Homeಮುಖಪುಟಲೋಕಸಭಾ ಚುನಾವಣೆ: ತಮಿಳುನಾಡಿನಲ್ಲಿ ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟ ದಲಿತರು

ಲೋಕಸಭಾ ಚುನಾವಣೆ: ತಮಿಳುನಾಡಿನಲ್ಲಿ ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟ ದಲಿತರು

ಪ್ರಬಲ ಜಾತಿಯವರು ಅವಕಾಶ ಸಿಕ್ಕಾಗಲೆಲ್ಲ ದಾಳಿ ನಡೆಸುವ ತಂತ್ರ ಹೆಣೆಯುತ್ತಿದ್ದಾರೆ. ಇದರಿಂದ ನಾವು ಭಯಭೀತರಾಗಿದ್ದೇವೆ ಎಂದ ಗ್ರಾಮಸ್ಥರು

- Advertisement -
- Advertisement -

ಮೇಲ್ಪತಿ ಗ್ರಾಮದ ದಲಿತರ ವಸತಿ ಪ್ರದೇಶದಲ್ಲಿ ವಾಸಿಸುವ 450 ಕ್ಕೂ ಹೆಚ್ಚು ಮತದಾರರು ಈಗಿರುವ ಮತಗಟ್ಟೆಗೆ ಹೋಗಲು ಜಾತಿ ಹಿಂದೂ ಪ್ರದೇಶವನ್ನು ಪ್ರವೇಶಿಸುವ ಭಯದಿಂದ ಪ್ರತ್ಯೇಕ ಮತಗಟ್ಟೆಗೆ ಒತ್ತಾಯಿಸಿದ್ದಾರೆ. ಏಪ್ರಿಲ್ 2023 ರಲ್ಲಿ, ಗ್ರಾಮದ ದ್ರೌಪದಿ ಅಮ್ಮನ್ ದೇವಸ್ಥಾನಕ್ಕೆ ಪ್ರವೇಶಿಸಿದ್ದಕ್ಕಾಗಿ ಹಲವಾರು ದಲಿತ ನಿವಾಸಿಗಳ ಮೇಲೆ ದೈಹಿಕ ಹಲ್ಲೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಲಾಯಿತು.

ತಮಿಳುನಾಡಿನ ಮೇಲ್ಪತಿ ಗ್ರಾಮದ 450ಕ್ಕೂ ಹೆಚ್ಚು ದಲಿತ ಮತದಾರರು ತಮಗೆ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಪ್ರತ್ಯೇಕ ಮತಗಟ್ಟೆ ನೀಡುವಂತೆ ಒತ್ತಾಯಿಸಿದ್ದಾರೆ.

2023ರ ಏಪ್ರಿಲ್‌ನಲ್ಲಿ ಗ್ರಾಮದ ದ್ರೌಪದಿ ಅಮ್ಮನ್ ದೇವಸ್ಥಾನಕ್ಕೆ ದಲಿತರು ಪ್ರವೇಶಿಸಿದ್ದಕ್ಕಾಗಿ, ಅವರ ಮೇಲೆ ಹಲ್ಲೆ, ಜಾತಿ ನಿಂದನೆ ನಡೆದಿತ್ತು. ಹೀಗಾಗಿ, ಈಗ ಮತ ಚಲಾಯಿಸಲು ಗ್ರಾಮದ ಒಳಗೆ ಹೋದರೆ, ಮತ್ತೆ ಪ್ರಬಲ ಜಾತಿಗರು ಹಲ್ಲೆ ನಡೆಸಬಹುದು ಎಂಬ ಭಯ ದಲಿತರನ್ನು ಕಾಡುತ್ತಿದೆ.

