Homeಚಳವಳಿದಲಿತ ಹಕ್ಕುಗಳ ಹೋರಾಟಗಾರ್ತಿ, ಲೇಖಕಿ ಮೀನಾ ಕಂದಸಾಮಿ ಅವರಿಗೆ PEN ಜರ್ಮನಿ ಪ್ರಶಸ್ತಿ

ದಲಿತ ಹಕ್ಕುಗಳ ಹೋರಾಟಗಾರ್ತಿ, ಲೇಖಕಿ ಮೀನಾ ಕಂದಸಾಮಿ ಅವರಿಗೆ PEN ಜರ್ಮನಿ ಪ್ರಶಸ್ತಿ

- Advertisement -
- Advertisement -

ಜರ್ಮನಿಯ ಡಾರ್ಮ್‌ಸ್ಟಾಡ್ಟ್‌ನಲ್ಲಿರುವ ಪೆನ್‌‌‌ ಕೇಂದ್ರ(PEN Center)ವು ‘ಹರ್ಮನ್ ಕೆಸ್ಟನ್ ಪ್ರಶಸ್ತಿ’ಯ ವಿಜೇತರನ್ನು ಸೋಮವಾರ ಘೋಷಿಸಿದೆ. ಈ ವರ್ಷದ ಪ್ರಶಸ್ತಿಯು ಭಾರತೀಯ ಲೇಖಕಿ ಮತ್ತು ಕವಯಿತ್ರಿ ಮೀನಾ ಕಂದಸಾಮಿ ಅವರಿಗೆ ಸಂದಿದೆ.

ಪ್ರಶಸ್ತಿ ಘೋಷಣೆ ಬಗ್ಗೆ ಸಂತಸ ವ್ಯಕ್ತಪಡಿಸಿದರು ಮೀನಾ ಕಂದಸಾಮಿ ಅವರು, “ಪ್ರಾಮಾಣಿಕವಾಗಿ ಹೇಳಬೇಕೆಂದರೆ ಇದಕ್ಕೆ ಹೇಗೆ ಪ್ರತಿಕ್ರಿಯೆ ನೀಡಬೇಕು ಎಂದು ನನಗೆ ಗೊತ್ತಾಗುತ್ತಿಲ್ಲ. ಈ ಹಿಂದೆ ಈ ಪ್ರಶಸ್ತಿಯನ್ನು ಸ್ವೀಕರಿಸಿದವರಲ್ಲಿ ಗುಂಟರ್ ಗ್ರಾಸ್ ಮತ್ತು ಹೆರಾಲ್ಡ್ ಪಿಂಟರ್ ಇದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಜಾಪ್ರಭುತ್ವದ ನಿರ್ಭೀತ ಹೋರಾಟಗಾರ್ತಿ

“ಮೀನಾ ಕಂದಸಾಮಿ ಪ್ರಜಾಪ್ರಭುತ್ವದ ಮತ್ತು ಮಾನವ ಹಕ್ಕುಗಳ ನಿರ್ಭೀತ ಹೋರಾಟಗಾರ್ತಿಯಾಗಿದ್ದಾರೆ. ಭಾರತದಲ್ಲಿ ಭೂರಹಿತರು, ಅಲ್ಪಸಂಖ್ಯಾತರು ಮತ್ತು ದಲಿತರ ದಮನದ ವಿರುದ್ಧ ಅವರು ಹೋರಾಡುತ್ತಿದ್ದಾರೆ” ಎಂದು ಜರ್ಮನ್ PEN ಸೆಂಟರ್‌ನ ಉಪಾಧ್ಯಕ್ಷ ಕಾರ್ನೆಲಿಯಾ ಜೆಟ್ಸೆ ಹೇಳಿದ್ದಾರೆ.

“ಪರಾನುಭೂತಿ, ವಿಶ್ಲೇಷಣಾತ್ಮಕ ನಿಖರತೆ ಮತ್ತು ಸಾಹಿತ್ಯಿಕ ಉತ್ಸಾಹದಿಂದ, ಕಂದಸಾಮಿ ಅವರು ಪಿತೃಪ್ರಭುತ್ವ, ಊಳಿಗಮಾನ್ಯ ಸಂರಚನೆ, ಮಹಿಳೆಯರ ವಿರುದ್ಧದ ಹಿಂಸೆ, ಕಡಿವಾಣವಿಲ್ಲದ ಬಂಡವಾಳಶಾಹಿಯ ಪರಿಣಾಮಗಳು ಮತ್ತು ದಕ್ಷಿಣ ಭಾರತದಲ್ಲಿ ರೈತರ ಹತ್ಯಾಕಾಂಡದ ಬಗ್ಗೆ ಮಾತನಾಡುತ್ತಾರೆ. ಅವರ ಭಾಷಣಗಳು ಮತ್ತು ಬರಹಗಳಲ್ಲಿ ಇವುಗಳನ್ನು ಗುರುತಿಸುತ್ತಾರೆ” ಎಂದು ಜೆಟ್ಸೆ ಹೇಳಿದ್ದಾರೆ.

