Homeಕರ್ನಾಟಕಅನ್ಯಾಯ ಸರಿಪಡಿಸದಿದ್ದರೆ ಬೃಹತ್ ಹೋರಾಟ: ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ದಲಿತ ಸಂಘಟನೆಗಳು

ಅನ್ಯಾಯ ಸರಿಪಡಿಸದಿದ್ದರೆ ಬೃಹತ್ ಹೋರಾಟ: ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ದಲಿತ ಸಂಘಟನೆಗಳು

ಗ್ಯಾರಂಟಿ ಯೋಜನೆಗೆ ಬಳಸುತ್ತಿರುವ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣ ಹಿಂಪಡೆಯಲು ಆಗ್ರಹ

- Advertisement -
- Advertisement -

ದಲಿತರಿಗೆ ಮೀಸಲಿಟ್ಟ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವ ರಾಜ್ಯ ಸರ್ಕಾರದ ನಡೆಯ ವಿರುದ್ದ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅನ್ಯಾಯ ಸರಿಪಡಿಸದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಒಕ್ಕೂಟದ ಪ್ರಮುಖರು “ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ನಿರ್ಧರಿಸಿದ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣವನ್ನು ಹಿಂಪಡೆಯಬೇಕು ಮತ್ತು ಇತರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಭಾರತದ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಿ ಸರ್ವಾಧಿಕಾರ ಸ್ಥಾಪಿಸಲು ಹೊರಟಿರುವ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯನ್ನು ಸೋಲಿಸದೆ ದಲಿತರಿಗೆ ಬೇರೆ ದಾರಿಯೇ ಇರಲಿಲ್ಲ. ಹಾಗಾಗಿ, ರಾಜ್ಯ, ರಾಷ್ಟ್ರದಲ್ಲಿ ಕೋಮುವಾದಿ ಬಿಜೆಪಿ ಸರ್ಕಾರವನ್ನು ಕಿತ್ತೆಸೆಯಲು ದಲಿತರು ಅನಿವಾರ್ಯವಾಗಿ ಕಾಂಗ್ರೆಸ್‌ ಪಕ್ಷದೊಂದಿಗೆ ನಿಲ್ಲಬೇಕಾಯಿತು. ಬಹಿರಂಗವಾಗಿಯೇ ದಲಿತ ಸಂಘಟನೆಗಳು ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದ್ದರಿಂದ ಕಾಂಗ್ರೆಸ್ ಸರ್ಕಾರ ರಚಿಸುವಲ್ಲಿ ಸಫಲವಾಯಿತು ಎಂದು ಹೇಳಿದ್ದಾರೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದು ಸರ್ಕಾರ ರಚಿಸಿರುವ ಕಾಂಗ್ರೆಸ್, ದಲಿತರ ಕೆಲವು ಬೇಡಿಕೆಗಳನ್ನು ಈಡೇರಿಸುವಲ್ಲಿ ಹೆಜ್ಜೆ ಇಟ್ಟಿತಾದರೂ, ಕೆಲವೇ ದಿನಗಳಲ್ಲಿ ಭ್ರಮನಿರಸನ ಉಂಟು ಮಾಡಿದೆ. ಗ್ಯಾರಂಟಿ ಕಾರ್ಯಕ್ರಮಗಳಿಗೆ ದಲಿತರಿಗೆ ಮೀಸಲಿಟ್ಟ ಹಣವನ್ನು ಬಳಸಿಕೊಂಡು ದಲಿತರ ಬೆನ್ನಿಗೆ ಚೂರಿ ಹಾಕಿದೆ ಎಂದು ಒಕ್ಕೂಟ ಅಸಮಾಧಾನ ಹೊರ ಹಾಕಿದೆ.

ಬ್ಯಾಕ್‌ಲಾಗ್ ನೇಮಕಾತಿಯಿಂದ ಹಿಡಿದು, ಇತ್ತೀಚಿನ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಅನುದಾವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವವರೆಗೂ ಸರ್ಕಾರ ವಂಚನೆ ಮುಂದುವರೆಸಿದೆ. ಬ್ಯಾಕ್‌ಲಾಗ್ ಹುದ್ದೆ ತುಂಬುತ್ತಿಲ್ಲ, ದಲಿತರ ಮಕ್ಕಳ ಉನ್ನತ ವ್ಯಾಸಂಗಕ್ಕೆ ಅಡಚಣೆ ಮಾಡುತ್ತಿದೆ. ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ತರುತ್ತಿಲ್ಲ. ಈ ಕುರಿತು ದಲಿತ ಜನಸಮೂಹದಲ್ಲಿ ತೀವ್ರ ಅಸಮಾಧಾನ ಮೂಡಿದ್ದು, ಕಾಂಗ್ರೆಸ್ ವಿರುದ್ದ ತಿರುಗಿ ಬೀಳುವ ಹಂತಕ್ಕೆ ಬಂದು ಮುಟ್ಟಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನಡೆಯನ್ನು ನಾವು ಸಹಿಸುವುದಿಲ್ಲ. ದಲಿತರಿಗೆ ಮಾಡಿರುವ ಅನ್ಯಾಯವನ್ನು ಸರಿಪಡಿಸದಿದ್ದರೆ ಬೃಹತ್ ಹೋರಾಟ ಆರಂಭಿಸಲು ನಿರ್ಧರಿಸಿದ್ದೇವೆ ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಎಚ್ಚರಿಸಿದೆ.

