Homeಮುಖಪುಟ‘ಹಿಂದೂ ರಾಷ್ಟ್ರದಲ್ಲಿ ದಲಿತ-ಶೂದ್ರರಿಗೆ ಮತದಾನದ ಹಕ್ಕಿರುತ್ತದೆಯೇ?’

‘ಹಿಂದೂ ರಾಷ್ಟ್ರದಲ್ಲಿ ದಲಿತ-ಶೂದ್ರರಿಗೆ ಮತದಾನದ ಹಕ್ಕಿರುತ್ತದೆಯೇ?’

ಮೀಸಲಾತಿಯ ಕುರಿತು ದಲಿತ ಸಮುದಾಯದ ಕುರಿತು ಭಾರತದ ಮೇಲ್ಜಾತಿಗಳಿಗೆ ಇರುವ ಅಸಹನೆಯ ಕುರಿತು ಯಾವುದೇ ಪುರಾವೆ ಒದಗಿಸುವ ಅಗತ್ಯವಿಲ್ಲ.

- Advertisement -
- Advertisement -

ಲೇಖನದ ಶೀರ್ಷಿಕೆಯು ಹಿಂದೂ ರಾಷ್ಟ್ರ ಎಂಬುದೊಂದು ಅಸ್ತಿತ್ವಕ್ಕೆ ಬರಲಿದೆ ಎಂಬ ಸಾಧ್ಯತೆಯನ್ನು ಧ್ವನಿಸುತ್ತದೆ. ಇಂದು ಅಂತಹ ಸಾಧ್ಯತೆಯನ್ನು ಖಡಾಖಂಡಿತವಾಗಿ ಯಾರಾದರೂ ಅಲ್ಲಗಳೆದರೆ ಅಂತಹವರನ್ನು ಒಂದು ಮಾತು ಕೇಳಬೇಕಾಗುತ್ತದೆ. ಈ ದೇಶದಲ್ಲಿ ಮುಸ್ಲಿಮರಾಗಿರುವ ಏಕೈಕ ಕಾರಣಕ್ಕೆ ವ್ಯಕ್ತಿಗಳನ್ನು, ಕೆಲವೊಮ್ಮೆ ಅಪರಿಚಿತರನ್ನೂ ಕೊಲ್ಲಬಹುದು ಎಂದು ನೀವು ಊಹಿಸಿದ್ದೀರಾ? ದೇಶದ ಪ್ರಧಾನಮಂತ್ರಿಯು ಧರ್ಮವನ್ನು ಎಳೆದುತಂದು ಕೆಲವರ ಪರ ಅಥವಾ ವಿರುದ್ಧ ನೇರವಾಗಿ ಮಾತಾಡಬಹುದು ಎಂದು ಭಾವಿಸಿದ್ದೀರಾ? ಭಾರತ ದೇಶದ ಪೌರತ್ವವನ್ನು ಧರ್ಮಾಧಾರಿತವಾಗಿ ನಿರ್ಧರಿಸುವ ಕಾನೂನೊಂದು ಬರುತ್ತದೆ ಎಂದು ನಿರೀಕ್ಷಿಸಿದ್ದಿರಾ? ಭಾರತದ ಪ್ರಧಾನಿಯು ಪತ್ರಕರ್ತೆಯೊಬ್ಬರ ಕೊಲೆಯನ್ನು ಸಂಭ್ರಮಿಸುವ ವ್ಯಕ್ತಿಗಳನ್ನು ಟ್ವಿಟ್ಟರ್‌ನಲ್ಲಿ ಫಾಲೋ ಮಾಡುತ್ತಾರಷ್ಟೇ ಅಲ್ಲದೇ, ಅದನ್ನು ಬಯಲಿಗೆ ತಂದರೂ ಅದನ್ನು ಬದಲಿಸದೇ ಸೂಚನೆಯೊಂದನ್ನು ನೀಡಬಹುದು ಎಂದುಕೊಂಡಿದ್ದಿರಾ?

