Homeಮುಖಪುಟಲೋಕಸಭಾ ಚುನಾವಣೆ: ತಮಿಳುನಾಡಿನಲ್ಲಿ ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟ ದಲಿತರು

ಲೋಕಸಭಾ ಚುನಾವಣೆ: ತಮಿಳುನಾಡಿನಲ್ಲಿ ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟ ದಲಿತರು

ಪ್ರಬಲ ಜಾತಿಯವರು ಅವಕಾಶ ಸಿಕ್ಕಾಗಲೆಲ್ಲ ದಾಳಿ ನಡೆಸುವ ತಂತ್ರ ಹೆಣೆಯುತ್ತಿದ್ದಾರೆ. ಇದರಿಂದ ನಾವು ಭಯಭೀತರಾಗಿದ್ದೇವೆ ಎಂದ ಗ್ರಾಮಸ್ಥರು

- Advertisement -
- Advertisement -

ಮೇಲ್ಪತಿ ಗ್ರಾಮದ ದಲಿತರ ವಸತಿ ಪ್ರದೇಶದಲ್ಲಿ ವಾಸಿಸುವ 450 ಕ್ಕೂ ಹೆಚ್ಚು ಮತದಾರರು ಈಗಿರುವ ಮತಗಟ್ಟೆಗೆ ಹೋಗಲು ಜಾತಿ ಹಿಂದೂ ಪ್ರದೇಶವನ್ನು ಪ್ರವೇಶಿಸುವ ಭಯದಿಂದ ಪ್ರತ್ಯೇಕ ಮತಗಟ್ಟೆಗೆ ಒತ್ತಾಯಿಸಿದ್ದಾರೆ. ಏಪ್ರಿಲ್ 2023 ರಲ್ಲಿ, ಗ್ರಾಮದ ದ್ರೌಪದಿ ಅಮ್ಮನ್ ದೇವಸ್ಥಾನಕ್ಕೆ ಪ್ರವೇಶಿಸಿದ್ದಕ್ಕಾಗಿ ಹಲವಾರು ದಲಿತ ನಿವಾಸಿಗಳ ಮೇಲೆ ದೈಹಿಕ ಹಲ್ಲೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಲಾಯಿತು.

ತಮಿಳುನಾಡಿನ ಮೇಲ್ಪತಿ ಗ್ರಾಮದ 450ಕ್ಕೂ ಹೆಚ್ಚು ದಲಿತ ಮತದಾರರು ತಮಗೆ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಪ್ರತ್ಯೇಕ ಮತಗಟ್ಟೆ ನೀಡುವಂತೆ ಒತ್ತಾಯಿಸಿದ್ದಾರೆ.

2023ರ ಏಪ್ರಿಲ್‌ನಲ್ಲಿ ಗ್ರಾಮದ ದ್ರೌಪದಿ ಅಮ್ಮನ್ ದೇವಸ್ಥಾನಕ್ಕೆ ದಲಿತರು ಪ್ರವೇಶಿಸಿದ್ದಕ್ಕಾಗಿ, ಅವರ ಮೇಲೆ ಹಲ್ಲೆ, ಜಾತಿ ನಿಂದನೆ ನಡೆದಿತ್ತು. ಹೀಗಾಗಿ, ಈಗ ಮತ ಚಲಾಯಿಸಲು ಗ್ರಾಮದ ಒಳಗೆ ಹೋದರೆ, ಮತ್ತೆ ಪ್ರಬಲ ಜಾತಿಗರು ಹಲ್ಲೆ ನಡೆಸಬಹುದು ಎಂಬ ಭಯ ದಲಿತರನ್ನು ಕಾಡುತ್ತಿದೆ.

