Homeಕರ್ನಾಟಕನಿರ್ದೇಶಕರ ಕೊಠಡಿ ಬಿಟ್ಟುಕೊಡದೆ ದಲಿತ ಅಧಿಕಾರಿಗೆ ಕಿರುಕುಳ; ದೂರದರ್ಶನ ಕಚೇರಿ ಕಾರಿಡಾರ್‌ನಲ್ಲಿ ಕುಳಿತು ಕೆಲಸ ಮಾಡುತ್ತಿರುವ...

ನಿರ್ದೇಶಕರ ಕೊಠಡಿ ಬಿಟ್ಟುಕೊಡದೆ ದಲಿತ ಅಧಿಕಾರಿಗೆ ಕಿರುಕುಳ; ದೂರದರ್ಶನ ಕಚೇರಿ ಕಾರಿಡಾರ್‌ನಲ್ಲಿ ಕುಳಿತು ಕೆಲಸ ಮಾಡುತ್ತಿರುವ ಭಾಗ್ಯವಾನ್

- Advertisement -
- Advertisement -

ಬೆಂಗಳೂರು ದೂರದರ್ಶನ ಕೇಂದ್ರಕ್ಕೆ ಉಪ ಮಹಾನಿರ್ದೇಶಕರಾಗಿ (ಕಾರ್ಯಕ್ರಮ ವಿಭಾಗ) ಕಳೆದ ಮೂರು ತಿಂಗಳ ಹಿಂದೆ ದಲಿತ ಸಮುದಾಯಕ್ಕೆ ಸೇರಿದ ಅಧಿಕಾರಿ ಭಾಗ್ಯವಾನ್ ಎಂಬುವವರನ್ನು ನೇಮಿಸಲಾಗಿದೆ. ಆದರೆ, ನಿರ್ದೇಶಕರಿಗೆ ಮೀಸಲಾಗಿರುವ ಕೊಠಡಿಯನ್ನು ಅವರಿಗೆ ನೀಡದೆ, ಸಿಬಿಐ ತನಿಖೆ ಎದುರಿಸುತ್ತಿರುವ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೀದರ್ ಮೂಲದ ಭಾಗ್ಯವಾನ್ ಅವರು ದಲಿತ ಸಮುದಾಯಕ್ಕೆ ಸೇರಿರುವ ಕನ್ನಡಿಗ ಅಧಿಕಾರಿಯಾಗಿದ್ದಾರೆ. ಕೇಂದ್ರ ಸರ್ಕಾರ ಸ್ವಾಮ್ಯದ ದೂರದರ್ಶನ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಅಧಿಕಾರಿಯಾಗಿ ಕಳೆದ 26 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಕಳೆದ ನಲ್ವತ್ತು ವರ್ಷಗಳಿಂದ ಕಾರ್ಯಕ್ರಮ ನಿರ್ದೇಶಕರಿಗೆಂದು ಮೀಸಲಿಟ್ಟಿದ್ದ ಕೊಠಡಿಯನ್ನು ಅವರಿಗೆ ನೀಡದೆ, ಕೆಲಸ ಮಾಡಲು ಅಗತ್ಯವಿರುವ ಕಂಪ್ಯೂಟರ್ ಸಹ ಒದಗಿಸದೆ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಪ್ರತಿನಿಧಿ ಜತೆಗೆ ಮಾತನಾಡಿದ ಅವರು, “ಚಂದನ ವಾಹಿನಿ ಕಾರ್ಯಕ್ರಮ ವಿಭಾಗದ ನಿರ್ದೇಶಕನಾಗಿ ನಾನು ಇಲ್ಲಿಗೆ ಬಂದು ಮೂರು ತಿಂಗಳಾಗಿದೆ; ನಾನು ಬಂದಾಗ ಇಲ್ಲಿನ ಇಂಜಿನಿಯರ್ ಮಂಗಲಗಿ ಎಂಬುವರಿಗೆ ಕಾರ್ಯಕ್ರಮ ವಿಭಾಗದ ಹೆಚ್ಚುವರಿ ಜವಾಬ್ದಾರಿ ನೀಡಿದ್ದರು. ಮೂಲತಃ ಅವರು ಇಂಜಿನಿಯರ್ ಆಗಿದ್ದು, ಚೆನ್ನೈ ಅಥವಾ ನಮ್ಮ ರೇಡಿಯೋ ವಿಭಾಗದಲ್ಲಿ ಅವರಿಗಾಗಿಯೇ ಮೀಸಲಿರುವ ಎರಡು ಪ್ರತ್ಯೇಕ ಕೊಠಡಿಗಳಿದ್ದು ಅಲ್ಲಿ ಕೂರಬೇಕು. ಅದೆಲ್ಲಾ ಬಿಟ್ಟು ಅವರು ದೂರದರ್ಶನದ ನಿರ್ದೇಶಕರಿಗೆ ಮೀಸಲಿರುವ ಕಚೇರಿಯಲ್ಲಿ ಪಟ್ಟುಹಿಡಿದು ಕುಳಿತಿದ್ದಾರೆ” ಎಂದರು.

