Homeಮುಖಪುಟ‘ಹಿಂದೂ ರಾಷ್ಟ್ರದಲ್ಲಿ ದಲಿತ-ಶೂದ್ರರಿಗೆ ಮತದಾನದ ಹಕ್ಕಿರುತ್ತದೆಯೇ?’

‘ಹಿಂದೂ ರಾಷ್ಟ್ರದಲ್ಲಿ ದಲಿತ-ಶೂದ್ರರಿಗೆ ಮತದಾನದ ಹಕ್ಕಿರುತ್ತದೆಯೇ?’

ಮೀಸಲಾತಿಯ ಕುರಿತು ದಲಿತ ಸಮುದಾಯದ ಕುರಿತು ಭಾರತದ ಮೇಲ್ಜಾತಿಗಳಿಗೆ ಇರುವ ಅಸಹನೆಯ ಕುರಿತು ಯಾವುದೇ ಪುರಾವೆ ಒದಗಿಸುವ ಅಗತ್ಯವಿಲ್ಲ.

- Advertisement -
- Advertisement -

ಲೇಖನದ ಶೀರ್ಷಿಕೆಯು ಹಿಂದೂ ರಾಷ್ಟ್ರ ಎಂಬುದೊಂದು ಅಸ್ತಿತ್ವಕ್ಕೆ ಬರಲಿದೆ ಎಂಬ ಸಾಧ್ಯತೆಯನ್ನು ಧ್ವನಿಸುತ್ತದೆ. ಇಂದು ಅಂತಹ ಸಾಧ್ಯತೆಯನ್ನು ಖಡಾಖಂಡಿತವಾಗಿ ಯಾರಾದರೂ ಅಲ್ಲಗಳೆದರೆ ಅಂತಹವರನ್ನು ಒಂದು ಮಾತು ಕೇಳಬೇಕಾಗುತ್ತದೆ. ಈ ದೇಶದಲ್ಲಿ ಮುಸ್ಲಿಮರಾಗಿರುವ ಏಕೈಕ ಕಾರಣಕ್ಕೆ ವ್ಯಕ್ತಿಗಳನ್ನು, ಕೆಲವೊಮ್ಮೆ ಅಪರಿಚಿತರನ್ನೂ ಕೊಲ್ಲಬಹುದು ಎಂದು ನೀವು ಊಹಿಸಿದ್ದೀರಾ? ದೇಶದ ಪ್ರಧಾನಮಂತ್ರಿಯು ಧರ್ಮವನ್ನು ಎಳೆದುತಂದು ಕೆಲವರ ಪರ ಅಥವಾ ವಿರುದ್ಧ ನೇರವಾಗಿ ಮಾತಾಡಬಹುದು ಎಂದು ಭಾವಿಸಿದ್ದೀರಾ? ಭಾರತ ದೇಶದ ಪೌರತ್ವವನ್ನು ಧರ್ಮಾಧಾರಿತವಾಗಿ ನಿರ್ಧರಿಸುವ ಕಾನೂನೊಂದು ಬರುತ್ತದೆ ಎಂದು ನಿರೀಕ್ಷಿಸಿದ್ದಿರಾ? ಭಾರತದ ಪ್ರಧಾನಿಯು ಪತ್ರಕರ್ತೆಯೊಬ್ಬರ ಕೊಲೆಯನ್ನು ಸಂಭ್ರಮಿಸುವ ವ್ಯಕ್ತಿಗಳನ್ನು ಟ್ವಿಟ್ಟರ್‌ನಲ್ಲಿ ಫಾಲೋ ಮಾಡುತ್ತಾರಷ್ಟೇ ಅಲ್ಲದೇ, ಅದನ್ನು ಬಯಲಿಗೆ ತಂದರೂ ಅದನ್ನು ಬದಲಿಸದೇ ಸೂಚನೆಯೊಂದನ್ನು ನೀಡಬಹುದು ಎಂದುಕೊಂಡಿದ್ದಿರಾ?

