Homeಕರ್ನಾಟಕನಿರ್ದೇಶಕರ ಕೊಠಡಿ ಬಿಟ್ಟುಕೊಡದೆ ದಲಿತ ಅಧಿಕಾರಿಗೆ ಕಿರುಕುಳ; ದೂರದರ್ಶನ ಕಚೇರಿ ಕಾರಿಡಾರ್‌ನಲ್ಲಿ ಕುಳಿತು ಕೆಲಸ ಮಾಡುತ್ತಿರುವ...

ನಿರ್ದೇಶಕರ ಕೊಠಡಿ ಬಿಟ್ಟುಕೊಡದೆ ದಲಿತ ಅಧಿಕಾರಿಗೆ ಕಿರುಕುಳ; ದೂರದರ್ಶನ ಕಚೇರಿ ಕಾರಿಡಾರ್‌ನಲ್ಲಿ ಕುಳಿತು ಕೆಲಸ ಮಾಡುತ್ತಿರುವ ಭಾಗ್ಯವಾನ್

- Advertisement -
- Advertisement -

ಬೆಂಗಳೂರು ದೂರದರ್ಶನ ಕೇಂದ್ರಕ್ಕೆ ಉಪ ಮಹಾನಿರ್ದೇಶಕರಾಗಿ (ಕಾರ್ಯಕ್ರಮ ವಿಭಾಗ) ಕಳೆದ ಮೂರು ತಿಂಗಳ ಹಿಂದೆ ದಲಿತ ಸಮುದಾಯಕ್ಕೆ ಸೇರಿದ ಅಧಿಕಾರಿ ಭಾಗ್ಯವಾನ್ ಎಂಬುವವರನ್ನು ನೇಮಿಸಲಾಗಿದೆ. ಆದರೆ, ನಿರ್ದೇಶಕರಿಗೆ ಮೀಸಲಾಗಿರುವ ಕೊಠಡಿಯನ್ನು ಅವರಿಗೆ ನೀಡದೆ, ಸಿಬಿಐ ತನಿಖೆ ಎದುರಿಸುತ್ತಿರುವ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೀದರ್ ಮೂಲದ ಭಾಗ್ಯವಾನ್ ಅವರು ದಲಿತ ಸಮುದಾಯಕ್ಕೆ ಸೇರಿರುವ ಕನ್ನಡಿಗ ಅಧಿಕಾರಿಯಾಗಿದ್ದಾರೆ. ಕೇಂದ್ರ ಸರ್ಕಾರ ಸ್ವಾಮ್ಯದ ದೂರದರ್ಶನ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಅಧಿಕಾರಿಯಾಗಿ ಕಳೆದ 26 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಕಳೆದ ನಲ್ವತ್ತು ವರ್ಷಗಳಿಂದ ಕಾರ್ಯಕ್ರಮ ನಿರ್ದೇಶಕರಿಗೆಂದು ಮೀಸಲಿಟ್ಟಿದ್ದ ಕೊಠಡಿಯನ್ನು ಅವರಿಗೆ ನೀಡದೆ, ಕೆಲಸ ಮಾಡಲು ಅಗತ್ಯವಿರುವ ಕಂಪ್ಯೂಟರ್ ಸಹ ಒದಗಿಸದೆ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಪ್ರತಿನಿಧಿ ಜತೆಗೆ ಮಾತನಾಡಿದ ಅವರು, “ಚಂದನ ವಾಹಿನಿ ಕಾರ್ಯಕ್ರಮ ವಿಭಾಗದ ನಿರ್ದೇಶಕನಾಗಿ ನಾನು ಇಲ್ಲಿಗೆ ಬಂದು ಮೂರು ತಿಂಗಳಾಗಿದೆ; ನಾನು ಬಂದಾಗ ಇಲ್ಲಿನ ಇಂಜಿನಿಯರ್ ಮಂಗಲಗಿ ಎಂಬುವರಿಗೆ ಕಾರ್ಯಕ್ರಮ ವಿಭಾಗದ ಹೆಚ್ಚುವರಿ ಜವಾಬ್ದಾರಿ ನೀಡಿದ್ದರು. ಮೂಲತಃ ಅವರು ಇಂಜಿನಿಯರ್ ಆಗಿದ್ದು, ಚೆನ್ನೈ ಅಥವಾ ನಮ್ಮ ರೇಡಿಯೋ ವಿಭಾಗದಲ್ಲಿ ಅವರಿಗಾಗಿಯೇ ಮೀಸಲಿರುವ ಎರಡು ಪ್ರತ್ಯೇಕ ಕೊಠಡಿಗಳಿದ್ದು ಅಲ್ಲಿ ಕೂರಬೇಕು. ಅದೆಲ್ಲಾ ಬಿಟ್ಟು ಅವರು ದೂರದರ್ಶನದ ನಿರ್ದೇಶಕರಿಗೆ ಮೀಸಲಿರುವ ಕಚೇರಿಯಲ್ಲಿ ಪಟ್ಟುಹಿಡಿದು ಕುಳಿತಿದ್ದಾರೆ” ಎಂದರು.

