Homeಮುಖಪುಟದಲಿತ ವಿದ್ಯಾರ್ಥಿಗೆ ಮೂತ್ರ ಕುಡಿಸಿದ ಸಹಪಾಠಿಗಳು: ಕಾನೂನು ವಿವಿಯಲ್ಲಿ ಅಮಾನವೀಯ ಘಟನೆ

ದಲಿತ ವಿದ್ಯಾರ್ಥಿಗೆ ಮೂತ್ರ ಕುಡಿಸಿದ ಸಹಪಾಠಿಗಳು: ಕಾನೂನು ವಿವಿಯಲ್ಲಿ ಅಮಾನವೀಯ ಘಟನೆ

- Advertisement -
- Advertisement -

ತಿರುಚ್ಚಿಯಲ್ಲಿರುವ ‘ತಮಿಳುನಾಡು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯ’ (ಟಿಎನ್‌ಎನ್‌ಎಲ್‌ಯು) ನಲ್ಲಿ ಅಮಾನವೀಯ ಘಟನೆ ನಡೆದಿದ್ದು, 22 ವರ್ಷದ ದಲಿತ ವಿದ್ಯಾರ್ಥಿಯೋರ್ವನಿಗೆ ಸಹಪಾಠಿಗಳು ಮೋಸದಿಂದ ಮೂತ್ರ ಕುಡಿಸಿದ್ದಾರೆ.

ಮೂಲಗಳ ಪ್ರಕಾರ, ತಿರುಚ್ಚಿ-ದಿಂಡುಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ‘ತಮಿಳುನಾಡು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯ’ದ ಆವರಣದಲ್ಲಿ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳ ಕಾರ್ಯಕ್ರಮದ ಸಂದರ್ಭದಲ್ಲಿ ಜನವರಿ 6, 2024 ರಂದು ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವಿದ್ಯಾರ್ಥಿಯ ದೂರಿನ ಮೇರೆಗೆ ಈ ಕುರಿತು ವಿವಿ ಸಮಿತಿ ತನಿಖೆಯನ್ನು ಆರಂಭಿಸಿದೆ.

ಅಂತಿಮ ವರ್ಷದ ದಲಿತ ವಿದ್ಯಾರ್ಥಿಯನ್ನು ಆತನ ಇಬ್ಬರು ಸಹಪಾಠಿಗಳು, ಅದರಲ್ಲಿ ಓರ್ವ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದಾನೆ. ಇಬ್ಬರು ಸಹಪಾಠಿಗಳು ಆತನಿಗೆ ತಂಪು ಪಾನೀಯದ ಜೊತೆ ಮೂತ್ರವನ್ನು ಬೆರೆಸಿ ಕುಡಿಯುವಂತೆ ಕೊಟ್ಟಿದ್ದಾರೆ. ಮರುದಿನ ತಾನು ಮೋಸ ಹೋಗಿರುವುದು ತಿಳಿದ ವಿದ್ಯಾರ್ಥಿಯು ಅಧ್ಯಾಪಕರಿಗೆ ದೂರು ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ತಮಿಳುನಾಡು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಎಸ್.ಎಂ. ಬಾಲಕೃಷ್ಣನ್ ಮಾತನಾಡಿದ್ದು, ದೂರನ್ನು ಗಂಭೀರವಾಗಿ ಪರಿಗಣಿಸಿದ ಸಂಸ್ಥೆಯು ಮುಂದಿನ ವಿಚಾರಣೆ ನಡೆಸಲು ಮೂವರು ಸಹಾಯಕ ಪ್ರಾಧ್ಯಾಪಕರನ್ನು ಒಳಗೊಂಡ ರ್ಯಾಗಿಂಗ್‌ ವಿರೋಧಿ ಸಮಿತಿಯನ್ನು ರಚಿಸಿದೆ. ಸಮಿತಿಯು ಜನವರಿ 18ರಂದು ತನ್ನ ವರದಿಯನ್ನು ಸಲ್ಲಿಸಲಿದೆ. ಆ ಬಳಿಕ ವರದಿಯ ಆಧಾರದಲ್ಲಿ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ರ್ಯಾಗಿಂಗ್‌ ವಿರೋಧಿ ಸಮಿತಿಯ ವರದಿಯ ಆಧಾರದ ಮೇಲೆ ಸಂಸ್ಥೆಯು ಮುಂದಿನ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ರಿಜಿಸ್ಟ್ರಾರ್ ಹೇಳಿದ್ದು, ಆರೋಪಿತ ವಿದ್ಯಾರ್ಥಿಗಳು ತಪ್ಪಿತಸ್ಥರೆಂದು ಕಂಡುಬಂದರೆ, ವಿಶ್ವವಿದ್ಯಾಲಯವು ಅವರ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳಲಿದೆ ಮತ್ತು ಮುಂದಿನ ಕ್ರಮಕ್ಕೆ ಪೊಲೀಸರಿಗೆ ದೂರು ನೀಡಲಾಗುವುದು ಎಂದು ಹೇಳಿದ್ದಾರೆ.

ಇಂತದ್ದೇ ಪ್ರಕರಣ 2018ರ ಆಗಸ್ಟ್‌ನಲ್ಲಿ ಪಂಜಾಬ್‌ನ ಜಲಂಧರ್‌ನಲ್ಲಿ ನಡೆದಿತ್ತು. 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಸಹಪಾಠಿಗಳು ಮೋಸದಿಂದ ಮೂತ್ರ ಕುಡಿಸಿದ್ದರು. ಈ ಬಗ್ಗೆ ವಿದ್ಯಾರ್ಥಿ ಶಿಕ್ಷಕರ ಬಳಿ ದೂರು ನೀಡಲು ಹೋದಾಗ ಶಿಕ್ಷಕಿ ಬಾಲಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದ ನೊಂದ ಬಾಲಕ ಮನೆಯ ಮೇಲ್ಛಾವಣೆಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. 12 ವರ್ಷದ ಬಾಲಕನಿಗೆ ಜಾತಿ ನಿಂದನೆ ಮತ್ತು ಹಲ್ಲೆ ನಡೆಸಿದ ಆರೋಪದ ಮೇಲೆ ಶಿಕ್ಷಕಿ ಶ್ರೀಕಿ ಶರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ಕುರಿತು ಬಾಲಕನ ತಾಯಿಯು ಪೊಲೀಸರಿಗೆ ದೂರು ನೀಡಿದ್ದರು. ಮಗನ ಕೆಲವು ಸಹಪಾಠಿಗಳು ಅವನ ನೀರಿನ ಬಾಟಲಿಗೆ ಮೂತ್ರ ವಿಸರ್ಜನೆ ಮಾಡಿದರು ಮತ್ತು ಅವನು ಬಾಟಲಿಯ ನೀರು ಕುಡಿದ ನಂತರ ಅವನನ್ನು ಹೀಯಾಳಿಸಿದ್ದಾರೆ. ಅವನು ತನ್ನ ತರಗತಿಯ ಶಿಕ್ಷಕರಿಗೆ ದೂರು ನೀಡಿದಾಗ ಶರ್ಮಾ ಅವನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನು ಓದಿ: ಬುಡಕಟ್ಟು ಕುಟುಂಬಗಳಿಗೆ ಬಹಿಷ್ಕಾರ ಹಾಕಿದ ಗ್ರಾಮದ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...