Homeಕರ್ನಾಟಕನಿರ್ದೇಶಕರ ಕೊಠಡಿ ಬಿಟ್ಟುಕೊಡದೆ ದಲಿತ ಅಧಿಕಾರಿಗೆ ಕಿರುಕುಳ; ದೂರದರ್ಶನ ಕಚೇರಿ ಕಾರಿಡಾರ್‌ನಲ್ಲಿ ಕುಳಿತು ಕೆಲಸ ಮಾಡುತ್ತಿರುವ...

ನಿರ್ದೇಶಕರ ಕೊಠಡಿ ಬಿಟ್ಟುಕೊಡದೆ ದಲಿತ ಅಧಿಕಾರಿಗೆ ಕಿರುಕುಳ; ದೂರದರ್ಶನ ಕಚೇರಿ ಕಾರಿಡಾರ್‌ನಲ್ಲಿ ಕುಳಿತು ಕೆಲಸ ಮಾಡುತ್ತಿರುವ ಭಾಗ್ಯವಾನ್

- Advertisement -
- Advertisement -

ಬೆಂಗಳೂರು ದೂರದರ್ಶನ ಕೇಂದ್ರಕ್ಕೆ ಉಪ ಮಹಾನಿರ್ದೇಶಕರಾಗಿ (ಕಾರ್ಯಕ್ರಮ ವಿಭಾಗ) ಕಳೆದ ಮೂರು ತಿಂಗಳ ಹಿಂದೆ ದಲಿತ ಸಮುದಾಯಕ್ಕೆ ಸೇರಿದ ಅಧಿಕಾರಿ ಭಾಗ್ಯವಾನ್ ಎಂಬುವವರನ್ನು ನೇಮಿಸಲಾಗಿದೆ. ಆದರೆ, ನಿರ್ದೇಶಕರಿಗೆ ಮೀಸಲಾಗಿರುವ ಕೊಠಡಿಯನ್ನು ಅವರಿಗೆ ನೀಡದೆ, ಸಿಬಿಐ ತನಿಖೆ ಎದುರಿಸುತ್ತಿರುವ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೀದರ್ ಮೂಲದ ಭಾಗ್ಯವಾನ್ ಅವರು ದಲಿತ ಸಮುದಾಯಕ್ಕೆ ಸೇರಿರುವ ಕನ್ನಡಿಗ ಅಧಿಕಾರಿಯಾಗಿದ್ದಾರೆ. ಕೇಂದ್ರ ಸರ್ಕಾರ ಸ್ವಾಮ್ಯದ ದೂರದರ್ಶನ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಅಧಿಕಾರಿಯಾಗಿ ಕಳೆದ 26 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಕಳೆದ ನಲ್ವತ್ತು ವರ್ಷಗಳಿಂದ ಕಾರ್ಯಕ್ರಮ ನಿರ್ದೇಶಕರಿಗೆಂದು ಮೀಸಲಿಟ್ಟಿದ್ದ ಕೊಠಡಿಯನ್ನು ಅವರಿಗೆ ನೀಡದೆ, ಕೆಲಸ ಮಾಡಲು ಅಗತ್ಯವಿರುವ ಕಂಪ್ಯೂಟರ್ ಸಹ ಒದಗಿಸದೆ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಪ್ರತಿನಿಧಿ ಜತೆಗೆ ಮಾತನಾಡಿದ ಅವರು, “ಚಂದನ ವಾಹಿನಿ ಕಾರ್ಯಕ್ರಮ ವಿಭಾಗದ ನಿರ್ದೇಶಕನಾಗಿ ನಾನು ಇಲ್ಲಿಗೆ ಬಂದು ಮೂರು ತಿಂಗಳಾಗಿದೆ; ನಾನು ಬಂದಾಗ ಇಲ್ಲಿನ ಇಂಜಿನಿಯರ್ ಮಂಗಲಗಿ ಎಂಬುವರಿಗೆ ಕಾರ್ಯಕ್ರಮ ವಿಭಾಗದ ಹೆಚ್ಚುವರಿ ಜವಾಬ್ದಾರಿ ನೀಡಿದ್ದರು. ಮೂಲತಃ ಅವರು ಇಂಜಿನಿಯರ್ ಆಗಿದ್ದು, ಚೆನ್ನೈ ಅಥವಾ ನಮ್ಮ ರೇಡಿಯೋ ವಿಭಾಗದಲ್ಲಿ ಅವರಿಗಾಗಿಯೇ ಮೀಸಲಿರುವ ಎರಡು ಪ್ರತ್ಯೇಕ ಕೊಠಡಿಗಳಿದ್ದು ಅಲ್ಲಿ ಕೂರಬೇಕು. ಅದೆಲ್ಲಾ ಬಿಟ್ಟು ಅವರು ದೂರದರ್ಶನದ ನಿರ್ದೇಶಕರಿಗೆ ಮೀಸಲಿರುವ ಕಚೇರಿಯಲ್ಲಿ ಪಟ್ಟುಹಿಡಿದು ಕುಳಿತಿದ್ದಾರೆ” ಎಂದರು.

