Homeಕರ್ನಾಟಕಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದಲಿತ ಪ್ರಾಧ್ಯಾಪಕರಿಗೆ ತಾರತಮ್ಯ ಆರೋಪ: ಕುಲಪತಿ ರಾಜೀನಾಮೆಗೆ ಆಗ್ರಹ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದಲಿತ ಪ್ರಾಧ್ಯಾಪಕರಿಗೆ ತಾರತಮ್ಯ ಆರೋಪ: ಕುಲಪತಿ ರಾಜೀನಾಮೆಗೆ ಆಗ್ರಹ

- Advertisement -
- Advertisement -

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ (ಬೆಂವಿವಿ) ದಲಿತ ಸಮುದಾಯದ ಪ್ರಾಧ್ಯಾಪಕರಿಗೆ ಬಡ್ತಿ ಮತ್ತು ಅಧಿಕಾರ ಹಂಚಿಕೆಯಲ್ಲಿ ವ್ಯಾಪಕ ತಾರತಮ್ಯ ನಡೆಯುತ್ತಿದೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ವಿಶ್ವವಿದ್ಯಾಲಯಗಳ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ದಲಿತ ಪ್ರಾಧ್ಯಾಪಕರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಸ್ನಾತಕೋತ್ತರ ಮತ್ತು ಸಂಶೋಧನ ವಿದ್ಯಾರ್ಥಿಗಳ ಒಕ್ಕೂಟದ ವಿದ್ಯಾರ್ಥಿ ನಾಯಕ ಚಂದ್ರು ಪೆರಿಯಾರ್ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕುಲಪತಿ ಡಾ. ಜಯಕರ ಎಸ್.ಎಂ. ಅವರನ್ನು ತಕ್ಷಣ ಹುದ್ದೆಯಿಂದ ಹಿಂತೆಗೆದುಕೊಳ್ಳುವಂತೆ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಂದ್ರು ಪೆರಿಯಾರ್, ರೋಸ್ಟರ್ ನಿಯಮಗಳನ್ನು ಮೀರಿ ದಲಿತ ಸಮುದಾಯದ ಪ್ರತಿಭಾವಂತ ಪ್ರಾಧ್ಯಾಪಕರನ್ನು ಕಡೆಗಣಿಸಿ, ಹೊರಗಿನಿಂದ ಐವರು ಬಲಾಢ್ಯ ಜಾತಿಗಳಿಗೆ ಸೇರಿದ ಪ್ರಾಧ್ಯಾಪಕರನ್ನು ವರ್ಗಾವಣೆ ಮಾಡಿಕೊಳ್ಳಲಾಗಿದೆ ಎಂದು ದೂರಿದರು. ಬೆಂವಿವಿ ಸ್ಥಾಪನೆಯಾದಾಗಿನಿಂದಲೂ ಒಬ್ಬರೂ ದಲಿತರು ಕುಲಪತಿಯಾಗಿಲ್ಲ. “ಇದು ದಲಿತರ ಮೇಲಿನ ಅಸಹನೆಗೆ ಹಿಡಿದ ಕನ್ನಡಿ” ಎಂದು ಅವರು ಬೇಸರ ವ್ಯಕ್ತಪಡಿಸಿದರು.

ನಿಯಮಬಾಹಿರ ಕಾರ್ಯನಿರ್ವಹಣೆ ಮತ್ತು ದಲಿತ ವಿರೋಧಿ ಧೋರಣೆ:

