Homeಮುಖಪುಟಲೋಕಸಭಾ ಚುನಾವಣೆ: ತಮಿಳುನಾಡಿನಲ್ಲಿ ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟ ದಲಿತರು

ಲೋಕಸಭಾ ಚುನಾವಣೆ: ತಮಿಳುನಾಡಿನಲ್ಲಿ ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟ ದಲಿತರು

ಪ್ರಬಲ ಜಾತಿಯವರು ಅವಕಾಶ ಸಿಕ್ಕಾಗಲೆಲ್ಲ ದಾಳಿ ನಡೆಸುವ ತಂತ್ರ ಹೆಣೆಯುತ್ತಿದ್ದಾರೆ. ಇದರಿಂದ ನಾವು ಭಯಭೀತರಾಗಿದ್ದೇವೆ ಎಂದ ಗ್ರಾಮಸ್ಥರು

- Advertisement -
- Advertisement -

ಮೇಲ್ಪತಿ ಗ್ರಾಮದ ದಲಿತರ ವಸತಿ ಪ್ರದೇಶದಲ್ಲಿ ವಾಸಿಸುವ 450 ಕ್ಕೂ ಹೆಚ್ಚು ಮತದಾರರು ಈಗಿರುವ ಮತಗಟ್ಟೆಗೆ ಹೋಗಲು ಜಾತಿ ಹಿಂದೂ ಪ್ರದೇಶವನ್ನು ಪ್ರವೇಶಿಸುವ ಭಯದಿಂದ ಪ್ರತ್ಯೇಕ ಮತಗಟ್ಟೆಗೆ ಒತ್ತಾಯಿಸಿದ್ದಾರೆ. ಏಪ್ರಿಲ್ 2023 ರಲ್ಲಿ, ಗ್ರಾಮದ ದ್ರೌಪದಿ ಅಮ್ಮನ್ ದೇವಸ್ಥಾನಕ್ಕೆ ಪ್ರವೇಶಿಸಿದ್ದಕ್ಕಾಗಿ ಹಲವಾರು ದಲಿತ ನಿವಾಸಿಗಳ ಮೇಲೆ ದೈಹಿಕ ಹಲ್ಲೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಲಾಯಿತು.

ತಮಿಳುನಾಡಿನ ಮೇಲ್ಪತಿ ಗ್ರಾಮದ 450ಕ್ಕೂ ಹೆಚ್ಚು ದಲಿತ ಮತದಾರರು ತಮಗೆ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಪ್ರತ್ಯೇಕ ಮತಗಟ್ಟೆ ನೀಡುವಂತೆ ಒತ್ತಾಯಿಸಿದ್ದಾರೆ.

2023ರ ಏಪ್ರಿಲ್‌ನಲ್ಲಿ ಗ್ರಾಮದ ದ್ರೌಪದಿ ಅಮ್ಮನ್ ದೇವಸ್ಥಾನಕ್ಕೆ ದಲಿತರು ಪ್ರವೇಶಿಸಿದ್ದಕ್ಕಾಗಿ, ಅವರ ಮೇಲೆ ಹಲ್ಲೆ, ಜಾತಿ ನಿಂದನೆ ನಡೆದಿತ್ತು. ಹೀಗಾಗಿ, ಈಗ ಮತ ಚಲಾಯಿಸಲು ಗ್ರಾಮದ ಒಳಗೆ ಹೋದರೆ, ಮತ್ತೆ ಪ್ರಬಲ ಜಾತಿಗರು ಹಲ್ಲೆ ನಡೆಸಬಹುದು ಎಂಬ ಭಯ ದಲಿತರನ್ನು ಕಾಡುತ್ತಿದೆ.

