Homeಚಳವಳಿದಲಿತ ಹಕ್ಕುಗಳ ಹೋರಾಟಗಾರ್ತಿ, ಲೇಖಕಿ ಮೀನಾ ಕಂದಸಾಮಿ ಅವರಿಗೆ PEN ಜರ್ಮನಿ ಪ್ರಶಸ್ತಿ

ದಲಿತ ಹಕ್ಕುಗಳ ಹೋರಾಟಗಾರ್ತಿ, ಲೇಖಕಿ ಮೀನಾ ಕಂದಸಾಮಿ ಅವರಿಗೆ PEN ಜರ್ಮನಿ ಪ್ರಶಸ್ತಿ

- Advertisement -
- Advertisement -

ಜರ್ಮನಿಯ ಡಾರ್ಮ್‌ಸ್ಟಾಡ್ಟ್‌ನಲ್ಲಿರುವ ಪೆನ್‌‌‌ ಕೇಂದ್ರ(PEN Center)ವು ‘ಹರ್ಮನ್ ಕೆಸ್ಟನ್ ಪ್ರಶಸ್ತಿ’ಯ ವಿಜೇತರನ್ನು ಸೋಮವಾರ ಘೋಷಿಸಿದೆ. ಈ ವರ್ಷದ ಪ್ರಶಸ್ತಿಯು ಭಾರತೀಯ ಲೇಖಕಿ ಮತ್ತು ಕವಯಿತ್ರಿ ಮೀನಾ ಕಂದಸಾಮಿ ಅವರಿಗೆ ಸಂದಿದೆ.

ಪ್ರಶಸ್ತಿ ಘೋಷಣೆ ಬಗ್ಗೆ ಸಂತಸ ವ್ಯಕ್ತಪಡಿಸಿದರು ಮೀನಾ ಕಂದಸಾಮಿ ಅವರು, “ಪ್ರಾಮಾಣಿಕವಾಗಿ ಹೇಳಬೇಕೆಂದರೆ ಇದಕ್ಕೆ ಹೇಗೆ ಪ್ರತಿಕ್ರಿಯೆ ನೀಡಬೇಕು ಎಂದು ನನಗೆ ಗೊತ್ತಾಗುತ್ತಿಲ್ಲ. ಈ ಹಿಂದೆ ಈ ಪ್ರಶಸ್ತಿಯನ್ನು ಸ್ವೀಕರಿಸಿದವರಲ್ಲಿ ಗುಂಟರ್ ಗ್ರಾಸ್ ಮತ್ತು ಹೆರಾಲ್ಡ್ ಪಿಂಟರ್ ಇದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಜಾಪ್ರಭುತ್ವದ ನಿರ್ಭೀತ ಹೋರಾಟಗಾರ್ತಿ

“ಮೀನಾ ಕಂದಸಾಮಿ ಪ್ರಜಾಪ್ರಭುತ್ವದ ಮತ್ತು ಮಾನವ ಹಕ್ಕುಗಳ ನಿರ್ಭೀತ ಹೋರಾಟಗಾರ್ತಿಯಾಗಿದ್ದಾರೆ. ಭಾರತದಲ್ಲಿ ಭೂರಹಿತರು, ಅಲ್ಪಸಂಖ್ಯಾತರು ಮತ್ತು ದಲಿತರ ದಮನದ ವಿರುದ್ಧ ಅವರು ಹೋರಾಡುತ್ತಿದ್ದಾರೆ” ಎಂದು ಜರ್ಮನ್ PEN ಸೆಂಟರ್‌ನ ಉಪಾಧ್ಯಕ್ಷ ಕಾರ್ನೆಲಿಯಾ ಜೆಟ್ಸೆ ಹೇಳಿದ್ದಾರೆ.

“ಪರಾನುಭೂತಿ, ವಿಶ್ಲೇಷಣಾತ್ಮಕ ನಿಖರತೆ ಮತ್ತು ಸಾಹಿತ್ಯಿಕ ಉತ್ಸಾಹದಿಂದ, ಕಂದಸಾಮಿ ಅವರು ಪಿತೃಪ್ರಭುತ್ವ, ಊಳಿಗಮಾನ್ಯ ಸಂರಚನೆ, ಮಹಿಳೆಯರ ವಿರುದ್ಧದ ಹಿಂಸೆ, ಕಡಿವಾಣವಿಲ್ಲದ ಬಂಡವಾಳಶಾಹಿಯ ಪರಿಣಾಮಗಳು ಮತ್ತು ದಕ್ಷಿಣ ಭಾರತದಲ್ಲಿ ರೈತರ ಹತ್ಯಾಕಾಂಡದ ಬಗ್ಗೆ ಮಾತನಾಡುತ್ತಾರೆ. ಅವರ ಭಾಷಣಗಳು ಮತ್ತು ಬರಹಗಳಲ್ಲಿ ಇವುಗಳನ್ನು ಗುರುತಿಸುತ್ತಾರೆ” ಎಂದು ಜೆಟ್ಸೆ ಹೇಳಿದ್ದಾರೆ.

