HomeUncategorizedಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿ ಯೋಜನೆಗೆ ಬಳಕೆ ಖಂಡಿಸಿ ಆ.18ಕ್ಕೆ ದಲಿತ ಸಂಘಟನೆಗಳಿಂದ ವಿಧಾನಸೌಧ ಚಲೋ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿ ಯೋಜನೆಗೆ ಬಳಕೆ ಖಂಡಿಸಿ ಆ.18ಕ್ಕೆ ದಲಿತ ಸಂಘಟನೆಗಳಿಂದ ವಿಧಾನಸೌಧ ಚಲೋ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಎಸ್‌ಸಿಪಿ-ಟಿಎಸ್‌ಪಿ (SCP-TSP) ಹಣವನ್ನು ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದನ್ನು ಖಂಡಿಸಿ, ದಲಿತ ಸಂಘಟನೆಗಳ ಒಕ್ಕೂಟವು ಆಗಸ್ಟ್ 18ರಂದು ‘ವಿಧಾನಸೌಧ ಚಲೋ’ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಈ ಸಂಬಂಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶವೂ ನಡೆಯಲಿದೆ.

ಇತ್ತೀಚೆಗೆ ಶಾಸಕರ ಭವನದಲ್ಲಿ ನಡೆದ ದುಂಡು ಮೇಜಿನ ಸಭೆಯಲ್ಲಿ “ದಲಿತರ ಹಣ ದುರ್ಬಳಕೆ: ಮೊಂಡುವಾದ ಮಂಡಿಸುತ್ತಿರುವ ರಾಜ್ಯ ಸರ್ಕಾರ” ಎಂಬ ವಿಷಯದ ಕುರಿತು ಚರ್ಚೆ ನಡೆಯಿತು. ಈ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ದಸಂಸ ಮುಖಂಡ ಡಾ. ಆರ್. ಮೋಹನ್ ರಾಜ್, ರಾಹುಲ್ ಗಾಂಧಿ ಅವರು ಆಗಸ್ಟ್ 5ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ದಲಿತ ಸಂಘಟನೆಗಳ ಒಕ್ಕೂಟದ ನಿಯೋಗವು ಆಗಸ್ಟ್ 6ರಂದು ಅವರನ್ನು ಭೇಟಿ ಮಾಡಿ ಈ ವಿಷಯದ ಕುರಿತು ದೂರನ್ನು ಸಲ್ಲಿಸಲಿದೆ ಎಂದು ತಿಳಿಸಿದರು. ದಲಿತರ ಮೀಸಲು ಹಣದ ಮಹತ್ವದ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.

ಸರ್ಕಾರದ ದಲಿತ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ

ಮೋಹನ್ ರಾಜ್ ಅವರು ಮಾತನಾಡಿ, 2025-26ನೇ ಸಾಲಿನ ಬಜೆಟ್‌ನಲ್ಲಿಯೂ ಸಿದ್ದರಾಮಯ್ಯ ಸರ್ಕಾರವು ದಲಿತರ ಮೀಸಲು ನಿಧಿಗೆ ಕನ್ನ ಹಾಕುವ ಚಾಳಿಯನ್ನು ಮುಂದುವರೆಸಿದೆ. ಈ ಹಣವನ್ನು ವಿವಿಧ ಹಂತಗಳಲ್ಲಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದ್ದು, ಈ ವರ್ಷ ಗ್ಯಾರಂಟಿ ಯೋಜನೆಗಳಿಗಾಗಿ 13,433.84 ಕೋಟಿ ರೂಪಾಯಿಗಳನ್ನು ವರ್ಗಾಯಿಸಿರುವುದಾಗಿ ಸರ್ಕಾರ ಹೇಳಿದೆ. ಇದು ಸರ್ಕಾರದ ದಲಿತ ವಿರೋಧಿ ನೀತಿಯಾಗಿದ್ದು, ಇದನ್ನು ಬಲವಾಗಿ ಖಂಡಿಸುವುದಾಗಿ ಅವರು ತಿಳಿಸಿದರು.

