Homeಮುಖಪುಟ‘ಹಿಂದೂ ರಾಷ್ಟ್ರದಲ್ಲಿ ದಲಿತ-ಶೂದ್ರರಿಗೆ ಮತದಾನದ ಹಕ್ಕಿರುತ್ತದೆಯೇ?’

‘ಹಿಂದೂ ರಾಷ್ಟ್ರದಲ್ಲಿ ದಲಿತ-ಶೂದ್ರರಿಗೆ ಮತದಾನದ ಹಕ್ಕಿರುತ್ತದೆಯೇ?’

ಮೀಸಲಾತಿಯ ಕುರಿತು ದಲಿತ ಸಮುದಾಯದ ಕುರಿತು ಭಾರತದ ಮೇಲ್ಜಾತಿಗಳಿಗೆ ಇರುವ ಅಸಹನೆಯ ಕುರಿತು ಯಾವುದೇ ಪುರಾವೆ ಒದಗಿಸುವ ಅಗತ್ಯವಿಲ್ಲ.

- Advertisement -
- Advertisement -

ಲೇಖನದ ಶೀರ್ಷಿಕೆಯು ಹಿಂದೂ ರಾಷ್ಟ್ರ ಎಂಬುದೊಂದು ಅಸ್ತಿತ್ವಕ್ಕೆ ಬರಲಿದೆ ಎಂಬ ಸಾಧ್ಯತೆಯನ್ನು ಧ್ವನಿಸುತ್ತದೆ. ಇಂದು ಅಂತಹ ಸಾಧ್ಯತೆಯನ್ನು ಖಡಾಖಂಡಿತವಾಗಿ ಯಾರಾದರೂ ಅಲ್ಲಗಳೆದರೆ ಅಂತಹವರನ್ನು ಒಂದು ಮಾತು ಕೇಳಬೇಕಾಗುತ್ತದೆ. ಈ ದೇಶದಲ್ಲಿ ಮುಸ್ಲಿಮರಾಗಿರುವ ಏಕೈಕ ಕಾರಣಕ್ಕೆ ವ್ಯಕ್ತಿಗಳನ್ನು, ಕೆಲವೊಮ್ಮೆ ಅಪರಿಚಿತರನ್ನೂ ಕೊಲ್ಲಬಹುದು ಎಂದು ನೀವು ಊಹಿಸಿದ್ದೀರಾ? ದೇಶದ ಪ್ರಧಾನಮಂತ್ರಿಯು ಧರ್ಮವನ್ನು ಎಳೆದುತಂದು ಕೆಲವರ ಪರ ಅಥವಾ ವಿರುದ್ಧ ನೇರವಾಗಿ ಮಾತಾಡಬಹುದು ಎಂದು ಭಾವಿಸಿದ್ದೀರಾ? ಭಾರತ ದೇಶದ ಪೌರತ್ವವನ್ನು ಧರ್ಮಾಧಾರಿತವಾಗಿ ನಿರ್ಧರಿಸುವ ಕಾನೂನೊಂದು ಬರುತ್ತದೆ ಎಂದು ನಿರೀಕ್ಷಿಸಿದ್ದಿರಾ? ಭಾರತದ ಪ್ರಧಾನಿಯು ಪತ್ರಕರ್ತೆಯೊಬ್ಬರ ಕೊಲೆಯನ್ನು ಸಂಭ್ರಮಿಸುವ ವ್ಯಕ್ತಿಗಳನ್ನು ಟ್ವಿಟ್ಟರ್‌ನಲ್ಲಿ ಫಾಲೋ ಮಾಡುತ್ತಾರಷ್ಟೇ ಅಲ್ಲದೇ, ಅದನ್ನು ಬಯಲಿಗೆ ತಂದರೂ ಅದನ್ನು ಬದಲಿಸದೇ ಸೂಚನೆಯೊಂದನ್ನು ನೀಡಬಹುದು ಎಂದುಕೊಂಡಿದ್ದಿರಾ?

