Homeದಲಿತ್ ಫೈಲ್ಸ್ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ

ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ

- Advertisement -
- Advertisement -

ತಿರುವನಂತಪುರದ ಕೇರಳ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪದ ಕುರಿತ ತನಿಖೆಗೆ ಉನ್ನತ ಶಿಕ್ಷಣ ಸಚಿವೆ ಆರ್‌.ಬಿಂದು ಶನಿವಾರ (ನ.8) ಆದೇಶಿಸಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ.

ಸಂಸ್ಕೃತ ವಿಭಾಗದ ಡೀನ್ ಡಾ. ಸಿ.ಎನ್ ವಿಜಯಕುಮಾರಿ ವಿರುದ್ಧ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿ ದಲಿತ ಸಮುದಾಯದ ವಿಪಿನ್ ವಿಜಯನ್ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಡೀನ್ ವಿಜಯಕುಮಾರಿ ಜಾತಿವಾದಿ ಹೇಳಿಕೆ ನೀಡಿದ್ದಾರೆ. ಅಂತಿಮ ಹಂತದಲ್ಲಿ ಜಾತಿಯ ಕಾರಣಕ್ಕೆ ತನ್ನ ಪಿಎಚ್‌ಡಿಗೆ ಅಡ್ಡಿಪಡಿಸಿದ್ದಾರೆ ಎಂದು ಹೇಳಿದ್ದಾರೆ.

“ನೀವು ಕೆಳ ಜಾತಿಯವರು ಸಂಸ್ಕೃತ ಅಧ್ಯಯನ ಮಾಡಬಾರದು. ಕೆಳಜಾತಿಯ ವಿದ್ಯಾರ್ಥಿಗಳ ಪ್ರವೇಶದಿಂದಾಗಿ ವಿಭಾಗದ ಪಾವಿತ್ರ್ಯತೆ ಹಾಳಾಗಿದೆ” ಎಂದು ಡೀನ್ ವಿಜಯಕುಮಾರಿ ಹೇಳಿದ್ದಾಗಿ ವಿಪಿನ್‌ ಆರೋಪಿಸಿದ್ದಾರೆ. ಈ ಬಗ್ಗೆ ವಿಶ್ವವಿದ್ಯಾಲಯದ ಉಪಕುಲಪತಿ ಮತ್ತು ಕಝಕೂಟಂ ಸಹಾಯಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ವಿಪಿನ್ ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯದಿಂದ ಸಂಸ್ಕೃತದಲ್ಲಿ ಬಿಎ ಮತ್ತು ಎಂಎ ಪದವಿಗಳನ್ನು ಪೂರ್ಣಗೊಳಿಸಿ, ನಂತರ ಕೇರಳ ವಿಶ್ವವಿದ್ಯಾಲಯದಿಂದ ಬಿಎಡ್ ಮತ್ತು ಎಂಎಡ್‌ ಪದವಿಗಳನ್ನು ಪಡೆದಿದ್ದಾರೆ.

ತನ್ನ ವಿರುದ್ದದ ಆರೋಪಗಳ ಬಗ್ಗೆ ವಿಜಯಕುಮಾರಿ ಪ್ರತಿಕ್ರಿಯೆ ನೀಡಿದ್ದು, ವಿಪಿನ್ ಅವರ ಪಿಎಚ್‌ಡಿ ಶೈಕ್ಷಣಿಕ ಮಾನದಂಡಗಳನ್ನು ಪೂರೈಸಿಲ್ಲ. ಅವರು ಸಂಸ್ಕೃತ, ಇಂಗ್ಲಿಷ್ ಅಥವಾ ಮಲಯಾಳಂ ಭಾಷೆಗಳಲ್ಲಿನ ಪ್ರಶ್ನೆಗಳಿಗೆ ಉತ್ತರಿಸಲು ವಿಫಲರಾಗಿದ್ದಾರೆ ಎಂದು ಮಾಧ್ಯಮಗಳಿಗೆ ಹೇಳಿದ್ದಾರೆ. ಉಪಕುಲಪತಿಗಳಿಗೆ ಬರೆದ ಪತ್ರದಲ್ಲಿ, ವಿಪಿನ್ ಅವರ ಪ್ರಬಂಧವು ಸರಿಯಾದ ಸಂಶೋಧನಾ ವಿಧಾನವನ್ನು ಹೊಂದಿಲ್ಲ ಎಂದಿದ್ದಾರೆ.

ಇದಕ್ಕೆ ತಿರುಗೇಟು ಕೊಟ್ಟಿರುವ ವಿಪಿನ್, ವಿಜಯಕುಮಾರಿ ಅವರ ಮಾರ್ಗದರ್ಶನದಲ್ಲಿ ನಾನು ಸಂಸ್ಕೃತದಲ್ಲಿ ಎಂಫಿಲ್ ಪೂರ್ಣಗೊಳಿಸಿದ್ದೇನೆ. ನನಗೆ ಸಂಸ್ಕೃತ ಗೊತ್ತಿಲ್ಲದಿದ್ದರೆ, ಅವರು ಯಾವ ಆಧಾರದ ಮೇಲೆ ನನಗೆ ಮಾರ್ಗದರ್ಶನ ನೀಡಿದ್ದರು ಮತ್ತು ನನ್ನ ಎಂಫಿಲ್ ಪದವಿಯನ್ನು ಅನುಮೋದಿಸಿದ್ದರು ಎಂದು ಪ್ರಶ್ನಿಸಿದ್ದಾರೆ. ಇದು ವೈಯಕ್ತಿಕ ತಾರತಮ್ಯ ಮತ್ತು ನನ್ನ ಶೈಕ್ಷಣಿಕ ವೃತ್ತಿಜೀವನವನ್ನು ಹಾಳುಮಾಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ.

ಈ ಘಟನೆಯು ವಿಶ್ವವಿದ್ಯಾಲಯ ಮತ್ತು ಉನ್ನತ ಶಿಕ್ಷಣ ಕ್ಷೇತ್ರ ಎರಡಕ್ಕೂ ಅಪಖ್ಯಾತಿ ತಂದಿದೆ. ತನ್ನನ್ನು ಅನಗತ್ಯ ವಿವಾದಕ್ಕೆ ಎಳೆದಿದೆ ಎಂದು ಸಚಿವೆ ಬಿಂದು ಹೇಳಿದ್ದಾರೆ. ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಉಪಕುಲಪತಿ ಮತ್ತು ಕುಲಸಚಿವರಿಗೆ ನಿರ್ದೇಶನ ನೀಡಿದ್ದಾರೆ.

‘ನೀವು ಬ್ರಾಹ್ಮಣರಂತೆ ಸಂಸ್ಕೃತ ಅಧ್ಯಯನ ಮಾಡಲು ಸಾಧ್ಯವಿಲ್ಲ..’ ಎಂದು ದಲಿತ ವಿದ್ಯಾರ್ಥಿಗೆ ಪಿಎಚ್‌ಡಿ ತಡೆಹಿಡಿದ ಡೀನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...