Homeಮುಖಪುಟಗ್ಯಾರಂಟಿಗೆ ಬಳಸಿರುವ ದಲಿತರ ಹಣ ಕೂಡಲೇ ಹಿಂದಿರುಗಿಸಬೇಕೆಂದು ದಸಂಸ ಒಕ್ಕೂಟ ಆಗ್ರಹ

ಗ್ಯಾರಂಟಿಗೆ ಬಳಸಿರುವ ದಲಿತರ ಹಣ ಕೂಡಲೇ ಹಿಂದಿರುಗಿಸಬೇಕೆಂದು ದಸಂಸ ಒಕ್ಕೂಟ ಆಗ್ರಹ

- Advertisement -
- Advertisement -

ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳಿಗೆ ಬಳಸಿರುವ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಕೂಡಲೇ ದಲಿತರ ಅಭಿವೃದ್ಧಿಗೆ ಹಿಂದಿರುಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟವು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ದಸಂಸ ಒಕ್ಕೂಟ, “ಗ್ಯಾರಂಟಿಗೆ ಬಳಸಿರುವ ಹಣ ಹಿಂತಿರುಗಿಸುವ ಜತೆಗೆ,ಕಾಯ್ದೆಯ ‘7ಡಿ’ ಸೆಕ್ಷನ್‌ ರದ್ದುಪಡಿಸಿದಂತೆ ‘7ಸಿ’ಯನ್ನೂ ರದ್ದುಪಡಿಸಬೇಕು” ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದೆ.

“ಸಂವಿಧಾನ ವಿಧಿ 46ರ ಆಶಯವನ್ನು ಪಾಲಿಸಬೇಕು” ಎಂದು ಒತ್ತಾಯಿಸಿರುವ ಒಕ್ಕೂಟ, “ಅಂಬೇಡ್ಕರ್‌ ಅಭಿವೃದ್ಧಿ ನಿಗಮದಲ್ಲಿ ಬಾಕಿ ಉಳಿದಿರುವ 5 ಲಕ್ಷ ಅರ್ಜಿಗಳನ್ನು ಸೂಕ್ತ ನೆರವು ನೀಡಿ, ಕೂಡಲೇ ಇತ್ಯರ್ಥಗೊಳಿಸಬೇಕು” ಎಂದು ಒತ್ತಾಯಿಸಿದೆ.

“2013 ರಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವೇ ಜಾರಿಗೆ ತಂದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯ ಕಾಯ್ದೆಯು ತನ್ನ ಪರಿಭಾಷೆಯಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಎಂಬುದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯಲ್ಲಿನ ಅಂತರವನ್ನು ತುಂಬಲು ಅನುಮೋದಿಸಿರುವ ಯೋಜನೆ ಎನ್ನುತ್ತದೆ. ಅದರಲ್ಲಿಯೇ ‘ಅಭಿವೃದ್ಧಿಯ ಅ೦ತರ’ ಎಂದರೆ, ಮಾನವ ಮತ್ತು ಆರ್ಥಿಕ ಅಭಿವೃದ್ಧಿಗೆ ಸಂಬಂಧಪಟ್ಟಂತೆ. ನಿರ್ದಿಷ್ಟವಾಗಿ ಗೊತ್ತುಪಡಿಸಬಹುದಾದಂತೆ ರಾಜ್ಯ ಸರಾಸರಿಗೆ ಹೋಲಿಸಿದಾಗ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಸೂಚಕಗಳಲ್ಲಿರುವ ವ್ಯತ್ಯಾಸಗಳು ಎ೦ದು ವ್ಯಾಖ್ಯಾನಿಸುತ್ತದೆ” ಎಂದು ಒಕ್ಕೂಟ ವಿವರಿಸಿದೆ.

“ಸಾರಾಂಶದಲ್ಲಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರು (ದಲಿತರು) ಮತ್ತು ಇತರ ಸಮುದಾಯಗಳ ನಡುವಿನ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯ ಅಂತರವನ್ನು ಕಡಿಮೆ ಮಾಡುವುದೇ ಈ ಯೋಜನೆಯ ಮೂಲ ಉದ್ದೇಶ. 2023-24ನೇ ಸಾಲಿನಿಂದಲೂ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣದಲ್ಲಿ ಸುಮಾರು ₹25000 ಕೋಟಿಯನ್ನು ಗ್ಯಾರ೦ಟಿಗಳಿಗೂ, ₹15000 ಕೋಟಿಯನ್ನು ಅನ್ಯ ಉದ್ದೇಶಕ್ಕೂ ಬಳಸಿರುವುದು ಕಾಯ್ದೆಯನ್ನು ಉಲ್ಲಂಘಫಿಸಿದಂತೆ ಆಗುತ್ತದೆ” ಎಂದು ಆರೋಪಿಸಿದೆ.