ಪ್ರಶ್ನೆಗಳ ಪಟ್ಟಿ ಇನ್ನೂ ದೀರ್ಘವಿದೆ ಎಂಬುದು ನಿಮಗೆ ಗೊತ್ತು. ಹಾಗಾಗಿ ಹಿಂದೂ ರಾಷ್ಟ್ರವೆಂಬುದೊಂದು ಬರುವುದೇ ಇಲ್ಲ ಎಂದು ಅಂದುಕೊಳ್ಳಲಾಗದು. ಪ್ರಧಾನಿ ಹಾಗೂ ಆಳುವ ಪಕ್ಷವು ಸದಾ ಪೂಜಿಸುವ ಭಾರತ ಮಾತೆಯ ಫೋಟೋದಲ್ಲಿ ರಾಷ್ಟ್ರಧ್ವಜ ಇರುವುದಿಲ್ಲ; ಕೇಸರಿ ಧ್ವಜ ಮಾತ್ರ ಇರುತ್ತದೆ ಎಂಬುದನ್ನು ಗಮನಿಸಿ. ಈ ಪರಿವಾರವು ಬಳಸುವ ಸಂಕೇತಗಳು, ದೀರ್ಘಕಾಲದಿಂದ ಮುಂದಿಡುತ್ತಾ ಬಂದಿರುವ ಯೋಜನೆಗಳು, ಡಿಮ್ಯಾಂಡ್‍ಗಳು ಒಂದೊಂದೇ ನಿಜವಾಗುತ್ತಿರುವುದನ್ನೂ ಗಮನಿಸಿ. ಮುಂದಿನ ಎರಡು ವರ್ಷಗಳಲ್ಲಿ ಗೋಡ್ಸೆಯನ್ನು ಬಹಿರಂಗವಾಗಿ ಆರಾಧಿಸುವ (ಆ ಚಿಂತನೆಯು ಸಾಕಷ್ಟು ಕಾಲದಿಂದ ಸಾಕಷ್ಟು ವ್ಯಾಪಕವಾಗಿಯೇ ಚಾಲನೆಯಲ್ಲಿದೆ ಎಂಬುದು ತಿಳಿದಿಲ್ಲವಾದರೆ, ಆರೆಸ್ಸೆಸ್‍ನ ಯಾವುದೇ ಸ್ವಯಂಸೇವಕನನ್ನು ಖಾಸಗಿಯಾಗಿ ಮಾತನಾಡಿಸಿ) ಕಾರ್ಯಕ್ರಮಗಳು ನಡೆಯಲು ಎಲ್ಲಾ ತಯಾರಿಗಳು ನಡೆದಿಲ್ಲವೇ?

ಪ್ರಗ್ಯಾ ಠಾಕೂರ್ ಎಂಬ ಸಂಸದೆ ಈಗಾಗಲೇ ಗೋಡ್ಸೆ ಒಬ್ಬ ದೇಶಭಕ್ತ ಎಂದು ದೇಶದ ಸಂಸತ್ತಿನಲ್ಲೇ ಹೇಳಿಯಾಗಿದೆ. ಅಂತಹ ಹಲವು ಹೇಳಿಕೆಗಳ ನಂತರ ಬಿಜೆಪಿ ಪಕ್ಷವು ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲವೆಂಬುದು ಸ್ಪಷ್ಟ ಸೂಚನೆಯನ್ನು ನೀಡುತ್ತಿದೆ. ಅಂದರೆ ಹಿಂದೂ ರಾಷ್ಟ್ರದ ಕಲ್ಪನೆ ಏನಿತ್ತೋ, ಅದು ಸಾಕಾರವಾಗುವ ದಿಕ್ಕಿನಲ್ಲಿ ದೇಶ ನಡೆದಿದೆ. ಗಾಂಧಿ ಕೊಲೆಯನ್ನು ಆರೆಸ್ಸೆಸ್ಸಿನವರೇ ಮಾಡಿದ್ದು ಮತ್ತು ಅದನ್ನು ಅವರು ಸಂಭ್ರಮಿಸಿದರು ಎಂಬುದಕ್ಕೆ ದಾಖಲೆಗಳಿವೆ. ಗಾಂಧಿ ದ್ವೇಷ ಮಾತ್ರವಲ್ಲದೇ ಅಂಬೇಡ್ಕರ್‍ಗೆ ವಿರೋಧ, ಮಂಡಲ್ ವರದಿಗೆ ವಿರೋಧ ಇತ್ಯಾದಿಗಳು ಬಹಿರಂಗವಾಗಿ ವ್ಯಕ್ತವಾಗಿವೆ. ಮೀಸಲಾತಿಯ ಕುರಿತು ದಲಿತ ಸಮುದಾಯದ ಕುರಿತು ಭಾರತದ ಮೇಲ್ಜಾತಿಗಳಿಗೆ ಇರುವ ಅಸಹನೆಯ ಕುರಿತು ಯಾವುದೇ ಪುರಾವೆ ಒದಗಿಸುವ ಅಗತ್ಯವಿಲ್ಲ.

