Homeಮುಖಪುಟ‘ಹಿಂದೂ ರಾಷ್ಟ್ರದಲ್ಲಿ ದಲಿತ-ಶೂದ್ರರಿಗೆ ಮತದಾನದ ಹಕ್ಕಿರುತ್ತದೆಯೇ?’

‘ಹಿಂದೂ ರಾಷ್ಟ್ರದಲ್ಲಿ ದಲಿತ-ಶೂದ್ರರಿಗೆ ಮತದಾನದ ಹಕ್ಕಿರುತ್ತದೆಯೇ?’

ಮೀಸಲಾತಿಯ ಕುರಿತು ದಲಿತ ಸಮುದಾಯದ ಕುರಿತು ಭಾರತದ ಮೇಲ್ಜಾತಿಗಳಿಗೆ ಇರುವ ಅಸಹನೆಯ ಕುರಿತು ಯಾವುದೇ ಪುರಾವೆ ಒದಗಿಸುವ ಅಗತ್ಯವಿಲ್ಲ.

- Advertisement -
- Advertisement -

ಲೇಖನದ ಶೀರ್ಷಿಕೆಯು ಹಿಂದೂ ರಾಷ್ಟ್ರ ಎಂಬುದೊಂದು ಅಸ್ತಿತ್ವಕ್ಕೆ ಬರಲಿದೆ ಎಂಬ ಸಾಧ್ಯತೆಯನ್ನು ಧ್ವನಿಸುತ್ತದೆ. ಇಂದು ಅಂತಹ ಸಾಧ್ಯತೆಯನ್ನು ಖಡಾಖಂಡಿತವಾಗಿ ಯಾರಾದರೂ ಅಲ್ಲಗಳೆದರೆ ಅಂತಹವರನ್ನು ಒಂದು ಮಾತು ಕೇಳಬೇಕಾಗುತ್ತದೆ. ಈ ದೇಶದಲ್ಲಿ ಮುಸ್ಲಿಮರಾಗಿರುವ ಏಕೈಕ ಕಾರಣಕ್ಕೆ ವ್ಯಕ್ತಿಗಳನ್ನು, ಕೆಲವೊಮ್ಮೆ ಅಪರಿಚಿತರನ್ನೂ ಕೊಲ್ಲಬಹುದು ಎಂದು ನೀವು ಊಹಿಸಿದ್ದೀರಾ? ದೇಶದ ಪ್ರಧಾನಮಂತ್ರಿಯು ಧರ್ಮವನ್ನು ಎಳೆದುತಂದು ಕೆಲವರ ಪರ ಅಥವಾ ವಿರುದ್ಧ ನೇರವಾಗಿ ಮಾತಾಡಬಹುದು ಎಂದು ಭಾವಿಸಿದ್ದೀರಾ? ಭಾರತ ದೇಶದ ಪೌರತ್ವವನ್ನು ಧರ್ಮಾಧಾರಿತವಾಗಿ ನಿರ್ಧರಿಸುವ ಕಾನೂನೊಂದು ಬರುತ್ತದೆ ಎಂದು ನಿರೀಕ್ಷಿಸಿದ್ದಿರಾ? ಭಾರತದ ಪ್ರಧಾನಿಯು ಪತ್ರಕರ್ತೆಯೊಬ್ಬರ ಕೊಲೆಯನ್ನು ಸಂಭ್ರಮಿಸುವ ವ್ಯಕ್ತಿಗಳನ್ನು ಟ್ವಿಟ್ಟರ್‌ನಲ್ಲಿ ಫಾಲೋ ಮಾಡುತ್ತಾರಷ್ಟೇ ಅಲ್ಲದೇ, ಅದನ್ನು ಬಯಲಿಗೆ ತಂದರೂ ಅದನ್ನು ಬದಲಿಸದೇ ಸೂಚನೆಯೊಂದನ್ನು ನೀಡಬಹುದು ಎಂದುಕೊಂಡಿದ್ದಿರಾ?

