Homeಕರ್ನಾಟಕನಿರ್ದೇಶಕರ ಕೊಠಡಿ ಬಿಟ್ಟುಕೊಡದೆ ದಲಿತ ಅಧಿಕಾರಿಗೆ ಕಿರುಕುಳ; ದೂರದರ್ಶನ ಕಚೇರಿ ಕಾರಿಡಾರ್‌ನಲ್ಲಿ ಕುಳಿತು ಕೆಲಸ ಮಾಡುತ್ತಿರುವ...

ನಿರ್ದೇಶಕರ ಕೊಠಡಿ ಬಿಟ್ಟುಕೊಡದೆ ದಲಿತ ಅಧಿಕಾರಿಗೆ ಕಿರುಕುಳ; ದೂರದರ್ಶನ ಕಚೇರಿ ಕಾರಿಡಾರ್‌ನಲ್ಲಿ ಕುಳಿತು ಕೆಲಸ ಮಾಡುತ್ತಿರುವ ಭಾಗ್ಯವಾನ್

- Advertisement -
- Advertisement -

ಬೆಂಗಳೂರು ದೂರದರ್ಶನ ಕೇಂದ್ರಕ್ಕೆ ಉಪ ಮಹಾನಿರ್ದೇಶಕರಾಗಿ (ಕಾರ್ಯಕ್ರಮ ವಿಭಾಗ) ಕಳೆದ ಮೂರು ತಿಂಗಳ ಹಿಂದೆ ದಲಿತ ಸಮುದಾಯಕ್ಕೆ ಸೇರಿದ ಅಧಿಕಾರಿ ಭಾಗ್ಯವಾನ್ ಎಂಬುವವರನ್ನು ನೇಮಿಸಲಾಗಿದೆ. ಆದರೆ, ನಿರ್ದೇಶಕರಿಗೆ ಮೀಸಲಾಗಿರುವ ಕೊಠಡಿಯನ್ನು ಅವರಿಗೆ ನೀಡದೆ, ಸಿಬಿಐ ತನಿಖೆ ಎದುರಿಸುತ್ತಿರುವ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೀದರ್ ಮೂಲದ ಭಾಗ್ಯವಾನ್ ಅವರು ದಲಿತ ಸಮುದಾಯಕ್ಕೆ ಸೇರಿರುವ ಕನ್ನಡಿಗ ಅಧಿಕಾರಿಯಾಗಿದ್ದಾರೆ. ಕೇಂದ್ರ ಸರ್ಕಾರ ಸ್ವಾಮ್ಯದ ದೂರದರ್ಶನ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಅಧಿಕಾರಿಯಾಗಿ ಕಳೆದ 26 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಕಳೆದ ನಲ್ವತ್ತು ವರ್ಷಗಳಿಂದ ಕಾರ್ಯಕ್ರಮ ನಿರ್ದೇಶಕರಿಗೆಂದು ಮೀಸಲಿಟ್ಟಿದ್ದ ಕೊಠಡಿಯನ್ನು ಅವರಿಗೆ ನೀಡದೆ, ಕೆಲಸ ಮಾಡಲು ಅಗತ್ಯವಿರುವ ಕಂಪ್ಯೂಟರ್ ಸಹ ಒದಗಿಸದೆ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಪ್ರತಿನಿಧಿ ಜತೆಗೆ ಮಾತನಾಡಿದ ಅವರು, “ಚಂದನ ವಾಹಿನಿ ಕಾರ್ಯಕ್ರಮ ವಿಭಾಗದ ನಿರ್ದೇಶಕನಾಗಿ ನಾನು ಇಲ್ಲಿಗೆ ಬಂದು ಮೂರು ತಿಂಗಳಾಗಿದೆ; ನಾನು ಬಂದಾಗ ಇಲ್ಲಿನ ಇಂಜಿನಿಯರ್ ಮಂಗಲಗಿ ಎಂಬುವರಿಗೆ ಕಾರ್ಯಕ್ರಮ ವಿಭಾಗದ ಹೆಚ್ಚುವರಿ ಜವಾಬ್ದಾರಿ ನೀಡಿದ್ದರು. ಮೂಲತಃ ಅವರು ಇಂಜಿನಿಯರ್ ಆಗಿದ್ದು, ಚೆನ್ನೈ ಅಥವಾ ನಮ್ಮ ರೇಡಿಯೋ ವಿಭಾಗದಲ್ಲಿ ಅವರಿಗಾಗಿಯೇ ಮೀಸಲಿರುವ ಎರಡು ಪ್ರತ್ಯೇಕ ಕೊಠಡಿಗಳಿದ್ದು ಅಲ್ಲಿ ಕೂರಬೇಕು. ಅದೆಲ್ಲಾ ಬಿಟ್ಟು ಅವರು ದೂರದರ್ಶನದ ನಿರ್ದೇಶಕರಿಗೆ ಮೀಸಲಿರುವ ಕಚೇರಿಯಲ್ಲಿ ಪಟ್ಟುಹಿಡಿದು ಕುಳಿತಿದ್ದಾರೆ” ಎಂದರು.