ಪ್ರಶ್ನೆಗಳ ಪಟ್ಟಿ ಇನ್ನೂ ದೀರ್ಘವಿದೆ ಎಂಬುದು ನಿಮಗೆ ಗೊತ್ತು. ಹಾಗಾಗಿ ಹಿಂದೂ ರಾಷ್ಟ್ರವೆಂಬುದೊಂದು ಬರುವುದೇ ಇಲ್ಲ ಎಂದು ಅಂದುಕೊಳ್ಳಲಾಗದು. ಪ್ರಧಾನಿ ಹಾಗೂ ಆಳುವ ಪಕ್ಷವು ಸದಾ ಪೂಜಿಸುವ ಭಾರತ ಮಾತೆಯ ಫೋಟೋದಲ್ಲಿ ರಾಷ್ಟ್ರಧ್ವಜ ಇರುವುದಿಲ್ಲ; ಕೇಸರಿ ಧ್ವಜ ಮಾತ್ರ ಇರುತ್ತದೆ ಎಂಬುದನ್ನು ಗಮನಿಸಿ. ಈ ಪರಿವಾರವು ಬಳಸುವ ಸಂಕೇತಗಳು, ದೀರ್ಘಕಾಲದಿಂದ ಮುಂದಿಡುತ್ತಾ ಬಂದಿರುವ ಯೋಜನೆಗಳು, ಡಿಮ್ಯಾಂಡ್‍ಗಳು ಒಂದೊಂದೇ ನಿಜವಾಗುತ್ತಿರುವುದನ್ನೂ ಗಮನಿಸಿ. ಮುಂದಿನ ಎರಡು ವರ್ಷಗಳಲ್ಲಿ ಗೋಡ್ಸೆಯನ್ನು ಬಹಿರಂಗವಾಗಿ ಆರಾಧಿಸುವ (ಆ ಚಿಂತನೆಯು ಸಾಕಷ್ಟು ಕಾಲದಿಂದ ಸಾಕಷ್ಟು ವ್ಯಾಪಕವಾಗಿಯೇ ಚಾಲನೆಯಲ್ಲಿದೆ ಎಂಬುದು ತಿಳಿದಿಲ್ಲವಾದರೆ, ಆರೆಸ್ಸೆಸ್‍ನ ಯಾವುದೇ ಸ್ವಯಂಸೇವಕನನ್ನು ಖಾಸಗಿಯಾಗಿ ಮಾತನಾಡಿಸಿ) ಕಾರ್ಯಕ್ರಮಗಳು ನಡೆಯಲು ಎಲ್ಲಾ ತಯಾರಿಗಳು ನಡೆದಿಲ್ಲವೇ?

ಪ್ರಗ್ಯಾ ಠಾಕೂರ್ ಎಂಬ ಸಂಸದೆ ಈಗಾಗಲೇ ಗೋಡ್ಸೆ ಒಬ್ಬ ದೇಶಭಕ್ತ ಎಂದು ದೇಶದ ಸಂಸತ್ತಿನಲ್ಲೇ ಹೇಳಿಯಾಗಿದೆ. ಅಂತಹ ಹಲವು ಹೇಳಿಕೆಗಳ ನಂತರ ಬಿಜೆಪಿ ಪಕ್ಷವು ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲವೆಂಬುದು ಸ್ಪಷ್ಟ ಸೂಚನೆಯನ್ನು ನೀಡುತ್ತಿದೆ. ಅಂದರೆ ಹಿಂದೂ ರಾಷ್ಟ್ರದ ಕಲ್ಪನೆ ಏನಿತ್ತೋ, ಅದು ಸಾಕಾರವಾಗುವ ದಿಕ್ಕಿನಲ್ಲಿ ದೇಶ ನಡೆದಿದೆ. ಗಾಂಧಿ ಕೊಲೆಯನ್ನು ಆರೆಸ್ಸೆಸ್ಸಿನವರೇ ಮಾಡಿದ್ದು ಮತ್ತು ಅದನ್ನು ಅವರು ಸಂಭ್ರಮಿಸಿದರು ಎಂಬುದಕ್ಕೆ ದಾಖಲೆಗಳಿವೆ. ಗಾಂಧಿ ದ್ವೇಷ ಮಾತ್ರವಲ್ಲದೇ ಅಂಬೇಡ್ಕರ್‍ಗೆ ವಿರೋಧ, ಮಂಡಲ್ ವರದಿಗೆ ವಿರೋಧ ಇತ್ಯಾದಿಗಳು ಬಹಿರಂಗವಾಗಿ ವ್ಯಕ್ತವಾಗಿವೆ. ಮೀಸಲಾತಿಯ ಕುರಿತು ದಲಿತ ಸಮುದಾಯದ ಕುರಿತು ಭಾರತದ ಮೇಲ್ಜಾತಿಗಳಿಗೆ ಇರುವ ಅಸಹನೆಯ ಕುರಿತು ಯಾವುದೇ ಪುರಾವೆ ಒದಗಿಸುವ ಅಗತ್ಯವಿಲ್ಲ.