ಪ್ರಶ್ನೆಗಳ ಪಟ್ಟಿ ಇನ್ನೂ ದೀರ್ಘವಿದೆ ಎಂಬುದು ನಿಮಗೆ ಗೊತ್ತು. ಹಾಗಾಗಿ ಹಿಂದೂ ರಾಷ್ಟ್ರವೆಂಬುದೊಂದು ಬರುವುದೇ ಇಲ್ಲ ಎಂದು ಅಂದುಕೊಳ್ಳಲಾಗದು. ಪ್ರಧಾನಿ ಹಾಗೂ ಆಳುವ ಪಕ್ಷವು ಸದಾ ಪೂಜಿಸುವ ಭಾರತ ಮಾತೆಯ ಫೋಟೋದಲ್ಲಿ ರಾಷ್ಟ್ರಧ್ವಜ ಇರುವುದಿಲ್ಲ; ಕೇಸರಿ ಧ್ವಜ ಮಾತ್ರ ಇರುತ್ತದೆ ಎಂಬುದನ್ನು ಗಮನಿಸಿ. ಈ ಪರಿವಾರವು ಬಳಸುವ ಸಂಕೇತಗಳು, ದೀರ್ಘಕಾಲದಿಂದ ಮುಂದಿಡುತ್ತಾ ಬಂದಿರುವ ಯೋಜನೆಗಳು, ಡಿಮ್ಯಾಂಡ್‍ಗಳು ಒಂದೊಂದೇ ನಿಜವಾಗುತ್ತಿರುವುದನ್ನೂ ಗಮನಿಸಿ. ಮುಂದಿನ ಎರಡು ವರ್ಷಗಳಲ್ಲಿ ಗೋಡ್ಸೆಯನ್ನು ಬಹಿರಂಗವಾಗಿ ಆರಾಧಿಸುವ (ಆ ಚಿಂತನೆಯು ಸಾಕಷ್ಟು ಕಾಲದಿಂದ ಸಾಕಷ್ಟು ವ್ಯಾಪಕವಾಗಿಯೇ ಚಾಲನೆಯಲ್ಲಿದೆ ಎಂಬುದು ತಿಳಿದಿಲ್ಲವಾದರೆ, ಆರೆಸ್ಸೆಸ್‍ನ ಯಾವುದೇ ಸ್ವಯಂಸೇವಕನನ್ನು ಖಾಸಗಿಯಾಗಿ ಮಾತನಾಡಿಸಿ) ಕಾರ್ಯಕ್ರಮಗಳು ನಡೆಯಲು ಎಲ್ಲಾ ತಯಾರಿಗಳು ನಡೆದಿಲ್ಲವೇ?

ಪ್ರಗ್ಯಾ ಠಾಕೂರ್ ಎಂಬ ಸಂಸದೆ ಈಗಾಗಲೇ ಗೋಡ್ಸೆ ಒಬ್ಬ ದೇಶಭಕ್ತ ಎಂದು ದೇಶದ ಸಂಸತ್ತಿನಲ್ಲೇ ಹೇಳಿಯಾಗಿದೆ. ಅಂತಹ ಹಲವು ಹೇಳಿಕೆಗಳ ನಂತರ ಬಿಜೆಪಿ ಪಕ್ಷವು ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲವೆಂಬುದು ಸ್ಪಷ್ಟ ಸೂಚನೆಯನ್ನು ನೀಡುತ್ತಿದೆ. ಅಂದರೆ ಹಿಂದೂ ರಾಷ್ಟ್ರದ ಕಲ್ಪನೆ ಏನಿತ್ತೋ, ಅದು ಸಾಕಾರವಾಗುವ ದಿಕ್ಕಿನಲ್ಲಿ ದೇಶ ನಡೆದಿದೆ. ಗಾಂಧಿ ಕೊಲೆಯನ್ನು ಆರೆಸ್ಸೆಸ್ಸಿನವರೇ ಮಾಡಿದ್ದು ಮತ್ತು ಅದನ್ನು ಅವರು ಸಂಭ್ರಮಿಸಿದರು ಎಂಬುದಕ್ಕೆ ದಾಖಲೆಗಳಿವೆ. ಗಾಂಧಿ ದ್ವೇಷ ಮಾತ್ರವಲ್ಲದೇ ಅಂಬೇಡ್ಕರ್‍ಗೆ ವಿರೋಧ, ಮಂಡಲ್ ವರದಿಗೆ ವಿರೋಧ ಇತ್ಯಾದಿಗಳು ಬಹಿರಂಗವಾಗಿ ವ್ಯಕ್ತವಾಗಿವೆ. ಮೀಸಲಾತಿಯ ಕುರಿತು ದಲಿತ ಸಮುದಾಯದ ಕುರಿತು ಭಾರತದ ಮೇಲ್ಜಾತಿಗಳಿಗೆ ಇರುವ ಅಸಹನೆಯ ಕುರಿತು ಯಾವುದೇ ಪುರಾವೆ ಒದಗಿಸುವ ಅಗತ್ಯವಿಲ್ಲ.