ಪ್ರಶ್ನೆಗಳ ಪಟ್ಟಿ ಇನ್ನೂ ದೀರ್ಘವಿದೆ ಎಂಬುದು ನಿಮಗೆ ಗೊತ್ತು. ಹಾಗಾಗಿ ಹಿಂದೂ ರಾಷ್ಟ್ರವೆಂಬುದೊಂದು ಬರುವುದೇ ಇಲ್ಲ ಎಂದು ಅಂದುಕೊಳ್ಳಲಾಗದು. ಪ್ರಧಾನಿ ಹಾಗೂ ಆಳುವ ಪಕ್ಷವು ಸದಾ ಪೂಜಿಸುವ ಭಾರತ ಮಾತೆಯ ಫೋಟೋದಲ್ಲಿ ರಾಷ್ಟ್ರಧ್ವಜ ಇರುವುದಿಲ್ಲ; ಕೇಸರಿ ಧ್ವಜ ಮಾತ್ರ ಇರುತ್ತದೆ ಎಂಬುದನ್ನು ಗಮನಿಸಿ. ಈ ಪರಿವಾರವು ಬಳಸುವ ಸಂಕೇತಗಳು, ದೀರ್ಘಕಾಲದಿಂದ ಮುಂದಿಡುತ್ತಾ ಬಂದಿರುವ ಯೋಜನೆಗಳು, ಡಿಮ್ಯಾಂಡ್‍ಗಳು ಒಂದೊಂದೇ ನಿಜವಾಗುತ್ತಿರುವುದನ್ನೂ ಗಮನಿಸಿ. ಮುಂದಿನ ಎರಡು ವರ್ಷಗಳಲ್ಲಿ ಗೋಡ್ಸೆಯನ್ನು ಬಹಿರಂಗವಾಗಿ ಆರಾಧಿಸುವ (ಆ ಚಿಂತನೆಯು ಸಾಕಷ್ಟು ಕಾಲದಿಂದ ಸಾಕಷ್ಟು ವ್ಯಾಪಕವಾಗಿಯೇ ಚಾಲನೆಯಲ್ಲಿದೆ ಎಂಬುದು ತಿಳಿದಿಲ್ಲವಾದರೆ, ಆರೆಸ್ಸೆಸ್‍ನ ಯಾವುದೇ ಸ್ವಯಂಸೇವಕನನ್ನು ಖಾಸಗಿಯಾಗಿ ಮಾತನಾಡಿಸಿ) ಕಾರ್ಯಕ್ರಮಗಳು ನಡೆಯಲು ಎಲ್ಲಾ ತಯಾರಿಗಳು ನಡೆದಿಲ್ಲವೇ?

ಪ್ರಗ್ಯಾ ಠಾಕೂರ್ ಎಂಬ ಸಂಸದೆ ಈಗಾಗಲೇ ಗೋಡ್ಸೆ ಒಬ್ಬ ದೇಶಭಕ್ತ ಎಂದು ದೇಶದ ಸಂಸತ್ತಿನಲ್ಲೇ ಹೇಳಿಯಾಗಿದೆ. ಅಂತಹ ಹಲವು ಹೇಳಿಕೆಗಳ ನಂತರ ಬಿಜೆಪಿ ಪಕ್ಷವು ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲವೆಂಬುದು ಸ್ಪಷ್ಟ ಸೂಚನೆಯನ್ನು ನೀಡುತ್ತಿದೆ. ಅಂದರೆ ಹಿಂದೂ ರಾಷ್ಟ್ರದ ಕಲ್ಪನೆ ಏನಿತ್ತೋ, ಅದು ಸಾಕಾರವಾಗುವ ದಿಕ್ಕಿನಲ್ಲಿ ದೇಶ ನಡೆದಿದೆ. ಗಾಂಧಿ ಕೊಲೆಯನ್ನು ಆರೆಸ್ಸೆಸ್ಸಿನವರೇ ಮಾಡಿದ್ದು ಮತ್ತು ಅದನ್ನು ಅವರು ಸಂಭ್ರಮಿಸಿದರು ಎಂಬುದಕ್ಕೆ ದಾಖಲೆಗಳಿವೆ. ಗಾಂಧಿ ದ್ವೇಷ ಮಾತ್ರವಲ್ಲದೇ ಅಂಬೇಡ್ಕರ್‍ಗೆ ವಿರೋಧ, ಮಂಡಲ್ ವರದಿಗೆ ವಿರೋಧ ಇತ್ಯಾದಿಗಳು ಬಹಿರಂಗವಾಗಿ ವ್ಯಕ್ತವಾಗಿವೆ. ಮೀಸಲಾತಿಯ ಕುರಿತು ದಲಿತ ಸಮುದಾಯದ ಕುರಿತು ಭಾರತದ ಮೇಲ್ಜಾತಿಗಳಿಗೆ ಇರುವ ಅಸಹನೆಯ ಕುರಿತು ಯಾವುದೇ ಪುರಾವೆ ಒದಗಿಸುವ ಅಗತ್ಯವಿಲ್ಲ.