ಅದೇ ರೀತಿ ಬಡವರು, ಅನಕ್ಷರಸ್ಥರು, ‘ಕೀಳು’ ಜಾತಿಯವರು (ಕೀಳು ಜಾತಿ ಎಂಬ ಪದ ಇಂದಿಗೂ ಬಳಕೆಯಲ್ಲಿದೆ ಎಂಬುದನ್ನು ಮರೆಯಲಾಗುತ್ತದೆಯೇ?) ಚುನಾವಣೆಯಲ್ಲಿ ಸರಿಯಾದ ಆಯ್ಕೆ ಮಾಡುವುದಿಲ್ಲ; ಸ್ಲಂ ಜನರಂತಹವರು ಸೇರಿಕೊಂಡು ದೇಶ ಹಾಳು ಮಾಡುತ್ತಿದ್ದಾರೆ ಎಂಬ ಭಾವವೂ ‘ಕುಲೀನ’ರಲ್ಲಿ ಗಾಢವಾಗಿಯೇ ಇದೆ. ವಿದ್ಯಾವಂತರಲ್ಲದವರಿಗೆ ಮತದಾನದ ಹಕ್ಕು ಇರಬಾರದು ಎಂದು ಪ್ರತಿಪಾದಿಸುವವರೂ ಇದ್ದಾರೆ.

ಪೌರತ್ವವೆಂಬುದು ಹಕ್ಕುಗಳನ್ನು ಪಡೆಯಲು ಇರುವ ಹಕ್ಕಾಗಿದೆ. ಇಂದು ದಾಖಲಾತಿಗಳ ಆಧಾರದ ಮೇಲೆ ಪೌರತ್ವವನ್ನು ನಿರ್ಧರಿಸುವ ಪ್ರಕ್ರಿಯೆಯೊಂದು ದೇಶದಲ್ಲಿ ಚಾಲ್ತಿಗೆ ಬಂದಿದೆ. ಅಂತಹ ಹಕ್ಕುಗಳಲ್ಲಿ ಒಂದು ಮತದಾನದ ಹಕ್ಕೂ ಆಗಿದೆ. ದೇಶದ ಬಡವರಿಗೆ, ದಲಿತರಿಗೆ ಏನಾದರೂ ಹಕ್ಕುಗಳು ಸಿಕ್ಕಿದ್ದರೆ ಅದಕ್ಕೆ ಓಟೂ ಒಂದು ಕಾರಣವಾಗಿದೆ. ಆದರೆ, ದಾಖಲಾತಿಗಳ ಮೇಲೆ ನಿರ್ಧರಿಸಲಾಗುವ ಪೌರತ್ವವು ಮುಂದೊಂದು ದಿನ ಈ ಬಡವರ, ದಲಿತರ, ಹಿಂದುಳಿದವರ ಓಟಿನ ಹಕ್ಕನ್ನೂ ಕಸಿಯುವ ಅಸ್ತ್ರವಾಗುವುದಿಲ್ಲ ಎಂದು ಸುಮ್ಮನೇ ಕೂರುವ ಹಾಗಿಲ್ಲ. ಈಗ ಮೈಮರೆತರೆ ಮುಂದೊಂದು ದಿನ ಬಹಳ ದುಬಾರಿ ಬೆಲೆ ತೆರಬೇಕಾಗಿ ಬರಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...