Homeಚಳವಳಿದಲಿತ ಹಕ್ಕುಗಳ ಹೋರಾಟಗಾರ್ತಿ, ಲೇಖಕಿ ಮೀನಾ ಕಂದಸಾಮಿ ಅವರಿಗೆ PEN ಜರ್ಮನಿ ಪ್ರಶಸ್ತಿ

ದಲಿತ ಹಕ್ಕುಗಳ ಹೋರಾಟಗಾರ್ತಿ, ಲೇಖಕಿ ಮೀನಾ ಕಂದಸಾಮಿ ಅವರಿಗೆ PEN ಜರ್ಮನಿ ಪ್ರಶಸ್ತಿ

- Advertisement -
- Advertisement -

ಜರ್ಮನಿಯ ಡಾರ್ಮ್‌ಸ್ಟಾಡ್ಟ್‌ನಲ್ಲಿರುವ ಪೆನ್‌‌‌ ಕೇಂದ್ರ(PEN Center)ವು ‘ಹರ್ಮನ್ ಕೆಸ್ಟನ್ ಪ್ರಶಸ್ತಿ’ಯ ವಿಜೇತರನ್ನು ಸೋಮವಾರ ಘೋಷಿಸಿದೆ. ಈ ವರ್ಷದ ಪ್ರಶಸ್ತಿಯು ಭಾರತೀಯ ಲೇಖಕಿ ಮತ್ತು ಕವಯಿತ್ರಿ ಮೀನಾ ಕಂದಸಾಮಿ ಅವರಿಗೆ ಸಂದಿದೆ.

ಪ್ರಶಸ್ತಿ ಘೋಷಣೆ ಬಗ್ಗೆ ಸಂತಸ ವ್ಯಕ್ತಪಡಿಸಿದರು ಮೀನಾ ಕಂದಸಾಮಿ ಅವರು, “ಪ್ರಾಮಾಣಿಕವಾಗಿ ಹೇಳಬೇಕೆಂದರೆ ಇದಕ್ಕೆ ಹೇಗೆ ಪ್ರತಿಕ್ರಿಯೆ ನೀಡಬೇಕು ಎಂದು ನನಗೆ ಗೊತ್ತಾಗುತ್ತಿಲ್ಲ. ಈ ಹಿಂದೆ ಈ ಪ್ರಶಸ್ತಿಯನ್ನು ಸ್ವೀಕರಿಸಿದವರಲ್ಲಿ ಗುಂಟರ್ ಗ್ರಾಸ್ ಮತ್ತು ಹೆರಾಲ್ಡ್ ಪಿಂಟರ್ ಇದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಜಾಪ್ರಭುತ್ವದ ನಿರ್ಭೀತ ಹೋರಾಟಗಾರ್ತಿ

“ಮೀನಾ ಕಂದಸಾಮಿ ಪ್ರಜಾಪ್ರಭುತ್ವದ ಮತ್ತು ಮಾನವ ಹಕ್ಕುಗಳ ನಿರ್ಭೀತ ಹೋರಾಟಗಾರ್ತಿಯಾಗಿದ್ದಾರೆ. ಭಾರತದಲ್ಲಿ ಭೂರಹಿತರು, ಅಲ್ಪಸಂಖ್ಯಾತರು ಮತ್ತು ದಲಿತರ ದಮನದ ವಿರುದ್ಧ ಅವರು ಹೋರಾಡುತ್ತಿದ್ದಾರೆ” ಎಂದು ಜರ್ಮನ್ PEN ಸೆಂಟರ್‌ನ ಉಪಾಧ್ಯಕ್ಷ ಕಾರ್ನೆಲಿಯಾ ಜೆಟ್ಸೆ ಹೇಳಿದ್ದಾರೆ.

“ಪರಾನುಭೂತಿ, ವಿಶ್ಲೇಷಣಾತ್ಮಕ ನಿಖರತೆ ಮತ್ತು ಸಾಹಿತ್ಯಿಕ ಉತ್ಸಾಹದಿಂದ, ಕಂದಸಾಮಿ ಅವರು ಪಿತೃಪ್ರಭುತ್ವ, ಊಳಿಗಮಾನ್ಯ ಸಂರಚನೆ, ಮಹಿಳೆಯರ ವಿರುದ್ಧದ ಹಿಂಸೆ, ಕಡಿವಾಣವಿಲ್ಲದ ಬಂಡವಾಳಶಾಹಿಯ ಪರಿಣಾಮಗಳು ಮತ್ತು ದಕ್ಷಿಣ ಭಾರತದಲ್ಲಿ ರೈತರ ಹತ್ಯಾಕಾಂಡದ ಬಗ್ಗೆ ಮಾತನಾಡುತ್ತಾರೆ. ಅವರ ಭಾಷಣಗಳು ಮತ್ತು ಬರಹಗಳಲ್ಲಿ ಇವುಗಳನ್ನು ಗುರುತಿಸುತ್ತಾರೆ” ಎಂದು ಜೆಟ್ಸೆ ಹೇಳಿದ್ದಾರೆ.