“ನಿರ್ದೇಶಕರ ಹುದ್ದೆ ಖಾಲಿ ಇದ್ದಾಗ ಕುಳಿತುಕೊಳ್ಳಲಿ ಪರವಾಗಿಲ್ಲ.. ನಾನು ಅಧಿಕಾರ ವಹಿಸಿಕೊಂಡ ನಂತರವಾದರೂ ಕಚೇರಿ ಬಿಟ್ಟುಕೊಡಬೇಕಿತ್ತು. ಆದರೆ, ಅವರು ಬಿಟ್ಟುಕೊಡುತ್ತಿಲ್ಲ. ಅವರಿಗೆ ಬೆಂಬಲವಾಗಿ ನಮ್ಮ ವಿಭಾಗದ ಮುಖ್ಯಸ್ಥರಾದ ಮಾಧವರೆಡ್ಡಿಯವರು ನಿಂತಿದ್ದಾರೆ. ಈ ಬಗ್ಗೆ ಕೇಳಿದರೆ, ‘ಅವರು ಬಿಟ್ಟುಕೊಡದಿದ್ದರೆ ನಾನೇನು ಮಾಡಲಿ’ ಎನ್ನುತ್ತಾರೆ. ಮಂಗಲಗಿ ಅವರನ್ನು ಕೇಳಿದರೆ ‘ಮಾಧವರೆಡ್ಡಿಯವರನ್ನು ಕೇಳಿ’ ಎನ್ನುತ್ತಾರೆ. ಕಳೆದ ಮೂರು ತಿಂಗಳಿನಿಂದ ನನಗೆ ಇದೇ ರೀತಿಯ ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ ನಮ್ಮ ಮೇಲಾಧಿಕಾರಿಗಳಿಗೆ ಪತ್ರ ಬರೆದರೂ ಅವರಿಂದಲೂ ಈವರೆಗೆ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಎಷ್ಟೇ ಪ್ರಯತ್ನ ಮಾಡಿದರೂ ನಿರ್ದೇಶಕರಿಗೆ ಮೀಸಲಿರುವ ಕಚೇರಿಯಲ್ಲಿ ಕುಳಿತುಕೊಳ್ಳಲು ಬಿಡುತ್ತಿಲ್ಲ. ನನಗಾಗಿ ಮೀಸಲಿರುವ ಕೊಠಡಿ ಬಿಟ್ಟು, ಬೇರೆ ಯಾವುದೋ ಒಂದು ಕೊಠಡಿ ಕೊಡುತ್ತಿದ್ದಾರೆ. ಆದರೆ, ನಾನು ಅದನ್ನು ಬೇಡ ಎಂದು ತಿರಸ್ಕರಿಸಿದ್ದೇನೆ. ಆ ಕೊಠಡಿಯನ್ನೂ ನನಗೆ ಮೂರು ತಿಂಗಳ ನಂತರ ಅಧಿಕೃತವಾಗಿ ನೀಡಿದ್ದಾರೆ” ಎಂದು ತಮಗಾಗಿರುವ ಅನ್ಯಾಯದ ಬಗ್ಗೆ ಅವರು ವಿವರಿಸಿದರು.

