Homeಕರ್ನಾಟಕನಿರ್ದೇಶಕರ ಕೊಠಡಿ ಬಿಟ್ಟುಕೊಡದೆ ದಲಿತ ಅಧಿಕಾರಿಗೆ ಕಿರುಕುಳ; ದೂರದರ್ಶನ ಕಚೇರಿ ಕಾರಿಡಾರ್‌ನಲ್ಲಿ ಕುಳಿತು ಕೆಲಸ ಮಾಡುತ್ತಿರುವ...

ನಿರ್ದೇಶಕರ ಕೊಠಡಿ ಬಿಟ್ಟುಕೊಡದೆ ದಲಿತ ಅಧಿಕಾರಿಗೆ ಕಿರುಕುಳ; ದೂರದರ್ಶನ ಕಚೇರಿ ಕಾರಿಡಾರ್‌ನಲ್ಲಿ ಕುಳಿತು ಕೆಲಸ ಮಾಡುತ್ತಿರುವ ಭಾಗ್ಯವಾನ್

- Advertisement -
- Advertisement -

ಬೆಂಗಳೂರು ದೂರದರ್ಶನ ಕೇಂದ್ರಕ್ಕೆ ಉಪ ಮಹಾನಿರ್ದೇಶಕರಾಗಿ (ಕಾರ್ಯಕ್ರಮ ವಿಭಾಗ) ಕಳೆದ ಮೂರು ತಿಂಗಳ ಹಿಂದೆ ದಲಿತ ಸಮುದಾಯಕ್ಕೆ ಸೇರಿದ ಅಧಿಕಾರಿ ಭಾಗ್ಯವಾನ್ ಎಂಬುವವರನ್ನು ನೇಮಿಸಲಾಗಿದೆ. ಆದರೆ, ನಿರ್ದೇಶಕರಿಗೆ ಮೀಸಲಾಗಿರುವ ಕೊಠಡಿಯನ್ನು ಅವರಿಗೆ ನೀಡದೆ, ಸಿಬಿಐ ತನಿಖೆ ಎದುರಿಸುತ್ತಿರುವ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೀದರ್ ಮೂಲದ ಭಾಗ್ಯವಾನ್ ಅವರು ದಲಿತ ಸಮುದಾಯಕ್ಕೆ ಸೇರಿರುವ ಕನ್ನಡಿಗ ಅಧಿಕಾರಿಯಾಗಿದ್ದಾರೆ. ಕೇಂದ್ರ ಸರ್ಕಾರ ಸ್ವಾಮ್ಯದ ದೂರದರ್ಶನ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಅಧಿಕಾರಿಯಾಗಿ ಕಳೆದ 26 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಕಳೆದ ನಲ್ವತ್ತು ವರ್ಷಗಳಿಂದ ಕಾರ್ಯಕ್ರಮ ನಿರ್ದೇಶಕರಿಗೆಂದು ಮೀಸಲಿಟ್ಟಿದ್ದ ಕೊಠಡಿಯನ್ನು ಅವರಿಗೆ ನೀಡದೆ, ಕೆಲಸ ಮಾಡಲು ಅಗತ್ಯವಿರುವ ಕಂಪ್ಯೂಟರ್ ಸಹ ಒದಗಿಸದೆ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಪ್ರತಿನಿಧಿ ಜತೆಗೆ ಮಾತನಾಡಿದ ಅವರು, “ಚಂದನ ವಾಹಿನಿ ಕಾರ್ಯಕ್ರಮ ವಿಭಾಗದ ನಿರ್ದೇಶಕನಾಗಿ ನಾನು ಇಲ್ಲಿಗೆ ಬಂದು ಮೂರು ತಿಂಗಳಾಗಿದೆ; ನಾನು ಬಂದಾಗ ಇಲ್ಲಿನ ಇಂಜಿನಿಯರ್ ಮಂಗಲಗಿ ಎಂಬುವರಿಗೆ ಕಾರ್ಯಕ್ರಮ ವಿಭಾಗದ ಹೆಚ್ಚುವರಿ ಜವಾಬ್ದಾರಿ ನೀಡಿದ್ದರು. ಮೂಲತಃ ಅವರು ಇಂಜಿನಿಯರ್ ಆಗಿದ್ದು, ಚೆನ್ನೈ ಅಥವಾ ನಮ್ಮ ರೇಡಿಯೋ ವಿಭಾಗದಲ್ಲಿ ಅವರಿಗಾಗಿಯೇ ಮೀಸಲಿರುವ ಎರಡು ಪ್ರತ್ಯೇಕ ಕೊಠಡಿಗಳಿದ್ದು ಅಲ್ಲಿ ಕೂರಬೇಕು. ಅದೆಲ್ಲಾ ಬಿಟ್ಟು ಅವರು ದೂರದರ್ಶನದ ನಿರ್ದೇಶಕರಿಗೆ ಮೀಸಲಿರುವ ಕಚೇರಿಯಲ್ಲಿ ಪಟ್ಟುಹಿಡಿದು ಕುಳಿತಿದ್ದಾರೆ” ಎಂದರು.

