Homeಮುಖಪುಟಲೋಕಸಭಾ ಚುನಾವಣೆ: ತಮಿಳುನಾಡಿನಲ್ಲಿ ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟ ದಲಿತರು

ಲೋಕಸಭಾ ಚುನಾವಣೆ: ತಮಿಳುನಾಡಿನಲ್ಲಿ ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟ ದಲಿತರು

ಪ್ರಬಲ ಜಾತಿಯವರು ಅವಕಾಶ ಸಿಕ್ಕಾಗಲೆಲ್ಲ ದಾಳಿ ನಡೆಸುವ ತಂತ್ರ ಹೆಣೆಯುತ್ತಿದ್ದಾರೆ. ಇದರಿಂದ ನಾವು ಭಯಭೀತರಾಗಿದ್ದೇವೆ ಎಂದ ಗ್ರಾಮಸ್ಥರು

- Advertisement -
- Advertisement -

ಮೇಲ್ಪತಿ ಗ್ರಾಮದ ದಲಿತರ ವಸತಿ ಪ್ರದೇಶದಲ್ಲಿ ವಾಸಿಸುವ 450 ಕ್ಕೂ ಹೆಚ್ಚು ಮತದಾರರು ಈಗಿರುವ ಮತಗಟ್ಟೆಗೆ ಹೋಗಲು ಜಾತಿ ಹಿಂದೂ ಪ್ರದೇಶವನ್ನು ಪ್ರವೇಶಿಸುವ ಭಯದಿಂದ ಪ್ರತ್ಯೇಕ ಮತಗಟ್ಟೆಗೆ ಒತ್ತಾಯಿಸಿದ್ದಾರೆ. ಏಪ್ರಿಲ್ 2023 ರಲ್ಲಿ, ಗ್ರಾಮದ ದ್ರೌಪದಿ ಅಮ್ಮನ್ ದೇವಸ್ಥಾನಕ್ಕೆ ಪ್ರವೇಶಿಸಿದ್ದಕ್ಕಾಗಿ ಹಲವಾರು ದಲಿತ ನಿವಾಸಿಗಳ ಮೇಲೆ ದೈಹಿಕ ಹಲ್ಲೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಲಾಯಿತು.

ತಮಿಳುನಾಡಿನ ಮೇಲ್ಪತಿ ಗ್ರಾಮದ 450ಕ್ಕೂ ಹೆಚ್ಚು ದಲಿತ ಮತದಾರರು ತಮಗೆ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಪ್ರತ್ಯೇಕ ಮತಗಟ್ಟೆ ನೀಡುವಂತೆ ಒತ್ತಾಯಿಸಿದ್ದಾರೆ.

2023ರ ಏಪ್ರಿಲ್‌ನಲ್ಲಿ ಗ್ರಾಮದ ದ್ರೌಪದಿ ಅಮ್ಮನ್ ದೇವಸ್ಥಾನಕ್ಕೆ ದಲಿತರು ಪ್ರವೇಶಿಸಿದ್ದಕ್ಕಾಗಿ, ಅವರ ಮೇಲೆ ಹಲ್ಲೆ, ಜಾತಿ ನಿಂದನೆ ನಡೆದಿತ್ತು. ಹೀಗಾಗಿ, ಈಗ ಮತ ಚಲಾಯಿಸಲು ಗ್ರಾಮದ ಒಳಗೆ ಹೋದರೆ, ಮತ್ತೆ ಪ್ರಬಲ ಜಾತಿಗರು ಹಲ್ಲೆ ನಡೆಸಬಹುದು ಎಂಬ ಭಯ ದಲಿತರನ್ನು ಕಾಡುತ್ತಿದೆ.