“ನಿರ್ದೇಶಕರ ಹುದ್ದೆ ಖಾಲಿ ಇದ್ದಾಗ ಕುಳಿತುಕೊಳ್ಳಲಿ ಪರವಾಗಿಲ್ಲ.. ನಾನು ಅಧಿಕಾರ ವಹಿಸಿಕೊಂಡ ನಂತರವಾದರೂ ಕಚೇರಿ ಬಿಟ್ಟುಕೊಡಬೇಕಿತ್ತು. ಆದರೆ, ಅವರು ಬಿಟ್ಟುಕೊಡುತ್ತಿಲ್ಲ. ಅವರಿಗೆ ಬೆಂಬಲವಾಗಿ ನಮ್ಮ ವಿಭಾಗದ ಮುಖ್ಯಸ್ಥರಾದ ಮಾಧವರೆಡ್ಡಿಯವರು ನಿಂತಿದ್ದಾರೆ. ಈ ಬಗ್ಗೆ ಕೇಳಿದರೆ, ‘ಅವರು ಬಿಟ್ಟುಕೊಡದಿದ್ದರೆ ನಾನೇನು ಮಾಡಲಿ’ ಎನ್ನುತ್ತಾರೆ. ಮಂಗಲಗಿ ಅವರನ್ನು ಕೇಳಿದರೆ ‘ಮಾಧವರೆಡ್ಡಿಯವರನ್ನು ಕೇಳಿ’ ಎನ್ನುತ್ತಾರೆ. ಕಳೆದ ಮೂರು ತಿಂಗಳಿನಿಂದ ನನಗೆ ಇದೇ ರೀತಿಯ ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ ನಮ್ಮ ಮೇಲಾಧಿಕಾರಿಗಳಿಗೆ ಪತ್ರ ಬರೆದರೂ ಅವರಿಂದಲೂ ಈವರೆಗೆ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಎಷ್ಟೇ ಪ್ರಯತ್ನ ಮಾಡಿದರೂ ನಿರ್ದೇಶಕರಿಗೆ ಮೀಸಲಿರುವ ಕಚೇರಿಯಲ್ಲಿ ಕುಳಿತುಕೊಳ್ಳಲು ಬಿಡುತ್ತಿಲ್ಲ. ನನಗಾಗಿ ಮೀಸಲಿರುವ ಕೊಠಡಿ ಬಿಟ್ಟು, ಬೇರೆ ಯಾವುದೋ ಒಂದು ಕೊಠಡಿ ಕೊಡುತ್ತಿದ್ದಾರೆ. ಆದರೆ, ನಾನು ಅದನ್ನು ಬೇಡ ಎಂದು ತಿರಸ್ಕರಿಸಿದ್ದೇನೆ. ಆ ಕೊಠಡಿಯನ್ನೂ ನನಗೆ ಮೂರು ತಿಂಗಳ ನಂತರ ಅಧಿಕೃತವಾಗಿ ನೀಡಿದ್ದಾರೆ” ಎಂದು ತಮಗಾಗಿರುವ ಅನ್ಯಾಯದ ಬಗ್ಗೆ ಅವರು ವಿವರಿಸಿದರು.

