Homeಚಳವಳಿದಲಿತ ಹಕ್ಕುಗಳ ಹೋರಾಟಗಾರ್ತಿ, ಲೇಖಕಿ ಮೀನಾ ಕಂದಸಾಮಿ ಅವರಿಗೆ PEN ಜರ್ಮನಿ ಪ್ರಶಸ್ತಿ

ದಲಿತ ಹಕ್ಕುಗಳ ಹೋರಾಟಗಾರ್ತಿ, ಲೇಖಕಿ ಮೀನಾ ಕಂದಸಾಮಿ ಅವರಿಗೆ PEN ಜರ್ಮನಿ ಪ್ರಶಸ್ತಿ

- Advertisement -
- Advertisement -

ಜರ್ಮನಿಯ ಡಾರ್ಮ್‌ಸ್ಟಾಡ್ಟ್‌ನಲ್ಲಿರುವ ಪೆನ್‌‌‌ ಕೇಂದ್ರ(PEN Center)ವು ‘ಹರ್ಮನ್ ಕೆಸ್ಟನ್ ಪ್ರಶಸ್ತಿ’ಯ ವಿಜೇತರನ್ನು ಸೋಮವಾರ ಘೋಷಿಸಿದೆ. ಈ ವರ್ಷದ ಪ್ರಶಸ್ತಿಯು ಭಾರತೀಯ ಲೇಖಕಿ ಮತ್ತು ಕವಯಿತ್ರಿ ಮೀನಾ ಕಂದಸಾಮಿ ಅವರಿಗೆ ಸಂದಿದೆ.

ಪ್ರಶಸ್ತಿ ಘೋಷಣೆ ಬಗ್ಗೆ ಸಂತಸ ವ್ಯಕ್ತಪಡಿಸಿದರು ಮೀನಾ ಕಂದಸಾಮಿ ಅವರು, “ಪ್ರಾಮಾಣಿಕವಾಗಿ ಹೇಳಬೇಕೆಂದರೆ ಇದಕ್ಕೆ ಹೇಗೆ ಪ್ರತಿಕ್ರಿಯೆ ನೀಡಬೇಕು ಎಂದು ನನಗೆ ಗೊತ್ತಾಗುತ್ತಿಲ್ಲ. ಈ ಹಿಂದೆ ಈ ಪ್ರಶಸ್ತಿಯನ್ನು ಸ್ವೀಕರಿಸಿದವರಲ್ಲಿ ಗುಂಟರ್ ಗ್ರಾಸ್ ಮತ್ತು ಹೆರಾಲ್ಡ್ ಪಿಂಟರ್ ಇದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಜಾಪ್ರಭುತ್ವದ ನಿರ್ಭೀತ ಹೋರಾಟಗಾರ್ತಿ

“ಮೀನಾ ಕಂದಸಾಮಿ ಪ್ರಜಾಪ್ರಭುತ್ವದ ಮತ್ತು ಮಾನವ ಹಕ್ಕುಗಳ ನಿರ್ಭೀತ ಹೋರಾಟಗಾರ್ತಿಯಾಗಿದ್ದಾರೆ. ಭಾರತದಲ್ಲಿ ಭೂರಹಿತರು, ಅಲ್ಪಸಂಖ್ಯಾತರು ಮತ್ತು ದಲಿತರ ದಮನದ ವಿರುದ್ಧ ಅವರು ಹೋರಾಡುತ್ತಿದ್ದಾರೆ” ಎಂದು ಜರ್ಮನ್ PEN ಸೆಂಟರ್‌ನ ಉಪಾಧ್ಯಕ್ಷ ಕಾರ್ನೆಲಿಯಾ ಜೆಟ್ಸೆ ಹೇಳಿದ್ದಾರೆ.

“ಪರಾನುಭೂತಿ, ವಿಶ್ಲೇಷಣಾತ್ಮಕ ನಿಖರತೆ ಮತ್ತು ಸಾಹಿತ್ಯಿಕ ಉತ್ಸಾಹದಿಂದ, ಕಂದಸಾಮಿ ಅವರು ಪಿತೃಪ್ರಭುತ್ವ, ಊಳಿಗಮಾನ್ಯ ಸಂರಚನೆ, ಮಹಿಳೆಯರ ವಿರುದ್ಧದ ಹಿಂಸೆ, ಕಡಿವಾಣವಿಲ್ಲದ ಬಂಡವಾಳಶಾಹಿಯ ಪರಿಣಾಮಗಳು ಮತ್ತು ದಕ್ಷಿಣ ಭಾರತದಲ್ಲಿ ರೈತರ ಹತ್ಯಾಕಾಂಡದ ಬಗ್ಗೆ ಮಾತನಾಡುತ್ತಾರೆ. ಅವರ ಭಾಷಣಗಳು ಮತ್ತು ಬರಹಗಳಲ್ಲಿ ಇವುಗಳನ್ನು ಗುರುತಿಸುತ್ತಾರೆ” ಎಂದು ಜೆಟ್ಸೆ ಹೇಳಿದ್ದಾರೆ.