ಶುಕ್ರವಾರ ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ದಲಿತರು, ”ಪ್ರಬಲ ಜಾತಿಯವರು ಅವಕಾಶ ಸಿಕ್ಕಾಗಲೆಲ್ಲ ನಮ್ಮ ಮೇಲೆ ದಾಳಿ ನಡೆಸುವ ತಂತ್ರ ಹೆಣೆಯುತ್ತಿದ್ದಾರೆ. ಇದರಿಂದ ನಾವು ಭಯಭೀತರಾಗಿದ್ದೇವೆ. ಗ್ರಾಮದಲ್ಲಿ ಮತಗಟ್ಟೆಯು ಪ್ರಬಲ ಜಾತಿಗರಿರುವ ಪ್ರದೇಶದಲ್ಲಿದೆ. ಮತದಾನದ ದಿನ ನಾವು ಅಲ್ಲಿಗೆ ಹೋಗುವುದು ಸುರಕ್ಷಿತವಲ್ಲ. ಹೀಗಾಗಿ, ನಮಗೆ ಮತ ಚಲಾಯಿಸಲು ಪ್ರತ್ಯೇಕ ಮತಗಟ್ಟೆ ಬೇಕು” ಎಂದು ಒತ್ತಾಯಿಸಿದ್ದಾರೆ.

“ನಾವು ಪ್ರತ್ಯೇಕ ಮತಗಟ್ಟೆ ಕೇಳುತ್ತಿರುವುದು ಭಯದಿಂದಲ್ಲ. ಆದರೆ, ನಮ್ಮ ಆತ್ಮಗೌರವ ಮತ್ತು ಘನತೆಯನ್ನು ಕಾಪಾಡುವುದಕ್ಕಾಗಿ. ಒಂದು ವರ್ಷದ ಹಿಂದೆ, ದೇವಸ್ಥಾನಕ್ಕೆ ಪ್ರವೇಶಿಸಿದ ಕಾರಣಕ್ಕೆ ಪ್ರಬಲ ಜಾತಿಗರು ಅಟ್ಟಿಸಿಕೊಂಡು ಬಂದು ಹಲ್ಲೆ ನಡೆಸಿದ್ದರು. ನಂತರ, ನಾವು ಅವರಿಂದ ದೂರ ಉಳಿದಿದ್ದೇವೆ” ಎಂದು ಗ್ರಾಮದ ದಲಿತ ನಿವಾಸಿಯೊಬ್ಬರು ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಪ್ರಬಲ ಜಾತಿಯವರು ನಮ್ಮನ್ನು ಕೃಷಿ ಕಾರ್ಮಿಕರಾಗಿ ನೇಮಿಸಿಕೊಳ್ಳುವುದನ್ನೂ ನಿಲ್ಲಿಸಿದ್ದಾರೆ. ನಮ್ಮ ಮೇಲಿನ ಹಿಂಸಾಚಾರ ಮತ್ತು ಜಾತಿ ತಾರತಮ್ಯಕ್ಕಾಗಿ ಬಲಿಷ್ಠ ಜಾತಿಯವರಲ್ಲಿ ಯಾರನ್ನೂ ಈವರೆಗೆ ಬಂಧಿಸಿಲ್ಲ. ಘಟನೆಯನ್ನು ನಿಭಾಯಿಸುವಲ್ಲಿ ಸರ್ಕಾರದ ನಿಷ್ಕ್ರಿಯತೆ ಮತ್ತು ಪೊಲೀಸರ ನಿರಾಸಕ್ತಿ ತೋರಿದ್ದಾರೆ. ಹೀಗಾಗಿ, ಮತದಾನದ ದಿನದಂದು ಆಡಳಿತಗಳು ಒದಗಿಸಿದ ಭದ್ರತೆಯ ಬಗ್ಗೆ ನಮಗೆ ಅಪನಂಬಿಕೆ ಇದೆ. ನಾವು ಮತ್ತೆ ಅದೇ ನೋವನ್ನು ಅನುಭವಿಸಲು ಚುನಾವಣೆ ಕಾರಣವಾಗಬಾರದು” ಎಂದು ಅವರು ತಿಳಿಸಿದ್ದಾರೆ.