“ನಿರ್ದೇಶಕರ ಹುದ್ದೆ ಖಾಲಿ ಇದ್ದಾಗ ಕುಳಿತುಕೊಳ್ಳಲಿ ಪರವಾಗಿಲ್ಲ.. ನಾನು ಅಧಿಕಾರ ವಹಿಸಿಕೊಂಡ ನಂತರವಾದರೂ ಕಚೇರಿ ಬಿಟ್ಟುಕೊಡಬೇಕಿತ್ತು. ಆದರೆ, ಅವರು ಬಿಟ್ಟುಕೊಡುತ್ತಿಲ್ಲ. ಅವರಿಗೆ ಬೆಂಬಲವಾಗಿ ನಮ್ಮ ವಿಭಾಗದ ಮುಖ್ಯಸ್ಥರಾದ ಮಾಧವರೆಡ್ಡಿಯವರು ನಿಂತಿದ್ದಾರೆ. ಈ ಬಗ್ಗೆ ಕೇಳಿದರೆ, ‘ಅವರು ಬಿಟ್ಟುಕೊಡದಿದ್ದರೆ ನಾನೇನು ಮಾಡಲಿ’ ಎನ್ನುತ್ತಾರೆ. ಮಂಗಲಗಿ ಅವರನ್ನು ಕೇಳಿದರೆ ‘ಮಾಧವರೆಡ್ಡಿಯವರನ್ನು ಕೇಳಿ’ ಎನ್ನುತ್ತಾರೆ. ಕಳೆದ ಮೂರು ತಿಂಗಳಿನಿಂದ ನನಗೆ ಇದೇ ರೀತಿಯ ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ ನಮ್ಮ ಮೇಲಾಧಿಕಾರಿಗಳಿಗೆ ಪತ್ರ ಬರೆದರೂ ಅವರಿಂದಲೂ ಈವರೆಗೆ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಎಷ್ಟೇ ಪ್ರಯತ್ನ ಮಾಡಿದರೂ ನಿರ್ದೇಶಕರಿಗೆ ಮೀಸಲಿರುವ ಕಚೇರಿಯಲ್ಲಿ ಕುಳಿತುಕೊಳ್ಳಲು ಬಿಡುತ್ತಿಲ್ಲ. ನನಗಾಗಿ ಮೀಸಲಿರುವ ಕೊಠಡಿ ಬಿಟ್ಟು, ಬೇರೆ ಯಾವುದೋ ಒಂದು ಕೊಠಡಿ ಕೊಡುತ್ತಿದ್ದಾರೆ. ಆದರೆ, ನಾನು ಅದನ್ನು ಬೇಡ ಎಂದು ತಿರಸ್ಕರಿಸಿದ್ದೇನೆ. ಆ ಕೊಠಡಿಯನ್ನೂ ನನಗೆ ಮೂರು ತಿಂಗಳ ನಂತರ ಅಧಿಕೃತವಾಗಿ ನೀಡಿದ್ದಾರೆ” ಎಂದು ತಮಗಾಗಿರುವ ಅನ್ಯಾಯದ ಬಗ್ಗೆ ಅವರು ವಿವರಿಸಿದರು.

