Homeಮುಖಪುಟ‘ಹಿಂದೂ ರಾಷ್ಟ್ರದಲ್ಲಿ ದಲಿತ-ಶೂದ್ರರಿಗೆ ಮತದಾನದ ಹಕ್ಕಿರುತ್ತದೆಯೇ?’

‘ಹಿಂದೂ ರಾಷ್ಟ್ರದಲ್ಲಿ ದಲಿತ-ಶೂದ್ರರಿಗೆ ಮತದಾನದ ಹಕ್ಕಿರುತ್ತದೆಯೇ?’

ಮೀಸಲಾತಿಯ ಕುರಿತು ದಲಿತ ಸಮುದಾಯದ ಕುರಿತು ಭಾರತದ ಮೇಲ್ಜಾತಿಗಳಿಗೆ ಇರುವ ಅಸಹನೆಯ ಕುರಿತು ಯಾವುದೇ ಪುರಾವೆ ಒದಗಿಸುವ ಅಗತ್ಯವಿಲ್ಲ.

- Advertisement -
- Advertisement -

ಲೇಖನದ ಶೀರ್ಷಿಕೆಯು ಹಿಂದೂ ರಾಷ್ಟ್ರ ಎಂಬುದೊಂದು ಅಸ್ತಿತ್ವಕ್ಕೆ ಬರಲಿದೆ ಎಂಬ ಸಾಧ್ಯತೆಯನ್ನು ಧ್ವನಿಸುತ್ತದೆ. ಇಂದು ಅಂತಹ ಸಾಧ್ಯತೆಯನ್ನು ಖಡಾಖಂಡಿತವಾಗಿ ಯಾರಾದರೂ ಅಲ್ಲಗಳೆದರೆ ಅಂತಹವರನ್ನು ಒಂದು ಮಾತು ಕೇಳಬೇಕಾಗುತ್ತದೆ. ಈ ದೇಶದಲ್ಲಿ ಮುಸ್ಲಿಮರಾಗಿರುವ ಏಕೈಕ ಕಾರಣಕ್ಕೆ ವ್ಯಕ್ತಿಗಳನ್ನು, ಕೆಲವೊಮ್ಮೆ ಅಪರಿಚಿತರನ್ನೂ ಕೊಲ್ಲಬಹುದು ಎಂದು ನೀವು ಊಹಿಸಿದ್ದೀರಾ? ದೇಶದ ಪ್ರಧಾನಮಂತ್ರಿಯು ಧರ್ಮವನ್ನು ಎಳೆದುತಂದು ಕೆಲವರ ಪರ ಅಥವಾ ವಿರುದ್ಧ ನೇರವಾಗಿ ಮಾತಾಡಬಹುದು ಎಂದು ಭಾವಿಸಿದ್ದೀರಾ? ಭಾರತ ದೇಶದ ಪೌರತ್ವವನ್ನು ಧರ್ಮಾಧಾರಿತವಾಗಿ ನಿರ್ಧರಿಸುವ ಕಾನೂನೊಂದು ಬರುತ್ತದೆ ಎಂದು ನಿರೀಕ್ಷಿಸಿದ್ದಿರಾ? ಭಾರತದ ಪ್ರಧಾನಿಯು ಪತ್ರಕರ್ತೆಯೊಬ್ಬರ ಕೊಲೆಯನ್ನು ಸಂಭ್ರಮಿಸುವ ವ್ಯಕ್ತಿಗಳನ್ನು ಟ್ವಿಟ್ಟರ್‌ನಲ್ಲಿ ಫಾಲೋ ಮಾಡುತ್ತಾರಷ್ಟೇ ಅಲ್ಲದೇ, ಅದನ್ನು ಬಯಲಿಗೆ ತಂದರೂ ಅದನ್ನು ಬದಲಿಸದೇ ಸೂಚನೆಯೊಂದನ್ನು ನೀಡಬಹುದು ಎಂದುಕೊಂಡಿದ್ದಿರಾ?