ಅದೇ ರೀತಿ ಬಡವರು, ಅನಕ್ಷರಸ್ಥರು, ‘ಕೀಳು’ ಜಾತಿಯವರು (ಕೀಳು ಜಾತಿ ಎಂಬ ಪದ ಇಂದಿಗೂ ಬಳಕೆಯಲ್ಲಿದೆ ಎಂಬುದನ್ನು ಮರೆಯಲಾಗುತ್ತದೆಯೇ?) ಚುನಾವಣೆಯಲ್ಲಿ ಸರಿಯಾದ ಆಯ್ಕೆ ಮಾಡುವುದಿಲ್ಲ; ಸ್ಲಂ ಜನರಂತಹವರು ಸೇರಿಕೊಂಡು ದೇಶ ಹಾಳು ಮಾಡುತ್ತಿದ್ದಾರೆ ಎಂಬ ಭಾವವೂ ‘ಕುಲೀನ’ರಲ್ಲಿ ಗಾಢವಾಗಿಯೇ ಇದೆ. ವಿದ್ಯಾವಂತರಲ್ಲದವರಿಗೆ ಮತದಾನದ ಹಕ್ಕು ಇರಬಾರದು ಎಂದು ಪ್ರತಿಪಾದಿಸುವವರೂ ಇದ್ದಾರೆ.

ಪೌರತ್ವವೆಂಬುದು ಹಕ್ಕುಗಳನ್ನು ಪಡೆಯಲು ಇರುವ ಹಕ್ಕಾಗಿದೆ. ಇಂದು ದಾಖಲಾತಿಗಳ ಆಧಾರದ ಮೇಲೆ ಪೌರತ್ವವನ್ನು ನಿರ್ಧರಿಸುವ ಪ್ರಕ್ರಿಯೆಯೊಂದು ದೇಶದಲ್ಲಿ ಚಾಲ್ತಿಗೆ ಬಂದಿದೆ. ಅಂತಹ ಹಕ್ಕುಗಳಲ್ಲಿ ಒಂದು ಮತದಾನದ ಹಕ್ಕೂ ಆಗಿದೆ. ದೇಶದ ಬಡವರಿಗೆ, ದಲಿತರಿಗೆ ಏನಾದರೂ ಹಕ್ಕುಗಳು ಸಿಕ್ಕಿದ್ದರೆ ಅದಕ್ಕೆ ಓಟೂ ಒಂದು ಕಾರಣವಾಗಿದೆ. ಆದರೆ, ದಾಖಲಾತಿಗಳ ಮೇಲೆ ನಿರ್ಧರಿಸಲಾಗುವ ಪೌರತ್ವವು ಮುಂದೊಂದು ದಿನ ಈ ಬಡವರ, ದಲಿತರ, ಹಿಂದುಳಿದವರ ಓಟಿನ ಹಕ್ಕನ್ನೂ ಕಸಿಯುವ ಅಸ್ತ್ರವಾಗುವುದಿಲ್ಲ ಎಂದು ಸುಮ್ಮನೇ ಕೂರುವ ಹಾಗಿಲ್ಲ. ಈಗ ಮೈಮರೆತರೆ ಮುಂದೊಂದು ದಿನ ಬಹಳ ದುಬಾರಿ ಬೆಲೆ ತೆರಬೇಕಾಗಿ ಬರಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...