“ನಿರ್ದೇಶಕರ ಹುದ್ದೆ ಖಾಲಿ ಇದ್ದಾಗ ಕುಳಿತುಕೊಳ್ಳಲಿ ಪರವಾಗಿಲ್ಲ.. ನಾನು ಅಧಿಕಾರ ವಹಿಸಿಕೊಂಡ ನಂತರವಾದರೂ ಕಚೇರಿ ಬಿಟ್ಟುಕೊಡಬೇಕಿತ್ತು. ಆದರೆ, ಅವರು ಬಿಟ್ಟುಕೊಡುತ್ತಿಲ್ಲ. ಅವರಿಗೆ ಬೆಂಬಲವಾಗಿ ನಮ್ಮ ವಿಭಾಗದ ಮುಖ್ಯಸ್ಥರಾದ ಮಾಧವರೆಡ್ಡಿಯವರು ನಿಂತಿದ್ದಾರೆ. ಈ ಬಗ್ಗೆ ಕೇಳಿದರೆ, ‘ಅವರು ಬಿಟ್ಟುಕೊಡದಿದ್ದರೆ ನಾನೇನು ಮಾಡಲಿ’ ಎನ್ನುತ್ತಾರೆ. ಮಂಗಲಗಿ ಅವರನ್ನು ಕೇಳಿದರೆ ‘ಮಾಧವರೆಡ್ಡಿಯವರನ್ನು ಕೇಳಿ’ ಎನ್ನುತ್ತಾರೆ. ಕಳೆದ ಮೂರು ತಿಂಗಳಿನಿಂದ ನನಗೆ ಇದೇ ರೀತಿಯ ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ ನಮ್ಮ ಮೇಲಾಧಿಕಾರಿಗಳಿಗೆ ಪತ್ರ ಬರೆದರೂ ಅವರಿಂದಲೂ ಈವರೆಗೆ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಎಷ್ಟೇ ಪ್ರಯತ್ನ ಮಾಡಿದರೂ ನಿರ್ದೇಶಕರಿಗೆ ಮೀಸಲಿರುವ ಕಚೇರಿಯಲ್ಲಿ ಕುಳಿತುಕೊಳ್ಳಲು ಬಿಡುತ್ತಿಲ್ಲ. ನನಗಾಗಿ ಮೀಸಲಿರುವ ಕೊಠಡಿ ಬಿಟ್ಟು, ಬೇರೆ ಯಾವುದೋ ಒಂದು ಕೊಠಡಿ ಕೊಡುತ್ತಿದ್ದಾರೆ. ಆದರೆ, ನಾನು ಅದನ್ನು ಬೇಡ ಎಂದು ತಿರಸ್ಕರಿಸಿದ್ದೇನೆ. ಆ ಕೊಠಡಿಯನ್ನೂ ನನಗೆ ಮೂರು ತಿಂಗಳ ನಂತರ ಅಧಿಕೃತವಾಗಿ ನೀಡಿದ್ದಾರೆ” ಎಂದು ತಮಗಾಗಿರುವ ಅನ್ಯಾಯದ ಬಗ್ಗೆ ಅವರು ವಿವರಿಸಿದರು.