ಪ್ರಶ್ನೆಗಳ ಪಟ್ಟಿ ಇನ್ನೂ ದೀರ್ಘವಿದೆ ಎಂಬುದು ನಿಮಗೆ ಗೊತ್ತು. ಹಾಗಾಗಿ ಹಿಂದೂ ರಾಷ್ಟ್ರವೆಂಬುದೊಂದು ಬರುವುದೇ ಇಲ್ಲ ಎಂದು ಅಂದುಕೊಳ್ಳಲಾಗದು. ಪ್ರಧಾನಿ ಹಾಗೂ ಆಳುವ ಪಕ್ಷವು ಸದಾ ಪೂಜಿಸುವ ಭಾರತ ಮಾತೆಯ ಫೋಟೋದಲ್ಲಿ ರಾಷ್ಟ್ರಧ್ವಜ ಇರುವುದಿಲ್ಲ; ಕೇಸರಿ ಧ್ವಜ ಮಾತ್ರ ಇರುತ್ತದೆ ಎಂಬುದನ್ನು ಗಮನಿಸಿ. ಈ ಪರಿವಾರವು ಬಳಸುವ ಸಂಕೇತಗಳು, ದೀರ್ಘಕಾಲದಿಂದ ಮುಂದಿಡುತ್ತಾ ಬಂದಿರುವ ಯೋಜನೆಗಳು, ಡಿಮ್ಯಾಂಡ್‍ಗಳು ಒಂದೊಂದೇ ನಿಜವಾಗುತ್ತಿರುವುದನ್ನೂ ಗಮನಿಸಿ. ಮುಂದಿನ ಎರಡು ವರ್ಷಗಳಲ್ಲಿ ಗೋಡ್ಸೆಯನ್ನು ಬಹಿರಂಗವಾಗಿ ಆರಾಧಿಸುವ (ಆ ಚಿಂತನೆಯು ಸಾಕಷ್ಟು ಕಾಲದಿಂದ ಸಾಕಷ್ಟು ವ್ಯಾಪಕವಾಗಿಯೇ ಚಾಲನೆಯಲ್ಲಿದೆ ಎಂಬುದು ತಿಳಿದಿಲ್ಲವಾದರೆ, ಆರೆಸ್ಸೆಸ್‍ನ ಯಾವುದೇ ಸ್ವಯಂಸೇವಕನನ್ನು ಖಾಸಗಿಯಾಗಿ ಮಾತನಾಡಿಸಿ) ಕಾರ್ಯಕ್ರಮಗಳು ನಡೆಯಲು ಎಲ್ಲಾ ತಯಾರಿಗಳು ನಡೆದಿಲ್ಲವೇ?

ಪ್ರಗ್ಯಾ ಠಾಕೂರ್ ಎಂಬ ಸಂಸದೆ ಈಗಾಗಲೇ ಗೋಡ್ಸೆ ಒಬ್ಬ ದೇಶಭಕ್ತ ಎಂದು ದೇಶದ ಸಂಸತ್ತಿನಲ್ಲೇ ಹೇಳಿಯಾಗಿದೆ. ಅಂತಹ ಹಲವು ಹೇಳಿಕೆಗಳ ನಂತರ ಬಿಜೆಪಿ ಪಕ್ಷವು ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲವೆಂಬುದು ಸ್ಪಷ್ಟ ಸೂಚನೆಯನ್ನು ನೀಡುತ್ತಿದೆ. ಅಂದರೆ ಹಿಂದೂ ರಾಷ್ಟ್ರದ ಕಲ್ಪನೆ ಏನಿತ್ತೋ, ಅದು ಸಾಕಾರವಾಗುವ ದಿಕ್ಕಿನಲ್ಲಿ ದೇಶ ನಡೆದಿದೆ. ಗಾಂಧಿ ಕೊಲೆಯನ್ನು ಆರೆಸ್ಸೆಸ್ಸಿನವರೇ ಮಾಡಿದ್ದು ಮತ್ತು ಅದನ್ನು ಅವರು ಸಂಭ್ರಮಿಸಿದರು ಎಂಬುದಕ್ಕೆ ದಾಖಲೆಗಳಿವೆ. ಗಾಂಧಿ ದ್ವೇಷ ಮಾತ್ರವಲ್ಲದೇ ಅಂಬೇಡ್ಕರ್‍ಗೆ ವಿರೋಧ, ಮಂಡಲ್ ವರದಿಗೆ ವಿರೋಧ ಇತ್ಯಾದಿಗಳು ಬಹಿರಂಗವಾಗಿ ವ್ಯಕ್ತವಾಗಿವೆ. ಮೀಸಲಾತಿಯ ಕುರಿತು ದಲಿತ ಸಮುದಾಯದ ಕುರಿತು ಭಾರತದ ಮೇಲ್ಜಾತಿಗಳಿಗೆ ಇರುವ ಅಸಹನೆಯ ಕುರಿತು ಯಾವುದೇ ಪುರಾವೆ ಒದಗಿಸುವ ಅಗತ್ಯವಿಲ್ಲ.