ಶುಕ್ರವಾರ ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ದಲಿತರು, ”ಪ್ರಬಲ ಜಾತಿಯವರು ಅವಕಾಶ ಸಿಕ್ಕಾಗಲೆಲ್ಲ ನಮ್ಮ ಮೇಲೆ ದಾಳಿ ನಡೆಸುವ ತಂತ್ರ ಹೆಣೆಯುತ್ತಿದ್ದಾರೆ. ಇದರಿಂದ ನಾವು ಭಯಭೀತರಾಗಿದ್ದೇವೆ. ಗ್ರಾಮದಲ್ಲಿ ಮತಗಟ್ಟೆಯು ಪ್ರಬಲ ಜಾತಿಗರಿರುವ ಪ್ರದೇಶದಲ್ಲಿದೆ. ಮತದಾನದ ದಿನ ನಾವು ಅಲ್ಲಿಗೆ ಹೋಗುವುದು ಸುರಕ್ಷಿತವಲ್ಲ. ಹೀಗಾಗಿ, ನಮಗೆ ಮತ ಚಲಾಯಿಸಲು ಪ್ರತ್ಯೇಕ ಮತಗಟ್ಟೆ ಬೇಕು” ಎಂದು ಒತ್ತಾಯಿಸಿದ್ದಾರೆ.

“ನಾವು ಪ್ರತ್ಯೇಕ ಮತಗಟ್ಟೆ ಕೇಳುತ್ತಿರುವುದು ಭಯದಿಂದಲ್ಲ. ಆದರೆ, ನಮ್ಮ ಆತ್ಮಗೌರವ ಮತ್ತು ಘನತೆಯನ್ನು ಕಾಪಾಡುವುದಕ್ಕಾಗಿ. ಒಂದು ವರ್ಷದ ಹಿಂದೆ, ದೇವಸ್ಥಾನಕ್ಕೆ ಪ್ರವೇಶಿಸಿದ ಕಾರಣಕ್ಕೆ ಪ್ರಬಲ ಜಾತಿಗರು ಅಟ್ಟಿಸಿಕೊಂಡು ಬಂದು ಹಲ್ಲೆ ನಡೆಸಿದ್ದರು. ನಂತರ, ನಾವು ಅವರಿಂದ ದೂರ ಉಳಿದಿದ್ದೇವೆ” ಎಂದು ಗ್ರಾಮದ ದಲಿತ ನಿವಾಸಿಯೊಬ್ಬರು ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಪ್ರಬಲ ಜಾತಿಯವರು ನಮ್ಮನ್ನು ಕೃಷಿ ಕಾರ್ಮಿಕರಾಗಿ ನೇಮಿಸಿಕೊಳ್ಳುವುದನ್ನೂ ನಿಲ್ಲಿಸಿದ್ದಾರೆ. ನಮ್ಮ ಮೇಲಿನ ಹಿಂಸಾಚಾರ ಮತ್ತು ಜಾತಿ ತಾರತಮ್ಯಕ್ಕಾಗಿ ಬಲಿಷ್ಠ ಜಾತಿಯವರಲ್ಲಿ ಯಾರನ್ನೂ ಈವರೆಗೆ ಬಂಧಿಸಿಲ್ಲ. ಘಟನೆಯನ್ನು ನಿಭಾಯಿಸುವಲ್ಲಿ ಸರ್ಕಾರದ ನಿಷ್ಕ್ರಿಯತೆ ಮತ್ತು ಪೊಲೀಸರ ನಿರಾಸಕ್ತಿ ತೋರಿದ್ದಾರೆ. ಹೀಗಾಗಿ, ಮತದಾನದ ದಿನದಂದು ಆಡಳಿತಗಳು ಒದಗಿಸಿದ ಭದ್ರತೆಯ ಬಗ್ಗೆ ನಮಗೆ ಅಪನಂಬಿಕೆ ಇದೆ. ನಾವು ಮತ್ತೆ ಅದೇ ನೋವನ್ನು ಅನುಭವಿಸಲು ಚುನಾವಣೆ ಕಾರಣವಾಗಬಾರದು” ಎಂದು ಅವರು ತಿಳಿಸಿದ್ದಾರೆ.

