Homeಮುಖಪುಟ‘ಹಿಂದೂ ರಾಷ್ಟ್ರದಲ್ಲಿ ದಲಿತ-ಶೂದ್ರರಿಗೆ ಮತದಾನದ ಹಕ್ಕಿರುತ್ತದೆಯೇ?’

‘ಹಿಂದೂ ರಾಷ್ಟ್ರದಲ್ಲಿ ದಲಿತ-ಶೂದ್ರರಿಗೆ ಮತದಾನದ ಹಕ್ಕಿರುತ್ತದೆಯೇ?’

ಮೀಸಲಾತಿಯ ಕುರಿತು ದಲಿತ ಸಮುದಾಯದ ಕುರಿತು ಭಾರತದ ಮೇಲ್ಜಾತಿಗಳಿಗೆ ಇರುವ ಅಸಹನೆಯ ಕುರಿತು ಯಾವುದೇ ಪುರಾವೆ ಒದಗಿಸುವ ಅಗತ್ಯವಿಲ್ಲ.

- Advertisement -
- Advertisement -

ಲೇಖನದ ಶೀರ್ಷಿಕೆಯು ಹಿಂದೂ ರಾಷ್ಟ್ರ ಎಂಬುದೊಂದು ಅಸ್ತಿತ್ವಕ್ಕೆ ಬರಲಿದೆ ಎಂಬ ಸಾಧ್ಯತೆಯನ್ನು ಧ್ವನಿಸುತ್ತದೆ. ಇಂದು ಅಂತಹ ಸಾಧ್ಯತೆಯನ್ನು ಖಡಾಖಂಡಿತವಾಗಿ ಯಾರಾದರೂ ಅಲ್ಲಗಳೆದರೆ ಅಂತಹವರನ್ನು ಒಂದು ಮಾತು ಕೇಳಬೇಕಾಗುತ್ತದೆ. ಈ ದೇಶದಲ್ಲಿ ಮುಸ್ಲಿಮರಾಗಿರುವ ಏಕೈಕ ಕಾರಣಕ್ಕೆ ವ್ಯಕ್ತಿಗಳನ್ನು, ಕೆಲವೊಮ್ಮೆ ಅಪರಿಚಿತರನ್ನೂ ಕೊಲ್ಲಬಹುದು ಎಂದು ನೀವು ಊಹಿಸಿದ್ದೀರಾ? ದೇಶದ ಪ್ರಧಾನಮಂತ್ರಿಯು ಧರ್ಮವನ್ನು ಎಳೆದುತಂದು ಕೆಲವರ ಪರ ಅಥವಾ ವಿರುದ್ಧ ನೇರವಾಗಿ ಮಾತಾಡಬಹುದು ಎಂದು ಭಾವಿಸಿದ್ದೀರಾ? ಭಾರತ ದೇಶದ ಪೌರತ್ವವನ್ನು ಧರ್ಮಾಧಾರಿತವಾಗಿ ನಿರ್ಧರಿಸುವ ಕಾನೂನೊಂದು ಬರುತ್ತದೆ ಎಂದು ನಿರೀಕ್ಷಿಸಿದ್ದಿರಾ? ಭಾರತದ ಪ್ರಧಾನಿಯು ಪತ್ರಕರ್ತೆಯೊಬ್ಬರ ಕೊಲೆಯನ್ನು ಸಂಭ್ರಮಿಸುವ ವ್ಯಕ್ತಿಗಳನ್ನು ಟ್ವಿಟ್ಟರ್‌ನಲ್ಲಿ ಫಾಲೋ ಮಾಡುತ್ತಾರಷ್ಟೇ ಅಲ್ಲದೇ, ಅದನ್ನು ಬಯಲಿಗೆ ತಂದರೂ ಅದನ್ನು ಬದಲಿಸದೇ ಸೂಚನೆಯೊಂದನ್ನು ನೀಡಬಹುದು ಎಂದುಕೊಂಡಿದ್ದಿರಾ?

