Homeಮುಖಪುಟಲೋಕಸಭಾ ಚುನಾವಣೆ: ತಮಿಳುನಾಡಿನಲ್ಲಿ ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟ ದಲಿತರು

ಲೋಕಸಭಾ ಚುನಾವಣೆ: ತಮಿಳುನಾಡಿನಲ್ಲಿ ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟ ದಲಿತರು

ಪ್ರಬಲ ಜಾತಿಯವರು ಅವಕಾಶ ಸಿಕ್ಕಾಗಲೆಲ್ಲ ದಾಳಿ ನಡೆಸುವ ತಂತ್ರ ಹೆಣೆಯುತ್ತಿದ್ದಾರೆ. ಇದರಿಂದ ನಾವು ಭಯಭೀತರಾಗಿದ್ದೇವೆ ಎಂದ ಗ್ರಾಮಸ್ಥರು

- Advertisement -
- Advertisement -

ಮೇಲ್ಪತಿ ಗ್ರಾಮದ ದಲಿತರ ವಸತಿ ಪ್ರದೇಶದಲ್ಲಿ ವಾಸಿಸುವ 450 ಕ್ಕೂ ಹೆಚ್ಚು ಮತದಾರರು ಈಗಿರುವ ಮತಗಟ್ಟೆಗೆ ಹೋಗಲು ಜಾತಿ ಹಿಂದೂ ಪ್ರದೇಶವನ್ನು ಪ್ರವೇಶಿಸುವ ಭಯದಿಂದ ಪ್ರತ್ಯೇಕ ಮತಗಟ್ಟೆಗೆ ಒತ್ತಾಯಿಸಿದ್ದಾರೆ. ಏಪ್ರಿಲ್ 2023 ರಲ್ಲಿ, ಗ್ರಾಮದ ದ್ರೌಪದಿ ಅಮ್ಮನ್ ದೇವಸ್ಥಾನಕ್ಕೆ ಪ್ರವೇಶಿಸಿದ್ದಕ್ಕಾಗಿ ಹಲವಾರು ದಲಿತ ನಿವಾಸಿಗಳ ಮೇಲೆ ದೈಹಿಕ ಹಲ್ಲೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಲಾಯಿತು.

ತಮಿಳುನಾಡಿನ ಮೇಲ್ಪತಿ ಗ್ರಾಮದ 450ಕ್ಕೂ ಹೆಚ್ಚು ದಲಿತ ಮತದಾರರು ತಮಗೆ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಪ್ರತ್ಯೇಕ ಮತಗಟ್ಟೆ ನೀಡುವಂತೆ ಒತ್ತಾಯಿಸಿದ್ದಾರೆ.

2023ರ ಏಪ್ರಿಲ್‌ನಲ್ಲಿ ಗ್ರಾಮದ ದ್ರೌಪದಿ ಅಮ್ಮನ್ ದೇವಸ್ಥಾನಕ್ಕೆ ದಲಿತರು ಪ್ರವೇಶಿಸಿದ್ದಕ್ಕಾಗಿ, ಅವರ ಮೇಲೆ ಹಲ್ಲೆ, ಜಾತಿ ನಿಂದನೆ ನಡೆದಿತ್ತು. ಹೀಗಾಗಿ, ಈಗ ಮತ ಚಲಾಯಿಸಲು ಗ್ರಾಮದ ಒಳಗೆ ಹೋದರೆ, ಮತ್ತೆ ಪ್ರಬಲ ಜಾತಿಗರು ಹಲ್ಲೆ ನಡೆಸಬಹುದು ಎಂಬ ಭಯ ದಲಿತರನ್ನು ಕಾಡುತ್ತಿದೆ.