“ಹೊಸ ಬೂತ್ ಸ್ಥಾಪಿಸಲು ಸಾಧ್ಯವಾಗದಿದ್ದರೆ, ನಾವು ಜಿಲ್ಲಾಕೇಂದ್ರದಲ್ಲಿಯೇ ಮತ ಚಲಾಯಿಸುತ್ತೇವೆ. ಮತದಾನದ ದಿನ ಅಲ್ಲಿಗೆ ಹೋಗಲು ನಮ್ಮ ಸ್ವಂತ ಹಣವನ್ನು ಖರ್ಚು ಮಾಡುತ್ತೇವೆ. ಕೇವಲ ದೇವಸ್ಥಾನವನ್ನು ಪ್ರವೇಶಿಸಿದ್ದಕ್ಕಾಗಿ ನಾವು ಅವಮಾನಕ್ಕೊಳಗಾದ ಊರಿಗೆ (ಜಾತಿ ಹಿಂದೂ ಪ್ರದೇಶ) ನಾವು ಹೋಗುವುದಿಲ್ಲ” ಎಂದು ಗ್ರಾಮದ ದಲಿತ ಮುಖಂಡರು ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಮೇಲ್ಪತಿ ಗ್ರಾಮದ ದಲಿತರು ಪ್ರತ್ಯೇಕ ಮತಗಟ್ಟೆಗಾಗಿ ಪ್ರಸ್ತಾಪಿಸಿದ್ದಾರೆ. ಆದರೆ, ಮತದಾರರ ಸಂಖ್ಯೆ 1,500ಕ್ಕಿಂತ ಹೆಚ್ಚಿದ್ದರೆ ಮಾತ್ರ ಬೂತ್ ಹಂಚಿಕೆ ಮಾಡಬಹುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಮಸ್ಯೆಗೆ ಪ್ರತಿಕ್ರಿಯಿಸಿದರುವ ಜಿಲ್ಲಾಧಿಕಾರಿ ಪಳನಿ, “ನಾವು ಮೇಲ್ಪತಿ ಗ್ರಾಮದ ಮತಗಟ್ಟೆಯನ್ನು ನಿರ್ಣಾಯಕ/ದುರ್ಬಲ ಮತಗಟ್ಟೆ ಎಂದು ಗುರುತಿಸಿದ್ದೇವೆ. ಸಿಆರ್‌ಪಿಎಫ್ ಸಿಬ್ಬಂದಿಯಿಂದ ವಿಶೇಷ ರಕ್ಷಣೆ, ಲೈವ್ ವೆಬ್‌ಕ್ಯಾಮ್ ಕಾಸ್ಟಿಂಗ್, ರಾಜ್ಯ ಪೊಲೀಸ್ ಪಡೆ ಮತ್ತು ಮೈಕ್ರೋ ಅಬ್ಸರ್ವರ್‌ಗಳನ್ನು ನಿಯೋಜಿಸುತ್ತೇವೆ. ದಲಿತರು ಶಾಂತಿಯಿಂದ ಮತ ಚಲಾಯಿಸಬಹುದು. ಯಾವುದೇ ಅನಾಹುತ ಸಂಭವಿಸದಂತೆ ನೋಡಿಕೊಳ್ಳಲಾಗುವುದು. ಇದಲ್ಲದೆ, ಚುನಾವಣೆಯ ದಿನದಂದು ದಲಿತರೊಂದಿಗೆ ಜಗಳವಾದಲ್ಲಿ ಪ್ರಬಲ ಜಾತಿಗರಿಗೆ ಕಠಿಣ ಪೊಲೀಸ್ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ‘ಭಾರತದ ಭೂಮಿಯನ್ನು ಬಾಂಗ್ಲಾಕ್ಕೆ ಕೊಟ್ಟ ಮೋದಿ..’; ಬಿಜೆಪಿ ವಿರುದ್ಧ ಫಾರೂಕ್ ಅಬ್ದುಲ್ಲಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...