ಪ್ರಶ್ನೆಗಳ ಪಟ್ಟಿ ಇನ್ನೂ ದೀರ್ಘವಿದೆ ಎಂಬುದು ನಿಮಗೆ ಗೊತ್ತು. ಹಾಗಾಗಿ ಹಿಂದೂ ರಾಷ್ಟ್ರವೆಂಬುದೊಂದು ಬರುವುದೇ ಇಲ್ಲ ಎಂದು ಅಂದುಕೊಳ್ಳಲಾಗದು. ಪ್ರಧಾನಿ ಹಾಗೂ ಆಳುವ ಪಕ್ಷವು ಸದಾ ಪೂಜಿಸುವ ಭಾರತ ಮಾತೆಯ ಫೋಟೋದಲ್ಲಿ ರಾಷ್ಟ್ರಧ್ವಜ ಇರುವುದಿಲ್ಲ; ಕೇಸರಿ ಧ್ವಜ ಮಾತ್ರ ಇರುತ್ತದೆ ಎಂಬುದನ್ನು ಗಮನಿಸಿ. ಈ ಪರಿವಾರವು ಬಳಸುವ ಸಂಕೇತಗಳು, ದೀರ್ಘಕಾಲದಿಂದ ಮುಂದಿಡುತ್ತಾ ಬಂದಿರುವ ಯೋಜನೆಗಳು, ಡಿಮ್ಯಾಂಡ್‍ಗಳು ಒಂದೊಂದೇ ನಿಜವಾಗುತ್ತಿರುವುದನ್ನೂ ಗಮನಿಸಿ. ಮುಂದಿನ ಎರಡು ವರ್ಷಗಳಲ್ಲಿ ಗೋಡ್ಸೆಯನ್ನು ಬಹಿರಂಗವಾಗಿ ಆರಾಧಿಸುವ (ಆ ಚಿಂತನೆಯು ಸಾಕಷ್ಟು ಕಾಲದಿಂದ ಸಾಕಷ್ಟು ವ್ಯಾಪಕವಾಗಿಯೇ ಚಾಲನೆಯಲ್ಲಿದೆ ಎಂಬುದು ತಿಳಿದಿಲ್ಲವಾದರೆ, ಆರೆಸ್ಸೆಸ್‍ನ ಯಾವುದೇ ಸ್ವಯಂಸೇವಕನನ್ನು ಖಾಸಗಿಯಾಗಿ ಮಾತನಾಡಿಸಿ) ಕಾರ್ಯಕ್ರಮಗಳು ನಡೆಯಲು ಎಲ್ಲಾ ತಯಾರಿಗಳು ನಡೆದಿಲ್ಲವೇ?

ಪ್ರಗ್ಯಾ ಠಾಕೂರ್ ಎಂಬ ಸಂಸದೆ ಈಗಾಗಲೇ ಗೋಡ್ಸೆ ಒಬ್ಬ ದೇಶಭಕ್ತ ಎಂದು ದೇಶದ ಸಂಸತ್ತಿನಲ್ಲೇ ಹೇಳಿಯಾಗಿದೆ. ಅಂತಹ ಹಲವು ಹೇಳಿಕೆಗಳ ನಂತರ ಬಿಜೆಪಿ ಪಕ್ಷವು ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲವೆಂಬುದು ಸ್ಪಷ್ಟ ಸೂಚನೆಯನ್ನು ನೀಡುತ್ತಿದೆ. ಅಂದರೆ ಹಿಂದೂ ರಾಷ್ಟ್ರದ ಕಲ್ಪನೆ ಏನಿತ್ತೋ, ಅದು ಸಾಕಾರವಾಗುವ ದಿಕ್ಕಿನಲ್ಲಿ ದೇಶ ನಡೆದಿದೆ. ಗಾಂಧಿ ಕೊಲೆಯನ್ನು ಆರೆಸ್ಸೆಸ್ಸಿನವರೇ ಮಾಡಿದ್ದು ಮತ್ತು ಅದನ್ನು ಅವರು ಸಂಭ್ರಮಿಸಿದರು ಎಂಬುದಕ್ಕೆ ದಾಖಲೆಗಳಿವೆ. ಗಾಂಧಿ ದ್ವೇಷ ಮಾತ್ರವಲ್ಲದೇ ಅಂಬೇಡ್ಕರ್‍ಗೆ ವಿರೋಧ, ಮಂಡಲ್ ವರದಿಗೆ ವಿರೋಧ ಇತ್ಯಾದಿಗಳು ಬಹಿರಂಗವಾಗಿ ವ್ಯಕ್ತವಾಗಿವೆ. ಮೀಸಲಾತಿಯ ಕುರಿತು ದಲಿತ ಸಮುದಾಯದ ಕುರಿತು ಭಾರತದ ಮೇಲ್ಜಾತಿಗಳಿಗೆ ಇರುವ ಅಸಹನೆಯ ಕುರಿತು ಯಾವುದೇ ಪುರಾವೆ ಒದಗಿಸುವ ಅಗತ್ಯವಿಲ್ಲ.

