ಯದಿಂದ ಒಬಿಸಿಗಳೂ ಮುಖ್ಯವಾಗುತ್ತಾರೆ. ಹೀಗಾಗಿ ಯಾವುದೂ ಅಂತಿಮವಾಗಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...