Homeಮುಖಪುಟಅದಾನಿ ಗ್ರೂಪ್ ಪ್ರಾಯೋಜಿತ ಪ್ರಶಸ್ತಿ ನಿರಾಕರಿಸಿದ ದಲಿತ ಕವಯಿತ್ರಿ, ಸ್ತ್ರೀವಾದಿ ಸುಕೀರ್ತರಾಣಿ

ಅದಾನಿ ಗ್ರೂಪ್ ಪ್ರಾಯೋಜಿತ ಪ್ರಶಸ್ತಿ ನಿರಾಕರಿಸಿದ ದಲಿತ ಕವಯಿತ್ರಿ, ಸ್ತ್ರೀವಾದಿ ಸುಕೀರ್ತರಾಣಿ

- Advertisement -
- Advertisement -

ಸಮಾರಂಭದ ಮುಖ್ಯ ಪ್ರಾಯೋಜಕರು ಅದಾನಿ ಗ್ರೂಪ್ ಆಗಿರುವುದರಿಂದ, ದಲಿತ ಕವಯಿತ್ರಿ ಮತ್ತು ಸ್ತ್ರೀವಾದಿ ಸುಕೀರ್ತರಾಣಿ ಅವರು ದೇವಿ ಪ್ರಶಸ್ತಿಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

ಸುಕೀರ್ತರಾಣಿ ಅವರು ಸಮಕಾಲೀನ ತಮಿಳು ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡುವ ಮೂಲಕ ಹೆಸರುವಾಸಿಯಾಗಿದ್ದಾರೆ. ಅವರು ಪ್ರಾಯೋಜಿಸಿದ ಯಾವುದೇ ಪ್ರಶಸ್ತಿಗಳನ್ನು ಸ್ವೀಕರಿಸುವುದು ತನ್ನ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಎಂದು ಸುಕೀರ್ತರಾಣಿ ಹೇಳಿದ್ದಾರೆ. ಫೆಬ್ರವರಿ 4 ರ ಶನಿವಾರದಂದು ಪ್ರಶಸ್ತಿಯನ್ನು ತ್ಯಜಿಸಿರುವುದಾಗಿ ಅವರು ಫೇಸ್‌ಬುಕ್ ಪೋಸ್ಟ್‌ ಮಾಡಿದ್ದಾರೆ.

ಈ ಪ್ರಶಸ್ತಿಗೆ ದೇಶದಾದ್ಯಂತದ ಕೇವಲ ಹನ್ನೆರಡು ಮಹಿಳೆಯರನ್ನು ಆಯ್ಕೆ ಮಾಡಲಾಗಿದೆ. ಅವರಲ್ಲಿ ನನಗೆ ದಲಿತ ಸಾಹಿತ್ಯಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಪ್ರಶಸ್ತಿ ನೀಡಲು ಮುಂದಾಗಿದ್ದಕ್ಕೆ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಸುಕೀರ್ತರಾಣಿ ಅವರು ಧನ್ಯವಾದ ಅರ್ಪಿಸಿದ್ದಾರೆ.  ಆದರೆ, “ಈ ಕಾರ್ಯಕ್ರಮದ ಮುಖ್ಯ ಪ್ರಾಯೋಜಕರು ಅದಾನಿ ಎಂದು ನನಗೆ ನಿನ್ನೆಯಷ್ಟೇ ತಿಳಿಯಿತು, ಅದಾನಿ ಗ್ರೂಪ್‌ನಿಂದ ಆರ್ಥಿಕವಾಗಿ ಬೆಂಬಲಿತವಾಗಿರುವ ಸಂಸ್ಥೆಯಿಂದ ಪ್ರಶಸ್ತಿ ಸ್ವೀಕರಿಸಲು ನನಗೆ ಇಷ್ಟವಿಲ್ಲ ಏಕೆಂದರೆ, ನಾನು ಮಾತನಾಡುವ ರಾಜಕೀಯ ವಿಚಾರಗಳು ಮತ್ತು ನಾನು ನಂಬಿರುವ ಸಿದ್ಧಾಂತಗಳು ಬೇರೆ ಹಾಗಾಗಿ ನಾನು ದೇವಿ ಪ್ರಶಸ್ತಿಗಳನ್ನು ಸ್ವೀಕರಿಸಲು ನಿರಾಕರಿಸುತ್ತೇನೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ‘ಮೋದಿ-ಅದಾನಿ ಭಾಯಿ-ಭಾಯಿ’ ಘೋಷಣೆ ಕೂಗಿದ ವಿಪಕ್ಷ ನಾಯಕರು

ತತ್ವಸಿದ್ದಾಂತಗಳ ಮೇಲಿನ ಅವರ ಬದ್ಧತೆಯನ್ನು ಸಾಕಷ್ಟು ಜನರು ಶ್ಲಾಘಿಸಿ, ಸುಕೀರ್ತರಾಣಿಯನ್ನು ಹೊಗಳಿದ್ದಾರೆ.

”ಅದಾನಿ ಪ್ರಾಯೋಜಿತ ಪ್ರಶಸ್ತಿಯನ್ನು ತಿರಸ್ಕರಿಸಿದ್ದಕ್ಕಾಗಿ ಸುಕೀರ್ತರಾಣಿಗೆ ಧನ್ಯವಾದಗಳು. ಈ ರೀತಿ ಮಾಡಲು ಸಾಕಷ್ಟು ಧೈರ್ಯ ಮತ್ತು ದೃಢತೆ ಬೇಕು. ನೀವು ಮುಂದುವರಿಸಿ, ನಿಮ್ಮ ಜೊತೆ ನಾವಿದ್ದೇವೆ” ಎಂದು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ನ ರಾಷ್ಟ್ರೀಯ ಕಾರ್ಯದರ್ಶಿ ಕವಿತಾ ಶ್ರೀವಾಸ್ತವ ಹೇಳಿದ್ದಾರೆ.

ಸುಕೀರ್ತರಾಣಿ ಆರು ಕವನ ಸಂಕಲನಗಳನ್ನು ಬರೆದಿದ್ದಾರೆ:- ಕೈಪತ್ರಿ ಯೇನ್ ಕನವು ಕೇಲ್, ಇರವು ಮಿರುಗಂ, ಕಾಮತ್ತಿಪೂ, ತೀಂಡಪದತ ಮುತ್ತಂ, ಅವಳೈ ಮೋಜಿಪೆಯರ್ತಲ್ ಮತ್ತು ಇಪ್ಪಡಿಕ್ಕು ಯೇವಲ್. ಅವರ ಕವನಗಳು ಇಂಗ್ಲಿಷ್, ಮಲಯಾಳಂ, ಕನ್ನಡ, ಹಿಂದಿ ಮತ್ತು ಜರ್ಮನ್ ಭಾಷೆಗಳಿಗೆ ಅನುವಾದಗೊಂಡಿವೆ. ಅವರಿಗೆ ತೇವಮಗಲ್ ಕವಿತೂವಿ ಪ್ರಶಸ್ತಿ, ಪುದುಮೈಪಿತ್ತನ್ ಸ್ಮಾರಕ ಪ್ರಶಸ್ತಿ ಮತ್ತು ಪೆಂಗಲ್ ಮುನ್ನಾನಿಯ ಮಹಿಳಾ ಸಾಧಕಿ ಪ್ರಶಸ್ತಿ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...