ಪ್ರಶಸ್ತಿಯನ್ನು ಪ್ರಾಯೋಜಿಸುವ ಜರ್ಮನಿಯ ಹೆಸ್ಸೆ ರಾಜ್ಯದ ಕಲೆ ಮತ್ತು ಸಂಸ್ಕೃತಿ ಸಚಿವೆ ಏಂಜೆಲಾ ಡಾರ್ನ್ ಅವರು ಮೀನಾ ಕಂದಸಾಮಿ ಅವರನ್ನು ಶ್ಲಾಘಿಸಿದ್ದು, ‘‘ಅವರು ತಮ್ಮ ಪುಸ್ತಕಗಳಲ್ಲಿ ಅಸಮಾನತೆ ಮತ್ತು ದಮನದ ವಿರುದ್ಧ ಬಂಡಾಯವೆದ್ದಿದ್ದಾರೆ. ಹಿಂಸಾಚಾರದ ಬಲಿಪಶುಗಳಿಗೆ ಧ್ವನಿ ನೀಡುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶೂದ್ರ’ ಪದಬಳಕೆ: ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ

ಶೋಷಣೆಗೆ ಒಳಗಾದವರ ಪರವಾಗಿ ನಿಲ್ಲುವವರು

ಮೀನಾ ಕಂದಸಾಮಿ ಅವರು 1984 ರಲ್ಲಿ ಚೆನ್ನೈನಲ್ಲಿ ಜನಿಸಿದರು. ಹದಿಹರೆಯದಿಂದಲೂ ಕವನ ಬರೆಯುತ್ತಿದ್ದ ಅವರು, ತನ್ನನ್ನು ತಾನು ‘ಜಾತಿ ವಿರೋಧಿ ಹೋರಾಟಗಾರ್ತಿ, ಕವಿ, ಕಾದಂಬರಿಕಾರ್ತಿ ಮತ್ತು ಅನುವಾದಕಿ’ ಎಂದು ಕರೆದುಕೊಳ್ಳುತ್ತಾಳೆ. ಅವರ ವೆಬ್‌ಸೈಟ್‌ನ ಪ್ರಕಾರ, ಅವರ ಬರವಣಿಗೆಯು ಜಾತಿ, ಲಿಂಗ ಮತ್ತು ಜನಾಂಗೀಯ ದಬ್ಬಾಳಿಕೆಯ ವಿರುದ್ಧ ಉಗ್ರಗಾಮಿ ಪ್ರತಿರೋಧವನ್ನು ಗುರುತಿಸುತ್ತದೆ.

‘ದಿ ಜಿಪ್ಸಿ ಗಾಡೆಸ್’ (2014), ‘ವೆನ್ ಐ ಹಿಟ್ ಯು: ಆರ್‌ ಎ ಪೋರ್ಟ್ರೇಟ್ ಆಫ್ ದಿ ರೈಟರ್ ಆಸ್ ಎ ಯಂಗ್ ವೈಫ್’ (2017) ಪುಸ್ತಕಗಳು ಮೀನಾ ಕಂದಸಾಮಿ ಅವರ ಪ್ರಮುಖ ಕೃತಿಗಳಾಗಿವೆ. ‘Ms Militancy’ (2010) ಮತ್ತು ‘#ThisPoemWillProvokeYou and Other Poems’ (2015) ಎಂಬ ಕವಿತೆಗಳ ಸಂಕಲನಗಳನ್ನು ಕೂಡಾ ಅವರು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

