HomeUncategorizedಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿ ಯೋಜನೆಗೆ ಬಳಕೆ ಖಂಡಿಸಿ ಆ.18ಕ್ಕೆ ದಲಿತ ಸಂಘಟನೆಗಳಿಂದ ವಿಧಾನಸೌಧ ಚಲೋ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿ ಯೋಜನೆಗೆ ಬಳಕೆ ಖಂಡಿಸಿ ಆ.18ಕ್ಕೆ ದಲಿತ ಸಂಘಟನೆಗಳಿಂದ ವಿಧಾನಸೌಧ ಚಲೋ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಎಸ್‌ಸಿಪಿ-ಟಿಎಸ್‌ಪಿ (SCP-TSP) ಹಣವನ್ನು ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದನ್ನು ಖಂಡಿಸಿ, ದಲಿತ ಸಂಘಟನೆಗಳ ಒಕ್ಕೂಟವು ಆಗಸ್ಟ್ 18ರಂದು ‘ವಿಧಾನಸೌಧ ಚಲೋ’ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಈ ಸಂಬಂಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶವೂ ನಡೆಯಲಿದೆ.

ಇತ್ತೀಚೆಗೆ ಶಾಸಕರ ಭವನದಲ್ಲಿ ನಡೆದ ದುಂಡು ಮೇಜಿನ ಸಭೆಯಲ್ಲಿ “ದಲಿತರ ಹಣ ದುರ್ಬಳಕೆ: ಮೊಂಡುವಾದ ಮಂಡಿಸುತ್ತಿರುವ ರಾಜ್ಯ ಸರ್ಕಾರ” ಎಂಬ ವಿಷಯದ ಕುರಿತು ಚರ್ಚೆ ನಡೆಯಿತು. ಈ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ದಸಂಸ ಮುಖಂಡ ಡಾ. ಆರ್. ಮೋಹನ್ ರಾಜ್, ರಾಹುಲ್ ಗಾಂಧಿ ಅವರು ಆಗಸ್ಟ್ 5ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ದಲಿತ ಸಂಘಟನೆಗಳ ಒಕ್ಕೂಟದ ನಿಯೋಗವು ಆಗಸ್ಟ್ 6ರಂದು ಅವರನ್ನು ಭೇಟಿ ಮಾಡಿ ಈ ವಿಷಯದ ಕುರಿತು ದೂರನ್ನು ಸಲ್ಲಿಸಲಿದೆ ಎಂದು ತಿಳಿಸಿದರು. ದಲಿತರ ಮೀಸಲು ಹಣದ ಮಹತ್ವದ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.

ಸರ್ಕಾರದ ದಲಿತ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ

ಮೋಹನ್ ರಾಜ್ ಅವರು ಮಾತನಾಡಿ, 2025-26ನೇ ಸಾಲಿನ ಬಜೆಟ್‌ನಲ್ಲಿಯೂ ಸಿದ್ದರಾಮಯ್ಯ ಸರ್ಕಾರವು ದಲಿತರ ಮೀಸಲು ನಿಧಿಗೆ ಕನ್ನ ಹಾಕುವ ಚಾಳಿಯನ್ನು ಮುಂದುವರೆಸಿದೆ. ಈ ಹಣವನ್ನು ವಿವಿಧ ಹಂತಗಳಲ್ಲಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದ್ದು, ಈ ವರ್ಷ ಗ್ಯಾರಂಟಿ ಯೋಜನೆಗಳಿಗಾಗಿ 13,433.84 ಕೋಟಿ ರೂಪಾಯಿಗಳನ್ನು ವರ್ಗಾಯಿಸಿರುವುದಾಗಿ ಸರ್ಕಾರ ಹೇಳಿದೆ. ಇದು ಸರ್ಕಾರದ ದಲಿತ ವಿರೋಧಿ ನೀತಿಯಾಗಿದ್ದು, ಇದನ್ನು ಬಲವಾಗಿ ಖಂಡಿಸುವುದಾಗಿ ಅವರು ತಿಳಿಸಿದರು.

