Homeದಲಿತ್ ಫೈಲ್ಸ್ಮುಟ್ಟಾದ ದಲಿತ ವಿದ್ಯಾರ್ಥಿನಿಯನ್ನು ತರಗತಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ ಶಿಕ್ಷಕರು

ಮುಟ್ಟಾದ ದಲಿತ ವಿದ್ಯಾರ್ಥಿನಿಯನ್ನು ತರಗತಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ ಶಿಕ್ಷಕರು

- Advertisement -
- Advertisement -

ಋತುಮತಿಯಾದ ಪರಿಶಿಷ್ಟ ಜಾತಿಯ (ಅರುಂಥತಿಯಾರ್) 8ನೇ ತರಗತಿ ವಿದ್ಯಾರ್ಥಿನಿಯನ್ನು ಶಿಕ್ಷಕರು ತರಗತಿ ಕೊಠಡಿಯ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ ಅಮಾನವೀಯ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಕಿನಾತುಕಡವು ತಾಲೂಕಿನ ಸೆಂಗುಟ್ಟೈಪಾಳ್ಯಂ ಗ್ರಾಮದ ಖಾಸಗಿ ಶಾಲೆಯಲ್ಲಿ ನಡೆದಿದೆ.

ಶಾಲೆಗೆ ಭೇಟಿ ನೀಡಿದ ವೇಳೆ ಮಗಳು ತರಗತಿಯ ಹೊರಗಡೆ ಕುಳಿತು ಪರೀಕ್ಷೆ ಬರೆಯುತ್ತಿರುವುದನ್ನು ವಿಡಿಯೋ ಮಾಡಿಕೊಂಡಿದ್ದ ವಿದ್ಯಾರ್ಥಿನಿಯ ತಾಯಿ, ಇತರರಿಗೆ ವಿಷಯ ತಿಳಿಸಿದ್ದರು. ಬಳಿಕ ಆ ವಿಡಿಯೋ ವೈರಲ್ ಆಗಿದೆ.

ಸೆಂಗುಟ್ಟೈಪಾಳ್ಯಂ ಗ್ರಾಮದಲ್ಲಿರುವ ಸ್ವಾಮಿ ಚಿದ್ಭವಾನಂದ ಮೆಟ್ರಿಕ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಘಟನೆ ನಡೆದಿದೆ. ಏಪ್ರಿಲ್ 5ರಂದು ವಿದ್ಯಾರ್ಥಿನಿಗೆ ಮುಟ್ಟಾಗಿತ್ತು. ಏಪ್ರಿಲ್ 7ರಂದು ಸಮಾಜ ವಿಜ್ಞಾನ ಪರೀಕ್ಷೆ ಬರೆಯಲು ಆಕೆ ಶಾಲೆಗೆ ತೆರಳಿದಾಗ ಶಿಕ್ಷಕರು ಹೊರಗಡೆ ಕೂರಿಸಿ ಪರೀಕ್ಷೆ ಬರೆಸಿದ್ದಾರೆ. ಏಪ್ರಿಲ್ 9ರಂದು ವಿಜ್ಞಾನ ಪರೀಕ್ಷೆ ವೇಳೆಯೂ ಇದೇ ರೀತಿ ನಡೆದಿದೆ ಎಂದು ವರದಿಗಳು ಹೇಳಿವೆ.