“ಅಷ್ಟೇ ಅಲ್ಲ, ಕಳೆದ ಬಿಜೆಪಿ ಸರ್ಕಾರ ಮಾಡಿದ ಕೆಲಸವನ್ನೇ ಕಾಂಗ್ರೆಸ್‌ ಮಾಡಿದಂತಾಗಿದೆ. ಅದಷ್ಟೇ ಅಲ್ಲದೆ ಸರ್ಕಾರದ ಸಮಾಜ ಕಲ್ಮಾಣ ಸಚಿವರೂ ಸೇರಿದಂತೆ ಈ ಕ್ರಮವನ್ನು ಸಮರ್ಥಿಸಿಕೊಳ್ಳುತ್ತಿರುವುದು ಶೋಚನೀಯ. ದಲಿತರ ಒಗ್ಗಟ್ಟಿನ ಓಟುಗಳಿ೦ದ ಸರ್ಕಾರ ರಚಿಸಿದ ಕಾಂಗ್ರೆಸ್, ಈಗ ದಲಿತರ ಅಭಿವೃದ್ಧಿಗೆ ಮೀಸಲಿರಿಸಿದ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವುದು ಸಮುದಾಯದಲ್ಲಿ ಅಸಮಾಧಾನವನ್ನು ಉಂಟು ಮಾಡಿದೆ” ಎಂದು ಒಕ್ಕೂಟದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಗ್ಯಾರಂಟಿ ಯೋಜನೆಗಳು ಉತ್ತಮ ಯೋಜನೆಗಳೇ; ಆದರೆ ಅವುಗಳ ಉದ್ದೇಶವೇ ಬೇರೆ, ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯ ಉದ್ದೇಶವೇ ಬೇರೆ. ಕರ್ನಾಟಕ ಮಾನವ ಅಭಿವೃದ್ಧಿ ವರದಿ- 2015ರ ಪ್ರಕಾರ, ಇತರೆ ಸಮುದಾಯಗಳಿಗೆ ಹೋಲಿಸಿಕೊ೦ಡರೆ ದಲಿತರು ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಹೀಗಿರುವಾಗ ಸಚಿವರು ಮತ್ತು ಮುಖ್ಯಮಂತ್ರಿಗಳು ಹೇಳುತ್ತಿರವಂತೆ, ದಲಿತರಿಗೆ ಮೀಸಲಿಟ್ಟ ಹಣವನ್ನು ಎಸ್‌ಸಿಪಿ-ಟಿಎಸ್‌ಪಿಯ ಹೊರತಾದ ಅಭಿವೃದ್ಧಿ ಯೋಜನೆಗಳಿಗೆ ಬಳಸುವುದೂ ಬಡತನ ನಿರ್ಮೂಲನೆಯ ಉದ್ದೇಶವನ್ನೇ ಹೊಂದಿದೆ ಎಂಬ ಸಮರ್ಥನೆ ಒಪ್ಪತಕ್ಕುದಲ್ಲ; ಹಾಗೇನಾದರೂ ಅವರ ಮಾತು ನಿಜವಾಗಿದ್ದರೆ ಕಳೆದ 2014ರಿ೦ದ ಇದೇ ದಲಿತರಿಗಾಗಿ ಮೀಸಲಿಟ್ಟ ₹29,5687 ಕೋಟಿ ಹಣವನ್ನು ಯಾವುದಕ್ಕೆಲ್ಲಾ ಖರ್ಚು ಮಾಡಲಾಗಿದೆ; ಎಷ್ಟು ಕುಟುಂಬಗಳು ಬಡತನ ರೇಖೆಗಿ೦ತ ಮೇಲೆ ಬಂದಿವೆ ಎ೦ಬ ಅಂಕಿ ಅಂಶಗಳನ್ನು ಸರ್ಕಾರ ಬಿಡಗಡೆ ಮಾಡಬೇಕಿದೆ” ಎಂದು ದಸಂಸ ಒಕ್ಕೂಟ ಆಗ್ರಹಿಸಿದೆ.

“ಉನ್ನತ ಮಟ್ಟದ ಸಮಿತಿಯೊಂದನ್ನು ನೇಮಿಸಿ ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣ ಎಲ್ಲಿಗೆ ಹೋಗುತ್ತಿದೆ; ಎಷ್ಟು ಅಭಿವೃದ್ಧಿ ಆಗಿದೆ ಎಂಬುದನ್ನು ಅಧ್ಯಯನ ಮಾಡಿ ವರದಿ ಬಿಡುಗಡೆ ಮಾಡಬೇಕಿದೆ” ಎಂದು ಒತ್ತಾಯಿಸಿಸಲಾಗಿದೆ.

ಒಕ್ಕೂಟದ ಪರವಾಗಿ ಎನ್.ವೆಂಕಟೇಶ್, ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ವಿ ನಾಗರಾಜ, ಇಂದೂಧರ ಹೊನ್ನಾಪುರ, ಎನ್‌.ಮುನಿಸ್ವಾಮಿ ಹಾಗೂ ಜೀವನಹಳ್ಳಿ ವೆಂಕಟೇಶ್‌ ಸಹಿ ಮಾಡಿದ್ದಾರೆ.

ಶೇ.90ರಷ್ಟು ಒಂದೇ ಜಾತಿಯವರು ಮಲ ಬಾಚುತ್ತಿರುವುದು ಏಕೆ: ನ್ಯಾ.ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...