Homeಕರ್ನಾಟಕಅನ್ಯಾಯ ಸರಿಪಡಿಸದಿದ್ದರೆ ಬೃಹತ್ ಹೋರಾಟ: ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ದಲಿತ ಸಂಘಟನೆಗಳು

ಅನ್ಯಾಯ ಸರಿಪಡಿಸದಿದ್ದರೆ ಬೃಹತ್ ಹೋರಾಟ: ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ದಲಿತ ಸಂಘಟನೆಗಳು

ಗ್ಯಾರಂಟಿ ಯೋಜನೆಗೆ ಬಳಸುತ್ತಿರುವ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣ ಹಿಂಪಡೆಯಲು ಆಗ್ರಹ

- Advertisement -
- Advertisement -

ದಲಿತರಿಗೆ ಮೀಸಲಿಟ್ಟ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವ ರಾಜ್ಯ ಸರ್ಕಾರದ ನಡೆಯ ವಿರುದ್ದ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅನ್ಯಾಯ ಸರಿಪಡಿಸದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಒಕ್ಕೂಟದ ಪ್ರಮುಖರು “ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ನಿರ್ಧರಿಸಿದ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣವನ್ನು ಹಿಂಪಡೆಯಬೇಕು ಮತ್ತು ಇತರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಭಾರತದ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಿ ಸರ್ವಾಧಿಕಾರ ಸ್ಥಾಪಿಸಲು ಹೊರಟಿರುವ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯನ್ನು ಸೋಲಿಸದೆ ದಲಿತರಿಗೆ ಬೇರೆ ದಾರಿಯೇ ಇರಲಿಲ್ಲ. ಹಾಗಾಗಿ, ರಾಜ್ಯ, ರಾಷ್ಟ್ರದಲ್ಲಿ ಕೋಮುವಾದಿ ಬಿಜೆಪಿ ಸರ್ಕಾರವನ್ನು ಕಿತ್ತೆಸೆಯಲು ದಲಿತರು ಅನಿವಾರ್ಯವಾಗಿ ಕಾಂಗ್ರೆಸ್‌ ಪಕ್ಷದೊಂದಿಗೆ ನಿಲ್ಲಬೇಕಾಯಿತು. ಬಹಿರಂಗವಾಗಿಯೇ ದಲಿತ ಸಂಘಟನೆಗಳು ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದ್ದರಿಂದ ಕಾಂಗ್ರೆಸ್ ಸರ್ಕಾರ ರಚಿಸುವಲ್ಲಿ ಸಫಲವಾಯಿತು ಎಂದು ಹೇಳಿದ್ದಾರೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದು ಸರ್ಕಾರ ರಚಿಸಿರುವ ಕಾಂಗ್ರೆಸ್, ದಲಿತರ ಕೆಲವು ಬೇಡಿಕೆಗಳನ್ನು ಈಡೇರಿಸುವಲ್ಲಿ ಹೆಜ್ಜೆ ಇಟ್ಟಿತಾದರೂ, ಕೆಲವೇ ದಿನಗಳಲ್ಲಿ ಭ್ರಮನಿರಸನ ಉಂಟು ಮಾಡಿದೆ. ಗ್ಯಾರಂಟಿ ಕಾರ್ಯಕ್ರಮಗಳಿಗೆ ದಲಿತರಿಗೆ ಮೀಸಲಿಟ್ಟ ಹಣವನ್ನು ಬಳಸಿಕೊಂಡು ದಲಿತರ ಬೆನ್ನಿಗೆ ಚೂರಿ ಹಾಕಿದೆ ಎಂದು ಒಕ್ಕೂಟ ಅಸಮಾಧಾನ ಹೊರ ಹಾಕಿದೆ.

ಬ್ಯಾಕ್‌ಲಾಗ್ ನೇಮಕಾತಿಯಿಂದ ಹಿಡಿದು, ಇತ್ತೀಚಿನ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಅನುದಾವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವವರೆಗೂ ಸರ್ಕಾರ ವಂಚನೆ ಮುಂದುವರೆಸಿದೆ. ಬ್ಯಾಕ್‌ಲಾಗ್ ಹುದ್ದೆ ತುಂಬುತ್ತಿಲ್ಲ, ದಲಿತರ ಮಕ್ಕಳ ಉನ್ನತ ವ್ಯಾಸಂಗಕ್ಕೆ ಅಡಚಣೆ ಮಾಡುತ್ತಿದೆ. ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ತರುತ್ತಿಲ್ಲ. ಈ ಕುರಿತು ದಲಿತ ಜನಸಮೂಹದಲ್ಲಿ ತೀವ್ರ ಅಸಮಾಧಾನ ಮೂಡಿದ್ದು, ಕಾಂಗ್ರೆಸ್ ವಿರುದ್ದ ತಿರುಗಿ ಬೀಳುವ ಹಂತಕ್ಕೆ ಬಂದು ಮುಟ್ಟಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನಡೆಯನ್ನು ನಾವು ಸಹಿಸುವುದಿಲ್ಲ. ದಲಿತರಿಗೆ ಮಾಡಿರುವ ಅನ್ಯಾಯವನ್ನು ಸರಿಪಡಿಸದಿದ್ದರೆ ಬೃಹತ್ ಹೋರಾಟ ಆರಂಭಿಸಲು ನಿರ್ಧರಿಸಿದ್ದೇವೆ ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಎಚ್ಚರಿಸಿದೆ.