ಕಚೇರಿ ಕಾರಿಡಾರ್‌ನಿಂದಲೆ ಕಾರ್ಯನಿರ್ವಹಣೆ

“ಕಳೆದ ಮೂರು ತಿಂಗಳಿನಿಂದ ನಾನು ಕಚೇರಿಯ ಕಾರಿಡಾರ್‌ನಲ್ಲೇ ಕೂತು ಕೆಲಸ ಮಾಡುತ್ತಿದ್ದೇನೆ. ಸಂದರ್ಶಕರು ಕಾಯುವ (ವಿಸಿಟರ್ಸ್‌ ವೇಯ್ಟಿಂಗ್ ಹಾಲ್) ಹಾಲ್‌ನಲ್ಲೇ ಕುಳಿತು ಕಚೇರಿ ಕೆಲಸ ಮಾಡುತ್ತಿದ್ದೇನೆ. ಕಂಪ್ಯೂಟರ್ ಸೇರಿದಂತೆ ನನ್ನ ಕೆಲಸಕ್ಕೆ ಅನುಕೂಲವಾಗುವಂತ ಯಾವುದೇ ಅಗತ್ಯ ವಸ್ತುಗಳನ್ನು ಒದಗಿಸಿಲ್ಲ. ಸಹೋದ್ಯೋಗಿಗಳ ಬಳಿ ಮನವಿ ಮಾಡಿಕೊಂಡು, ಪ್ರತಿದಿನ ಒಬ್ಬೊಬ್ಬರ ಕಂಪ್ಯೂಟರ್ ಬಳಸಿಕೊಂಡು ಕೆಲಸ ಮಾಡುತ್ತಿದ್ದೇನೆ; ಪ್ರತಿನಿತ್ಯ ನನ್ನ ಕೆಲಸವನ್ನು ಮುಗಿಸಿಯೇ ಮನೆಗೆ ತೆರಳುತ್ತಿದ್ದೇನೆ” ಎಂದರು.

“ಈ ಮುಂಚೆ ನಾನು ದೂರದರ್ಶನ ಹೈದರಾಬಾದ್‌ನಲ್ಲಿ ಕೆಲಸ ಮಾಡುತ್ತಿದ್ದೆ; ಅಲ್ಲಿಂದ ಬಡ್ತಿ ಪಡೆದು ಬೆಂಗಳೂರು ಕೇಂದ್ರದಲ್ಲಿ ಕಾರ್ಯಕ್ರಮ ವಿಭಾಗದ ಮುಖ್ಯಸ್ಥನಾಗಿದ್ದೇನೆ. ಕಳೆದ 26 ವರ್ಷದಿಂದ ದೂರದರ್ಶನದಲ್ಲಿ ಕೆಲಸ ಮಾಡುತ್ತಿದ್ದು, ದಲಿತ ಎನ್ನುವ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಅದೇ ಉದ್ದೇಶಕ್ಕೆ, ಎಲ್ಲರೂ ನನಗೆ ಕಚೇರಿ ನೀಡಬಾರದು ಎಂದು ನಿರ್ಧರಿಸಿದ್ದಾರೆ; ಎಲ್ಲ ರೀತಿಯ ನಿಯಮಗಳನ್ನು ಅವರು ಉಲ್ಲಂಘಿಸಿದ್ದಾರೆ” ಎಂದು ಅವರು ಬೇಸರ ಹೊರಹಾಕಿದರು.

“ನನಗೆ ಕಿರುಕುಳ ನೀಡುತ್ತಿರುವ ಇಬ್ಬರೂ ಅಧಿಕಾರಿಗಳ ವಿರುದ್ಧ ಸಿಬಿಐ ವಿಚಾರಣೆ ನಡೆಸುತ್ತಿದೆ. ನಮ್ಮ ದೂರದರ್ಶನ ನಿಯಮಗಳ ಪ್ರಕಾರ, ವಿಚಾರಣೆಗೆ ಒಳಪಟ್ಟಿರುವ ಯಾವುದೇ ಅಧಿಕಾರಿಗೆ ಹುದ್ದೆ ನೀಡಬಾರದು ಎಂದು ಹೇಳುತ್ತದೆ. ಆದರೆ, ಅವರಿಗೆ ಹೆಚ್ಚುವರಿಯಾಗಿ ಮೂರುಮೂರು ಜವಾಬ್ದಾರಿ ನೀಡಿದ್ದಾರೆ” ಎಂದು ವಿವರಿಸಿದರು.