ಘಟನೆಯ ಬಗ್ಗೆ ಕೊಯಮತ್ತೂರು ಗ್ರಾಮೀಣ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಕೊಯಮತ್ತೂರು ಜಿಲ್ಲಾಧಿಕಾರಿ ಪವನಕುಮಾರ್ ಜಿ ಗಿರಿಯಪ್ಪನವರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಕುರಿತು ಜಿಲ್ಲಾಡಳಿತಕ್ಕೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಮೆಟ್ರಿಕ್ಯುಲೇಷನ್ ಶಾಲೆಯ ಇನ್ಸ್‌ಪೆಕ್ಟರ್‌ಗೆ ನಿರ್ದೇಶಿಸಲಾಗಿದೆ. ಶಾಲಾ ಆಡಳಿತ ಮಂಡಳಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಕೊಯಮತ್ತೂರು ಮುಖ್ಯ ಶಿಕ್ಷಣಾಧಿಕಾರಿ (ಸಿಇಒ) ಆರ್ ಬಾಲಮುರಳಿ ಮತ್ತು ಖಾಸಗಿ ಶಾಲೆಗಳ ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ಪುನಿತಾ ಅಂತೋನಿಮಾಳ್ ಗುರುವಾರ ಶಾಲೆಗೆ ಭೇಟಿ ನೀಡಿ ಶಾಲಾ ಆಡಳಿತ ಮಂಡಳಿಯವರಿಂದ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ.

“ನನ್ನ ಮಗಳಿಗೆ ಮುಟ್ಟಾಗಿತ್ತು. ಹಾಗಾಗಿ, ಆಕೆ ಆರಾಮಾಗಿ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡುವಂತೆ ನಾವು ಶಿಕ್ಷಕರಲ್ಲಿ ಕೋರಿದ್ದೆವು. ಶಿಕ್ಷಕರು ಪ್ರತ್ಯೇಕ ವ್ಯವಸ್ಥೆ ಮಾಡುವ ಬದಲು ಆಕೆಯನ್ನು ಬಲವಂತವಾಗಿ ತರಗತಿ ಕೊಠಡಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ್ದಾರೆ. ಏಪ್ರಿಲ್ 7ರಂದು ಸುಮಾರು ಎರಡೂವರೆಗೆ ತಾಸು ತರಗತಿಯ ಹೊರಗೆ ಮೆಟ್ಟಿಲ ಮೇಲೆ ಕುಳಿತು ಪರೀಕ್ಷೆ ಬರೆದು ಆಕೆಗೆ ಕಾಲು ನೋವು ಬಂದಿತ್ತು” ಎಂದು ವಿದ್ಯಾರ್ಥಿನಿಯ ತಂದೆ ಹೇಳಿದ್ದಾಗಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಮಗಳು ಶಾಲೆಯಲ್ಲಿ ನಡೆದ ವಿಷಯ ನಮಗೆ ತಿಳಿಸಿದ್ದಳು. ನಾವು ಏಪ್ರಿಲ್ 9ರಂದು ಖುದ್ದಾಗಿ ಶಾಲೆಗೆ ತೆರಳಿದಾಗ ಮಗಳು ಮೆಟ್ಟಿಲ ಮೇಲೆ ಕುಳಿತು ಪರೀಕ್ಷೆ ಬರೆಯುವುದು ಕಂಡಿತು. ಈ ಬಗ್ಗೆ ಶಿಕ್ಷಕರನ್ನು ವಿಚಾರಿಸಿದಾಗ, “ಅದೊಂದು ದೊಡ್ಡ ಸಮಸ್ಯೆನಾ?” ಎಂದು ಪ್ರಶ್ನಿಸಿದರು. ಮಗಳು ತರಗತಿಯ ಹೊರಗೆ ಕುಳಿತು ಪರೀಕ್ಷೆ ಬರೆಯುತ್ತಿರುವುದನ್ನು ನಾವು ವಿಡಿಯೋ ಮಾಡಿಕೊಂಡು ಬಂದಿದ್ದೆವು. ಅದನ್ನು ಸಂಬಂಧಿಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ” ಎಂದು ವಿದ್ಯಾರ್ಥಿನಿಯ ತಂದೆ ವಿವರಿಸಿದ್ದಾಗಿ ವರದಿ ತಿಳಿಸಿದೆ.

ಮಹಾರಾಷ್ಟ್ರ | ‘ಎಕ್ಸ್‌ಕ್ಯೂಸ್‌ಮಿ’ ಎಂದ ಮಹಿಳೆಯರಿಗೆ ಮರಾಠಿ ಮಾತನಾಡಿ ಎಂದು ಹಲ್ಲೆ ನಡೆಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...