Homeಮುಖಪುಟಜಾತಿ ನಿಂದನೆ ಮಾಡಿದ ಗ್ರಾಮದ ಮುಖ್ಯಸ್ಥ: ಶಾಲಾ ಪ್ರಾಂಶುಪಾಲ ಆತ್ಮಹತ್ಯೆ

ಜಾತಿ ನಿಂದನೆ ಮಾಡಿದ ಗ್ರಾಮದ ಮುಖ್ಯಸ್ಥ: ಶಾಲಾ ಪ್ರಾಂಶುಪಾಲ ಆತ್ಮಹತ್ಯೆ

- Advertisement -
- Advertisement -

ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಪ್ರಾಂಶುಪಾಲರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮೊದಲು ಅವರು ತನ್ನ ವಿಡಿಯೋ ಹೇಳಿಕೆಯಲ್ಲಿ ಗ್ರಾಮದ ಸರಪಂಚ್ ತನಗೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಶಾಲಾ ಪ್ರಾಂಶುಪಾಲರಾಗಿದ್ದ 52 ವರ್ಷದ ಕಾಂತಿ ಚೌಹಾಣ್ ಅವರು ಆತ್ಮಹತ್ಯೆ ಮಾಡಿಕೊಂಡವರು. ಅವರು ವಿಷ ಸೇವಿಸುವ ಮೊದಲು ರೆಕಾರ್ಡ್ ಮಾಡಿದ ವೀಡಿಯೊ ಸಂದೇಶದಲ್ಲಿ ಗ್ರಾಮದ ಸರಪಂಚ್ ಜಾತಿಯ ಆಧಾರದ ಮೇಲೆ ತನಗೆ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನು ಕೆಳ ಜಾತಿಯಿಂದ ಬಂದಿರಬಹುದು ಆದರೆ ನಾನು ಶಿಕ್ಷಕನ ಕೆಲಸವನ್ನು ಮಾಡುತ್ತಿದ್ದೇನೆ. ದಯವಿಟ್ಟು ನನ್ನ ಹುದ್ದೆಯನ್ನು ನನ್ನಿಂದ ಕಿತ್ತುಕೊಳ್ಳಬೇಡಿ. ನೀವು ನಮ್ಮ ಜಾತಿಯನ್ನು ಅಸ್ತ್ರವಾಗಿ ಬಳಸಿಕೊಂಡು ನಮ್ಮನ್ನು ಕೆಣಕಲು ಪ್ರಯತ್ನಿಸುತ್ತಿದ್ದೀರಿ ಮತ್ತು ಸರಪಂಚ್ ಆಗಿರುವ ನಿಮಗೆ ಇದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಚೌಹಾಣ್ ಹೇಳಿರುವ ಬಗ್ಗೆ ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ಸರಪಂಚ್ ನನಗೆ ಬೆದರಿಕೆ ಹಾಕುತ್ತಿದ್ದಾರೆ ಮತ್ತು ನಾನು ಪಡೆದಿರುವ ಅನುದಾನವನ್ನು ವಾಪಾಸ್ಸು ನೀಡುವಂತೆ ಕೇಳುತ್ತಿದ್ದಾರೆ. ಸರಪಂಚ್ ಹಳ್ಳಿ ಜನರಿರುವ ವಾಟ್ಸಾಪ್‌ ಗ್ರೂಪ್‌ನಲ್ಲಿ ನನ್ನ ಮತ್ತು ನನ್ನ ಜಾತಿಯ ಬಗ್ಗೆ ಅವಹೇಳನಕಾರಿಯಾಗಿ  ಸಂದೇಶವನ್ನು ಕಳುಹಿಸಿದ್ದಾರೆ ಎಂದು ಹೇಳಿದ್ದಾರೆ.

ಆರೋಪಿತ ಗ್ರಾಮದ ಸರಪಂಚ್‌ಗೆ ಮುಕೇಶ್ ಬೋರಿಸಾಗರ್ ಎಂದು ಗುರುತಿಸಲಾಗಿದೆ. ಗುಜರಾತ್ ಸರ್ಕಾರವು ಇತರ ಉದ್ದೇಶಗಳಿಗಾಗಿ ಬಿಡುಗಡೆ ಮಾಡಿದ ಶಾಲಾ ಆಡಳಿತ ಸಮಿತಿಯ ಹಣವನ್ನು ಬೇರೆಡೆಗೆ ವರ್ಗಾಯಿಸಲು ಚೌಹಾಣ್ ಮೇಲೆ ಸರಪಂಚ್‌ ಒತ್ತಡ ಹೇರಿದ್ದರು ಎಂದು ಹೇಳಲಾಗಿದೆ.

ಬೋರಿಸಾಗರ್ ಮತ್ತು ವಿಪುಲ್ ಕ್ಯಾಡಾ ಎಂಬವರು ಚೌಹಾಣ್ ಅವರನ್ನು ಪ್ರಾಂಶುಪಾಲ ಹುದ್ದೆಯಿಂದ ತೆಗೆದುಹಾಕಲು ಯಶಸ್ವಿಯಾಗಿ ಸಂಚು ಹೂಡಿದ್ದಾರೆ ಎಂದು ಆರೋಪಿಸಲಾಗಿದೆ.

ವಿಷ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಚೌಹಾಣ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಚೌಹಾಣ್ ಅವರ ಪತ್ನಿ ಪತಿಯ ಸಾವಿನ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.

ಚೌಹಾಣ್‌ ಸಾವಿನ ಸುದ್ದಿ ತಿಳಿದು ದಲಿತ ಸಮುದಾಯದ ಸದಸ್ಯರು ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬೋರಿಸಾಗರ್, ವಿಪುಲ್ ಕ್ಯಾಡಾ ಮತ್ತು ಮೂವರು ಶಿಕ್ಷಕರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮ್ರೇಲಿಯ ಉಪ ಪೊಲೀಸ್ ವರಿಷ್ಠಾಧಿಕಾರಿ ಜೆ.ಪಿ ಭಂಡಾರಿ,  ನಾವು ಐಪಿಸಿಯ ಸೆಕ್ಷನ್ 306 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗಾಝಾಕ್ಕೆ ಪರಿಹಾರ ಸಾಮಾಗ್ರಿಗಳನ್ನು ಕಳುಹಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...