Homeಮುಖಪುಟಅದಾನಿ ಗ್ರೂಪ್ ಪ್ರಾಯೋಜಿತ ಪ್ರಶಸ್ತಿ ನಿರಾಕರಿಸಿದ ದಲಿತ ಕವಯಿತ್ರಿ, ಸ್ತ್ರೀವಾದಿ ಸುಕೀರ್ತರಾಣಿ

ಅದಾನಿ ಗ್ರೂಪ್ ಪ್ರಾಯೋಜಿತ ಪ್ರಶಸ್ತಿ ನಿರಾಕರಿಸಿದ ದಲಿತ ಕವಯಿತ್ರಿ, ಸ್ತ್ರೀವಾದಿ ಸುಕೀರ್ತರಾಣಿ

- Advertisement -
- Advertisement -

ಸಮಾರಂಭದ ಮುಖ್ಯ ಪ್ರಾಯೋಜಕರು ಅದಾನಿ ಗ್ರೂಪ್ ಆಗಿರುವುದರಿಂದ, ದಲಿತ ಕವಯಿತ್ರಿ ಮತ್ತು ಸ್ತ್ರೀವಾದಿ ಸುಕೀರ್ತರಾಣಿ ಅವರು ದೇವಿ ಪ್ರಶಸ್ತಿಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

ಸುಕೀರ್ತರಾಣಿ ಅವರು ಸಮಕಾಲೀನ ತಮಿಳು ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡುವ ಮೂಲಕ ಹೆಸರುವಾಸಿಯಾಗಿದ್ದಾರೆ. ಅವರು ಪ್ರಾಯೋಜಿಸಿದ ಯಾವುದೇ ಪ್ರಶಸ್ತಿಗಳನ್ನು ಸ್ವೀಕರಿಸುವುದು ತನ್ನ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಎಂದು ಸುಕೀರ್ತರಾಣಿ ಹೇಳಿದ್ದಾರೆ. ಫೆಬ್ರವರಿ 4 ರ ಶನಿವಾರದಂದು ಪ್ರಶಸ್ತಿಯನ್ನು ತ್ಯಜಿಸಿರುವುದಾಗಿ ಅವರು ಫೇಸ್‌ಬುಕ್ ಪೋಸ್ಟ್‌ ಮಾಡಿದ್ದಾರೆ.

ಈ ಪ್ರಶಸ್ತಿಗೆ ದೇಶದಾದ್ಯಂತದ ಕೇವಲ ಹನ್ನೆರಡು ಮಹಿಳೆಯರನ್ನು ಆಯ್ಕೆ ಮಾಡಲಾಗಿದೆ. ಅವರಲ್ಲಿ ನನಗೆ ದಲಿತ ಸಾಹಿತ್ಯಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಪ್ರಶಸ್ತಿ ನೀಡಲು ಮುಂದಾಗಿದ್ದಕ್ಕೆ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಸುಕೀರ್ತರಾಣಿ ಅವರು ಧನ್ಯವಾದ ಅರ್ಪಿಸಿದ್ದಾರೆ.  ಆದರೆ, “ಈ ಕಾರ್ಯಕ್ರಮದ ಮುಖ್ಯ ಪ್ರಾಯೋಜಕರು ಅದಾನಿ ಎಂದು ನನಗೆ ನಿನ್ನೆಯಷ್ಟೇ ತಿಳಿಯಿತು, ಅದಾನಿ ಗ್ರೂಪ್‌ನಿಂದ ಆರ್ಥಿಕವಾಗಿ ಬೆಂಬಲಿತವಾಗಿರುವ ಸಂಸ್ಥೆಯಿಂದ ಪ್ರಶಸ್ತಿ ಸ್ವೀಕರಿಸಲು ನನಗೆ ಇಷ್ಟವಿಲ್ಲ ಏಕೆಂದರೆ, ನಾನು ಮಾತನಾಡುವ ರಾಜಕೀಯ ವಿಚಾರಗಳು ಮತ್ತು ನಾನು ನಂಬಿರುವ ಸಿದ್ಧಾಂತಗಳು ಬೇರೆ ಹಾಗಾಗಿ ನಾನು ದೇವಿ ಪ್ರಶಸ್ತಿಗಳನ್ನು ಸ್ವೀಕರಿಸಲು ನಿರಾಕರಿಸುತ್ತೇನೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ‘ಮೋದಿ-ಅದಾನಿ ಭಾಯಿ-ಭಾಯಿ’ ಘೋಷಣೆ ಕೂಗಿದ ವಿಪಕ್ಷ ನಾಯಕರು

ತತ್ವಸಿದ್ದಾಂತಗಳ ಮೇಲಿನ ಅವರ ಬದ್ಧತೆಯನ್ನು ಸಾಕಷ್ಟು ಜನರು ಶ್ಲಾಘಿಸಿ, ಸುಕೀರ್ತರಾಣಿಯನ್ನು ಹೊಗಳಿದ್ದಾರೆ.

”ಅದಾನಿ ಪ್ರಾಯೋಜಿತ ಪ್ರಶಸ್ತಿಯನ್ನು ತಿರಸ್ಕರಿಸಿದ್ದಕ್ಕಾಗಿ ಸುಕೀರ್ತರಾಣಿಗೆ ಧನ್ಯವಾದಗಳು. ಈ ರೀತಿ ಮಾಡಲು ಸಾಕಷ್ಟು ಧೈರ್ಯ ಮತ್ತು ದೃಢತೆ ಬೇಕು. ನೀವು ಮುಂದುವರಿಸಿ, ನಿಮ್ಮ ಜೊತೆ ನಾವಿದ್ದೇವೆ” ಎಂದು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ನ ರಾಷ್ಟ್ರೀಯ ಕಾರ್ಯದರ್ಶಿ ಕವಿತಾ ಶ್ರೀವಾಸ್ತವ ಹೇಳಿದ್ದಾರೆ.

ಸುಕೀರ್ತರಾಣಿ ಆರು ಕವನ ಸಂಕಲನಗಳನ್ನು ಬರೆದಿದ್ದಾರೆ:- ಕೈಪತ್ರಿ ಯೇನ್ ಕನವು ಕೇಲ್, ಇರವು ಮಿರುಗಂ, ಕಾಮತ್ತಿಪೂ, ತೀಂಡಪದತ ಮುತ್ತಂ, ಅವಳೈ ಮೋಜಿಪೆಯರ್ತಲ್ ಮತ್ತು ಇಪ್ಪಡಿಕ್ಕು ಯೇವಲ್. ಅವರ ಕವನಗಳು ಇಂಗ್ಲಿಷ್, ಮಲಯಾಳಂ, ಕನ್ನಡ, ಹಿಂದಿ ಮತ್ತು ಜರ್ಮನ್ ಭಾಷೆಗಳಿಗೆ ಅನುವಾದಗೊಂಡಿವೆ. ಅವರಿಗೆ ತೇವಮಗಲ್ ಕವಿತೂವಿ ಪ್ರಶಸ್ತಿ, ಪುದುಮೈಪಿತ್ತನ್ ಸ್ಮಾರಕ ಪ್ರಶಸ್ತಿ ಮತ್ತು ಪೆಂಗಲ್ ಮುನ್ನಾನಿಯ ಮಹಿಳಾ ಸಾಧಕಿ ಪ್ರಶಸ್ತಿ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...