ಶುಕ್ರವಾರ ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ದಲಿತರು, ”ಪ್ರಬಲ ಜಾತಿಯವರು ಅವಕಾಶ ಸಿಕ್ಕಾಗಲೆಲ್ಲ ನಮ್ಮ ಮೇಲೆ ದಾಳಿ ನಡೆಸುವ ತಂತ್ರ ಹೆಣೆಯುತ್ತಿದ್ದಾರೆ. ಇದರಿಂದ ನಾವು ಭಯಭೀತರಾಗಿದ್ದೇವೆ. ಗ್ರಾಮದಲ್ಲಿ ಮತಗಟ್ಟೆಯು ಪ್ರಬಲ ಜಾತಿಗರಿರುವ ಪ್ರದೇಶದಲ್ಲಿದೆ. ಮತದಾನದ ದಿನ ನಾವು ಅಲ್ಲಿಗೆ ಹೋಗುವುದು ಸುರಕ್ಷಿತವಲ್ಲ. ಹೀಗಾಗಿ, ನಮಗೆ ಮತ ಚಲಾಯಿಸಲು ಪ್ರತ್ಯೇಕ ಮತಗಟ್ಟೆ ಬೇಕು” ಎಂದು ಒತ್ತಾಯಿಸಿದ್ದಾರೆ.

“ನಾವು ಪ್ರತ್ಯೇಕ ಮತಗಟ್ಟೆ ಕೇಳುತ್ತಿರುವುದು ಭಯದಿಂದಲ್ಲ. ಆದರೆ, ನಮ್ಮ ಆತ್ಮಗೌರವ ಮತ್ತು ಘನತೆಯನ್ನು ಕಾಪಾಡುವುದಕ್ಕಾಗಿ. ಒಂದು ವರ್ಷದ ಹಿಂದೆ, ದೇವಸ್ಥಾನಕ್ಕೆ ಪ್ರವೇಶಿಸಿದ ಕಾರಣಕ್ಕೆ ಪ್ರಬಲ ಜಾತಿಗರು ಅಟ್ಟಿಸಿಕೊಂಡು ಬಂದು ಹಲ್ಲೆ ನಡೆಸಿದ್ದರು. ನಂತರ, ನಾವು ಅವರಿಂದ ದೂರ ಉಳಿದಿದ್ದೇವೆ” ಎಂದು ಗ್ರಾಮದ ದಲಿತ ನಿವಾಸಿಯೊಬ್ಬರು ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಪ್ರಬಲ ಜಾತಿಯವರು ನಮ್ಮನ್ನು ಕೃಷಿ ಕಾರ್ಮಿಕರಾಗಿ ನೇಮಿಸಿಕೊಳ್ಳುವುದನ್ನೂ ನಿಲ್ಲಿಸಿದ್ದಾರೆ. ನಮ್ಮ ಮೇಲಿನ ಹಿಂಸಾಚಾರ ಮತ್ತು ಜಾತಿ ತಾರತಮ್ಯಕ್ಕಾಗಿ ಬಲಿಷ್ಠ ಜಾತಿಯವರಲ್ಲಿ ಯಾರನ್ನೂ ಈವರೆಗೆ ಬಂಧಿಸಿಲ್ಲ. ಘಟನೆಯನ್ನು ನಿಭಾಯಿಸುವಲ್ಲಿ ಸರ್ಕಾರದ ನಿಷ್ಕ್ರಿಯತೆ ಮತ್ತು ಪೊಲೀಸರ ನಿರಾಸಕ್ತಿ ತೋರಿದ್ದಾರೆ. ಹೀಗಾಗಿ, ಮತದಾನದ ದಿನದಂದು ಆಡಳಿತಗಳು ಒದಗಿಸಿದ ಭದ್ರತೆಯ ಬಗ್ಗೆ ನಮಗೆ ಅಪನಂಬಿಕೆ ಇದೆ. ನಾವು ಮತ್ತೆ ಅದೇ ನೋವನ್ನು ಅನುಭವಿಸಲು ಚುನಾವಣೆ ಕಾರಣವಾಗಬಾರದು” ಎಂದು ಅವರು ತಿಳಿಸಿದ್ದಾರೆ.