ಶುಕ್ರವಾರ ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ದಲಿತರು, ”ಪ್ರಬಲ ಜಾತಿಯವರು ಅವಕಾಶ ಸಿಕ್ಕಾಗಲೆಲ್ಲ ನಮ್ಮ ಮೇಲೆ ದಾಳಿ ನಡೆಸುವ ತಂತ್ರ ಹೆಣೆಯುತ್ತಿದ್ದಾರೆ. ಇದರಿಂದ ನಾವು ಭಯಭೀತರಾಗಿದ್ದೇವೆ. ಗ್ರಾಮದಲ್ಲಿ ಮತಗಟ್ಟೆಯು ಪ್ರಬಲ ಜಾತಿಗರಿರುವ ಪ್ರದೇಶದಲ್ಲಿದೆ. ಮತದಾನದ ದಿನ ನಾವು ಅಲ್ಲಿಗೆ ಹೋಗುವುದು ಸುರಕ್ಷಿತವಲ್ಲ. ಹೀಗಾಗಿ, ನಮಗೆ ಮತ ಚಲಾಯಿಸಲು ಪ್ರತ್ಯೇಕ ಮತಗಟ್ಟೆ ಬೇಕು” ಎಂದು ಒತ್ತಾಯಿಸಿದ್ದಾರೆ.

“ನಾವು ಪ್ರತ್ಯೇಕ ಮತಗಟ್ಟೆ ಕೇಳುತ್ತಿರುವುದು ಭಯದಿಂದಲ್ಲ. ಆದರೆ, ನಮ್ಮ ಆತ್ಮಗೌರವ ಮತ್ತು ಘನತೆಯನ್ನು ಕಾಪಾಡುವುದಕ್ಕಾಗಿ. ಒಂದು ವರ್ಷದ ಹಿಂದೆ, ದೇವಸ್ಥಾನಕ್ಕೆ ಪ್ರವೇಶಿಸಿದ ಕಾರಣಕ್ಕೆ ಪ್ರಬಲ ಜಾತಿಗರು ಅಟ್ಟಿಸಿಕೊಂಡು ಬಂದು ಹಲ್ಲೆ ನಡೆಸಿದ್ದರು. ನಂತರ, ನಾವು ಅವರಿಂದ ದೂರ ಉಳಿದಿದ್ದೇವೆ” ಎಂದು ಗ್ರಾಮದ ದಲಿತ ನಿವಾಸಿಯೊಬ್ಬರು ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಪ್ರಬಲ ಜಾತಿಯವರು ನಮ್ಮನ್ನು ಕೃಷಿ ಕಾರ್ಮಿಕರಾಗಿ ನೇಮಿಸಿಕೊಳ್ಳುವುದನ್ನೂ ನಿಲ್ಲಿಸಿದ್ದಾರೆ. ನಮ್ಮ ಮೇಲಿನ ಹಿಂಸಾಚಾರ ಮತ್ತು ಜಾತಿ ತಾರತಮ್ಯಕ್ಕಾಗಿ ಬಲಿಷ್ಠ ಜಾತಿಯವರಲ್ಲಿ ಯಾರನ್ನೂ ಈವರೆಗೆ ಬಂಧಿಸಿಲ್ಲ. ಘಟನೆಯನ್ನು ನಿಭಾಯಿಸುವಲ್ಲಿ ಸರ್ಕಾರದ ನಿಷ್ಕ್ರಿಯತೆ ಮತ್ತು ಪೊಲೀಸರ ನಿರಾಸಕ್ತಿ ತೋರಿದ್ದಾರೆ. ಹೀಗಾಗಿ, ಮತದಾನದ ದಿನದಂದು ಆಡಳಿತಗಳು ಒದಗಿಸಿದ ಭದ್ರತೆಯ ಬಗ್ಗೆ ನಮಗೆ ಅಪನಂಬಿಕೆ ಇದೆ. ನಾವು ಮತ್ತೆ ಅದೇ ನೋವನ್ನು ಅನುಭವಿಸಲು ಚುನಾವಣೆ ಕಾರಣವಾಗಬಾರದು” ಎಂದು ಅವರು ತಿಳಿಸಿದ್ದಾರೆ.