ಶುಕ್ರವಾರ ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ದಲಿತರು, ”ಪ್ರಬಲ ಜಾತಿಯವರು ಅವಕಾಶ ಸಿಕ್ಕಾಗಲೆಲ್ಲ ನಮ್ಮ ಮೇಲೆ ದಾಳಿ ನಡೆಸುವ ತಂತ್ರ ಹೆಣೆಯುತ್ತಿದ್ದಾರೆ. ಇದರಿಂದ ನಾವು ಭಯಭೀತರಾಗಿದ್ದೇವೆ. ಗ್ರಾಮದಲ್ಲಿ ಮತಗಟ್ಟೆಯು ಪ್ರಬಲ ಜಾತಿಗರಿರುವ ಪ್ರದೇಶದಲ್ಲಿದೆ. ಮತದಾನದ ದಿನ ನಾವು ಅಲ್ಲಿಗೆ ಹೋಗುವುದು ಸುರಕ್ಷಿತವಲ್ಲ. ಹೀಗಾಗಿ, ನಮಗೆ ಮತ ಚಲಾಯಿಸಲು ಪ್ರತ್ಯೇಕ ಮತಗಟ್ಟೆ ಬೇಕು” ಎಂದು ಒತ್ತಾಯಿಸಿದ್ದಾರೆ.

“ನಾವು ಪ್ರತ್ಯೇಕ ಮತಗಟ್ಟೆ ಕೇಳುತ್ತಿರುವುದು ಭಯದಿಂದಲ್ಲ. ಆದರೆ, ನಮ್ಮ ಆತ್ಮಗೌರವ ಮತ್ತು ಘನತೆಯನ್ನು ಕಾಪಾಡುವುದಕ್ಕಾಗಿ. ಒಂದು ವರ್ಷದ ಹಿಂದೆ, ದೇವಸ್ಥಾನಕ್ಕೆ ಪ್ರವೇಶಿಸಿದ ಕಾರಣಕ್ಕೆ ಪ್ರಬಲ ಜಾತಿಗರು ಅಟ್ಟಿಸಿಕೊಂಡು ಬಂದು ಹಲ್ಲೆ ನಡೆಸಿದ್ದರು. ನಂತರ, ನಾವು ಅವರಿಂದ ದೂರ ಉಳಿದಿದ್ದೇವೆ” ಎಂದು ಗ್ರಾಮದ ದಲಿತ ನಿವಾಸಿಯೊಬ್ಬರು ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಪ್ರಬಲ ಜಾತಿಯವರು ನಮ್ಮನ್ನು ಕೃಷಿ ಕಾರ್ಮಿಕರಾಗಿ ನೇಮಿಸಿಕೊಳ್ಳುವುದನ್ನೂ ನಿಲ್ಲಿಸಿದ್ದಾರೆ. ನಮ್ಮ ಮೇಲಿನ ಹಿಂಸಾಚಾರ ಮತ್ತು ಜಾತಿ ತಾರತಮ್ಯಕ್ಕಾಗಿ ಬಲಿಷ್ಠ ಜಾತಿಯವರಲ್ಲಿ ಯಾರನ್ನೂ ಈವರೆಗೆ ಬಂಧಿಸಿಲ್ಲ. ಘಟನೆಯನ್ನು ನಿಭಾಯಿಸುವಲ್ಲಿ ಸರ್ಕಾರದ ನಿಷ್ಕ್ರಿಯತೆ ಮತ್ತು ಪೊಲೀಸರ ನಿರಾಸಕ್ತಿ ತೋರಿದ್ದಾರೆ. ಹೀಗಾಗಿ, ಮತದಾನದ ದಿನದಂದು ಆಡಳಿತಗಳು ಒದಗಿಸಿದ ಭದ್ರತೆಯ ಬಗ್ಗೆ ನಮಗೆ ಅಪನಂಬಿಕೆ ಇದೆ. ನಾವು ಮತ್ತೆ ಅದೇ ನೋವನ್ನು ಅನುಭವಿಸಲು ಚುನಾವಣೆ ಕಾರಣವಾಗಬಾರದು” ಎಂದು ಅವರು ತಿಳಿಸಿದ್ದಾರೆ.