ಅದೇ ರೀತಿ ಬಡವರು, ಅನಕ್ಷರಸ್ಥರು, ‘ಕೀಳು’ ಜಾತಿಯವರು (ಕೀಳು ಜಾತಿ ಎಂಬ ಪದ ಇಂದಿಗೂ ಬಳಕೆಯಲ್ಲಿದೆ ಎಂಬುದನ್ನು ಮರೆಯಲಾಗುತ್ತದೆಯೇ?) ಚುನಾವಣೆಯಲ್ಲಿ ಸರಿಯಾದ ಆಯ್ಕೆ ಮಾಡುವುದಿಲ್ಲ; ಸ್ಲಂ ಜನರಂತಹವರು ಸೇರಿಕೊಂಡು ದೇಶ ಹಾಳು ಮಾಡುತ್ತಿದ್ದಾರೆ ಎಂಬ ಭಾವವೂ ‘ಕುಲೀನ’ರಲ್ಲಿ ಗಾಢವಾಗಿಯೇ ಇದೆ. ವಿದ್ಯಾವಂತರಲ್ಲದವರಿಗೆ ಮತದಾನದ ಹಕ್ಕು ಇರಬಾರದು ಎಂದು ಪ್ರತಿಪಾದಿಸುವವರೂ ಇದ್ದಾರೆ.

ಪೌರತ್ವವೆಂಬುದು ಹಕ್ಕುಗಳನ್ನು ಪಡೆಯಲು ಇರುವ ಹಕ್ಕಾಗಿದೆ. ಇಂದು ದಾಖಲಾತಿಗಳ ಆಧಾರದ ಮೇಲೆ ಪೌರತ್ವವನ್ನು ನಿರ್ಧರಿಸುವ ಪ್ರಕ್ರಿಯೆಯೊಂದು ದೇಶದಲ್ಲಿ ಚಾಲ್ತಿಗೆ ಬಂದಿದೆ. ಅಂತಹ ಹಕ್ಕುಗಳಲ್ಲಿ ಒಂದು ಮತದಾನದ ಹಕ್ಕೂ ಆಗಿದೆ. ದೇಶದ ಬಡವರಿಗೆ, ದಲಿತರಿಗೆ ಏನಾದರೂ ಹಕ್ಕುಗಳು ಸಿಕ್ಕಿದ್ದರೆ ಅದಕ್ಕೆ ಓಟೂ ಒಂದು ಕಾರಣವಾಗಿದೆ. ಆದರೆ, ದಾಖಲಾತಿಗಳ ಮೇಲೆ ನಿರ್ಧರಿಸಲಾಗುವ ಪೌರತ್ವವು ಮುಂದೊಂದು ದಿನ ಈ ಬಡವರ, ದಲಿತರ, ಹಿಂದುಳಿದವರ ಓಟಿನ ಹಕ್ಕನ್ನೂ ಕಸಿಯುವ ಅಸ್ತ್ರವಾಗುವುದಿಲ್ಲ ಎಂದು ಸುಮ್ಮನೇ ಕೂರುವ ಹಾಗಿಲ್ಲ. ಈಗ ಮೈಮರೆತರೆ ಮುಂದೊಂದು ದಿನ ಬಹಳ ದುಬಾರಿ ಬೆಲೆ ತೆರಬೇಕಾಗಿ ಬರಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...