“ಹೊಸ ಬೂತ್ ಸ್ಥಾಪಿಸಲು ಸಾಧ್ಯವಾಗದಿದ್ದರೆ, ನಾವು ಜಿಲ್ಲಾಕೇಂದ್ರದಲ್ಲಿಯೇ ಮತ ಚಲಾಯಿಸುತ್ತೇವೆ. ಮತದಾನದ ದಿನ ಅಲ್ಲಿಗೆ ಹೋಗಲು ನಮ್ಮ ಸ್ವಂತ ಹಣವನ್ನು ಖರ್ಚು ಮಾಡುತ್ತೇವೆ. ಕೇವಲ ದೇವಸ್ಥಾನವನ್ನು ಪ್ರವೇಶಿಸಿದ್ದಕ್ಕಾಗಿ ನಾವು ಅವಮಾನಕ್ಕೊಳಗಾದ ಊರಿಗೆ (ಜಾತಿ ಹಿಂದೂ ಪ್ರದೇಶ) ನಾವು ಹೋಗುವುದಿಲ್ಲ” ಎಂದು ಗ್ರಾಮದ ದಲಿತ ಮುಖಂಡರು ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಮೇಲ್ಪತಿ ಗ್ರಾಮದ ದಲಿತರು ಪ್ರತ್ಯೇಕ ಮತಗಟ್ಟೆಗಾಗಿ ಪ್ರಸ್ತಾಪಿಸಿದ್ದಾರೆ. ಆದರೆ, ಮತದಾರರ ಸಂಖ್ಯೆ 1,500ಕ್ಕಿಂತ ಹೆಚ್ಚಿದ್ದರೆ ಮಾತ್ರ ಬೂತ್ ಹಂಚಿಕೆ ಮಾಡಬಹುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಮಸ್ಯೆಗೆ ಪ್ರತಿಕ್ರಿಯಿಸಿದರುವ ಜಿಲ್ಲಾಧಿಕಾರಿ ಪಳನಿ, “ನಾವು ಮೇಲ್ಪತಿ ಗ್ರಾಮದ ಮತಗಟ್ಟೆಯನ್ನು ನಿರ್ಣಾಯಕ/ದುರ್ಬಲ ಮತಗಟ್ಟೆ ಎಂದು ಗುರುತಿಸಿದ್ದೇವೆ. ಸಿಆರ್‌ಪಿಎಫ್ ಸಿಬ್ಬಂದಿಯಿಂದ ವಿಶೇಷ ರಕ್ಷಣೆ, ಲೈವ್ ವೆಬ್‌ಕ್ಯಾಮ್ ಕಾಸ್ಟಿಂಗ್, ರಾಜ್ಯ ಪೊಲೀಸ್ ಪಡೆ ಮತ್ತು ಮೈಕ್ರೋ ಅಬ್ಸರ್ವರ್‌ಗಳನ್ನು ನಿಯೋಜಿಸುತ್ತೇವೆ. ದಲಿತರು ಶಾಂತಿಯಿಂದ ಮತ ಚಲಾಯಿಸಬಹುದು. ಯಾವುದೇ ಅನಾಹುತ ಸಂಭವಿಸದಂತೆ ನೋಡಿಕೊಳ್ಳಲಾಗುವುದು. ಇದಲ್ಲದೆ, ಚುನಾವಣೆಯ ದಿನದಂದು ದಲಿತರೊಂದಿಗೆ ಜಗಳವಾದಲ್ಲಿ ಪ್ರಬಲ ಜಾತಿಗರಿಗೆ ಕಠಿಣ ಪೊಲೀಸ್ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ‘ಭಾರತದ ಭೂಮಿಯನ್ನು ಬಾಂಗ್ಲಾಕ್ಕೆ ಕೊಟ್ಟ ಮೋದಿ..’; ಬಿಜೆಪಿ ವಿರುದ್ಧ ಫಾರೂಕ್ ಅಬ್ದುಲ್ಲಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...