ಪ್ರಶಸ್ತಿಯನ್ನು ಪ್ರಾಯೋಜಿಸುವ ಜರ್ಮನಿಯ ಹೆಸ್ಸೆ ರಾಜ್ಯದ ಕಲೆ ಮತ್ತು ಸಂಸ್ಕೃತಿ ಸಚಿವೆ ಏಂಜೆಲಾ ಡಾರ್ನ್ ಅವರು ಮೀನಾ ಕಂದಸಾಮಿ ಅವರನ್ನು ಶ್ಲಾಘಿಸಿದ್ದು, ‘‘ಅವರು ತಮ್ಮ ಪುಸ್ತಕಗಳಲ್ಲಿ ಅಸಮಾನತೆ ಮತ್ತು ದಮನದ ವಿರುದ್ಧ ಬಂಡಾಯವೆದ್ದಿದ್ದಾರೆ. ಹಿಂಸಾಚಾರದ ಬಲಿಪಶುಗಳಿಗೆ ಧ್ವನಿ ನೀಡುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶೂದ್ರ’ ಪದಬಳಕೆ: ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ

ಶೋಷಣೆಗೆ ಒಳಗಾದವರ ಪರವಾಗಿ ನಿಲ್ಲುವವರು

ಮೀನಾ ಕಂದಸಾಮಿ ಅವರು 1984 ರಲ್ಲಿ ಚೆನ್ನೈನಲ್ಲಿ ಜನಿಸಿದರು. ಹದಿಹರೆಯದಿಂದಲೂ ಕವನ ಬರೆಯುತ್ತಿದ್ದ ಅವರು, ತನ್ನನ್ನು ತಾನು ‘ಜಾತಿ ವಿರೋಧಿ ಹೋರಾಟಗಾರ್ತಿ, ಕವಿ, ಕಾದಂಬರಿಕಾರ್ತಿ ಮತ್ತು ಅನುವಾದಕಿ’ ಎಂದು ಕರೆದುಕೊಳ್ಳುತ್ತಾಳೆ. ಅವರ ವೆಬ್‌ಸೈಟ್‌ನ ಪ್ರಕಾರ, ಅವರ ಬರವಣಿಗೆಯು ಜಾತಿ, ಲಿಂಗ ಮತ್ತು ಜನಾಂಗೀಯ ದಬ್ಬಾಳಿಕೆಯ ವಿರುದ್ಧ ಉಗ್ರಗಾಮಿ ಪ್ರತಿರೋಧವನ್ನು ಗುರುತಿಸುತ್ತದೆ.

‘ದಿ ಜಿಪ್ಸಿ ಗಾಡೆಸ್’ (2014), ‘ವೆನ್ ಐ ಹಿಟ್ ಯು: ಆರ್‌ ಎ ಪೋರ್ಟ್ರೇಟ್ ಆಫ್ ದಿ ರೈಟರ್ ಆಸ್ ಎ ಯಂಗ್ ವೈಫ್’ (2017) ಪುಸ್ತಕಗಳು ಮೀನಾ ಕಂದಸಾಮಿ ಅವರ ಪ್ರಮುಖ ಕೃತಿಗಳಾಗಿವೆ. ‘Ms Militancy’ (2010) ಮತ್ತು ‘#ThisPoemWillProvokeYou and Other Poems’ (2015) ಎಂಬ ಕವಿತೆಗಳ ಸಂಕಲನಗಳನ್ನು ಕೂಡಾ ಅವರು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

