Homeಮುಖಪುಟಗ್ಯಾರಂಟಿಗೆ ಬಳಸಿರುವ ದಲಿತರ ಹಣ ಕೂಡಲೇ ಹಿಂದಿರುಗಿಸಬೇಕೆಂದು ದಸಂಸ ಒಕ್ಕೂಟ ಆಗ್ರಹ

ಗ್ಯಾರಂಟಿಗೆ ಬಳಸಿರುವ ದಲಿತರ ಹಣ ಕೂಡಲೇ ಹಿಂದಿರುಗಿಸಬೇಕೆಂದು ದಸಂಸ ಒಕ್ಕೂಟ ಆಗ್ರಹ

- Advertisement -
- Advertisement -

ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳಿಗೆ ಬಳಸಿರುವ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಕೂಡಲೇ ದಲಿತರ ಅಭಿವೃದ್ಧಿಗೆ ಹಿಂದಿರುಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟವು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ದಸಂಸ ಒಕ್ಕೂಟ, “ಗ್ಯಾರಂಟಿಗೆ ಬಳಸಿರುವ ಹಣ ಹಿಂತಿರುಗಿಸುವ ಜತೆಗೆ,ಕಾಯ್ದೆಯ ‘7ಡಿ’ ಸೆಕ್ಷನ್‌ ರದ್ದುಪಡಿಸಿದಂತೆ ‘7ಸಿ’ಯನ್ನೂ ರದ್ದುಪಡಿಸಬೇಕು” ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದೆ.

“ಸಂವಿಧಾನ ವಿಧಿ 46ರ ಆಶಯವನ್ನು ಪಾಲಿಸಬೇಕು” ಎಂದು ಒತ್ತಾಯಿಸಿರುವ ಒಕ್ಕೂಟ, “ಅಂಬೇಡ್ಕರ್‌ ಅಭಿವೃದ್ಧಿ ನಿಗಮದಲ್ಲಿ ಬಾಕಿ ಉಳಿದಿರುವ 5 ಲಕ್ಷ ಅರ್ಜಿಗಳನ್ನು ಸೂಕ್ತ ನೆರವು ನೀಡಿ, ಕೂಡಲೇ ಇತ್ಯರ್ಥಗೊಳಿಸಬೇಕು” ಎಂದು ಒತ್ತಾಯಿಸಿದೆ.

“2013 ರಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವೇ ಜಾರಿಗೆ ತಂದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯ ಕಾಯ್ದೆಯು ತನ್ನ ಪರಿಭಾಷೆಯಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಎಂಬುದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯಲ್ಲಿನ ಅಂತರವನ್ನು ತುಂಬಲು ಅನುಮೋದಿಸಿರುವ ಯೋಜನೆ ಎನ್ನುತ್ತದೆ. ಅದರಲ್ಲಿಯೇ ‘ಅಭಿವೃದ್ಧಿಯ ಅ೦ತರ’ ಎಂದರೆ, ಮಾನವ ಮತ್ತು ಆರ್ಥಿಕ ಅಭಿವೃದ್ಧಿಗೆ ಸಂಬಂಧಪಟ್ಟಂತೆ. ನಿರ್ದಿಷ್ಟವಾಗಿ ಗೊತ್ತುಪಡಿಸಬಹುದಾದಂತೆ ರಾಜ್ಯ ಸರಾಸರಿಗೆ ಹೋಲಿಸಿದಾಗ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಸೂಚಕಗಳಲ್ಲಿರುವ ವ್ಯತ್ಯಾಸಗಳು ಎ೦ದು ವ್ಯಾಖ್ಯಾನಿಸುತ್ತದೆ” ಎಂದು ಒಕ್ಕೂಟ ವಿವರಿಸಿದೆ.

“ಸಾರಾಂಶದಲ್ಲಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರು (ದಲಿತರು) ಮತ್ತು ಇತರ ಸಮುದಾಯಗಳ ನಡುವಿನ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯ ಅಂತರವನ್ನು ಕಡಿಮೆ ಮಾಡುವುದೇ ಈ ಯೋಜನೆಯ ಮೂಲ ಉದ್ದೇಶ. 2023-24ನೇ ಸಾಲಿನಿಂದಲೂ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣದಲ್ಲಿ ಸುಮಾರು ₹25000 ಕೋಟಿಯನ್ನು ಗ್ಯಾರ೦ಟಿಗಳಿಗೂ, ₹15000 ಕೋಟಿಯನ್ನು ಅನ್ಯ ಉದ್ದೇಶಕ್ಕೂ ಬಳಸಿರುವುದು ಕಾಯ್ದೆಯನ್ನು ಉಲ್ಲಂಘಫಿಸಿದಂತೆ ಆಗುತ್ತದೆ” ಎಂದು ಆರೋಪಿಸಿದೆ.