ಕುಲಪತಿ ರಜೆಯಲ್ಲಿರುವಾಗ ಅವರ ಜವಾಬ್ದಾರಿಯನ್ನು ಹಿರಿಯ ಡೀನ್‌ಗೆ ವಹಿಸುವುದು ನಿಯಮ. ಆದರೆ, ಬೆಂವಿವಿಯಲ್ಲಿರುವ ಎಲ್ಲಾ ಹಿರಿಯ ಡೀನ್‌ಗಳು ದಲಿತ ಸಮುದಾಯಕ್ಕೆ ಸೇರಿರುವ ಕಾರಣಕ್ಕಾಗಿ ಅವರಿಗೆ ಉಸ್ತುವಾರಿ ನೀಡದೆ, ಕುಲಸಚಿವರಿಗೆ ನೀಡಲಾಗಿದೆ ಎಂದು ಚಂದ್ರು ಪೆರಿಯಾರ್ ಹೇಳಿದರು. “ಇದು ಕಾನೂನು ಬಾಹಿರವಷ್ಟೇ ಅಲ್ಲದೆ, ಕುಲಪತಿಗೆ ದಲಿತರ ಮೇಲಿರುವ ಅಸಹನೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಅಲ್ಲದೆ, ದಲಿತ ವಿತ್ತಾಧಿಕಾರಿಗಳ ಅಧಿಕಾರವನ್ನು ಕಟ್ಟಡ ನವೀಕರಣದ ನೆಪವೊಡ್ಡಿ ಸುಮಾರು ಒಂದು ವರ್ಷಗಳ ಕಾಲ ‘ಒಂದೇ ಸೂರಿನ ತತ್ವ’ದಡಿ ಕುಲಸಚಿವರಿಗೆ ವಹಿಸಲಾಗಿದೆ. ದಲಿತ ಅತಿಥಿ ಉಪನ್ಯಾಸಕರನ್ನು ವಿನಾ ಕಾರಣ ಕೆಲಸದಿಂದ ತೆಗೆದುಹಾಕಿ, ವರ್ಷಾನುಗಟ್ಟಲೆ ಸಂಬಳ ನೀಡದೆ ವಂಚಿಸಲಾಗಿದೆ. ಇದರಿಂದ ಕೆಲವರು ಜೀವನ ಭದ್ರತೆ ಇಲ್ಲದೆ ಮಾನಸಿಕವಾಗಿ ಕುಗ್ಗಿ ಆಸ್ಪತ್ರೆ ಸೇರಿದ್ದಾರೆ ಎಂದೂ ಚಂದ್ರು ಪೆರಿಯಾರ್ ಆರೋಪಿಸಿದರು. “ಇಷ್ಟೆಲ್ಲಾ ಆದಮೇಲೆ ಕುಲಪತಿಯವರಿಂದ ನ್ಯಾಯ ಸಿಗಲಿದೆ ಎಂದು ಕಾಯುವುದರಲ್ಲಿ ಅರ್ಥವಿಲ್ಲ. ಕುಲಪತಿಯವರು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಬೇಕು” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

“ಬೆಂವಿವಿ ಜಾತಿಯತೆ ಬಿತ್ತುವ ಸಂಸ್ಥೆಯಾಗಿದೆ”: ಶಿವಶಂಕರ್

ರಾಜ್ಯ ಸರ್ಕಾರಿ ಎಸ್‌ಸಿ-ಎಸ್‌ಟಿ ನೌಕರರ ಸಮಿತಿಯ ಅಧ್ಯಕ್ಷ ಶಿವಶಂಕರ್ ಮಾತನಾಡಿ, ಹಿಂದೆ ಎಚ್. ನರಸಿಂಹಯ್ಯ, ಜಿ.ಎಸ್. ಶಿವರುದ್ರಪ್ಪ, ಸಿದ್ದಲಿಂಗಯ್ಯ, ಬರಗೂರು ರಾಮಚಂದ್ರಪ್ಪ ಅವರಂತಹ ಮಹನೀಯರು ಕೆಲಸ ಮಾಡಿದ ಬೆಂವಿವಿಯಲ್ಲಿ ವೈಜ್ಞಾನಿಕತೆ, ವೈಚಾರಿಕತೆ, ಸಮಾಜಮುಖಿ ಚಿಂತನೆಗಳು ಬಿತ್ತರವಾಗುತ್ತಿದ್ದವು. ಆದರೆ ಈಗ ವಿಶ್ವವಿದ್ಯಾಲಯವು ಜಾತಿಯತೆ ಮತ್ತು ಕೋಮುವಾದವನ್ನು ಬಿತ್ತುವ ಸಂಸ್ಥೆಯಾಗಿ ಮಾರ್ಪಾಡಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

“67 ಪ್ರಾಧ್ಯಾಪಕರು ಜಾತಿ ತಾರತಮ್ಯ ನಡೆಯುತ್ತಿದೆ ಎಂದು ಸಹಿ ಮಾಡಿದರೂ, ಕುಲಪತಿ ಅಸಡ್ಡೆ ತೋರುತ್ತಿರುವುದು ದುರಂತ. ವಿಶ್ವವಿದ್ಯಾಲಯದ ಅವ್ಯವಸ್ಥೆ ಮತ್ತು ಜಾತಿ ತಾರತಮ್ಯದ ಕುರಿತು ತಕ್ಷಣ ತನಿಖೆ ನಡೆಸಬೇಕು” ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ನಟ ಚೇತನ್ ಅಹಿಂಸಾ, ದಲಿತ ಹಕ್ಕುಗಳ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜಣ್ಣ ಮತ್ತು ಜ್ಞಾನೇಶ್ವರ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ದೇವನಹಳ್ಳಿ ಹೋರಾಟ: “ನಾನು ದಲಿತರ ಹುಡುಗ, ನನ್ನ  ನಾಯಕತ್ವವನ್ನು ಎಲ್ಲ ಸಮುದಾಯಗಳೂ ಒಪ್ಪಿಕೊಂಡವು” – ಕಾರಳ್ಳಿ ಶ್ರೀನಿವಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...