Homeಕರ್ನಾಟಕನಿರ್ದೇಶಕರ ಕೊಠಡಿ ಬಿಟ್ಟುಕೊಡದೆ ದಲಿತ ಅಧಿಕಾರಿಗೆ ಕಿರುಕುಳ; ದೂರದರ್ಶನ ಕಚೇರಿ ಕಾರಿಡಾರ್‌ನಲ್ಲಿ ಕುಳಿತು ಕೆಲಸ ಮಾಡುತ್ತಿರುವ...

ನಿರ್ದೇಶಕರ ಕೊಠಡಿ ಬಿಟ್ಟುಕೊಡದೆ ದಲಿತ ಅಧಿಕಾರಿಗೆ ಕಿರುಕುಳ; ದೂರದರ್ಶನ ಕಚೇರಿ ಕಾರಿಡಾರ್‌ನಲ್ಲಿ ಕುಳಿತು ಕೆಲಸ ಮಾಡುತ್ತಿರುವ ಭಾಗ್ಯವಾನ್

- Advertisement -
- Advertisement -

ಬೆಂಗಳೂರು ದೂರದರ್ಶನ ಕೇಂದ್ರಕ್ಕೆ ಉಪ ಮಹಾನಿರ್ದೇಶಕರಾಗಿ (ಕಾರ್ಯಕ್ರಮ ವಿಭಾಗ) ಕಳೆದ ಮೂರು ತಿಂಗಳ ಹಿಂದೆ ದಲಿತ ಸಮುದಾಯಕ್ಕೆ ಸೇರಿದ ಅಧಿಕಾರಿ ಭಾಗ್ಯವಾನ್ ಎಂಬುವವರನ್ನು ನೇಮಿಸಲಾಗಿದೆ. ಆದರೆ, ನಿರ್ದೇಶಕರಿಗೆ ಮೀಸಲಾಗಿರುವ ಕೊಠಡಿಯನ್ನು ಅವರಿಗೆ ನೀಡದೆ, ಸಿಬಿಐ ತನಿಖೆ ಎದುರಿಸುತ್ತಿರುವ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೀದರ್ ಮೂಲದ ಭಾಗ್ಯವಾನ್ ಅವರು ದಲಿತ ಸಮುದಾಯಕ್ಕೆ ಸೇರಿರುವ ಕನ್ನಡಿಗ ಅಧಿಕಾರಿಯಾಗಿದ್ದಾರೆ. ಕೇಂದ್ರ ಸರ್ಕಾರ ಸ್ವಾಮ್ಯದ ದೂರದರ್ಶನ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಅಧಿಕಾರಿಯಾಗಿ ಕಳೆದ 26 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಕಳೆದ ನಲ್ವತ್ತು ವರ್ಷಗಳಿಂದ ಕಾರ್ಯಕ್ರಮ ನಿರ್ದೇಶಕರಿಗೆಂದು ಮೀಸಲಿಟ್ಟಿದ್ದ ಕೊಠಡಿಯನ್ನು ಅವರಿಗೆ ನೀಡದೆ, ಕೆಲಸ ಮಾಡಲು ಅಗತ್ಯವಿರುವ ಕಂಪ್ಯೂಟರ್ ಸಹ ಒದಗಿಸದೆ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಪ್ರತಿನಿಧಿ ಜತೆಗೆ ಮಾತನಾಡಿದ ಅವರು, “ಚಂದನ ವಾಹಿನಿ ಕಾರ್ಯಕ್ರಮ ವಿಭಾಗದ ನಿರ್ದೇಶಕನಾಗಿ ನಾನು ಇಲ್ಲಿಗೆ ಬಂದು ಮೂರು ತಿಂಗಳಾಗಿದೆ; ನಾನು ಬಂದಾಗ ಇಲ್ಲಿನ ಇಂಜಿನಿಯರ್ ಮಂಗಲಗಿ ಎಂಬುವರಿಗೆ ಕಾರ್ಯಕ್ರಮ ವಿಭಾಗದ ಹೆಚ್ಚುವರಿ ಜವಾಬ್ದಾರಿ ನೀಡಿದ್ದರು. ಮೂಲತಃ ಅವರು ಇಂಜಿನಿಯರ್ ಆಗಿದ್ದು, ಚೆನ್ನೈ ಅಥವಾ ನಮ್ಮ ರೇಡಿಯೋ ವಿಭಾಗದಲ್ಲಿ ಅವರಿಗಾಗಿಯೇ ಮೀಸಲಿರುವ ಎರಡು ಪ್ರತ್ಯೇಕ ಕೊಠಡಿಗಳಿದ್ದು ಅಲ್ಲಿ ಕೂರಬೇಕು. ಅದೆಲ್ಲಾ ಬಿಟ್ಟು ಅವರು ದೂರದರ್ಶನದ ನಿರ್ದೇಶಕರಿಗೆ ಮೀಸಲಿರುವ ಕಚೇರಿಯಲ್ಲಿ ಪಟ್ಟುಹಿಡಿದು ಕುಳಿತಿದ್ದಾರೆ” ಎಂದರು.