ಪ್ರಶಸ್ತಿಯನ್ನು ಪ್ರಾಯೋಜಿಸುವ ಜರ್ಮನಿಯ ಹೆಸ್ಸೆ ರಾಜ್ಯದ ಕಲೆ ಮತ್ತು ಸಂಸ್ಕೃತಿ ಸಚಿವೆ ಏಂಜೆಲಾ ಡಾರ್ನ್ ಅವರು ಮೀನಾ ಕಂದಸಾಮಿ ಅವರನ್ನು ಶ್ಲಾಘಿಸಿದ್ದು, ‘‘ಅವರು ತಮ್ಮ ಪುಸ್ತಕಗಳಲ್ಲಿ ಅಸಮಾನತೆ ಮತ್ತು ದಮನದ ವಿರುದ್ಧ ಬಂಡಾಯವೆದ್ದಿದ್ದಾರೆ. ಹಿಂಸಾಚಾರದ ಬಲಿಪಶುಗಳಿಗೆ ಧ್ವನಿ ನೀಡುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶೂದ್ರ’ ಪದಬಳಕೆ: ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ

ಶೋಷಣೆಗೆ ಒಳಗಾದವರ ಪರವಾಗಿ ನಿಲ್ಲುವವರು

ಮೀನಾ ಕಂದಸಾಮಿ ಅವರು 1984 ರಲ್ಲಿ ಚೆನ್ನೈನಲ್ಲಿ ಜನಿಸಿದರು. ಹದಿಹರೆಯದಿಂದಲೂ ಕವನ ಬರೆಯುತ್ತಿದ್ದ ಅವರು, ತನ್ನನ್ನು ತಾನು ‘ಜಾತಿ ವಿರೋಧಿ ಹೋರಾಟಗಾರ್ತಿ, ಕವಿ, ಕಾದಂಬರಿಕಾರ್ತಿ ಮತ್ತು ಅನುವಾದಕಿ’ ಎಂದು ಕರೆದುಕೊಳ್ಳುತ್ತಾಳೆ. ಅವರ ವೆಬ್‌ಸೈಟ್‌ನ ಪ್ರಕಾರ, ಅವರ ಬರವಣಿಗೆಯು ಜಾತಿ, ಲಿಂಗ ಮತ್ತು ಜನಾಂಗೀಯ ದಬ್ಬಾಳಿಕೆಯ ವಿರುದ್ಧ ಉಗ್ರಗಾಮಿ ಪ್ರತಿರೋಧವನ್ನು ಗುರುತಿಸುತ್ತದೆ.

‘ದಿ ಜಿಪ್ಸಿ ಗಾಡೆಸ್’ (2014), ‘ವೆನ್ ಐ ಹಿಟ್ ಯು: ಆರ್‌ ಎ ಪೋರ್ಟ್ರೇಟ್ ಆಫ್ ದಿ ರೈಟರ್ ಆಸ್ ಎ ಯಂಗ್ ವೈಫ್’ (2017) ಪುಸ್ತಕಗಳು ಮೀನಾ ಕಂದಸಾಮಿ ಅವರ ಪ್ರಮುಖ ಕೃತಿಗಳಾಗಿವೆ. ‘Ms Militancy’ (2010) ಮತ್ತು ‘#ThisPoemWillProvokeYou and Other Poems’ (2015) ಎಂಬ ಕವಿತೆಗಳ ಸಂಕಲನಗಳನ್ನು ಕೂಡಾ ಅವರು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