ಪ್ರಶಸ್ತಿಯನ್ನು ಪ್ರಾಯೋಜಿಸುವ ಜರ್ಮನಿಯ ಹೆಸ್ಸೆ ರಾಜ್ಯದ ಕಲೆ ಮತ್ತು ಸಂಸ್ಕೃತಿ ಸಚಿವೆ ಏಂಜೆಲಾ ಡಾರ್ನ್ ಅವರು ಮೀನಾ ಕಂದಸಾಮಿ ಅವರನ್ನು ಶ್ಲಾಘಿಸಿದ್ದು, ‘‘ಅವರು ತಮ್ಮ ಪುಸ್ತಕಗಳಲ್ಲಿ ಅಸಮಾನತೆ ಮತ್ತು ದಮನದ ವಿರುದ್ಧ ಬಂಡಾಯವೆದ್ದಿದ್ದಾರೆ. ಹಿಂಸಾಚಾರದ ಬಲಿಪಶುಗಳಿಗೆ ಧ್ವನಿ ನೀಡುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶೂದ್ರ’ ಪದಬಳಕೆ: ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ

ಶೋಷಣೆಗೆ ಒಳಗಾದವರ ಪರವಾಗಿ ನಿಲ್ಲುವವರು

ಮೀನಾ ಕಂದಸಾಮಿ ಅವರು 1984 ರಲ್ಲಿ ಚೆನ್ನೈನಲ್ಲಿ ಜನಿಸಿದರು. ಹದಿಹರೆಯದಿಂದಲೂ ಕವನ ಬರೆಯುತ್ತಿದ್ದ ಅವರು, ತನ್ನನ್ನು ತಾನು ‘ಜಾತಿ ವಿರೋಧಿ ಹೋರಾಟಗಾರ್ತಿ, ಕವಿ, ಕಾದಂಬರಿಕಾರ್ತಿ ಮತ್ತು ಅನುವಾದಕಿ’ ಎಂದು ಕರೆದುಕೊಳ್ಳುತ್ತಾಳೆ. ಅವರ ವೆಬ್‌ಸೈಟ್‌ನ ಪ್ರಕಾರ, ಅವರ ಬರವಣಿಗೆಯು ಜಾತಿ, ಲಿಂಗ ಮತ್ತು ಜನಾಂಗೀಯ ದಬ್ಬಾಳಿಕೆಯ ವಿರುದ್ಧ ಉಗ್ರಗಾಮಿ ಪ್ರತಿರೋಧವನ್ನು ಗುರುತಿಸುತ್ತದೆ.

‘ದಿ ಜಿಪ್ಸಿ ಗಾಡೆಸ್’ (2014), ‘ವೆನ್ ಐ ಹಿಟ್ ಯು: ಆರ್‌ ಎ ಪೋರ್ಟ್ರೇಟ್ ಆಫ್ ದಿ ರೈಟರ್ ಆಸ್ ಎ ಯಂಗ್ ವೈಫ್’ (2017) ಪುಸ್ತಕಗಳು ಮೀನಾ ಕಂದಸಾಮಿ ಅವರ ಪ್ರಮುಖ ಕೃತಿಗಳಾಗಿವೆ. ‘Ms Militancy’ (2010) ಮತ್ತು ‘#ThisPoemWillProvokeYou and Other Poems’ (2015) ಎಂಬ ಕವಿತೆಗಳ ಸಂಕಲನಗಳನ್ನು ಕೂಡಾ ಅವರು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