“ನಿರ್ದೇಶಕರ ಹುದ್ದೆ ಖಾಲಿ ಇದ್ದಾಗ ಕುಳಿತುಕೊಳ್ಳಲಿ ಪರವಾಗಿಲ್ಲ.. ನಾನು ಅಧಿಕಾರ ವಹಿಸಿಕೊಂಡ ನಂತರವಾದರೂ ಕಚೇರಿ ಬಿಟ್ಟುಕೊಡಬೇಕಿತ್ತು. ಆದರೆ, ಅವರು ಬಿಟ್ಟುಕೊಡುತ್ತಿಲ್ಲ. ಅವರಿಗೆ ಬೆಂಬಲವಾಗಿ ನಮ್ಮ ವಿಭಾಗದ ಮುಖ್ಯಸ್ಥರಾದ ಮಾಧವರೆಡ್ಡಿಯವರು ನಿಂತಿದ್ದಾರೆ. ಈ ಬಗ್ಗೆ ಕೇಳಿದರೆ, ‘ಅವರು ಬಿಟ್ಟುಕೊಡದಿದ್ದರೆ ನಾನೇನು ಮಾಡಲಿ’ ಎನ್ನುತ್ತಾರೆ. ಮಂಗಲಗಿ ಅವರನ್ನು ಕೇಳಿದರೆ ‘ಮಾಧವರೆಡ್ಡಿಯವರನ್ನು ಕೇಳಿ’ ಎನ್ನುತ್ತಾರೆ. ಕಳೆದ ಮೂರು ತಿಂಗಳಿನಿಂದ ನನಗೆ ಇದೇ ರೀತಿಯ ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ ನಮ್ಮ ಮೇಲಾಧಿಕಾರಿಗಳಿಗೆ ಪತ್ರ ಬರೆದರೂ ಅವರಿಂದಲೂ ಈವರೆಗೆ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಎಷ್ಟೇ ಪ್ರಯತ್ನ ಮಾಡಿದರೂ ನಿರ್ದೇಶಕರಿಗೆ ಮೀಸಲಿರುವ ಕಚೇರಿಯಲ್ಲಿ ಕುಳಿತುಕೊಳ್ಳಲು ಬಿಡುತ್ತಿಲ್ಲ. ನನಗಾಗಿ ಮೀಸಲಿರುವ ಕೊಠಡಿ ಬಿಟ್ಟು, ಬೇರೆ ಯಾವುದೋ ಒಂದು ಕೊಠಡಿ ಕೊಡುತ್ತಿದ್ದಾರೆ. ಆದರೆ, ನಾನು ಅದನ್ನು ಬೇಡ ಎಂದು ತಿರಸ್ಕರಿಸಿದ್ದೇನೆ. ಆ ಕೊಠಡಿಯನ್ನೂ ನನಗೆ ಮೂರು ತಿಂಗಳ ನಂತರ ಅಧಿಕೃತವಾಗಿ ನೀಡಿದ್ದಾರೆ” ಎಂದು ತಮಗಾಗಿರುವ ಅನ್ಯಾಯದ ಬಗ್ಗೆ ಅವರು ವಿವರಿಸಿದರು.