ಒಕ್ಕೂಟದ ಹಕ್ಕೋತ್ತಾಯಗಳು

  1. ಎಸ್‌ಸಿ, ಎಸ್‌ಟಿ ಬ್ಯಾಕ್‌ಲಾಗ್ ಉದ್ಯೋಗಗಳನ್ನು ಕೂಡಲೇ ಭರ್ತಿ ಮಾಡಬೇಕು.

2. ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣವನ್ನು ಯಾವುದೇ ಕಾರಣಕ್ಕೂ ಇತರೆ ಯೋಜನೆಗಳಿಗೆ ಬಳಸಬಾರದು. ಈಗಾಗಲೇ ಗ್ಯಾರಂಟಿ ಯೋಜನೆಗೆ ಬಳಸಿರುವ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣವನ್ನು ಹಿಂಪಡೆಯಬೇಕು. ಕಳೆದ ಸಾಲಿನ 11 ಸಾವಿರ ಕೋಟಿ ರೂ. ಮತ್ತು ಈ ಸಾಲಿನ 14 ಸಾವಿರ ಕೋಟಿ ರೂ. ಹಣವನ್ನು ಈ ಕೂಡಲೇ ಹಿಂಪಡೆಯಬೇಕು.

3. ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯ ಯೋಜನೆಗಳ ಜಾರಿಗೆ ಕೂಡಲೇ ಏಕಗವಾಕ್ಷಿ ಪದ್ದತಿಯನ್ನು ಜಾರಿಗೊಳಿಸಬೇಕು.

4. ಹೊರಗುತ್ತಿಗೆ ನೇಮಕಾತಿಯಲ್ಲಿ ಕಡ್ಡಾಯವಾಗಿ ರೋಸ್ಟರ್ ಪದ್ದತಿಗನುಗುಣವಾಗಿ ಮೀಸಲಾತಿ ನೀಡಬೇಕು

5. ಪರಿಶಿಷ್ಟ ಜಾತಿ ಮತ್ತು ಪಂಗಡದ ಮೆರಿಟ್ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಪ್ರೋತ್ಸಾಹ ಧನಕ್ಕೆ ವಿಧಿಸಿರುವ ಆದಾಯ ಹಾಗೂ ಅಂಕಗಳ ಮಿತಿಯನ್ನು ರದ್ದುಗೊಳಿಸಿ, ಈ ಹಿಂದೆ ನಿಗದಿಪಡಿಸಿದಂತೆ ಮರು ಜಾರಿಗೊಳಿಸಬೇಕು.

6. ಸಮಾಜ ಕಲ್ಯಾಣ ಇಲಾಖೆಯಿಂದ ಬಿಡುಗಡೆ ಮಾಡುತ್ತಿರುವ ಎಲ್ಲಾ ಅನುದಾನಗಳ ನಿರ್ವಹಣೆ ಮತ್ತು ಪರಿವೀಕ್ಷಣೆ ಮಾಡಲು ಸ್ವತಂತ್ರ ಕಾವಲು ಸಮಿತಿ ನೇಮಿಸಬೇಕು ಹಾಗೂ ಅದಕ್ಕೆ ನ್ಯಾಯಾಂಗ ಅಧಿಕಾರ ನೀಡಬೇಕು.

7. ವಿದೇಶಗಳಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಚಿಸುವ ದಲಿತ ವಿದ್ಯಾರ್ಥಿಗಳಿಗೆ ‘ಪ್ರಬುದ್ದ ಯೋಜನೆ’ ಮೂಲಕ ನೀಡುತ್ತಿರುವ ನಿರ್ವಹಣ ವೆಚ್ಚದ ಮಿತಿಯನ್ನು ಸಡಿಲಗೊಳಿಸಿ, ವಾಸ್ತವ ವೆಚ್ಚವನ್ನು ನೀಡಬೇಕು. ಈ ಹಿಂದಿನಂತೆ ಎರಡು ಕೋಟಿಗಳವರೆಗೆ ನೀಡುತ್ತಿರುವ ಅನುದಾನವನ್ನು ಮುಂದುವರೆಸಬೇಕು.

8. ವಿದೇಶದಲ್ಲಿ ಪಿಹೆಚ್‌ಡಿ ಪದವಿ ಪಡೆಯಲು ನೀಡುತ್ತಿದ್ದ ಧನ ಸಹಾಯ ರದ್ದುಗೊಳಿಸಿರುವುದನ್ನು ಕೂಡಲೇ ಹಿಂಪಡೆದು, ಹಿಂದಿ ಪದ್ದತಿಯನ್ನು ಮುಂದುವರೆಸಬೇಕು.

9. ವಸತಿ ಶಾಲೆಗಳ ಪ್ರವೇಶಕ್ಕೆ ನಿಗದಿಪಡಿಸಿರುವ ಪ್ರವೇಶ ಪರೀಕ್ಷೆಗಳನ್ನು ರದ್ದುಪಡಿಸಿ ಸಾಮಾಜಿಕ ಹಾಗೂ ಅರ್ಥಿಕ ಮಾನದಂಡದ ಮೇಲೆ ಪ್ರವೇಶಾತಿ ನೀಡಬೇಕು.

ಇದನ್ನೂ ಓದಿ : ಮೈಸೂರು-ಕೊಡಗು ಸಂಸದ ಯದುವೀರ್‌ ಒಡೆಯರ್‌ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...