ಅದೇ ರೀತಿ ಬಡವರು, ಅನಕ್ಷರಸ್ಥರು, ‘ಕೀಳು’ ಜಾತಿಯವರು (ಕೀಳು ಜಾತಿ ಎಂಬ ಪದ ಇಂದಿಗೂ ಬಳಕೆಯಲ್ಲಿದೆ ಎಂಬುದನ್ನು ಮರೆಯಲಾಗುತ್ತದೆಯೇ?) ಚುನಾವಣೆಯಲ್ಲಿ ಸರಿಯಾದ ಆಯ್ಕೆ ಮಾಡುವುದಿಲ್ಲ; ಸ್ಲಂ ಜನರಂತಹವರು ಸೇರಿಕೊಂಡು ದೇಶ ಹಾಳು ಮಾಡುತ್ತಿದ್ದಾರೆ ಎಂಬ ಭಾವವೂ ‘ಕುಲೀನ’ರಲ್ಲಿ ಗಾಢವಾಗಿಯೇ ಇದೆ. ವಿದ್ಯಾವಂತರಲ್ಲದವರಿಗೆ ಮತದಾನದ ಹಕ್ಕು ಇರಬಾರದು ಎಂದು ಪ್ರತಿಪಾದಿಸುವವರೂ ಇದ್ದಾರೆ.

ಪೌರತ್ವವೆಂಬುದು ಹಕ್ಕುಗಳನ್ನು ಪಡೆಯಲು ಇರುವ ಹಕ್ಕಾಗಿದೆ. ಇಂದು ದಾಖಲಾತಿಗಳ ಆಧಾರದ ಮೇಲೆ ಪೌರತ್ವವನ್ನು ನಿರ್ಧರಿಸುವ ಪ್ರಕ್ರಿಯೆಯೊಂದು ದೇಶದಲ್ಲಿ ಚಾಲ್ತಿಗೆ ಬಂದಿದೆ. ಅಂತಹ ಹಕ್ಕುಗಳಲ್ಲಿ ಒಂದು ಮತದಾನದ ಹಕ್ಕೂ ಆಗಿದೆ. ದೇಶದ ಬಡವರಿಗೆ, ದಲಿತರಿಗೆ ಏನಾದರೂ ಹಕ್ಕುಗಳು ಸಿಕ್ಕಿದ್ದರೆ ಅದಕ್ಕೆ ಓಟೂ ಒಂದು ಕಾರಣವಾಗಿದೆ. ಆದರೆ, ದಾಖಲಾತಿಗಳ ಮೇಲೆ ನಿರ್ಧರಿಸಲಾಗುವ ಪೌರತ್ವವು ಮುಂದೊಂದು ದಿನ ಈ ಬಡವರ, ದಲಿತರ, ಹಿಂದುಳಿದವರ ಓಟಿನ ಹಕ್ಕನ್ನೂ ಕಸಿಯುವ ಅಸ್ತ್ರವಾಗುವುದಿಲ್ಲ ಎಂದು ಸುಮ್ಮನೇ ಕೂರುವ ಹಾಗಿಲ್ಲ. ಈಗ ಮೈಮರೆತರೆ ಮುಂದೊಂದು ದಿನ ಬಹಳ ದುಬಾರಿ ಬೆಲೆ ತೆರಬೇಕಾಗಿ ಬರಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...