ಕಚೇರಿ ಕಾರಿಡಾರ್‌ನಿಂದಲೆ ಕಾರ್ಯನಿರ್ವಹಣೆ

“ಕಳೆದ ಮೂರು ತಿಂಗಳಿನಿಂದ ನಾನು ಕಚೇರಿಯ ಕಾರಿಡಾರ್‌ನಲ್ಲೇ ಕೂತು ಕೆಲಸ ಮಾಡುತ್ತಿದ್ದೇನೆ. ಸಂದರ್ಶಕರು ಕಾಯುವ (ವಿಸಿಟರ್ಸ್‌ ವೇಯ್ಟಿಂಗ್ ಹಾಲ್) ಹಾಲ್‌ನಲ್ಲೇ ಕುಳಿತು ಕಚೇರಿ ಕೆಲಸ ಮಾಡುತ್ತಿದ್ದೇನೆ. ಕಂಪ್ಯೂಟರ್ ಸೇರಿದಂತೆ ನನ್ನ ಕೆಲಸಕ್ಕೆ ಅನುಕೂಲವಾಗುವಂತ ಯಾವುದೇ ಅಗತ್ಯ ವಸ್ತುಗಳನ್ನು ಒದಗಿಸಿಲ್ಲ. ಸಹೋದ್ಯೋಗಿಗಳ ಬಳಿ ಮನವಿ ಮಾಡಿಕೊಂಡು, ಪ್ರತಿದಿನ ಒಬ್ಬೊಬ್ಬರ ಕಂಪ್ಯೂಟರ್ ಬಳಸಿಕೊಂಡು ಕೆಲಸ ಮಾಡುತ್ತಿದ್ದೇನೆ; ಪ್ರತಿನಿತ್ಯ ನನ್ನ ಕೆಲಸವನ್ನು ಮುಗಿಸಿಯೇ ಮನೆಗೆ ತೆರಳುತ್ತಿದ್ದೇನೆ” ಎಂದರು.

“ಈ ಮುಂಚೆ ನಾನು ದೂರದರ್ಶನ ಹೈದರಾಬಾದ್‌ನಲ್ಲಿ ಕೆಲಸ ಮಾಡುತ್ತಿದ್ದೆ; ಅಲ್ಲಿಂದ ಬಡ್ತಿ ಪಡೆದು ಬೆಂಗಳೂರು ಕೇಂದ್ರದಲ್ಲಿ ಕಾರ್ಯಕ್ರಮ ವಿಭಾಗದ ಮುಖ್ಯಸ್ಥನಾಗಿದ್ದೇನೆ. ಕಳೆದ 26 ವರ್ಷದಿಂದ ದೂರದರ್ಶನದಲ್ಲಿ ಕೆಲಸ ಮಾಡುತ್ತಿದ್ದು, ದಲಿತ ಎನ್ನುವ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಅದೇ ಉದ್ದೇಶಕ್ಕೆ, ಎಲ್ಲರೂ ನನಗೆ ಕಚೇರಿ ನೀಡಬಾರದು ಎಂದು ನಿರ್ಧರಿಸಿದ್ದಾರೆ; ಎಲ್ಲ ರೀತಿಯ ನಿಯಮಗಳನ್ನು ಅವರು ಉಲ್ಲಂಘಿಸಿದ್ದಾರೆ” ಎಂದು ಅವರು ಬೇಸರ ಹೊರಹಾಕಿದರು.

“ನನಗೆ ಕಿರುಕುಳ ನೀಡುತ್ತಿರುವ ಇಬ್ಬರೂ ಅಧಿಕಾರಿಗಳ ವಿರುದ್ಧ ಸಿಬಿಐ ವಿಚಾರಣೆ ನಡೆಸುತ್ತಿದೆ. ನಮ್ಮ ದೂರದರ್ಶನ ನಿಯಮಗಳ ಪ್ರಕಾರ, ವಿಚಾರಣೆಗೆ ಒಳಪಟ್ಟಿರುವ ಯಾವುದೇ ಅಧಿಕಾರಿಗೆ ಹುದ್ದೆ ನೀಡಬಾರದು ಎಂದು ಹೇಳುತ್ತದೆ. ಆದರೆ, ಅವರಿಗೆ ಹೆಚ್ಚುವರಿಯಾಗಿ ಮೂರುಮೂರು ಜವಾಬ್ದಾರಿ ನೀಡಿದ್ದಾರೆ” ಎಂದು ವಿವರಿಸಿದರು.