ದಲಿತ ಶಾಸಕರ ಮೌನದ ಬಗ್ಗೆ ಬೇಸರ

ಎಸ್‌ಎಸ್‌ಡಿ ರಾಷ್ಟ್ರಾಧ್ಯಕ್ಷ ಎಂ. ವೆಂಕಟಸ್ವಾಮಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮಾತ್ರವಲ್ಲ, ರಾಜ್ಯದ ಎಲ್ಲ ಸಮುದಾಯಗಳಿಗೂ ಅನ್ವಯಿಸುತ್ತವೆ. ಹೀಗಿರುವಾಗ ದಲಿತರ ಹಣವನ್ನೇ ಏಕೆ ಬಳಸಲಾಗುತ್ತಿದೆ ಎಂದು ಪ್ರಶ್ನಿಸಿದರು. ದಲಿತ ಶಾಸಕರು ಈ ವಿಷಯದ ಬಗ್ಗೆ ಧ್ವನಿ ಎತ್ತದಿರುವುದು ಮತ್ತು ಎಸ್‌ಸಿಪಿ-ಟಿಎಸ್‌ಪಿ ಹಣದ ಬಗ್ಗೆ ಆಸಕ್ತಿ ಇಲ್ಲದಿರುವುದೇ ಸರ್ಕಾರ ಈ ಹಣವನ್ನು ದುರುಪಯೋಗಪಡಿಸಿಕೊಳ್ಳಲು ಕಾರಣ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಪರ್ಯಾಯ ರಾಜಕೀಯ ಪಕ್ಷದ ಚಿಂತನೆ ಹಾಗೂ ಕಾನೂನು ಹೋರಾಟ

ವೆಂಕಟಸ್ವಾಮಿ ಅವರು, ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ 31 ಜಿಲ್ಲೆಗಳಲ್ಲಿ ಕೇವಲ ಇಬ್ಬರು ಮಾತ್ರ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಜಿಲ್ಲಾಧಿಕಾರಿಗಳಾಗಿದ್ದಾರೆ. ಆದರೆ, 14 ಜನರು ಕುರುಬ ಜಾತಿಗೆ ಸೇರಿದ ಸಿಇಒಗಳಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ದಲಿತರ ಪರವಾಗಿದೆ ಎಂದು ಹೇಳುವುದು ಅಸಾಧ್ಯ. ಆದ್ದರಿಂದ, ದಲಿತರೆಲ್ಲರೂ ಒಗ್ಗೂಡಿ ಪರ್ಯಾಯ ಪಕ್ಷ ಕಟ್ಟುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು. ಇದೇ ವೇಳೆ, ಮೀಸಲು ಹಣ ದುರುಪಯೋಗದ ವಿರುದ್ಧ ಹೈಕೋರ್ಟ್‌ನಲ್ಲಿ ಪಿಐಎಲ್ (PIL) ದಾಖಲಿಸುವುದಾಗಿಯೂ ಅವರು ತಿಳಿಸಿದರು.

ಈ ಸಭೆಯಲ್ಲಿ ಸಮತಾ ಸೈನಿಕ ದಳದ ಜಿ.ಸಿ. ವೆಂಕಟರಮಣಪ್ಪ, ಬಹುಜನ ದಲಿತ ಸಂಘರ್ಷ ಸಮಿತಿಯ ಆರ್.ಎಂ.ಎನ್. ರಮೇಶ್, ವಕೀಲ ಹರಿರಾಮ್, ದಲಿತ ಸಂರಕ್ಷಾ ಸಮಿತಿ ಲಯನ್ ಬಾಲಕೃಷ್ಣ, ದಸಂಸ ಮುಖಂಡರಾದ ಬಿ.ಎನ್. ಗಂಗಾಧರಪ್ಪ, ಎಂ.ಎಸ್. ಜಗನ್ನಾಥ್, ಮುನಿರಾಜು ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು. ಈ ಪ್ರತಿಭಟನೆಯು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕುವ ಸಾಧ್ಯತೆ ಇದೆ.

ಹೈಕೋರ್ಟ್‌ನಿಂದ ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಹಸಿರು ನಿಶಾನೆ: ವಿಚಾರಣಾ ನ್ಯಾಯಾಲಯದ ಆದೇಶ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...