Homeಮುಖಪುಟದಲಿತ ವಿದ್ಯಾರ್ಥಿಗೆ ಮೂತ್ರ ಕುಡಿಸಿದ ಸಹಪಾಠಿಗಳು: ಕಾನೂನು ವಿವಿಯಲ್ಲಿ ಅಮಾನವೀಯ ಘಟನೆ

ದಲಿತ ವಿದ್ಯಾರ್ಥಿಗೆ ಮೂತ್ರ ಕುಡಿಸಿದ ಸಹಪಾಠಿಗಳು: ಕಾನೂನು ವಿವಿಯಲ್ಲಿ ಅಮಾನವೀಯ ಘಟನೆ

- Advertisement -
- Advertisement -

ತಿರುಚ್ಚಿಯಲ್ಲಿರುವ ‘ತಮಿಳುನಾಡು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯ’ (ಟಿಎನ್‌ಎನ್‌ಎಲ್‌ಯು) ನಲ್ಲಿ ಅಮಾನವೀಯ ಘಟನೆ ನಡೆದಿದ್ದು, 22 ವರ್ಷದ ದಲಿತ ವಿದ್ಯಾರ್ಥಿಯೋರ್ವನಿಗೆ ಸಹಪಾಠಿಗಳು ಮೋಸದಿಂದ ಮೂತ್ರ ಕುಡಿಸಿದ್ದಾರೆ.

ಮೂಲಗಳ ಪ್ರಕಾರ, ತಿರುಚ್ಚಿ-ದಿಂಡುಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ‘ತಮಿಳುನಾಡು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯ’ದ ಆವರಣದಲ್ಲಿ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳ ಕಾರ್ಯಕ್ರಮದ ಸಂದರ್ಭದಲ್ಲಿ ಜನವರಿ 6, 2024 ರಂದು ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವಿದ್ಯಾರ್ಥಿಯ ದೂರಿನ ಮೇರೆಗೆ ಈ ಕುರಿತು ವಿವಿ ಸಮಿತಿ ತನಿಖೆಯನ್ನು ಆರಂಭಿಸಿದೆ.

ಅಂತಿಮ ವರ್ಷದ ದಲಿತ ವಿದ್ಯಾರ್ಥಿಯನ್ನು ಆತನ ಇಬ್ಬರು ಸಹಪಾಠಿಗಳು, ಅದರಲ್ಲಿ ಓರ್ವ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದಾನೆ. ಇಬ್ಬರು ಸಹಪಾಠಿಗಳು ಆತನಿಗೆ ತಂಪು ಪಾನೀಯದ ಜೊತೆ ಮೂತ್ರವನ್ನು ಬೆರೆಸಿ ಕುಡಿಯುವಂತೆ ಕೊಟ್ಟಿದ್ದಾರೆ. ಮರುದಿನ ತಾನು ಮೋಸ ಹೋಗಿರುವುದು ತಿಳಿದ ವಿದ್ಯಾರ್ಥಿಯು ಅಧ್ಯಾಪಕರಿಗೆ ದೂರು ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ತಮಿಳುನಾಡು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಎಸ್.ಎಂ. ಬಾಲಕೃಷ್ಣನ್ ಮಾತನಾಡಿದ್ದು, ದೂರನ್ನು ಗಂಭೀರವಾಗಿ ಪರಿಗಣಿಸಿದ ಸಂಸ್ಥೆಯು ಮುಂದಿನ ವಿಚಾರಣೆ ನಡೆಸಲು ಮೂವರು ಸಹಾಯಕ ಪ್ರಾಧ್ಯಾಪಕರನ್ನು ಒಳಗೊಂಡ ರ್ಯಾಗಿಂಗ್‌ ವಿರೋಧಿ ಸಮಿತಿಯನ್ನು ರಚಿಸಿದೆ. ಸಮಿತಿಯು ಜನವರಿ 18ರಂದು ತನ್ನ ವರದಿಯನ್ನು ಸಲ್ಲಿಸಲಿದೆ. ಆ ಬಳಿಕ ವರದಿಯ ಆಧಾರದಲ್ಲಿ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ರ್ಯಾಗಿಂಗ್‌ ವಿರೋಧಿ ಸಮಿತಿಯ ವರದಿಯ ಆಧಾರದ ಮೇಲೆ ಸಂಸ್ಥೆಯು ಮುಂದಿನ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ರಿಜಿಸ್ಟ್ರಾರ್ ಹೇಳಿದ್ದು, ಆರೋಪಿತ ವಿದ್ಯಾರ್ಥಿಗಳು ತಪ್ಪಿತಸ್ಥರೆಂದು ಕಂಡುಬಂದರೆ, ವಿಶ್ವವಿದ್ಯಾಲಯವು ಅವರ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳಲಿದೆ ಮತ್ತು ಮುಂದಿನ ಕ್ರಮಕ್ಕೆ ಪೊಲೀಸರಿಗೆ ದೂರು ನೀಡಲಾಗುವುದು ಎಂದು ಹೇಳಿದ್ದಾರೆ.

ಇಂತದ್ದೇ ಪ್ರಕರಣ 2018ರ ಆಗಸ್ಟ್‌ನಲ್ಲಿ ಪಂಜಾಬ್‌ನ ಜಲಂಧರ್‌ನಲ್ಲಿ ನಡೆದಿತ್ತು. 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಸಹಪಾಠಿಗಳು ಮೋಸದಿಂದ ಮೂತ್ರ ಕುಡಿಸಿದ್ದರು. ಈ ಬಗ್ಗೆ ವಿದ್ಯಾರ್ಥಿ ಶಿಕ್ಷಕರ ಬಳಿ ದೂರು ನೀಡಲು ಹೋದಾಗ ಶಿಕ್ಷಕಿ ಬಾಲಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದ ನೊಂದ ಬಾಲಕ ಮನೆಯ ಮೇಲ್ಛಾವಣೆಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. 12 ವರ್ಷದ ಬಾಲಕನಿಗೆ ಜಾತಿ ನಿಂದನೆ ಮತ್ತು ಹಲ್ಲೆ ನಡೆಸಿದ ಆರೋಪದ ಮೇಲೆ ಶಿಕ್ಷಕಿ ಶ್ರೀಕಿ ಶರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ಕುರಿತು ಬಾಲಕನ ತಾಯಿಯು ಪೊಲೀಸರಿಗೆ ದೂರು ನೀಡಿದ್ದರು. ಮಗನ ಕೆಲವು ಸಹಪಾಠಿಗಳು ಅವನ ನೀರಿನ ಬಾಟಲಿಗೆ ಮೂತ್ರ ವಿಸರ್ಜನೆ ಮಾಡಿದರು ಮತ್ತು ಅವನು ಬಾಟಲಿಯ ನೀರು ಕುಡಿದ ನಂತರ ಅವನನ್ನು ಹೀಯಾಳಿಸಿದ್ದಾರೆ. ಅವನು ತನ್ನ ತರಗತಿಯ ಶಿಕ್ಷಕರಿಗೆ ದೂರು ನೀಡಿದಾಗ ಶರ್ಮಾ ಅವನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನು ಓದಿ: ಬುಡಕಟ್ಟು ಕುಟುಂಬಗಳಿಗೆ ಬಹಿಷ್ಕಾರ ಹಾಕಿದ ಗ್ರಾಮದ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...