ಕಚೇರಿ ಕಾರಿಡಾರ್‌ನಿಂದಲೆ ಕಾರ್ಯನಿರ್ವಹಣೆ

“ಕಳೆದ ಮೂರು ತಿಂಗಳಿನಿಂದ ನಾನು ಕಚೇರಿಯ ಕಾರಿಡಾರ್‌ನಲ್ಲೇ ಕೂತು ಕೆಲಸ ಮಾಡುತ್ತಿದ್ದೇನೆ. ಸಂದರ್ಶಕರು ಕಾಯುವ (ವಿಸಿಟರ್ಸ್‌ ವೇಯ್ಟಿಂಗ್ ಹಾಲ್) ಹಾಲ್‌ನಲ್ಲೇ ಕುಳಿತು ಕಚೇರಿ ಕೆಲಸ ಮಾಡುತ್ತಿದ್ದೇನೆ. ಕಂಪ್ಯೂಟರ್ ಸೇರಿದಂತೆ ನನ್ನ ಕೆಲಸಕ್ಕೆ ಅನುಕೂಲವಾಗುವಂತ ಯಾವುದೇ ಅಗತ್ಯ ವಸ್ತುಗಳನ್ನು ಒದಗಿಸಿಲ್ಲ. ಸಹೋದ್ಯೋಗಿಗಳ ಬಳಿ ಮನವಿ ಮಾಡಿಕೊಂಡು, ಪ್ರತಿದಿನ ಒಬ್ಬೊಬ್ಬರ ಕಂಪ್ಯೂಟರ್ ಬಳಸಿಕೊಂಡು ಕೆಲಸ ಮಾಡುತ್ತಿದ್ದೇನೆ; ಪ್ರತಿನಿತ್ಯ ನನ್ನ ಕೆಲಸವನ್ನು ಮುಗಿಸಿಯೇ ಮನೆಗೆ ತೆರಳುತ್ತಿದ್ದೇನೆ” ಎಂದರು.

“ಈ ಮುಂಚೆ ನಾನು ದೂರದರ್ಶನ ಹೈದರಾಬಾದ್‌ನಲ್ಲಿ ಕೆಲಸ ಮಾಡುತ್ತಿದ್ದೆ; ಅಲ್ಲಿಂದ ಬಡ್ತಿ ಪಡೆದು ಬೆಂಗಳೂರು ಕೇಂದ್ರದಲ್ಲಿ ಕಾರ್ಯಕ್ರಮ ವಿಭಾಗದ ಮುಖ್ಯಸ್ಥನಾಗಿದ್ದೇನೆ. ಕಳೆದ 26 ವರ್ಷದಿಂದ ದೂರದರ್ಶನದಲ್ಲಿ ಕೆಲಸ ಮಾಡುತ್ತಿದ್ದು, ದಲಿತ ಎನ್ನುವ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಅದೇ ಉದ್ದೇಶಕ್ಕೆ, ಎಲ್ಲರೂ ನನಗೆ ಕಚೇರಿ ನೀಡಬಾರದು ಎಂದು ನಿರ್ಧರಿಸಿದ್ದಾರೆ; ಎಲ್ಲ ರೀತಿಯ ನಿಯಮಗಳನ್ನು ಅವರು ಉಲ್ಲಂಘಿಸಿದ್ದಾರೆ” ಎಂದು ಅವರು ಬೇಸರ ಹೊರಹಾಕಿದರು.

“ನನಗೆ ಕಿರುಕುಳ ನೀಡುತ್ತಿರುವ ಇಬ್ಬರೂ ಅಧಿಕಾರಿಗಳ ವಿರುದ್ಧ ಸಿಬಿಐ ವಿಚಾರಣೆ ನಡೆಸುತ್ತಿದೆ. ನಮ್ಮ ದೂರದರ್ಶನ ನಿಯಮಗಳ ಪ್ರಕಾರ, ವಿಚಾರಣೆಗೆ ಒಳಪಟ್ಟಿರುವ ಯಾವುದೇ ಅಧಿಕಾರಿಗೆ ಹುದ್ದೆ ನೀಡಬಾರದು ಎಂದು ಹೇಳುತ್ತದೆ. ಆದರೆ, ಅವರಿಗೆ ಹೆಚ್ಚುವರಿಯಾಗಿ ಮೂರುಮೂರು ಜವಾಬ್ದಾರಿ ನೀಡಿದ್ದಾರೆ” ಎಂದು ವಿವರಿಸಿದರು.