“ಹೊಸ ಬೂತ್ ಸ್ಥಾಪಿಸಲು ಸಾಧ್ಯವಾಗದಿದ್ದರೆ, ನಾವು ಜಿಲ್ಲಾಕೇಂದ್ರದಲ್ಲಿಯೇ ಮತ ಚಲಾಯಿಸುತ್ತೇವೆ. ಮತದಾನದ ದಿನ ಅಲ್ಲಿಗೆ ಹೋಗಲು ನಮ್ಮ ಸ್ವಂತ ಹಣವನ್ನು ಖರ್ಚು ಮಾಡುತ್ತೇವೆ. ಕೇವಲ ದೇವಸ್ಥಾನವನ್ನು ಪ್ರವೇಶಿಸಿದ್ದಕ್ಕಾಗಿ ನಾವು ಅವಮಾನಕ್ಕೊಳಗಾದ ಊರಿಗೆ (ಜಾತಿ ಹಿಂದೂ ಪ್ರದೇಶ) ನಾವು ಹೋಗುವುದಿಲ್ಲ” ಎಂದು ಗ್ರಾಮದ ದಲಿತ ಮುಖಂಡರು ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಮೇಲ್ಪತಿ ಗ್ರಾಮದ ದಲಿತರು ಪ್ರತ್ಯೇಕ ಮತಗಟ್ಟೆಗಾಗಿ ಪ್ರಸ್ತಾಪಿಸಿದ್ದಾರೆ. ಆದರೆ, ಮತದಾರರ ಸಂಖ್ಯೆ 1,500ಕ್ಕಿಂತ ಹೆಚ್ಚಿದ್ದರೆ ಮಾತ್ರ ಬೂತ್ ಹಂಚಿಕೆ ಮಾಡಬಹುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಮಸ್ಯೆಗೆ ಪ್ರತಿಕ್ರಿಯಿಸಿದರುವ ಜಿಲ್ಲಾಧಿಕಾರಿ ಪಳನಿ, “ನಾವು ಮೇಲ್ಪತಿ ಗ್ರಾಮದ ಮತಗಟ್ಟೆಯನ್ನು ನಿರ್ಣಾಯಕ/ದುರ್ಬಲ ಮತಗಟ್ಟೆ ಎಂದು ಗುರುತಿಸಿದ್ದೇವೆ. ಸಿಆರ್‌ಪಿಎಫ್ ಸಿಬ್ಬಂದಿಯಿಂದ ವಿಶೇಷ ರಕ್ಷಣೆ, ಲೈವ್ ವೆಬ್‌ಕ್ಯಾಮ್ ಕಾಸ್ಟಿಂಗ್, ರಾಜ್ಯ ಪೊಲೀಸ್ ಪಡೆ ಮತ್ತು ಮೈಕ್ರೋ ಅಬ್ಸರ್ವರ್‌ಗಳನ್ನು ನಿಯೋಜಿಸುತ್ತೇವೆ. ದಲಿತರು ಶಾಂತಿಯಿಂದ ಮತ ಚಲಾಯಿಸಬಹುದು. ಯಾವುದೇ ಅನಾಹುತ ಸಂಭವಿಸದಂತೆ ನೋಡಿಕೊಳ್ಳಲಾಗುವುದು. ಇದಲ್ಲದೆ, ಚುನಾವಣೆಯ ದಿನದಂದು ದಲಿತರೊಂದಿಗೆ ಜಗಳವಾದಲ್ಲಿ ಪ್ರಬಲ ಜಾತಿಗರಿಗೆ ಕಠಿಣ ಪೊಲೀಸ್ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ‘ಭಾರತದ ಭೂಮಿಯನ್ನು ಬಾಂಗ್ಲಾಕ್ಕೆ ಕೊಟ್ಟ ಮೋದಿ..’; ಬಿಜೆಪಿ ವಿರುದ್ಧ ಫಾರೂಕ್ ಅಬ್ದುಲ್ಲಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...