ಜರ್ಮನಿಯ PEN ಕೇಂದ್ರವು ಈ ವರ್ಷ ನವೆಂಬರ್ 15 ರಂದು ಡಾರ್ಮ್‌ಸ್ಟಾಡ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಮೀನಾ ಕಂದಸಾಮಿ ಅವರಿಗೆ ಪ್ರಶಸ್ತಿಯನ್ನು ನೀಡಲಿದೆ. ವಿಜೇತರಿಗೆ ಬಹುಮಾನದ ಹಣವಾಗಿ 16 ಲಕ್ಷ ರೂ. (20,000 ಯೂರೊ)ಗಳನ್ನು ಮೊತ್ತವನ್ನು ಪಡೆಯುತ್ತಾರೆ. ಈ ವರ್ಷ, PEN ಕೇಂದ್ರವು “ವೀಟರ್ ಸ್ಕ್ರಿಬೆನ್” ಎಂಬ ವೆಬ್‌ಸೈಟ್ ಅನ್ನು ಪ್ರೋತ್ಸಾಹಕ್ಕಾಗಿ ವಿಶೇಷ ಪ್ರಶಸ್ತಿಯೊಂದಿಗೆ ಗೌರವಿಸುತ್ತಿದೆ. ದೇಶಭ್ರಷ್ಟರಾಗಿರುವ ಲೇಖಕರು ಮತ್ತು ಸಂಘರ್ಷ ವಲಯಗಳ ಬರಹಗಾರರಿಗೆ ತಮ್ಮ ಆಲೋಚನೆಗಳನ್ನು ವ್ಯಕ್ತಪಡಿಸಲು ವೆಬ್‌ಸೈಟ್‌ ವೇದಿಕೆ ನೀಡುತ್ತಿದೆ.

ಹರ್ಮನ್ ಕೆಸ್ಟನ್ ಪ್ರಶಸ್ತಿಯು ಕಿರುಕುಳಕ್ಕೊಳಗಾದ ಲೇಖಕರು ಮತ್ತು ಪತ್ರಕರ್ತರ ಹಕ್ಕುಗಳಿಗಾಗಿ ನಿಲ್ಲುವ ವ್ಯಕ್ತಿಗಳನ್ನು ಗೌರವಿಸುತ್ತದೆ. ಈ ಹಿಂದೆ ಈ ಪ್ರಶಸ್ತಿ ಪುರಸ್ಕೃತರಲ್ಲಿ ಗುಂಟರ್ ಗ್ರಾಸ್, ಅನ್ನಾ ಪೊಲಿಟ್‌ಕೋವ್ಸ್ಕಯಾ, ಲಿಯು ಕ್ಸಿಯಾಬೊ, ಹೆರಾಲ್ಡ್ ಪಿಂಟರ್ ಮತ್ತು ಕ್ಯಾನ್ ಡುಂಡರ್ ಸೇರಿದ್ದಾರೆ.

ಕಂದಸಾಮಿ ಅವರ ಕಾದಂಬರಿಗಳು ಮಹಿಳಾ ಪ್ರಶಸ್ತಿ, ಅಂತರರಾಷ್ಟ್ರೀಯ ಡೈಲನ್ ಥಾಮಸ್ ಪ್ರಶಸ್ತಿ ಮತ್ತು ಹಿಂದೂ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿವೆ. ಈ ವರ್ಷ ಅವರು ಯುನೈಟೆಡ್ ಕಿಂಗ್‌ಡಂನ ರಾಯಲ್ ಸೊಸೈಟಿ ಆಫ್ ಲಿಟರೇಚರ್ (RSL) ನ ಫೆಲೋ ಆಗಿ ಆಯ್ಕೆಯಾದರು. 2021 ರಲ್ಲಿ ‘ದಿ ಆರ್ಡರ್ಸ್ ವರ್ ಟು ರೇಪ್ ಯು: ತಮಿಳು ಟೈಗ್ರೆಸಸ್ ಇನ್ ದಿ ಈಲಂ ಸ್ಟ್ರಗಲ್’ ಎಂಬ ಶೀರ್ಷಿಕೆಯ ಪ್ರಬಂಧಗಳ ಸಂಗ್ರಹವನ್ನು ಸಹ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ‘ಶೂದ್ರ’ ಪದಬಳಕೆ: ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ

2018 ರಲ್ಲಿ ಜಾತಿ ಆಧಾರಿತ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದಲ್ಲಿ ಬಂಧಿಸಲ್ಪಟ್ಟ ತೆಲುಗು ಕ್ರಾಂತಿಕಾರಿ ಕವಿ ವರವರ ರಾವ್ ಸೇರಿದಂತೆ ಭಾರತದಲ್ಲಿ ಲೇಖಕರ ದಮನದ ಬಗ್ಗೆ ಕಂದಸಾಮಿ ಧ್ವನಿಯೆತ್ತಿದ್ದಾರೆ. ಎಡಪಂಥೀಯ ಸಂಘಟನೆಗಳೊಂದಿಗಿನ ಸಂಬಂಧಕ್ಕಾಗಿ ಜೈಲಿನಲ್ಲಿರುವ ಕವಿ, ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬಾ ಅವರನ್ನು ಬೆಂಬಲಿಸಿ ಅವರು ಮಾತನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...