“ಅಷ್ಟೇ ಅಲ್ಲ, ಕಳೆದ ಬಿಜೆಪಿ ಸರ್ಕಾರ ಮಾಡಿದ ಕೆಲಸವನ್ನೇ ಕಾಂಗ್ರೆಸ್‌ ಮಾಡಿದಂತಾಗಿದೆ. ಅದಷ್ಟೇ ಅಲ್ಲದೆ ಸರ್ಕಾರದ ಸಮಾಜ ಕಲ್ಮಾಣ ಸಚಿವರೂ ಸೇರಿದಂತೆ ಈ ಕ್ರಮವನ್ನು ಸಮರ್ಥಿಸಿಕೊಳ್ಳುತ್ತಿರುವುದು ಶೋಚನೀಯ. ದಲಿತರ ಒಗ್ಗಟ್ಟಿನ ಓಟುಗಳಿ೦ದ ಸರ್ಕಾರ ರಚಿಸಿದ ಕಾಂಗ್ರೆಸ್, ಈಗ ದಲಿತರ ಅಭಿವೃದ್ಧಿಗೆ ಮೀಸಲಿರಿಸಿದ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವುದು ಸಮುದಾಯದಲ್ಲಿ ಅಸಮಾಧಾನವನ್ನು ಉಂಟು ಮಾಡಿದೆ” ಎಂದು ಒಕ್ಕೂಟದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಗ್ಯಾರಂಟಿ ಯೋಜನೆಗಳು ಉತ್ತಮ ಯೋಜನೆಗಳೇ; ಆದರೆ ಅವುಗಳ ಉದ್ದೇಶವೇ ಬೇರೆ, ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯ ಉದ್ದೇಶವೇ ಬೇರೆ. ಕರ್ನಾಟಕ ಮಾನವ ಅಭಿವೃದ್ಧಿ ವರದಿ- 2015ರ ಪ್ರಕಾರ, ಇತರೆ ಸಮುದಾಯಗಳಿಗೆ ಹೋಲಿಸಿಕೊ೦ಡರೆ ದಲಿತರು ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಹೀಗಿರುವಾಗ ಸಚಿವರು ಮತ್ತು ಮುಖ್ಯಮಂತ್ರಿಗಳು ಹೇಳುತ್ತಿರವಂತೆ, ದಲಿತರಿಗೆ ಮೀಸಲಿಟ್ಟ ಹಣವನ್ನು ಎಸ್‌ಸಿಪಿ-ಟಿಎಸ್‌ಪಿಯ ಹೊರತಾದ ಅಭಿವೃದ್ಧಿ ಯೋಜನೆಗಳಿಗೆ ಬಳಸುವುದೂ ಬಡತನ ನಿರ್ಮೂಲನೆಯ ಉದ್ದೇಶವನ್ನೇ ಹೊಂದಿದೆ ಎಂಬ ಸಮರ್ಥನೆ ಒಪ್ಪತಕ್ಕುದಲ್ಲ; ಹಾಗೇನಾದರೂ ಅವರ ಮಾತು ನಿಜವಾಗಿದ್ದರೆ ಕಳೆದ 2014ರಿ೦ದ ಇದೇ ದಲಿತರಿಗಾಗಿ ಮೀಸಲಿಟ್ಟ ₹29,5687 ಕೋಟಿ ಹಣವನ್ನು ಯಾವುದಕ್ಕೆಲ್ಲಾ ಖರ್ಚು ಮಾಡಲಾಗಿದೆ; ಎಷ್ಟು ಕುಟುಂಬಗಳು ಬಡತನ ರೇಖೆಗಿ೦ತ ಮೇಲೆ ಬಂದಿವೆ ಎ೦ಬ ಅಂಕಿ ಅಂಶಗಳನ್ನು ಸರ್ಕಾರ ಬಿಡಗಡೆ ಮಾಡಬೇಕಿದೆ” ಎಂದು ದಸಂಸ ಒಕ್ಕೂಟ ಆಗ್ರಹಿಸಿದೆ.

“ಉನ್ನತ ಮಟ್ಟದ ಸಮಿತಿಯೊಂದನ್ನು ನೇಮಿಸಿ ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣ ಎಲ್ಲಿಗೆ ಹೋಗುತ್ತಿದೆ; ಎಷ್ಟು ಅಭಿವೃದ್ಧಿ ಆಗಿದೆ ಎಂಬುದನ್ನು ಅಧ್ಯಯನ ಮಾಡಿ ವರದಿ ಬಿಡುಗಡೆ ಮಾಡಬೇಕಿದೆ” ಎಂದು ಒತ್ತಾಯಿಸಿಸಲಾಗಿದೆ.

ಒಕ್ಕೂಟದ ಪರವಾಗಿ ಎನ್.ವೆಂಕಟೇಶ್, ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ವಿ ನಾಗರಾಜ, ಇಂದೂಧರ ಹೊನ್ನಾಪುರ, ಎನ್‌.ಮುನಿಸ್ವಾಮಿ ಹಾಗೂ ಜೀವನಹಳ್ಳಿ ವೆಂಕಟೇಶ್‌ ಸಹಿ ಮಾಡಿದ್ದಾರೆ.

ಶೇ.90ರಷ್ಟು ಒಂದೇ ಜಾತಿಯವರು ಮಲ ಬಾಚುತ್ತಿರುವುದು ಏಕೆ: ನ್ಯಾ.ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...