Homeಮುಖಪುಟಗ್ಯಾರಂಟಿಗೆ ಬಳಸಿರುವ ದಲಿತರ ಹಣ ಕೂಡಲೇ ಹಿಂದಿರುಗಿಸಬೇಕೆಂದು ದಸಂಸ ಒಕ್ಕೂಟ ಆಗ್ರಹ

ಗ್ಯಾರಂಟಿಗೆ ಬಳಸಿರುವ ದಲಿತರ ಹಣ ಕೂಡಲೇ ಹಿಂದಿರುಗಿಸಬೇಕೆಂದು ದಸಂಸ ಒಕ್ಕೂಟ ಆಗ್ರಹ

- Advertisement -
- Advertisement -

ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳಿಗೆ ಬಳಸಿರುವ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಕೂಡಲೇ ದಲಿತರ ಅಭಿವೃದ್ಧಿಗೆ ಹಿಂದಿರುಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟವು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ದಸಂಸ ಒಕ್ಕೂಟ, “ಗ್ಯಾರಂಟಿಗೆ ಬಳಸಿರುವ ಹಣ ಹಿಂತಿರುಗಿಸುವ ಜತೆಗೆ,ಕಾಯ್ದೆಯ ‘7ಡಿ’ ಸೆಕ್ಷನ್‌ ರದ್ದುಪಡಿಸಿದಂತೆ ‘7ಸಿ’ಯನ್ನೂ ರದ್ದುಪಡಿಸಬೇಕು” ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದೆ.

“ಸಂವಿಧಾನ ವಿಧಿ 46ರ ಆಶಯವನ್ನು ಪಾಲಿಸಬೇಕು” ಎಂದು ಒತ್ತಾಯಿಸಿರುವ ಒಕ್ಕೂಟ, “ಅಂಬೇಡ್ಕರ್‌ ಅಭಿವೃದ್ಧಿ ನಿಗಮದಲ್ಲಿ ಬಾಕಿ ಉಳಿದಿರುವ 5 ಲಕ್ಷ ಅರ್ಜಿಗಳನ್ನು ಸೂಕ್ತ ನೆರವು ನೀಡಿ, ಕೂಡಲೇ ಇತ್ಯರ್ಥಗೊಳಿಸಬೇಕು” ಎಂದು ಒತ್ತಾಯಿಸಿದೆ.

“2013 ರಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವೇ ಜಾರಿಗೆ ತಂದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯ ಕಾಯ್ದೆಯು ತನ್ನ ಪರಿಭಾಷೆಯಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಎಂಬುದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯಲ್ಲಿನ ಅಂತರವನ್ನು ತುಂಬಲು ಅನುಮೋದಿಸಿರುವ ಯೋಜನೆ ಎನ್ನುತ್ತದೆ. ಅದರಲ್ಲಿಯೇ ‘ಅಭಿವೃದ್ಧಿಯ ಅ೦ತರ’ ಎಂದರೆ, ಮಾನವ ಮತ್ತು ಆರ್ಥಿಕ ಅಭಿವೃದ್ಧಿಗೆ ಸಂಬಂಧಪಟ್ಟಂತೆ. ನಿರ್ದಿಷ್ಟವಾಗಿ ಗೊತ್ತುಪಡಿಸಬಹುದಾದಂತೆ ರಾಜ್ಯ ಸರಾಸರಿಗೆ ಹೋಲಿಸಿದಾಗ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಸೂಚಕಗಳಲ್ಲಿರುವ ವ್ಯತ್ಯಾಸಗಳು ಎ೦ದು ವ್ಯಾಖ್ಯಾನಿಸುತ್ತದೆ” ಎಂದು ಒಕ್ಕೂಟ ವಿವರಿಸಿದೆ.

“ಸಾರಾಂಶದಲ್ಲಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರು (ದಲಿತರು) ಮತ್ತು ಇತರ ಸಮುದಾಯಗಳ ನಡುವಿನ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯ ಅಂತರವನ್ನು ಕಡಿಮೆ ಮಾಡುವುದೇ ಈ ಯೋಜನೆಯ ಮೂಲ ಉದ್ದೇಶ. 2023-24ನೇ ಸಾಲಿನಿಂದಲೂ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣದಲ್ಲಿ ಸುಮಾರು ₹25000 ಕೋಟಿಯನ್ನು ಗ್ಯಾರ೦ಟಿಗಳಿಗೂ, ₹15000 ಕೋಟಿಯನ್ನು ಅನ್ಯ ಉದ್ದೇಶಕ್ಕೂ ಬಳಸಿರುವುದು ಕಾಯ್ದೆಯನ್ನು ಉಲ್ಲಂಘಫಿಸಿದಂತೆ ಆಗುತ್ತದೆ” ಎಂದು ಆರೋಪಿಸಿದೆ.