“ಹೊಸ ಬೂತ್ ಸ್ಥಾಪಿಸಲು ಸಾಧ್ಯವಾಗದಿದ್ದರೆ, ನಾವು ಜಿಲ್ಲಾಕೇಂದ್ರದಲ್ಲಿಯೇ ಮತ ಚಲಾಯಿಸುತ್ತೇವೆ. ಮತದಾನದ ದಿನ ಅಲ್ಲಿಗೆ ಹೋಗಲು ನಮ್ಮ ಸ್ವಂತ ಹಣವನ್ನು ಖರ್ಚು ಮಾಡುತ್ತೇವೆ. ಕೇವಲ ದೇವಸ್ಥಾನವನ್ನು ಪ್ರವೇಶಿಸಿದ್ದಕ್ಕಾಗಿ ನಾವು ಅವಮಾನಕ್ಕೊಳಗಾದ ಊರಿಗೆ (ಜಾತಿ ಹಿಂದೂ ಪ್ರದೇಶ) ನಾವು ಹೋಗುವುದಿಲ್ಲ” ಎಂದು ಗ್ರಾಮದ ದಲಿತ ಮುಖಂಡರು ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಮೇಲ್ಪತಿ ಗ್ರಾಮದ ದಲಿತರು ಪ್ರತ್ಯೇಕ ಮತಗಟ್ಟೆಗಾಗಿ ಪ್ರಸ್ತಾಪಿಸಿದ್ದಾರೆ. ಆದರೆ, ಮತದಾರರ ಸಂಖ್ಯೆ 1,500ಕ್ಕಿಂತ ಹೆಚ್ಚಿದ್ದರೆ ಮಾತ್ರ ಬೂತ್ ಹಂಚಿಕೆ ಮಾಡಬಹುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಮಸ್ಯೆಗೆ ಪ್ರತಿಕ್ರಿಯಿಸಿದರುವ ಜಿಲ್ಲಾಧಿಕಾರಿ ಪಳನಿ, “ನಾವು ಮೇಲ್ಪತಿ ಗ್ರಾಮದ ಮತಗಟ್ಟೆಯನ್ನು ನಿರ್ಣಾಯಕ/ದುರ್ಬಲ ಮತಗಟ್ಟೆ ಎಂದು ಗುರುತಿಸಿದ್ದೇವೆ. ಸಿಆರ್‌ಪಿಎಫ್ ಸಿಬ್ಬಂದಿಯಿಂದ ವಿಶೇಷ ರಕ್ಷಣೆ, ಲೈವ್ ವೆಬ್‌ಕ್ಯಾಮ್ ಕಾಸ್ಟಿಂಗ್, ರಾಜ್ಯ ಪೊಲೀಸ್ ಪಡೆ ಮತ್ತು ಮೈಕ್ರೋ ಅಬ್ಸರ್ವರ್‌ಗಳನ್ನು ನಿಯೋಜಿಸುತ್ತೇವೆ. ದಲಿತರು ಶಾಂತಿಯಿಂದ ಮತ ಚಲಾಯಿಸಬಹುದು. ಯಾವುದೇ ಅನಾಹುತ ಸಂಭವಿಸದಂತೆ ನೋಡಿಕೊಳ್ಳಲಾಗುವುದು. ಇದಲ್ಲದೆ, ಚುನಾವಣೆಯ ದಿನದಂದು ದಲಿತರೊಂದಿಗೆ ಜಗಳವಾದಲ್ಲಿ ಪ್ರಬಲ ಜಾತಿಗರಿಗೆ ಕಠಿಣ ಪೊಲೀಸ್ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ‘ಭಾರತದ ಭೂಮಿಯನ್ನು ಬಾಂಗ್ಲಾಕ್ಕೆ ಕೊಟ್ಟ ಮೋದಿ..’; ಬಿಜೆಪಿ ವಿರುದ್ಧ ಫಾರೂಕ್ ಅಬ್ದುಲ್ಲಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...