ಒಕ್ಕೂಟದ ಹಕ್ಕೋತ್ತಾಯಗಳು

  1. ಎಸ್‌ಸಿ, ಎಸ್‌ಟಿ ಬ್ಯಾಕ್‌ಲಾಗ್ ಉದ್ಯೋಗಗಳನ್ನು ಕೂಡಲೇ ಭರ್ತಿ ಮಾಡಬೇಕು.

2. ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣವನ್ನು ಯಾವುದೇ ಕಾರಣಕ್ಕೂ ಇತರೆ ಯೋಜನೆಗಳಿಗೆ ಬಳಸಬಾರದು. ಈಗಾಗಲೇ ಗ್ಯಾರಂಟಿ ಯೋಜನೆಗೆ ಬಳಸಿರುವ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣವನ್ನು ಹಿಂಪಡೆಯಬೇಕು. ಕಳೆದ ಸಾಲಿನ 11 ಸಾವಿರ ಕೋಟಿ ರೂ. ಮತ್ತು ಈ ಸಾಲಿನ 14 ಸಾವಿರ ಕೋಟಿ ರೂ. ಹಣವನ್ನು ಈ ಕೂಡಲೇ ಹಿಂಪಡೆಯಬೇಕು.

3. ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯ ಯೋಜನೆಗಳ ಜಾರಿಗೆ ಕೂಡಲೇ ಏಕಗವಾಕ್ಷಿ ಪದ್ದತಿಯನ್ನು ಜಾರಿಗೊಳಿಸಬೇಕು.

4. ಹೊರಗುತ್ತಿಗೆ ನೇಮಕಾತಿಯಲ್ಲಿ ಕಡ್ಡಾಯವಾಗಿ ರೋಸ್ಟರ್ ಪದ್ದತಿಗನುಗುಣವಾಗಿ ಮೀಸಲಾತಿ ನೀಡಬೇಕು

5. ಪರಿಶಿಷ್ಟ ಜಾತಿ ಮತ್ತು ಪಂಗಡದ ಮೆರಿಟ್ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಪ್ರೋತ್ಸಾಹ ಧನಕ್ಕೆ ವಿಧಿಸಿರುವ ಆದಾಯ ಹಾಗೂ ಅಂಕಗಳ ಮಿತಿಯನ್ನು ರದ್ದುಗೊಳಿಸಿ, ಈ ಹಿಂದೆ ನಿಗದಿಪಡಿಸಿದಂತೆ ಮರು ಜಾರಿಗೊಳಿಸಬೇಕು.

6. ಸಮಾಜ ಕಲ್ಯಾಣ ಇಲಾಖೆಯಿಂದ ಬಿಡುಗಡೆ ಮಾಡುತ್ತಿರುವ ಎಲ್ಲಾ ಅನುದಾನಗಳ ನಿರ್ವಹಣೆ ಮತ್ತು ಪರಿವೀಕ್ಷಣೆ ಮಾಡಲು ಸ್ವತಂತ್ರ ಕಾವಲು ಸಮಿತಿ ನೇಮಿಸಬೇಕು ಹಾಗೂ ಅದಕ್ಕೆ ನ್ಯಾಯಾಂಗ ಅಧಿಕಾರ ನೀಡಬೇಕು.

7. ವಿದೇಶಗಳಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಚಿಸುವ ದಲಿತ ವಿದ್ಯಾರ್ಥಿಗಳಿಗೆ ‘ಪ್ರಬುದ್ದ ಯೋಜನೆ’ ಮೂಲಕ ನೀಡುತ್ತಿರುವ ನಿರ್ವಹಣ ವೆಚ್ಚದ ಮಿತಿಯನ್ನು ಸಡಿಲಗೊಳಿಸಿ, ವಾಸ್ತವ ವೆಚ್ಚವನ್ನು ನೀಡಬೇಕು. ಈ ಹಿಂದಿನಂತೆ ಎರಡು ಕೋಟಿಗಳವರೆಗೆ ನೀಡುತ್ತಿರುವ ಅನುದಾನವನ್ನು ಮುಂದುವರೆಸಬೇಕು.

8. ವಿದೇಶದಲ್ಲಿ ಪಿಹೆಚ್‌ಡಿ ಪದವಿ ಪಡೆಯಲು ನೀಡುತ್ತಿದ್ದ ಧನ ಸಹಾಯ ರದ್ದುಗೊಳಿಸಿರುವುದನ್ನು ಕೂಡಲೇ ಹಿಂಪಡೆದು, ಹಿಂದಿ ಪದ್ದತಿಯನ್ನು ಮುಂದುವರೆಸಬೇಕು.

9. ವಸತಿ ಶಾಲೆಗಳ ಪ್ರವೇಶಕ್ಕೆ ನಿಗದಿಪಡಿಸಿರುವ ಪ್ರವೇಶ ಪರೀಕ್ಷೆಗಳನ್ನು ರದ್ದುಪಡಿಸಿ ಸಾಮಾಜಿಕ ಹಾಗೂ ಅರ್ಥಿಕ ಮಾನದಂಡದ ಮೇಲೆ ಪ್ರವೇಶಾತಿ ನೀಡಬೇಕು.

ಇದನ್ನೂ ಓದಿ : ಮೈಸೂರು-ಕೊಡಗು ಸಂಸದ ಯದುವೀರ್‌ ಒಡೆಯರ್‌ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...