ಅದೇ ರೀತಿ ಬಡವರು, ಅನಕ್ಷರಸ್ಥರು, ‘ಕೀಳು’ ಜಾತಿಯವರು (ಕೀಳು ಜಾತಿ ಎಂಬ ಪದ ಇಂದಿಗೂ ಬಳಕೆಯಲ್ಲಿದೆ ಎಂಬುದನ್ನು ಮರೆಯಲಾಗುತ್ತದೆಯೇ?) ಚುನಾವಣೆಯಲ್ಲಿ ಸರಿಯಾದ ಆಯ್ಕೆ ಮಾಡುವುದಿಲ್ಲ; ಸ್ಲಂ ಜನರಂತಹವರು ಸೇರಿಕೊಂಡು ದೇಶ ಹಾಳು ಮಾಡುತ್ತಿದ್ದಾರೆ ಎಂಬ ಭಾವವೂ ‘ಕುಲೀನ’ರಲ್ಲಿ ಗಾಢವಾಗಿಯೇ ಇದೆ. ವಿದ್ಯಾವಂತರಲ್ಲದವರಿಗೆ ಮತದಾನದ ಹಕ್ಕು ಇರಬಾರದು ಎಂದು ಪ್ರತಿಪಾದಿಸುವವರೂ ಇದ್ದಾರೆ.

ಪೌರತ್ವವೆಂಬುದು ಹಕ್ಕುಗಳನ್ನು ಪಡೆಯಲು ಇರುವ ಹಕ್ಕಾಗಿದೆ. ಇಂದು ದಾಖಲಾತಿಗಳ ಆಧಾರದ ಮೇಲೆ ಪೌರತ್ವವನ್ನು ನಿರ್ಧರಿಸುವ ಪ್ರಕ್ರಿಯೆಯೊಂದು ದೇಶದಲ್ಲಿ ಚಾಲ್ತಿಗೆ ಬಂದಿದೆ. ಅಂತಹ ಹಕ್ಕುಗಳಲ್ಲಿ ಒಂದು ಮತದಾನದ ಹಕ್ಕೂ ಆಗಿದೆ. ದೇಶದ ಬಡವರಿಗೆ, ದಲಿತರಿಗೆ ಏನಾದರೂ ಹಕ್ಕುಗಳು ಸಿಕ್ಕಿದ್ದರೆ ಅದಕ್ಕೆ ಓಟೂ ಒಂದು ಕಾರಣವಾಗಿದೆ. ಆದರೆ, ದಾಖಲಾತಿಗಳ ಮೇಲೆ ನಿರ್ಧರಿಸಲಾಗುವ ಪೌರತ್ವವು ಮುಂದೊಂದು ದಿನ ಈ ಬಡವರ, ದಲಿತರ, ಹಿಂದುಳಿದವರ ಓಟಿನ ಹಕ್ಕನ್ನೂ ಕಸಿಯುವ ಅಸ್ತ್ರವಾಗುವುದಿಲ್ಲ ಎಂದು ಸುಮ್ಮನೇ ಕೂರುವ ಹಾಗಿಲ್ಲ. ಈಗ ಮೈಮರೆತರೆ ಮುಂದೊಂದು ದಿನ ಬಹಳ ದುಬಾರಿ ಬೆಲೆ ತೆರಬೇಕಾಗಿ ಬರಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...