ಜರ್ಮನಿಯ PEN ಕೇಂದ್ರವು ಈ ವರ್ಷ ನವೆಂಬರ್ 15 ರಂದು ಡಾರ್ಮ್‌ಸ್ಟಾಡ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಮೀನಾ ಕಂದಸಾಮಿ ಅವರಿಗೆ ಪ್ರಶಸ್ತಿಯನ್ನು ನೀಡಲಿದೆ. ವಿಜೇತರಿಗೆ ಬಹುಮಾನದ ಹಣವಾಗಿ 16 ಲಕ್ಷ ರೂ. (20,000 ಯೂರೊ)ಗಳನ್ನು ಮೊತ್ತವನ್ನು ಪಡೆಯುತ್ತಾರೆ. ಈ ವರ್ಷ, PEN ಕೇಂದ್ರವು “ವೀಟರ್ ಸ್ಕ್ರಿಬೆನ್” ಎಂಬ ವೆಬ್‌ಸೈಟ್ ಅನ್ನು ಪ್ರೋತ್ಸಾಹಕ್ಕಾಗಿ ವಿಶೇಷ ಪ್ರಶಸ್ತಿಯೊಂದಿಗೆ ಗೌರವಿಸುತ್ತಿದೆ. ದೇಶಭ್ರಷ್ಟರಾಗಿರುವ ಲೇಖಕರು ಮತ್ತು ಸಂಘರ್ಷ ವಲಯಗಳ ಬರಹಗಾರರಿಗೆ ತಮ್ಮ ಆಲೋಚನೆಗಳನ್ನು ವ್ಯಕ್ತಪಡಿಸಲು ವೆಬ್‌ಸೈಟ್‌ ವೇದಿಕೆ ನೀಡುತ್ತಿದೆ.

ಹರ್ಮನ್ ಕೆಸ್ಟನ್ ಪ್ರಶಸ್ತಿಯು ಕಿರುಕುಳಕ್ಕೊಳಗಾದ ಲೇಖಕರು ಮತ್ತು ಪತ್ರಕರ್ತರ ಹಕ್ಕುಗಳಿಗಾಗಿ ನಿಲ್ಲುವ ವ್ಯಕ್ತಿಗಳನ್ನು ಗೌರವಿಸುತ್ತದೆ. ಈ ಹಿಂದೆ ಈ ಪ್ರಶಸ್ತಿ ಪುರಸ್ಕೃತರಲ್ಲಿ ಗುಂಟರ್ ಗ್ರಾಸ್, ಅನ್ನಾ ಪೊಲಿಟ್‌ಕೋವ್ಸ್ಕಯಾ, ಲಿಯು ಕ್ಸಿಯಾಬೊ, ಹೆರಾಲ್ಡ್ ಪಿಂಟರ್ ಮತ್ತು ಕ್ಯಾನ್ ಡುಂಡರ್ ಸೇರಿದ್ದಾರೆ.

ಕಂದಸಾಮಿ ಅವರ ಕಾದಂಬರಿಗಳು ಮಹಿಳಾ ಪ್ರಶಸ್ತಿ, ಅಂತರರಾಷ್ಟ್ರೀಯ ಡೈಲನ್ ಥಾಮಸ್ ಪ್ರಶಸ್ತಿ ಮತ್ತು ಹಿಂದೂ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿವೆ. ಈ ವರ್ಷ ಅವರು ಯುನೈಟೆಡ್ ಕಿಂಗ್‌ಡಂನ ರಾಯಲ್ ಸೊಸೈಟಿ ಆಫ್ ಲಿಟರೇಚರ್ (RSL) ನ ಫೆಲೋ ಆಗಿ ಆಯ್ಕೆಯಾದರು. 2021 ರಲ್ಲಿ ‘ದಿ ಆರ್ಡರ್ಸ್ ವರ್ ಟು ರೇಪ್ ಯು: ತಮಿಳು ಟೈಗ್ರೆಸಸ್ ಇನ್ ದಿ ಈಲಂ ಸ್ಟ್ರಗಲ್’ ಎಂಬ ಶೀರ್ಷಿಕೆಯ ಪ್ರಬಂಧಗಳ ಸಂಗ್ರಹವನ್ನು ಸಹ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ‘ಶೂದ್ರ’ ಪದಬಳಕೆ: ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ

2018 ರಲ್ಲಿ ಜಾತಿ ಆಧಾರಿತ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದಲ್ಲಿ ಬಂಧಿಸಲ್ಪಟ್ಟ ತೆಲುಗು ಕ್ರಾಂತಿಕಾರಿ ಕವಿ ವರವರ ರಾವ್ ಸೇರಿದಂತೆ ಭಾರತದಲ್ಲಿ ಲೇಖಕರ ದಮನದ ಬಗ್ಗೆ ಕಂದಸಾಮಿ ಧ್ವನಿಯೆತ್ತಿದ್ದಾರೆ. ಎಡಪಂಥೀಯ ಸಂಘಟನೆಗಳೊಂದಿಗಿನ ಸಂಬಂಧಕ್ಕಾಗಿ ಜೈಲಿನಲ್ಲಿರುವ ಕವಿ, ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬಾ ಅವರನ್ನು ಬೆಂಬಲಿಸಿ ಅವರು ಮಾತನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...