“ನಿರ್ದೇಶಕರ ಹುದ್ದೆ ಖಾಲಿ ಇದ್ದಾಗ ಕುಳಿತುಕೊಳ್ಳಲಿ ಪರವಾಗಿಲ್ಲ.. ನಾನು ಅಧಿಕಾರ ವಹಿಸಿಕೊಂಡ ನಂತರವಾದರೂ ಕಚೇರಿ ಬಿಟ್ಟುಕೊಡಬೇಕಿತ್ತು. ಆದರೆ, ಅವರು ಬಿಟ್ಟುಕೊಡುತ್ತಿಲ್ಲ. ಅವರಿಗೆ ಬೆಂಬಲವಾಗಿ ನಮ್ಮ ವಿಭಾಗದ ಮುಖ್ಯಸ್ಥರಾದ ಮಾಧವರೆಡ್ಡಿಯವರು ನಿಂತಿದ್ದಾರೆ. ಈ ಬಗ್ಗೆ ಕೇಳಿದರೆ, ‘ಅವರು ಬಿಟ್ಟುಕೊಡದಿದ್ದರೆ ನಾನೇನು ಮಾಡಲಿ’ ಎನ್ನುತ್ತಾರೆ. ಮಂಗಲಗಿ ಅವರನ್ನು ಕೇಳಿದರೆ ‘ಮಾಧವರೆಡ್ಡಿಯವರನ್ನು ಕೇಳಿ’ ಎನ್ನುತ್ತಾರೆ. ಕಳೆದ ಮೂರು ತಿಂಗಳಿನಿಂದ ನನಗೆ ಇದೇ ರೀತಿಯ ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ ನಮ್ಮ ಮೇಲಾಧಿಕಾರಿಗಳಿಗೆ ಪತ್ರ ಬರೆದರೂ ಅವರಿಂದಲೂ ಈವರೆಗೆ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಎಷ್ಟೇ ಪ್ರಯತ್ನ ಮಾಡಿದರೂ ನಿರ್ದೇಶಕರಿಗೆ ಮೀಸಲಿರುವ ಕಚೇರಿಯಲ್ಲಿ ಕುಳಿತುಕೊಳ್ಳಲು ಬಿಡುತ್ತಿಲ್ಲ. ನನಗಾಗಿ ಮೀಸಲಿರುವ ಕೊಠಡಿ ಬಿಟ್ಟು, ಬೇರೆ ಯಾವುದೋ ಒಂದು ಕೊಠಡಿ ಕೊಡುತ್ತಿದ್ದಾರೆ. ಆದರೆ, ನಾನು ಅದನ್ನು ಬೇಡ ಎಂದು ತಿರಸ್ಕರಿಸಿದ್ದೇನೆ. ಆ ಕೊಠಡಿಯನ್ನೂ ನನಗೆ ಮೂರು ತಿಂಗಳ ನಂತರ ಅಧಿಕೃತವಾಗಿ ನೀಡಿದ್ದಾರೆ” ಎಂದು ತಮಗಾಗಿರುವ ಅನ್ಯಾಯದ ಬಗ್ಗೆ ಅವರು ವಿವರಿಸಿದರು.