“ಹೊಸ ಬೂತ್ ಸ್ಥಾಪಿಸಲು ಸಾಧ್ಯವಾಗದಿದ್ದರೆ, ನಾವು ಜಿಲ್ಲಾಕೇಂದ್ರದಲ್ಲಿಯೇ ಮತ ಚಲಾಯಿಸುತ್ತೇವೆ. ಮತದಾನದ ದಿನ ಅಲ್ಲಿಗೆ ಹೋಗಲು ನಮ್ಮ ಸ್ವಂತ ಹಣವನ್ನು ಖರ್ಚು ಮಾಡುತ್ತೇವೆ. ಕೇವಲ ದೇವಸ್ಥಾನವನ್ನು ಪ್ರವೇಶಿಸಿದ್ದಕ್ಕಾಗಿ ನಾವು ಅವಮಾನಕ್ಕೊಳಗಾದ ಊರಿಗೆ (ಜಾತಿ ಹಿಂದೂ ಪ್ರದೇಶ) ನಾವು ಹೋಗುವುದಿಲ್ಲ” ಎಂದು ಗ್ರಾಮದ ದಲಿತ ಮುಖಂಡರು ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಮೇಲ್ಪತಿ ಗ್ರಾಮದ ದಲಿತರು ಪ್ರತ್ಯೇಕ ಮತಗಟ್ಟೆಗಾಗಿ ಪ್ರಸ್ತಾಪಿಸಿದ್ದಾರೆ. ಆದರೆ, ಮತದಾರರ ಸಂಖ್ಯೆ 1,500ಕ್ಕಿಂತ ಹೆಚ್ಚಿದ್ದರೆ ಮಾತ್ರ ಬೂತ್ ಹಂಚಿಕೆ ಮಾಡಬಹುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಮಸ್ಯೆಗೆ ಪ್ರತಿಕ್ರಿಯಿಸಿದರುವ ಜಿಲ್ಲಾಧಿಕಾರಿ ಪಳನಿ, “ನಾವು ಮೇಲ್ಪತಿ ಗ್ರಾಮದ ಮತಗಟ್ಟೆಯನ್ನು ನಿರ್ಣಾಯಕ/ದುರ್ಬಲ ಮತಗಟ್ಟೆ ಎಂದು ಗುರುತಿಸಿದ್ದೇವೆ. ಸಿಆರ್‌ಪಿಎಫ್ ಸಿಬ್ಬಂದಿಯಿಂದ ವಿಶೇಷ ರಕ್ಷಣೆ, ಲೈವ್ ವೆಬ್‌ಕ್ಯಾಮ್ ಕಾಸ್ಟಿಂಗ್, ರಾಜ್ಯ ಪೊಲೀಸ್ ಪಡೆ ಮತ್ತು ಮೈಕ್ರೋ ಅಬ್ಸರ್ವರ್‌ಗಳನ್ನು ನಿಯೋಜಿಸುತ್ತೇವೆ. ದಲಿತರು ಶಾಂತಿಯಿಂದ ಮತ ಚಲಾಯಿಸಬಹುದು. ಯಾವುದೇ ಅನಾಹುತ ಸಂಭವಿಸದಂತೆ ನೋಡಿಕೊಳ್ಳಲಾಗುವುದು. ಇದಲ್ಲದೆ, ಚುನಾವಣೆಯ ದಿನದಂದು ದಲಿತರೊಂದಿಗೆ ಜಗಳವಾದಲ್ಲಿ ಪ್ರಬಲ ಜಾತಿಗರಿಗೆ ಕಠಿಣ ಪೊಲೀಸ್ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ‘ಭಾರತದ ಭೂಮಿಯನ್ನು ಬಾಂಗ್ಲಾಕ್ಕೆ ಕೊಟ್ಟ ಮೋದಿ..’; ಬಿಜೆಪಿ ವಿರುದ್ಧ ಫಾರೂಕ್ ಅಬ್ದುಲ್ಲಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...