ಕಚೇರಿ ಕಾರಿಡಾರ್‌ನಿಂದಲೆ ಕಾರ್ಯನಿರ್ವಹಣೆ

“ಕಳೆದ ಮೂರು ತಿಂಗಳಿನಿಂದ ನಾನು ಕಚೇರಿಯ ಕಾರಿಡಾರ್‌ನಲ್ಲೇ ಕೂತು ಕೆಲಸ ಮಾಡುತ್ತಿದ್ದೇನೆ. ಸಂದರ್ಶಕರು ಕಾಯುವ (ವಿಸಿಟರ್ಸ್‌ ವೇಯ್ಟಿಂಗ್ ಹಾಲ್) ಹಾಲ್‌ನಲ್ಲೇ ಕುಳಿತು ಕಚೇರಿ ಕೆಲಸ ಮಾಡುತ್ತಿದ್ದೇನೆ. ಕಂಪ್ಯೂಟರ್ ಸೇರಿದಂತೆ ನನ್ನ ಕೆಲಸಕ್ಕೆ ಅನುಕೂಲವಾಗುವಂತ ಯಾವುದೇ ಅಗತ್ಯ ವಸ್ತುಗಳನ್ನು ಒದಗಿಸಿಲ್ಲ. ಸಹೋದ್ಯೋಗಿಗಳ ಬಳಿ ಮನವಿ ಮಾಡಿಕೊಂಡು, ಪ್ರತಿದಿನ ಒಬ್ಬೊಬ್ಬರ ಕಂಪ್ಯೂಟರ್ ಬಳಸಿಕೊಂಡು ಕೆಲಸ ಮಾಡುತ್ತಿದ್ದೇನೆ; ಪ್ರತಿನಿತ್ಯ ನನ್ನ ಕೆಲಸವನ್ನು ಮುಗಿಸಿಯೇ ಮನೆಗೆ ತೆರಳುತ್ತಿದ್ದೇನೆ” ಎಂದರು.

“ಈ ಮುಂಚೆ ನಾನು ದೂರದರ್ಶನ ಹೈದರಾಬಾದ್‌ನಲ್ಲಿ ಕೆಲಸ ಮಾಡುತ್ತಿದ್ದೆ; ಅಲ್ಲಿಂದ ಬಡ್ತಿ ಪಡೆದು ಬೆಂಗಳೂರು ಕೇಂದ್ರದಲ್ಲಿ ಕಾರ್ಯಕ್ರಮ ವಿಭಾಗದ ಮುಖ್ಯಸ್ಥನಾಗಿದ್ದೇನೆ. ಕಳೆದ 26 ವರ್ಷದಿಂದ ದೂರದರ್ಶನದಲ್ಲಿ ಕೆಲಸ ಮಾಡುತ್ತಿದ್ದು, ದಲಿತ ಎನ್ನುವ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಅದೇ ಉದ್ದೇಶಕ್ಕೆ, ಎಲ್ಲರೂ ನನಗೆ ಕಚೇರಿ ನೀಡಬಾರದು ಎಂದು ನಿರ್ಧರಿಸಿದ್ದಾರೆ; ಎಲ್ಲ ರೀತಿಯ ನಿಯಮಗಳನ್ನು ಅವರು ಉಲ್ಲಂಘಿಸಿದ್ದಾರೆ” ಎಂದು ಅವರು ಬೇಸರ ಹೊರಹಾಕಿದರು.

“ನನಗೆ ಕಿರುಕುಳ ನೀಡುತ್ತಿರುವ ಇಬ್ಬರೂ ಅಧಿಕಾರಿಗಳ ವಿರುದ್ಧ ಸಿಬಿಐ ವಿಚಾರಣೆ ನಡೆಸುತ್ತಿದೆ. ನಮ್ಮ ದೂರದರ್ಶನ ನಿಯಮಗಳ ಪ್ರಕಾರ, ವಿಚಾರಣೆಗೆ ಒಳಪಟ್ಟಿರುವ ಯಾವುದೇ ಅಧಿಕಾರಿಗೆ ಹುದ್ದೆ ನೀಡಬಾರದು ಎಂದು ಹೇಳುತ್ತದೆ. ಆದರೆ, ಅವರಿಗೆ ಹೆಚ್ಚುವರಿಯಾಗಿ ಮೂರುಮೂರು ಜವಾಬ್ದಾರಿ ನೀಡಿದ್ದಾರೆ” ಎಂದು ವಿವರಿಸಿದರು.