“ಇಡೀ ದೇಶಕ್ಕೆ ಕಾರ್ಯಕ್ರಮ ವಿಭಾಗದ ನಿರ್ದೇಶಕನಾಗಿರುವ ಡೆಪ್ಯೂಟಿ ಡೈರೆಕ್ಟರ್ ಜನರಲ್ ನಾನೊಬ್ಬನೆ; ಅದು ಬಿಟ್ಟು ಈ ವಿಭಾಗಕ್ಕೆ ಸಂಬಂಧ ಇಲ್ಲದವರಿಗೆಲ್ಲಾ ಹೆಚ್ಚುವರಿ ಚಾರ್ಜ್‌ ನೀಡಿದ್ದಾರೆ. ಅವರಿಗೆ ದೂರದರ್ಶನದ ಅನುಭವವೇ ಇಲ್ಲ; ಆದರೂ ನನ್ನ ಕೆಲಸವನ್ನು ಅವರು ಮಾಡುತ್ತಿದ್ದಾರೆ. ನಾನು ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಓದಿ ಕೆಲಸ ಪಡೆದುಕೊಂಡಿದ್ದೇನೆ. ಕಾರ್ಯಕ್ರಮ ನಿರ್ದೇಶಕರಿಗೆ ಮೀಸಲಿರುವ ಕೊಠಡಿಯನ್ನು ನನಗೆ ಬಿಟ್ಟುಕೊಡಬೇಕು; ಕಳೆದ ನಲವತ್ತು ವರ್ಷಗಳಿಂದ ಆ ಕಚೇರಿ ನಿರ್ದೇಶಕರಿಗೆ ಮೀಸಲಿತ್ತು ಎನ್ನುವುದಕ್ಕೆ ಎಲ್ಲರ ಬಳಿ ಸಾಕಷ್ಟು ಪುರಾವೆಗಳಿವೆ. ನಾನು ಕೇಳಿದರೆ ಒಬ್ಬರ ಮೇಲೆ ಒಬ್ಬರು ಹೇಳುತ್ತಾ ದಿನದೂಡುತ್ತಿದ್ದಾರೆ” ಎಂದರು.

“ತಳ ಹಂತದ ಸಹೋದ್ಯೋಗಿಗಳು ನನಗೆ ವರದಿ ಮಾಡಿಕೊಳ್ಳುತ್ತಿದ್ದಾರೆ, ಅದಕ್ಕಾಗಿಯೇ ‘ಕಾರ್ಯಕ್ರಮ ಮುಖ್ಯಸ್ಥರು’ ಎಂದು ಅಸ್ಥಿತ್ವದಲ್ಲೇ ಇಲ್ಲದ ಹುದ್ದೆಯೊಂದನ್ನು ನನಗೆ ನೀಡಿದ್ದಾರೆ. ನಾನೇ ಮುಖ್ಯಸ್ಥ ಆಗಿರುವುದರಿಂದ ಅಂತ ಹುದ್ದೆಯನ್ನು ನಿರ್ದೇಶಕರಿಗಿಂತ ಕೆಳಗಿರುವ ಅಧಿಕಾರಿಗಳಿಗೆ ಕೊಡಬಹುದು; ನನಗೆ ಕೊಡುವುದಕ್ಕೆ ಬರುವುದಿಲ್ಲ” ಎಂದು ಭಾಗ್ಯವಾನ್ ವಿವರಿಸಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ದೂರದರ್ಶನ ವಿಭಾಗದ ಮುಖ್ಯಸ್ಥರಾದ ಮಾದವರೆಡ್ಡಿ, “ಕೊಠಡಿ ನೀಡಿಲ್ಲ ಎಂಬುದು ಸುಳ್ಳು, ಈ ಬಗ್ಗೆ ಅವರನ್ನೇ ಕೇಳಬೇಕು. ನಾನು ನಿಯಮಗಳಂತೆ ನಡೆದುಕೊಳ್ಳುತ್ತಿದ್ದೇನೆ” ಎಂದು ಹೇಳಿದ ಅವರು, ‘ಮೀಟಿಂಗ್‌ನಲ್ಲಿದ್ದೇನೆ’ ಎಂದು ತರಾತುರಿಯಲ್ಲಿ ಕರೆ ಕಡಿತಗೊಳಿಸಿದರು.

ಇದನ್ನೂ ಓದಿ; ಸ್ಟ್ಯಾನ್‌ ಸ್ವಾಮಿ ಸಾವಿನ ಕುರಿತು ತನಿಖೆಗೆ ಒತ್ತಾಯಿಸಿ ಅಮೆರಿಕ ಸಂಸತ್‌ನಲ್ಲಿ ನಿರ್ಣಯ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...