ಕಚೇರಿ ಕಾರಿಡಾರ್‌ನಿಂದಲೆ ಕಾರ್ಯನಿರ್ವಹಣೆ

“ಕಳೆದ ಮೂರು ತಿಂಗಳಿನಿಂದ ನಾನು ಕಚೇರಿಯ ಕಾರಿಡಾರ್‌ನಲ್ಲೇ ಕೂತು ಕೆಲಸ ಮಾಡುತ್ತಿದ್ದೇನೆ. ಸಂದರ್ಶಕರು ಕಾಯುವ (ವಿಸಿಟರ್ಸ್‌ ವೇಯ್ಟಿಂಗ್ ಹಾಲ್) ಹಾಲ್‌ನಲ್ಲೇ ಕುಳಿತು ಕಚೇರಿ ಕೆಲಸ ಮಾಡುತ್ತಿದ್ದೇನೆ. ಕಂಪ್ಯೂಟರ್ ಸೇರಿದಂತೆ ನನ್ನ ಕೆಲಸಕ್ಕೆ ಅನುಕೂಲವಾಗುವಂತ ಯಾವುದೇ ಅಗತ್ಯ ವಸ್ತುಗಳನ್ನು ಒದಗಿಸಿಲ್ಲ. ಸಹೋದ್ಯೋಗಿಗಳ ಬಳಿ ಮನವಿ ಮಾಡಿಕೊಂಡು, ಪ್ರತಿದಿನ ಒಬ್ಬೊಬ್ಬರ ಕಂಪ್ಯೂಟರ್ ಬಳಸಿಕೊಂಡು ಕೆಲಸ ಮಾಡುತ್ತಿದ್ದೇನೆ; ಪ್ರತಿನಿತ್ಯ ನನ್ನ ಕೆಲಸವನ್ನು ಮುಗಿಸಿಯೇ ಮನೆಗೆ ತೆರಳುತ್ತಿದ್ದೇನೆ” ಎಂದರು.

“ಈ ಮುಂಚೆ ನಾನು ದೂರದರ್ಶನ ಹೈದರಾಬಾದ್‌ನಲ್ಲಿ ಕೆಲಸ ಮಾಡುತ್ತಿದ್ದೆ; ಅಲ್ಲಿಂದ ಬಡ್ತಿ ಪಡೆದು ಬೆಂಗಳೂರು ಕೇಂದ್ರದಲ್ಲಿ ಕಾರ್ಯಕ್ರಮ ವಿಭಾಗದ ಮುಖ್ಯಸ್ಥನಾಗಿದ್ದೇನೆ. ಕಳೆದ 26 ವರ್ಷದಿಂದ ದೂರದರ್ಶನದಲ್ಲಿ ಕೆಲಸ ಮಾಡುತ್ತಿದ್ದು, ದಲಿತ ಎನ್ನುವ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಅದೇ ಉದ್ದೇಶಕ್ಕೆ, ಎಲ್ಲರೂ ನನಗೆ ಕಚೇರಿ ನೀಡಬಾರದು ಎಂದು ನಿರ್ಧರಿಸಿದ್ದಾರೆ; ಎಲ್ಲ ರೀತಿಯ ನಿಯಮಗಳನ್ನು ಅವರು ಉಲ್ಲಂಘಿಸಿದ್ದಾರೆ” ಎಂದು ಅವರು ಬೇಸರ ಹೊರಹಾಕಿದರು.

“ನನಗೆ ಕಿರುಕುಳ ನೀಡುತ್ತಿರುವ ಇಬ್ಬರೂ ಅಧಿಕಾರಿಗಳ ವಿರುದ್ಧ ಸಿಬಿಐ ವಿಚಾರಣೆ ನಡೆಸುತ್ತಿದೆ. ನಮ್ಮ ದೂರದರ್ಶನ ನಿಯಮಗಳ ಪ್ರಕಾರ, ವಿಚಾರಣೆಗೆ ಒಳಪಟ್ಟಿರುವ ಯಾವುದೇ ಅಧಿಕಾರಿಗೆ ಹುದ್ದೆ ನೀಡಬಾರದು ಎಂದು ಹೇಳುತ್ತದೆ. ಆದರೆ, ಅವರಿಗೆ ಹೆಚ್ಚುವರಿಯಾಗಿ ಮೂರುಮೂರು ಜವಾಬ್ದಾರಿ ನೀಡಿದ್ದಾರೆ” ಎಂದು ವಿವರಿಸಿದರು.