“ಇಡೀ ದೇಶಕ್ಕೆ ಕಾರ್ಯಕ್ರಮ ವಿಭಾಗದ ನಿರ್ದೇಶಕನಾಗಿರುವ ಡೆಪ್ಯೂಟಿ ಡೈರೆಕ್ಟರ್ ಜನರಲ್ ನಾನೊಬ್ಬನೆ; ಅದು ಬಿಟ್ಟು ಈ ವಿಭಾಗಕ್ಕೆ ಸಂಬಂಧ ಇಲ್ಲದವರಿಗೆಲ್ಲಾ ಹೆಚ್ಚುವರಿ ಚಾರ್ಜ್‌ ನೀಡಿದ್ದಾರೆ. ಅವರಿಗೆ ದೂರದರ್ಶನದ ಅನುಭವವೇ ಇಲ್ಲ; ಆದರೂ ನನ್ನ ಕೆಲಸವನ್ನು ಅವರು ಮಾಡುತ್ತಿದ್ದಾರೆ. ನಾನು ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಓದಿ ಕೆಲಸ ಪಡೆದುಕೊಂಡಿದ್ದೇನೆ. ಕಾರ್ಯಕ್ರಮ ನಿರ್ದೇಶಕರಿಗೆ ಮೀಸಲಿರುವ ಕೊಠಡಿಯನ್ನು ನನಗೆ ಬಿಟ್ಟುಕೊಡಬೇಕು; ಕಳೆದ ನಲವತ್ತು ವರ್ಷಗಳಿಂದ ಆ ಕಚೇರಿ ನಿರ್ದೇಶಕರಿಗೆ ಮೀಸಲಿತ್ತು ಎನ್ನುವುದಕ್ಕೆ ಎಲ್ಲರ ಬಳಿ ಸಾಕಷ್ಟು ಪುರಾವೆಗಳಿವೆ. ನಾನು ಕೇಳಿದರೆ ಒಬ್ಬರ ಮೇಲೆ ಒಬ್ಬರು ಹೇಳುತ್ತಾ ದಿನದೂಡುತ್ತಿದ್ದಾರೆ” ಎಂದರು.

“ತಳ ಹಂತದ ಸಹೋದ್ಯೋಗಿಗಳು ನನಗೆ ವರದಿ ಮಾಡಿಕೊಳ್ಳುತ್ತಿದ್ದಾರೆ, ಅದಕ್ಕಾಗಿಯೇ ‘ಕಾರ್ಯಕ್ರಮ ಮುಖ್ಯಸ್ಥರು’ ಎಂದು ಅಸ್ಥಿತ್ವದಲ್ಲೇ ಇಲ್ಲದ ಹುದ್ದೆಯೊಂದನ್ನು ನನಗೆ ನೀಡಿದ್ದಾರೆ. ನಾನೇ ಮುಖ್ಯಸ್ಥ ಆಗಿರುವುದರಿಂದ ಅಂತ ಹುದ್ದೆಯನ್ನು ನಿರ್ದೇಶಕರಿಗಿಂತ ಕೆಳಗಿರುವ ಅಧಿಕಾರಿಗಳಿಗೆ ಕೊಡಬಹುದು; ನನಗೆ ಕೊಡುವುದಕ್ಕೆ ಬರುವುದಿಲ್ಲ” ಎಂದು ಭಾಗ್ಯವಾನ್ ವಿವರಿಸಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ದೂರದರ್ಶನ ವಿಭಾಗದ ಮುಖ್ಯಸ್ಥರಾದ ಮಾದವರೆಡ್ಡಿ, “ಕೊಠಡಿ ನೀಡಿಲ್ಲ ಎಂಬುದು ಸುಳ್ಳು, ಈ ಬಗ್ಗೆ ಅವರನ್ನೇ ಕೇಳಬೇಕು. ನಾನು ನಿಯಮಗಳಂತೆ ನಡೆದುಕೊಳ್ಳುತ್ತಿದ್ದೇನೆ” ಎಂದು ಹೇಳಿದ ಅವರು, ‘ಮೀಟಿಂಗ್‌ನಲ್ಲಿದ್ದೇನೆ’ ಎಂದು ತರಾತುರಿಯಲ್ಲಿ ಕರೆ ಕಡಿತಗೊಳಿಸಿದರು.

ಇದನ್ನೂ ಓದಿ; ಸ್ಟ್ಯಾನ್‌ ಸ್ವಾಮಿ ಸಾವಿನ ಕುರಿತು ತನಿಖೆಗೆ ಒತ್ತಾಯಿಸಿ ಅಮೆರಿಕ ಸಂಸತ್‌ನಲ್ಲಿ ನಿರ್ಣಯ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...