ದಲಿತ ಶಾಸಕರ ಮೌನದ ಬಗ್ಗೆ ಬೇಸರ

ಎಸ್‌ಎಸ್‌ಡಿ ರಾಷ್ಟ್ರಾಧ್ಯಕ್ಷ ಎಂ. ವೆಂಕಟಸ್ವಾಮಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮಾತ್ರವಲ್ಲ, ರಾಜ್ಯದ ಎಲ್ಲ ಸಮುದಾಯಗಳಿಗೂ ಅನ್ವಯಿಸುತ್ತವೆ. ಹೀಗಿರುವಾಗ ದಲಿತರ ಹಣವನ್ನೇ ಏಕೆ ಬಳಸಲಾಗುತ್ತಿದೆ ಎಂದು ಪ್ರಶ್ನಿಸಿದರು. ದಲಿತ ಶಾಸಕರು ಈ ವಿಷಯದ ಬಗ್ಗೆ ಧ್ವನಿ ಎತ್ತದಿರುವುದು ಮತ್ತು ಎಸ್‌ಸಿಪಿ-ಟಿಎಸ್‌ಪಿ ಹಣದ ಬಗ್ಗೆ ಆಸಕ್ತಿ ಇಲ್ಲದಿರುವುದೇ ಸರ್ಕಾರ ಈ ಹಣವನ್ನು ದುರುಪಯೋಗಪಡಿಸಿಕೊಳ್ಳಲು ಕಾರಣ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಪರ್ಯಾಯ ರಾಜಕೀಯ ಪಕ್ಷದ ಚಿಂತನೆ ಹಾಗೂ ಕಾನೂನು ಹೋರಾಟ

ವೆಂಕಟಸ್ವಾಮಿ ಅವರು, ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ 31 ಜಿಲ್ಲೆಗಳಲ್ಲಿ ಕೇವಲ ಇಬ್ಬರು ಮಾತ್ರ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಜಿಲ್ಲಾಧಿಕಾರಿಗಳಾಗಿದ್ದಾರೆ. ಆದರೆ, 14 ಜನರು ಕುರುಬ ಜಾತಿಗೆ ಸೇರಿದ ಸಿಇಒಗಳಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ದಲಿತರ ಪರವಾಗಿದೆ ಎಂದು ಹೇಳುವುದು ಅಸಾಧ್ಯ. ಆದ್ದರಿಂದ, ದಲಿತರೆಲ್ಲರೂ ಒಗ್ಗೂಡಿ ಪರ್ಯಾಯ ಪಕ್ಷ ಕಟ್ಟುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು. ಇದೇ ವೇಳೆ, ಮೀಸಲು ಹಣ ದುರುಪಯೋಗದ ವಿರುದ್ಧ ಹೈಕೋರ್ಟ್‌ನಲ್ಲಿ ಪಿಐಎಲ್ (PIL) ದಾಖಲಿಸುವುದಾಗಿಯೂ ಅವರು ತಿಳಿಸಿದರು.

ಈ ಸಭೆಯಲ್ಲಿ ಸಮತಾ ಸೈನಿಕ ದಳದ ಜಿ.ಸಿ. ವೆಂಕಟರಮಣಪ್ಪ, ಬಹುಜನ ದಲಿತ ಸಂಘರ್ಷ ಸಮಿತಿಯ ಆರ್.ಎಂ.ಎನ್. ರಮೇಶ್, ವಕೀಲ ಹರಿರಾಮ್, ದಲಿತ ಸಂರಕ್ಷಾ ಸಮಿತಿ ಲಯನ್ ಬಾಲಕೃಷ್ಣ, ದಸಂಸ ಮುಖಂಡರಾದ ಬಿ.ಎನ್. ಗಂಗಾಧರಪ್ಪ, ಎಂ.ಎಸ್. ಜಗನ್ನಾಥ್, ಮುನಿರಾಜು ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು. ಈ ಪ್ರತಿಭಟನೆಯು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕುವ ಸಾಧ್ಯತೆ ಇದೆ.

ಹೈಕೋರ್ಟ್‌ನಿಂದ ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಹಸಿರು ನಿಶಾನೆ: ವಿಚಾರಣಾ ನ್ಯಾಯಾಲಯದ ಆದೇಶ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...