ಅದೇ ರೀತಿ ಬಡವರು, ಅನಕ್ಷರಸ್ಥರು, ‘ಕೀಳು’ ಜಾತಿಯವರು (ಕೀಳು ಜಾತಿ ಎಂಬ ಪದ ಇಂದಿಗೂ ಬಳಕೆಯಲ್ಲಿದೆ ಎಂಬುದನ್ನು ಮರೆಯಲಾಗುತ್ತದೆಯೇ?) ಚುನಾವಣೆಯಲ್ಲಿ ಸರಿಯಾದ ಆಯ್ಕೆ ಮಾಡುವುದಿಲ್ಲ; ಸ್ಲಂ ಜನರಂತಹವರು ಸೇರಿಕೊಂಡು ದೇಶ ಹಾಳು ಮಾಡುತ್ತಿದ್ದಾರೆ ಎಂಬ ಭಾವವೂ ‘ಕುಲೀನ’ರಲ್ಲಿ ಗಾಢವಾಗಿಯೇ ಇದೆ. ವಿದ್ಯಾವಂತರಲ್ಲದವರಿಗೆ ಮತದಾನದ ಹಕ್ಕು ಇರಬಾರದು ಎಂದು ಪ್ರತಿಪಾದಿಸುವವರೂ ಇದ್ದಾರೆ.

ಪೌರತ್ವವೆಂಬುದು ಹಕ್ಕುಗಳನ್ನು ಪಡೆಯಲು ಇರುವ ಹಕ್ಕಾಗಿದೆ. ಇಂದು ದಾಖಲಾತಿಗಳ ಆಧಾರದ ಮೇಲೆ ಪೌರತ್ವವನ್ನು ನಿರ್ಧರಿಸುವ ಪ್ರಕ್ರಿಯೆಯೊಂದು ದೇಶದಲ್ಲಿ ಚಾಲ್ತಿಗೆ ಬಂದಿದೆ. ಅಂತಹ ಹಕ್ಕುಗಳಲ್ಲಿ ಒಂದು ಮತದಾನದ ಹಕ್ಕೂ ಆಗಿದೆ. ದೇಶದ ಬಡವರಿಗೆ, ದಲಿತರಿಗೆ ಏನಾದರೂ ಹಕ್ಕುಗಳು ಸಿಕ್ಕಿದ್ದರೆ ಅದಕ್ಕೆ ಓಟೂ ಒಂದು ಕಾರಣವಾಗಿದೆ. ಆದರೆ, ದಾಖಲಾತಿಗಳ ಮೇಲೆ ನಿರ್ಧರಿಸಲಾಗುವ ಪೌರತ್ವವು ಮುಂದೊಂದು ದಿನ ಈ ಬಡವರ, ದಲಿತರ, ಹಿಂದುಳಿದವರ ಓಟಿನ ಹಕ್ಕನ್ನೂ ಕಸಿಯುವ ಅಸ್ತ್ರವಾಗುವುದಿಲ್ಲ ಎಂದು ಸುಮ್ಮನೇ ಕೂರುವ ಹಾಗಿಲ್ಲ. ಈಗ ಮೈಮರೆತರೆ ಮುಂದೊಂದು ದಿನ ಬಹಳ ದುಬಾರಿ ಬೆಲೆ ತೆರಬೇಕಾಗಿ ಬರಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...