“ಅಷ್ಟೇ ಅಲ್ಲ, ಕಳೆದ ಬಿಜೆಪಿ ಸರ್ಕಾರ ಮಾಡಿದ ಕೆಲಸವನ್ನೇ ಕಾಂಗ್ರೆಸ್‌ ಮಾಡಿದಂತಾಗಿದೆ. ಅದಷ್ಟೇ ಅಲ್ಲದೆ ಸರ್ಕಾರದ ಸಮಾಜ ಕಲ್ಮಾಣ ಸಚಿವರೂ ಸೇರಿದಂತೆ ಈ ಕ್ರಮವನ್ನು ಸಮರ್ಥಿಸಿಕೊಳ್ಳುತ್ತಿರುವುದು ಶೋಚನೀಯ. ದಲಿತರ ಒಗ್ಗಟ್ಟಿನ ಓಟುಗಳಿ೦ದ ಸರ್ಕಾರ ರಚಿಸಿದ ಕಾಂಗ್ರೆಸ್, ಈಗ ದಲಿತರ ಅಭಿವೃದ್ಧಿಗೆ ಮೀಸಲಿರಿಸಿದ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವುದು ಸಮುದಾಯದಲ್ಲಿ ಅಸಮಾಧಾನವನ್ನು ಉಂಟು ಮಾಡಿದೆ” ಎಂದು ಒಕ್ಕೂಟದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಗ್ಯಾರಂಟಿ ಯೋಜನೆಗಳು ಉತ್ತಮ ಯೋಜನೆಗಳೇ; ಆದರೆ ಅವುಗಳ ಉದ್ದೇಶವೇ ಬೇರೆ, ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯ ಉದ್ದೇಶವೇ ಬೇರೆ. ಕರ್ನಾಟಕ ಮಾನವ ಅಭಿವೃದ್ಧಿ ವರದಿ- 2015ರ ಪ್ರಕಾರ, ಇತರೆ ಸಮುದಾಯಗಳಿಗೆ ಹೋಲಿಸಿಕೊ೦ಡರೆ ದಲಿತರು ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಹೀಗಿರುವಾಗ ಸಚಿವರು ಮತ್ತು ಮುಖ್ಯಮಂತ್ರಿಗಳು ಹೇಳುತ್ತಿರವಂತೆ, ದಲಿತರಿಗೆ ಮೀಸಲಿಟ್ಟ ಹಣವನ್ನು ಎಸ್‌ಸಿಪಿ-ಟಿಎಸ್‌ಪಿಯ ಹೊರತಾದ ಅಭಿವೃದ್ಧಿ ಯೋಜನೆಗಳಿಗೆ ಬಳಸುವುದೂ ಬಡತನ ನಿರ್ಮೂಲನೆಯ ಉದ್ದೇಶವನ್ನೇ ಹೊಂದಿದೆ ಎಂಬ ಸಮರ್ಥನೆ ಒಪ್ಪತಕ್ಕುದಲ್ಲ; ಹಾಗೇನಾದರೂ ಅವರ ಮಾತು ನಿಜವಾಗಿದ್ದರೆ ಕಳೆದ 2014ರಿ೦ದ ಇದೇ ದಲಿತರಿಗಾಗಿ ಮೀಸಲಿಟ್ಟ ₹29,5687 ಕೋಟಿ ಹಣವನ್ನು ಯಾವುದಕ್ಕೆಲ್ಲಾ ಖರ್ಚು ಮಾಡಲಾಗಿದೆ; ಎಷ್ಟು ಕುಟುಂಬಗಳು ಬಡತನ ರೇಖೆಗಿ೦ತ ಮೇಲೆ ಬಂದಿವೆ ಎ೦ಬ ಅಂಕಿ ಅಂಶಗಳನ್ನು ಸರ್ಕಾರ ಬಿಡಗಡೆ ಮಾಡಬೇಕಿದೆ” ಎಂದು ದಸಂಸ ಒಕ್ಕೂಟ ಆಗ್ರಹಿಸಿದೆ.

“ಉನ್ನತ ಮಟ್ಟದ ಸಮಿತಿಯೊಂದನ್ನು ನೇಮಿಸಿ ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣ ಎಲ್ಲಿಗೆ ಹೋಗುತ್ತಿದೆ; ಎಷ್ಟು ಅಭಿವೃದ್ಧಿ ಆಗಿದೆ ಎಂಬುದನ್ನು ಅಧ್ಯಯನ ಮಾಡಿ ವರದಿ ಬಿಡುಗಡೆ ಮಾಡಬೇಕಿದೆ” ಎಂದು ಒತ್ತಾಯಿಸಿಸಲಾಗಿದೆ.

ಒಕ್ಕೂಟದ ಪರವಾಗಿ ಎನ್.ವೆಂಕಟೇಶ್, ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ವಿ ನಾಗರಾಜ, ಇಂದೂಧರ ಹೊನ್ನಾಪುರ, ಎನ್‌.ಮುನಿಸ್ವಾಮಿ ಹಾಗೂ ಜೀವನಹಳ್ಳಿ ವೆಂಕಟೇಶ್‌ ಸಹಿ ಮಾಡಿದ್ದಾರೆ.

ಶೇ.90ರಷ್ಟು ಒಂದೇ ಜಾತಿಯವರು ಮಲ ಬಾಚುತ್ತಿರುವುದು ಏಕೆ: ನ್ಯಾ.ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...