ಜರ್ಮನಿಯ PEN ಕೇಂದ್ರವು ಈ ವರ್ಷ ನವೆಂಬರ್ 15 ರಂದು ಡಾರ್ಮ್‌ಸ್ಟಾಡ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಮೀನಾ ಕಂದಸಾಮಿ ಅವರಿಗೆ ಪ್ರಶಸ್ತಿಯನ್ನು ನೀಡಲಿದೆ. ವಿಜೇತರಿಗೆ ಬಹುಮಾನದ ಹಣವಾಗಿ 16 ಲಕ್ಷ ರೂ. (20,000 ಯೂರೊ)ಗಳನ್ನು ಮೊತ್ತವನ್ನು ಪಡೆಯುತ್ತಾರೆ. ಈ ವರ್ಷ, PEN ಕೇಂದ್ರವು “ವೀಟರ್ ಸ್ಕ್ರಿಬೆನ್” ಎಂಬ ವೆಬ್‌ಸೈಟ್ ಅನ್ನು ಪ್ರೋತ್ಸಾಹಕ್ಕಾಗಿ ವಿಶೇಷ ಪ್ರಶಸ್ತಿಯೊಂದಿಗೆ ಗೌರವಿಸುತ್ತಿದೆ. ದೇಶಭ್ರಷ್ಟರಾಗಿರುವ ಲೇಖಕರು ಮತ್ತು ಸಂಘರ್ಷ ವಲಯಗಳ ಬರಹಗಾರರಿಗೆ ತಮ್ಮ ಆಲೋಚನೆಗಳನ್ನು ವ್ಯಕ್ತಪಡಿಸಲು ವೆಬ್‌ಸೈಟ್‌ ವೇದಿಕೆ ನೀಡುತ್ತಿದೆ.

ಹರ್ಮನ್ ಕೆಸ್ಟನ್ ಪ್ರಶಸ್ತಿಯು ಕಿರುಕುಳಕ್ಕೊಳಗಾದ ಲೇಖಕರು ಮತ್ತು ಪತ್ರಕರ್ತರ ಹಕ್ಕುಗಳಿಗಾಗಿ ನಿಲ್ಲುವ ವ್ಯಕ್ತಿಗಳನ್ನು ಗೌರವಿಸುತ್ತದೆ. ಈ ಹಿಂದೆ ಈ ಪ್ರಶಸ್ತಿ ಪುರಸ್ಕೃತರಲ್ಲಿ ಗುಂಟರ್ ಗ್ರಾಸ್, ಅನ್ನಾ ಪೊಲಿಟ್‌ಕೋವ್ಸ್ಕಯಾ, ಲಿಯು ಕ್ಸಿಯಾಬೊ, ಹೆರಾಲ್ಡ್ ಪಿಂಟರ್ ಮತ್ತು ಕ್ಯಾನ್ ಡುಂಡರ್ ಸೇರಿದ್ದಾರೆ.

ಕಂದಸಾಮಿ ಅವರ ಕಾದಂಬರಿಗಳು ಮಹಿಳಾ ಪ್ರಶಸ್ತಿ, ಅಂತರರಾಷ್ಟ್ರೀಯ ಡೈಲನ್ ಥಾಮಸ್ ಪ್ರಶಸ್ತಿ ಮತ್ತು ಹಿಂದೂ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿವೆ. ಈ ವರ್ಷ ಅವರು ಯುನೈಟೆಡ್ ಕಿಂಗ್‌ಡಂನ ರಾಯಲ್ ಸೊಸೈಟಿ ಆಫ್ ಲಿಟರೇಚರ್ (RSL) ನ ಫೆಲೋ ಆಗಿ ಆಯ್ಕೆಯಾದರು. 2021 ರಲ್ಲಿ ‘ದಿ ಆರ್ಡರ್ಸ್ ವರ್ ಟು ರೇಪ್ ಯು: ತಮಿಳು ಟೈಗ್ರೆಸಸ್ ಇನ್ ದಿ ಈಲಂ ಸ್ಟ್ರಗಲ್’ ಎಂಬ ಶೀರ್ಷಿಕೆಯ ಪ್ರಬಂಧಗಳ ಸಂಗ್ರಹವನ್ನು ಸಹ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ‘ಶೂದ್ರ’ ಪದಬಳಕೆ: ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ

2018 ರಲ್ಲಿ ಜಾತಿ ಆಧಾರಿತ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದಲ್ಲಿ ಬಂಧಿಸಲ್ಪಟ್ಟ ತೆಲುಗು ಕ್ರಾಂತಿಕಾರಿ ಕವಿ ವರವರ ರಾವ್ ಸೇರಿದಂತೆ ಭಾರತದಲ್ಲಿ ಲೇಖಕರ ದಮನದ ಬಗ್ಗೆ ಕಂದಸಾಮಿ ಧ್ವನಿಯೆತ್ತಿದ್ದಾರೆ. ಎಡಪಂಥೀಯ ಸಂಘಟನೆಗಳೊಂದಿಗಿನ ಸಂಬಂಧಕ್ಕಾಗಿ ಜೈಲಿನಲ್ಲಿರುವ ಕವಿ, ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬಾ ಅವರನ್ನು ಬೆಂಬಲಿಸಿ ಅವರು ಮಾತನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....