ಕಚೇರಿ ಕಾರಿಡಾರ್‌ನಿಂದಲೆ ಕಾರ್ಯನಿರ್ವಹಣೆ

“ಕಳೆದ ಮೂರು ತಿಂಗಳಿನಿಂದ ನಾನು ಕಚೇರಿಯ ಕಾರಿಡಾರ್‌ನಲ್ಲೇ ಕೂತು ಕೆಲಸ ಮಾಡುತ್ತಿದ್ದೇನೆ. ಸಂದರ್ಶಕರು ಕಾಯುವ (ವಿಸಿಟರ್ಸ್‌ ವೇಯ್ಟಿಂಗ್ ಹಾಲ್) ಹಾಲ್‌ನಲ್ಲೇ ಕುಳಿತು ಕಚೇರಿ ಕೆಲಸ ಮಾಡುತ್ತಿದ್ದೇನೆ. ಕಂಪ್ಯೂಟರ್ ಸೇರಿದಂತೆ ನನ್ನ ಕೆಲಸಕ್ಕೆ ಅನುಕೂಲವಾಗುವಂತ ಯಾವುದೇ ಅಗತ್ಯ ವಸ್ತುಗಳನ್ನು ಒದಗಿಸಿಲ್ಲ. ಸಹೋದ್ಯೋಗಿಗಳ ಬಳಿ ಮನವಿ ಮಾಡಿಕೊಂಡು, ಪ್ರತಿದಿನ ಒಬ್ಬೊಬ್ಬರ ಕಂಪ್ಯೂಟರ್ ಬಳಸಿಕೊಂಡು ಕೆಲಸ ಮಾಡುತ್ತಿದ್ದೇನೆ; ಪ್ರತಿನಿತ್ಯ ನನ್ನ ಕೆಲಸವನ್ನು ಮುಗಿಸಿಯೇ ಮನೆಗೆ ತೆರಳುತ್ತಿದ್ದೇನೆ” ಎಂದರು.

“ಈ ಮುಂಚೆ ನಾನು ದೂರದರ್ಶನ ಹೈದರಾಬಾದ್‌ನಲ್ಲಿ ಕೆಲಸ ಮಾಡುತ್ತಿದ್ದೆ; ಅಲ್ಲಿಂದ ಬಡ್ತಿ ಪಡೆದು ಬೆಂಗಳೂರು ಕೇಂದ್ರದಲ್ಲಿ ಕಾರ್ಯಕ್ರಮ ವಿಭಾಗದ ಮುಖ್ಯಸ್ಥನಾಗಿದ್ದೇನೆ. ಕಳೆದ 26 ವರ್ಷದಿಂದ ದೂರದರ್ಶನದಲ್ಲಿ ಕೆಲಸ ಮಾಡುತ್ತಿದ್ದು, ದಲಿತ ಎನ್ನುವ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಅದೇ ಉದ್ದೇಶಕ್ಕೆ, ಎಲ್ಲರೂ ನನಗೆ ಕಚೇರಿ ನೀಡಬಾರದು ಎಂದು ನಿರ್ಧರಿಸಿದ್ದಾರೆ; ಎಲ್ಲ ರೀತಿಯ ನಿಯಮಗಳನ್ನು ಅವರು ಉಲ್ಲಂಘಿಸಿದ್ದಾರೆ” ಎಂದು ಅವರು ಬೇಸರ ಹೊರಹಾಕಿದರು.

“ನನಗೆ ಕಿರುಕುಳ ನೀಡುತ್ತಿರುವ ಇಬ್ಬರೂ ಅಧಿಕಾರಿಗಳ ವಿರುದ್ಧ ಸಿಬಿಐ ವಿಚಾರಣೆ ನಡೆಸುತ್ತಿದೆ. ನಮ್ಮ ದೂರದರ್ಶನ ನಿಯಮಗಳ ಪ್ರಕಾರ, ವಿಚಾರಣೆಗೆ ಒಳಪಟ್ಟಿರುವ ಯಾವುದೇ ಅಧಿಕಾರಿಗೆ ಹುದ್ದೆ ನೀಡಬಾರದು ಎಂದು ಹೇಳುತ್ತದೆ. ಆದರೆ, ಅವರಿಗೆ ಹೆಚ್ಚುವರಿಯಾಗಿ ಮೂರುಮೂರು ಜವಾಬ್ದಾರಿ ನೀಡಿದ್ದಾರೆ” ಎಂದು ವಿವರಿಸಿದರು.