“ಇಡೀ ದೇಶಕ್ಕೆ ಕಾರ್ಯಕ್ರಮ ವಿಭಾಗದ ನಿರ್ದೇಶಕನಾಗಿರುವ ಡೆಪ್ಯೂಟಿ ಡೈರೆಕ್ಟರ್ ಜನರಲ್ ನಾನೊಬ್ಬನೆ; ಅದು ಬಿಟ್ಟು ಈ ವಿಭಾಗಕ್ಕೆ ಸಂಬಂಧ ಇಲ್ಲದವರಿಗೆಲ್ಲಾ ಹೆಚ್ಚುವರಿ ಚಾರ್ಜ್‌ ನೀಡಿದ್ದಾರೆ. ಅವರಿಗೆ ದೂರದರ್ಶನದ ಅನುಭವವೇ ಇಲ್ಲ; ಆದರೂ ನನ್ನ ಕೆಲಸವನ್ನು ಅವರು ಮಾಡುತ್ತಿದ್ದಾರೆ. ನಾನು ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಓದಿ ಕೆಲಸ ಪಡೆದುಕೊಂಡಿದ್ದೇನೆ. ಕಾರ್ಯಕ್ರಮ ನಿರ್ದೇಶಕರಿಗೆ ಮೀಸಲಿರುವ ಕೊಠಡಿಯನ್ನು ನನಗೆ ಬಿಟ್ಟುಕೊಡಬೇಕು; ಕಳೆದ ನಲವತ್ತು ವರ್ಷಗಳಿಂದ ಆ ಕಚೇರಿ ನಿರ್ದೇಶಕರಿಗೆ ಮೀಸಲಿತ್ತು ಎನ್ನುವುದಕ್ಕೆ ಎಲ್ಲರ ಬಳಿ ಸಾಕಷ್ಟು ಪುರಾವೆಗಳಿವೆ. ನಾನು ಕೇಳಿದರೆ ಒಬ್ಬರ ಮೇಲೆ ಒಬ್ಬರು ಹೇಳುತ್ತಾ ದಿನದೂಡುತ್ತಿದ್ದಾರೆ” ಎಂದರು.

“ತಳ ಹಂತದ ಸಹೋದ್ಯೋಗಿಗಳು ನನಗೆ ವರದಿ ಮಾಡಿಕೊಳ್ಳುತ್ತಿದ್ದಾರೆ, ಅದಕ್ಕಾಗಿಯೇ ‘ಕಾರ್ಯಕ್ರಮ ಮುಖ್ಯಸ್ಥರು’ ಎಂದು ಅಸ್ಥಿತ್ವದಲ್ಲೇ ಇಲ್ಲದ ಹುದ್ದೆಯೊಂದನ್ನು ನನಗೆ ನೀಡಿದ್ದಾರೆ. ನಾನೇ ಮುಖ್ಯಸ್ಥ ಆಗಿರುವುದರಿಂದ ಅಂತ ಹುದ್ದೆಯನ್ನು ನಿರ್ದೇಶಕರಿಗಿಂತ ಕೆಳಗಿರುವ ಅಧಿಕಾರಿಗಳಿಗೆ ಕೊಡಬಹುದು; ನನಗೆ ಕೊಡುವುದಕ್ಕೆ ಬರುವುದಿಲ್ಲ” ಎಂದು ಭಾಗ್ಯವಾನ್ ವಿವರಿಸಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ದೂರದರ್ಶನ ವಿಭಾಗದ ಮುಖ್ಯಸ್ಥರಾದ ಮಾದವರೆಡ್ಡಿ, “ಕೊಠಡಿ ನೀಡಿಲ್ಲ ಎಂಬುದು ಸುಳ್ಳು, ಈ ಬಗ್ಗೆ ಅವರನ್ನೇ ಕೇಳಬೇಕು. ನಾನು ನಿಯಮಗಳಂತೆ ನಡೆದುಕೊಳ್ಳುತ್ತಿದ್ದೇನೆ” ಎಂದು ಹೇಳಿದ ಅವರು, ‘ಮೀಟಿಂಗ್‌ನಲ್ಲಿದ್ದೇನೆ’ ಎಂದು ತರಾತುರಿಯಲ್ಲಿ ಕರೆ ಕಡಿತಗೊಳಿಸಿದರು.

ಇದನ್ನೂ ಓದಿ; ಸ್ಟ್ಯಾನ್‌ ಸ್ವಾಮಿ ಸಾವಿನ ಕುರಿತು ತನಿಖೆಗೆ ಒತ್ತಾಯಿಸಿ ಅಮೆರಿಕ ಸಂಸತ್‌ನಲ್ಲಿ ನಿರ್ಣಯ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...