“ಇಡೀ ದೇಶಕ್ಕೆ ಕಾರ್ಯಕ್ರಮ ವಿಭಾಗದ ನಿರ್ದೇಶಕನಾಗಿರುವ ಡೆಪ್ಯೂಟಿ ಡೈರೆಕ್ಟರ್ ಜನರಲ್ ನಾನೊಬ್ಬನೆ; ಅದು ಬಿಟ್ಟು ಈ ವಿಭಾಗಕ್ಕೆ ಸಂಬಂಧ ಇಲ್ಲದವರಿಗೆಲ್ಲಾ ಹೆಚ್ಚುವರಿ ಚಾರ್ಜ್‌ ನೀಡಿದ್ದಾರೆ. ಅವರಿಗೆ ದೂರದರ್ಶನದ ಅನುಭವವೇ ಇಲ್ಲ; ಆದರೂ ನನ್ನ ಕೆಲಸವನ್ನು ಅವರು ಮಾಡುತ್ತಿದ್ದಾರೆ. ನಾನು ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಓದಿ ಕೆಲಸ ಪಡೆದುಕೊಂಡಿದ್ದೇನೆ. ಕಾರ್ಯಕ್ರಮ ನಿರ್ದೇಶಕರಿಗೆ ಮೀಸಲಿರುವ ಕೊಠಡಿಯನ್ನು ನನಗೆ ಬಿಟ್ಟುಕೊಡಬೇಕು; ಕಳೆದ ನಲವತ್ತು ವರ್ಷಗಳಿಂದ ಆ ಕಚೇರಿ ನಿರ್ದೇಶಕರಿಗೆ ಮೀಸಲಿತ್ತು ಎನ್ನುವುದಕ್ಕೆ ಎಲ್ಲರ ಬಳಿ ಸಾಕಷ್ಟು ಪುರಾವೆಗಳಿವೆ. ನಾನು ಕೇಳಿದರೆ ಒಬ್ಬರ ಮೇಲೆ ಒಬ್ಬರು ಹೇಳುತ್ತಾ ದಿನದೂಡುತ್ತಿದ್ದಾರೆ” ಎಂದರು.

“ತಳ ಹಂತದ ಸಹೋದ್ಯೋಗಿಗಳು ನನಗೆ ವರದಿ ಮಾಡಿಕೊಳ್ಳುತ್ತಿದ್ದಾರೆ, ಅದಕ್ಕಾಗಿಯೇ ‘ಕಾರ್ಯಕ್ರಮ ಮುಖ್ಯಸ್ಥರು’ ಎಂದು ಅಸ್ಥಿತ್ವದಲ್ಲೇ ಇಲ್ಲದ ಹುದ್ದೆಯೊಂದನ್ನು ನನಗೆ ನೀಡಿದ್ದಾರೆ. ನಾನೇ ಮುಖ್ಯಸ್ಥ ಆಗಿರುವುದರಿಂದ ಅಂತ ಹುದ್ದೆಯನ್ನು ನಿರ್ದೇಶಕರಿಗಿಂತ ಕೆಳಗಿರುವ ಅಧಿಕಾರಿಗಳಿಗೆ ಕೊಡಬಹುದು; ನನಗೆ ಕೊಡುವುದಕ್ಕೆ ಬರುವುದಿಲ್ಲ” ಎಂದು ಭಾಗ್ಯವಾನ್ ವಿವರಿಸಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ದೂರದರ್ಶನ ವಿಭಾಗದ ಮುಖ್ಯಸ್ಥರಾದ ಮಾದವರೆಡ್ಡಿ, “ಕೊಠಡಿ ನೀಡಿಲ್ಲ ಎಂಬುದು ಸುಳ್ಳು, ಈ ಬಗ್ಗೆ ಅವರನ್ನೇ ಕೇಳಬೇಕು. ನಾನು ನಿಯಮಗಳಂತೆ ನಡೆದುಕೊಳ್ಳುತ್ತಿದ್ದೇನೆ” ಎಂದು ಹೇಳಿದ ಅವರು, ‘ಮೀಟಿಂಗ್‌ನಲ್ಲಿದ್ದೇನೆ’ ಎಂದು ತರಾತುರಿಯಲ್ಲಿ ಕರೆ ಕಡಿತಗೊಳಿಸಿದರು.

ಇದನ್ನೂ ಓದಿ; ಸ್ಟ್ಯಾನ್‌ ಸ್ವಾಮಿ ಸಾವಿನ ಕುರಿತು ತನಿಖೆಗೆ ಒತ್ತಾಯಿಸಿ ಅಮೆರಿಕ ಸಂಸತ್‌ನಲ್ಲಿ ನಿರ್ಣಯ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...