Homeಮುಖಪುಟಬನಾರಸ್ ಹಿಂದೂ ವಿವಿಯಲ್ಲಿ ದಲಿತ ಪ್ರಾಧ್ಯಾಪಕಿಗೆ ಕಿರುಕುಳ, ಹಲ್ಲೆ

ಬನಾರಸ್ ಹಿಂದೂ ವಿವಿಯಲ್ಲಿ ದಲಿತ ಪ್ರಾಧ್ಯಾಪಕಿಗೆ ಕಿರುಕುಳ, ಹಲ್ಲೆ

- Advertisement -
- Advertisement -

ಬನಾರಸ್ ಹಿಂದೂ ವಿವಿಯಲ್ಲಿ ದಲಿತ ಸಮುದಾಯದ ಸಹಾಯಕ ಪ್ರಾಧ್ಯಾಪಕಿ ಇಬ್ಬರು ಸಹಪ್ರಾಧ್ಯಾಪಕರು, ಮತ್ತು ಇಬ್ಬರು ವಿದ್ಯಾರ್ಥಿಗಳ ವಿರುದ್ಧ ಹಲ್ಲೆ, ಕಿರುಕುಳ ಮತ್ತು ಅವಮಾನ ಮಾಡಿದ್ದಾರೆಂದು ವಾರಣಾಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತು ಮೇ. 22ರಂದು ವಾರಣಾಸಿ ಪೊಲೀಸರಿಗೆ ಸಹಾಯಕ ಪ್ರಾಧ್ಯಾಪಕಿ ದೂರು ನೀಡಿದ್ದು, ಆ.27ರವರೆಗೆ ಪೊಲೀಸರು ಕೇಸ್ ದಾಖಲಿಸಲು ನಿರಾಕರಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸರು, ಇಬ್ಬರು ಸಹಾಯಕ ಪ್ರಾಧ್ಯಾಪಕರು ಸೇರಿ ನಾಲ್ವರ ವಿರುದ್ಧ ಪ್ರಾಥಮಿಕ ತನಿಖೆಯ ನಂತರ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಆರೋಪಿಗಳಲ್ಲಿ ಅವರದೇ ಡಿಪಾರ್ಟ್‌ಮೆಂಟ್‌ನ ಇಬ್ಬರು ಪ್ರಾಧ್ಯಾಪಕರಿದ್ದು, ಅವರು ನನ್ನನ್ನು ತೆಗೆದು ಹಾಕಿ ದಿನನಿತ್ಯ ಕ್ಯಾಂಪಸ್‌ಗೆ ಸುತ್ತು ಬರುವಂತೆ ಮಾಡುವ ಬಗ್ಗೆ ಮಾತನಾಡುತ್ತಿದ್ದರು ಎಂದು ಹೇಳಿದ್ದಾರೆ.

ಮೇ 22 ರಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಓರ್ವ ಪ್ರಾಧ್ಯಾಪಕ ನನ್ನ ಚೇಂಬರ್‌ಗೆ ಬಂದು ನನ್ನನ್ನು ನನ್ನ ಹುದ್ದೆಯಿಂದ ತೆಗೆದುಹಾಕುವುದಾಗಿ ಮತ್ತು ನನ್ನನ್ನು ಕೊಲ್ಲುವುದಾಗಿ ಹೇಳಿದರು. ನಾನು ನನ್ನ ಚೇಂಬರ್‌ನಿಂದ ಹೊರಗೆ ಬಂದೆ ಮತ್ತು ನಂತರ ಇತರ ಆರೋಪಿಗಳು ವಿಭಾಗದ ಕೊಠಡಿಯ ಬಾಗಿಲು ಮುಚ್ಚಿದರು. ಒಬ್ಬ ವ್ಯಕ್ತಿ ನನ್ನನ್ನು ಹಿಡಿದುಕೊಂಡು ನನ್ನ ಬಟ್ಟೆಗಳನ್ನು ಹರಿದ ನಂತರ ನನ್ನೊಂದಿಗೆ ಅನುಚಿತವಾಗಿ ವರ್ತಿಸಲು ಪ್ರಯತ್ನಿಸಿದನು. ಇನ್ನೊಬ್ಬರು ಈ ಕುರಿತ ದೃಶ್ಯವನ್ನು ರೆಕಾರ್ಡ್ ಮಾಡಿದ್ದಾರೆ. ಬಳಿಕ ನನಗೆ ಒದೆಯಲಾಗಿದೆ ಮತ್ತು ಹಲ್ಲೆ ನಡೆಸಲಾಗಿದೆ ಎಂದು ಪ್ರಾಧ್ಯಾಪಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ನಾನು ಜೋರಾಗಿ ಕೂಗಿದ ನಂತರ ಕೆಲವರು ಬಂದು ನನ್ನನ್ನು ರಕ್ಷಿಸಿದರು. ಈ ದೂರಿನ ಜೊತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಲಗತ್ತಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಾಧ್ಯಾಪಕಿ,  ನಾನು ದಲಿತೆ ಎಂಬ ಕಾರಣಕ್ಕೆ ನನ್ನನ್ನು ಗುರಿಯಾಗಿಸಲಾಗುತ್ತಿದೆ. ಕೆಲವರನ್ನು ಅವರ ಪೋಸ್ಟ್‌ನಿಂದ ತೆಗೆದುಹಾಕಲು ನಾನು ನಿರಾಕರಿಸಿದ ಮೇಲೆ ನನಗೆ ಇವರು ಸಮಸ್ಯೆ ಮಾಡುತ್ತಿದ್ದಾರೆ. ಅವರು ನನ್ನ ಮೇಲೆ ಒತ್ತಡ ಹೇರುತ್ತಿದ್ದರು ಮತ್ತು ನಾನು ನಿರಾಕರಿಸಿದೆ. ನಂತರ ಅವರು ಈ ರೀತಿ ನನ್ನ ಜೊತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನು ಈ ಕುರಿತು ಹಲವು ದೂರಗಳನ್ನು ನೀಡಿದ್ದೆ, ಆದರೆ ಮುಖ್ಯಮಂತ್ರಿಳಿಗೆ, ಎಸ್‌ಸಿ- ಎಸ್‌ಟಿ ಕಮಿಷನ್ ಗೆ ಮತ್ತು ಹೆಚ್‌ಆರ್‌ಡಿ ಮಿನಿಸ್ಟರ್‌ಗೆ ದೂರು ನೀಡಿದ ಬಳಿಕ ಮಾತ್ರ ಕೇಸ್ ದಾಖಲಿಸಲಾಗಿದೆ ಎಂದು ಸಂತ್ರಸ್ತೆ ಪ್ರಾಧ್ಯಾಪಕಿ ಆರೋಪಿಸಿದ್ದಾರೆ.

ಈ ಕುರಿತು ಬಿಹೆಚ್‌ಯು ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರತಿಕ್ರಿಯಿಸಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಆರೋಪಿತ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 342, 354-ಬಿ , 504 (ಉದ್ದೇಶಪೂರ್ವಕ ಅವಮಾನ) 506 (ಅಪರಾಧ ಬೆದರಿಕೆ) ಮತ್ತು SC ಮತ್ತು ST (ದೌರ್ಜನ್ಯ ತಡೆ) ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿ: ದೆಹಲಿ: ವಿವಿ ಕ್ಯಾಂಪೆಸ್‌ಗೆ ನುಗ್ಗಿ ಎಬಿವಿಪಿ ಕಾರ್ಯಕರ್ತರಿಂದ ದಾಂಧಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...