ಜರ್ಮನಿಯ PEN ಕೇಂದ್ರವು ಈ ವರ್ಷ ನವೆಂಬರ್ 15 ರಂದು ಡಾರ್ಮ್‌ಸ್ಟಾಡ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಮೀನಾ ಕಂದಸಾಮಿ ಅವರಿಗೆ ಪ್ರಶಸ್ತಿಯನ್ನು ನೀಡಲಿದೆ. ವಿಜೇತರಿಗೆ ಬಹುಮಾನದ ಹಣವಾಗಿ 16 ಲಕ್ಷ ರೂ. (20,000 ಯೂರೊ)ಗಳನ್ನು ಮೊತ್ತವನ್ನು ಪಡೆಯುತ್ತಾರೆ. ಈ ವರ್ಷ, PEN ಕೇಂದ್ರವು “ವೀಟರ್ ಸ್ಕ್ರಿಬೆನ್” ಎಂಬ ವೆಬ್‌ಸೈಟ್ ಅನ್ನು ಪ್ರೋತ್ಸಾಹಕ್ಕಾಗಿ ವಿಶೇಷ ಪ್ರಶಸ್ತಿಯೊಂದಿಗೆ ಗೌರವಿಸುತ್ತಿದೆ. ದೇಶಭ್ರಷ್ಟರಾಗಿರುವ ಲೇಖಕರು ಮತ್ತು ಸಂಘರ್ಷ ವಲಯಗಳ ಬರಹಗಾರರಿಗೆ ತಮ್ಮ ಆಲೋಚನೆಗಳನ್ನು ವ್ಯಕ್ತಪಡಿಸಲು ವೆಬ್‌ಸೈಟ್‌ ವೇದಿಕೆ ನೀಡುತ್ತಿದೆ.

ಹರ್ಮನ್ ಕೆಸ್ಟನ್ ಪ್ರಶಸ್ತಿಯು ಕಿರುಕುಳಕ್ಕೊಳಗಾದ ಲೇಖಕರು ಮತ್ತು ಪತ್ರಕರ್ತರ ಹಕ್ಕುಗಳಿಗಾಗಿ ನಿಲ್ಲುವ ವ್ಯಕ್ತಿಗಳನ್ನು ಗೌರವಿಸುತ್ತದೆ. ಈ ಹಿಂದೆ ಈ ಪ್ರಶಸ್ತಿ ಪುರಸ್ಕೃತರಲ್ಲಿ ಗುಂಟರ್ ಗ್ರಾಸ್, ಅನ್ನಾ ಪೊಲಿಟ್‌ಕೋವ್ಸ್ಕಯಾ, ಲಿಯು ಕ್ಸಿಯಾಬೊ, ಹೆರಾಲ್ಡ್ ಪಿಂಟರ್ ಮತ್ತು ಕ್ಯಾನ್ ಡುಂಡರ್ ಸೇರಿದ್ದಾರೆ.

ಕಂದಸಾಮಿ ಅವರ ಕಾದಂಬರಿಗಳು ಮಹಿಳಾ ಪ್ರಶಸ್ತಿ, ಅಂತರರಾಷ್ಟ್ರೀಯ ಡೈಲನ್ ಥಾಮಸ್ ಪ್ರಶಸ್ತಿ ಮತ್ತು ಹಿಂದೂ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿವೆ. ಈ ವರ್ಷ ಅವರು ಯುನೈಟೆಡ್ ಕಿಂಗ್‌ಡಂನ ರಾಯಲ್ ಸೊಸೈಟಿ ಆಫ್ ಲಿಟರೇಚರ್ (RSL) ನ ಫೆಲೋ ಆಗಿ ಆಯ್ಕೆಯಾದರು. 2021 ರಲ್ಲಿ ‘ದಿ ಆರ್ಡರ್ಸ್ ವರ್ ಟು ರೇಪ್ ಯು: ತಮಿಳು ಟೈಗ್ರೆಸಸ್ ಇನ್ ದಿ ಈಲಂ ಸ್ಟ್ರಗಲ್’ ಎಂಬ ಶೀರ್ಷಿಕೆಯ ಪ್ರಬಂಧಗಳ ಸಂಗ್ರಹವನ್ನು ಸಹ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ‘ಶೂದ್ರ’ ಪದಬಳಕೆ: ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ

2018 ರಲ್ಲಿ ಜಾತಿ ಆಧಾರಿತ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದಲ್ಲಿ ಬಂಧಿಸಲ್ಪಟ್ಟ ತೆಲುಗು ಕ್ರಾಂತಿಕಾರಿ ಕವಿ ವರವರ ರಾವ್ ಸೇರಿದಂತೆ ಭಾರತದಲ್ಲಿ ಲೇಖಕರ ದಮನದ ಬಗ್ಗೆ ಕಂದಸಾಮಿ ಧ್ವನಿಯೆತ್ತಿದ್ದಾರೆ. ಎಡಪಂಥೀಯ ಸಂಘಟನೆಗಳೊಂದಿಗಿನ ಸಂಬಂಧಕ್ಕಾಗಿ ಜೈಲಿನಲ್ಲಿರುವ ಕವಿ, ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬಾ ಅವರನ್ನು ಬೆಂಬಲಿಸಿ ಅವರು ಮಾತನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...