“ಇಡೀ ದೇಶಕ್ಕೆ ಕಾರ್ಯಕ್ರಮ ವಿಭಾಗದ ನಿರ್ದೇಶಕನಾಗಿರುವ ಡೆಪ್ಯೂಟಿ ಡೈರೆಕ್ಟರ್ ಜನರಲ್ ನಾನೊಬ್ಬನೆ; ಅದು ಬಿಟ್ಟು ಈ ವಿಭಾಗಕ್ಕೆ ಸಂಬಂಧ ಇಲ್ಲದವರಿಗೆಲ್ಲಾ ಹೆಚ್ಚುವರಿ ಚಾರ್ಜ್‌ ನೀಡಿದ್ದಾರೆ. ಅವರಿಗೆ ದೂರದರ್ಶನದ ಅನುಭವವೇ ಇಲ್ಲ; ಆದರೂ ನನ್ನ ಕೆಲಸವನ್ನು ಅವರು ಮಾಡುತ್ತಿದ್ದಾರೆ. ನಾನು ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಓದಿ ಕೆಲಸ ಪಡೆದುಕೊಂಡಿದ್ದೇನೆ. ಕಾರ್ಯಕ್ರಮ ನಿರ್ದೇಶಕರಿಗೆ ಮೀಸಲಿರುವ ಕೊಠಡಿಯನ್ನು ನನಗೆ ಬಿಟ್ಟುಕೊಡಬೇಕು; ಕಳೆದ ನಲವತ್ತು ವರ್ಷಗಳಿಂದ ಆ ಕಚೇರಿ ನಿರ್ದೇಶಕರಿಗೆ ಮೀಸಲಿತ್ತು ಎನ್ನುವುದಕ್ಕೆ ಎಲ್ಲರ ಬಳಿ ಸಾಕಷ್ಟು ಪುರಾವೆಗಳಿವೆ. ನಾನು ಕೇಳಿದರೆ ಒಬ್ಬರ ಮೇಲೆ ಒಬ್ಬರು ಹೇಳುತ್ತಾ ದಿನದೂಡುತ್ತಿದ್ದಾರೆ” ಎಂದರು.

“ತಳ ಹಂತದ ಸಹೋದ್ಯೋಗಿಗಳು ನನಗೆ ವರದಿ ಮಾಡಿಕೊಳ್ಳುತ್ತಿದ್ದಾರೆ, ಅದಕ್ಕಾಗಿಯೇ ‘ಕಾರ್ಯಕ್ರಮ ಮುಖ್ಯಸ್ಥರು’ ಎಂದು ಅಸ್ಥಿತ್ವದಲ್ಲೇ ಇಲ್ಲದ ಹುದ್ದೆಯೊಂದನ್ನು ನನಗೆ ನೀಡಿದ್ದಾರೆ. ನಾನೇ ಮುಖ್ಯಸ್ಥ ಆಗಿರುವುದರಿಂದ ಅಂತ ಹುದ್ದೆಯನ್ನು ನಿರ್ದೇಶಕರಿಗಿಂತ ಕೆಳಗಿರುವ ಅಧಿಕಾರಿಗಳಿಗೆ ಕೊಡಬಹುದು; ನನಗೆ ಕೊಡುವುದಕ್ಕೆ ಬರುವುದಿಲ್ಲ” ಎಂದು ಭಾಗ್ಯವಾನ್ ವಿವರಿಸಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ದೂರದರ್ಶನ ವಿಭಾಗದ ಮುಖ್ಯಸ್ಥರಾದ ಮಾದವರೆಡ್ಡಿ, “ಕೊಠಡಿ ನೀಡಿಲ್ಲ ಎಂಬುದು ಸುಳ್ಳು, ಈ ಬಗ್ಗೆ ಅವರನ್ನೇ ಕೇಳಬೇಕು. ನಾನು ನಿಯಮಗಳಂತೆ ನಡೆದುಕೊಳ್ಳುತ್ತಿದ್ದೇನೆ” ಎಂದು ಹೇಳಿದ ಅವರು, ‘ಮೀಟಿಂಗ್‌ನಲ್ಲಿದ್ದೇನೆ’ ಎಂದು ತರಾತುರಿಯಲ್ಲಿ ಕರೆ ಕಡಿತಗೊಳಿಸಿದರು.

ಇದನ್ನೂ ಓದಿ; ಸ್ಟ್ಯಾನ್‌ ಸ್ವಾಮಿ ಸಾವಿನ ಕುರಿತು ತನಿಖೆಗೆ ಒತ್ತಾಯಿಸಿ ಅಮೆರಿಕ ಸಂಸತ್‌ನಲ್ಲಿ ನಿರ್ಣಯ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...