“ಇಡೀ ದೇಶಕ್ಕೆ ಕಾರ್ಯಕ್ರಮ ವಿಭಾಗದ ನಿರ್ದೇಶಕನಾಗಿರುವ ಡೆಪ್ಯೂಟಿ ಡೈರೆಕ್ಟರ್ ಜನರಲ್ ನಾನೊಬ್ಬನೆ; ಅದು ಬಿಟ್ಟು ಈ ವಿಭಾಗಕ್ಕೆ ಸಂಬಂಧ ಇಲ್ಲದವರಿಗೆಲ್ಲಾ ಹೆಚ್ಚುವರಿ ಚಾರ್ಜ್‌ ನೀಡಿದ್ದಾರೆ. ಅವರಿಗೆ ದೂರದರ್ಶನದ ಅನುಭವವೇ ಇಲ್ಲ; ಆದರೂ ನನ್ನ ಕೆಲಸವನ್ನು ಅವರು ಮಾಡುತ್ತಿದ್ದಾರೆ. ನಾನು ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಓದಿ ಕೆಲಸ ಪಡೆದುಕೊಂಡಿದ್ದೇನೆ. ಕಾರ್ಯಕ್ರಮ ನಿರ್ದೇಶಕರಿಗೆ ಮೀಸಲಿರುವ ಕೊಠಡಿಯನ್ನು ನನಗೆ ಬಿಟ್ಟುಕೊಡಬೇಕು; ಕಳೆದ ನಲವತ್ತು ವರ್ಷಗಳಿಂದ ಆ ಕಚೇರಿ ನಿರ್ದೇಶಕರಿಗೆ ಮೀಸಲಿತ್ತು ಎನ್ನುವುದಕ್ಕೆ ಎಲ್ಲರ ಬಳಿ ಸಾಕಷ್ಟು ಪುರಾವೆಗಳಿವೆ. ನಾನು ಕೇಳಿದರೆ ಒಬ್ಬರ ಮೇಲೆ ಒಬ್ಬರು ಹೇಳುತ್ತಾ ದಿನದೂಡುತ್ತಿದ್ದಾರೆ” ಎಂದರು.

“ತಳ ಹಂತದ ಸಹೋದ್ಯೋಗಿಗಳು ನನಗೆ ವರದಿ ಮಾಡಿಕೊಳ್ಳುತ್ತಿದ್ದಾರೆ, ಅದಕ್ಕಾಗಿಯೇ ‘ಕಾರ್ಯಕ್ರಮ ಮುಖ್ಯಸ್ಥರು’ ಎಂದು ಅಸ್ಥಿತ್ವದಲ್ಲೇ ಇಲ್ಲದ ಹುದ್ದೆಯೊಂದನ್ನು ನನಗೆ ನೀಡಿದ್ದಾರೆ. ನಾನೇ ಮುಖ್ಯಸ್ಥ ಆಗಿರುವುದರಿಂದ ಅಂತ ಹುದ್ದೆಯನ್ನು ನಿರ್ದೇಶಕರಿಗಿಂತ ಕೆಳಗಿರುವ ಅಧಿಕಾರಿಗಳಿಗೆ ಕೊಡಬಹುದು; ನನಗೆ ಕೊಡುವುದಕ್ಕೆ ಬರುವುದಿಲ್ಲ” ಎಂದು ಭಾಗ್ಯವಾನ್ ವಿವರಿಸಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ದೂರದರ್ಶನ ವಿಭಾಗದ ಮುಖ್ಯಸ್ಥರಾದ ಮಾದವರೆಡ್ಡಿ, “ಕೊಠಡಿ ನೀಡಿಲ್ಲ ಎಂಬುದು ಸುಳ್ಳು, ಈ ಬಗ್ಗೆ ಅವರನ್ನೇ ಕೇಳಬೇಕು. ನಾನು ನಿಯಮಗಳಂತೆ ನಡೆದುಕೊಳ್ಳುತ್ತಿದ್ದೇನೆ” ಎಂದು ಹೇಳಿದ ಅವರು, ‘ಮೀಟಿಂಗ್‌ನಲ್ಲಿದ್ದೇನೆ’ ಎಂದು ತರಾತುರಿಯಲ್ಲಿ ಕರೆ ಕಡಿತಗೊಳಿಸಿದರು.

ಇದನ್ನೂ ಓದಿ; ಸ್ಟ್ಯಾನ್‌ ಸ್ವಾಮಿ ಸಾವಿನ ಕುರಿತು ತನಿಖೆಗೆ ಒತ್ತಾಯಿಸಿ ಅಮೆರಿಕ ಸಂಸತ್‌ನಲ್ಲಿ ನಿರ್ಣಯ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...