Homeಮುಖಪುಟದಲಿತ ವಿದ್ಯಾರ್ಥಿಗೆ ಮೂತ್ರ ಕುಡಿಸಿದ ಸಹಪಾಠಿಗಳು: ಕಾನೂನು ವಿವಿಯಲ್ಲಿ ಅಮಾನವೀಯ ಘಟನೆ

ದಲಿತ ವಿದ್ಯಾರ್ಥಿಗೆ ಮೂತ್ರ ಕುಡಿಸಿದ ಸಹಪಾಠಿಗಳು: ಕಾನೂನು ವಿವಿಯಲ್ಲಿ ಅಮಾನವೀಯ ಘಟನೆ

- Advertisement -
- Advertisement -

ತಿರುಚ್ಚಿಯಲ್ಲಿರುವ ‘ತಮಿಳುನಾಡು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯ’ (ಟಿಎನ್‌ಎನ್‌ಎಲ್‌ಯು) ನಲ್ಲಿ ಅಮಾನವೀಯ ಘಟನೆ ನಡೆದಿದ್ದು, 22 ವರ್ಷದ ದಲಿತ ವಿದ್ಯಾರ್ಥಿಯೋರ್ವನಿಗೆ ಸಹಪಾಠಿಗಳು ಮೋಸದಿಂದ ಮೂತ್ರ ಕುಡಿಸಿದ್ದಾರೆ.

ಮೂಲಗಳ ಪ್ರಕಾರ, ತಿರುಚ್ಚಿ-ದಿಂಡುಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ‘ತಮಿಳುನಾಡು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯ’ದ ಆವರಣದಲ್ಲಿ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳ ಕಾರ್ಯಕ್ರಮದ ಸಂದರ್ಭದಲ್ಲಿ ಜನವರಿ 6, 2024 ರಂದು ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವಿದ್ಯಾರ್ಥಿಯ ದೂರಿನ ಮೇರೆಗೆ ಈ ಕುರಿತು ವಿವಿ ಸಮಿತಿ ತನಿಖೆಯನ್ನು ಆರಂಭಿಸಿದೆ.

ಅಂತಿಮ ವರ್ಷದ ದಲಿತ ವಿದ್ಯಾರ್ಥಿಯನ್ನು ಆತನ ಇಬ್ಬರು ಸಹಪಾಠಿಗಳು, ಅದರಲ್ಲಿ ಓರ್ವ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದಾನೆ. ಇಬ್ಬರು ಸಹಪಾಠಿಗಳು ಆತನಿಗೆ ತಂಪು ಪಾನೀಯದ ಜೊತೆ ಮೂತ್ರವನ್ನು ಬೆರೆಸಿ ಕುಡಿಯುವಂತೆ ಕೊಟ್ಟಿದ್ದಾರೆ. ಮರುದಿನ ತಾನು ಮೋಸ ಹೋಗಿರುವುದು ತಿಳಿದ ವಿದ್ಯಾರ್ಥಿಯು ಅಧ್ಯಾಪಕರಿಗೆ ದೂರು ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ತಮಿಳುನಾಡು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಎಸ್.ಎಂ. ಬಾಲಕೃಷ್ಣನ್ ಮಾತನಾಡಿದ್ದು, ದೂರನ್ನು ಗಂಭೀರವಾಗಿ ಪರಿಗಣಿಸಿದ ಸಂಸ್ಥೆಯು ಮುಂದಿನ ವಿಚಾರಣೆ ನಡೆಸಲು ಮೂವರು ಸಹಾಯಕ ಪ್ರಾಧ್ಯಾಪಕರನ್ನು ಒಳಗೊಂಡ ರ್ಯಾಗಿಂಗ್‌ ವಿರೋಧಿ ಸಮಿತಿಯನ್ನು ರಚಿಸಿದೆ. ಸಮಿತಿಯು ಜನವರಿ 18ರಂದು ತನ್ನ ವರದಿಯನ್ನು ಸಲ್ಲಿಸಲಿದೆ. ಆ ಬಳಿಕ ವರದಿಯ ಆಧಾರದಲ್ಲಿ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ರ್ಯಾಗಿಂಗ್‌ ವಿರೋಧಿ ಸಮಿತಿಯ ವರದಿಯ ಆಧಾರದ ಮೇಲೆ ಸಂಸ್ಥೆಯು ಮುಂದಿನ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ರಿಜಿಸ್ಟ್ರಾರ್ ಹೇಳಿದ್ದು, ಆರೋಪಿತ ವಿದ್ಯಾರ್ಥಿಗಳು ತಪ್ಪಿತಸ್ಥರೆಂದು ಕಂಡುಬಂದರೆ, ವಿಶ್ವವಿದ್ಯಾಲಯವು ಅವರ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳಲಿದೆ ಮತ್ತು ಮುಂದಿನ ಕ್ರಮಕ್ಕೆ ಪೊಲೀಸರಿಗೆ ದೂರು ನೀಡಲಾಗುವುದು ಎಂದು ಹೇಳಿದ್ದಾರೆ.

ಇಂತದ್ದೇ ಪ್ರಕರಣ 2018ರ ಆಗಸ್ಟ್‌ನಲ್ಲಿ ಪಂಜಾಬ್‌ನ ಜಲಂಧರ್‌ನಲ್ಲಿ ನಡೆದಿತ್ತು. 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಸಹಪಾಠಿಗಳು ಮೋಸದಿಂದ ಮೂತ್ರ ಕುಡಿಸಿದ್ದರು. ಈ ಬಗ್ಗೆ ವಿದ್ಯಾರ್ಥಿ ಶಿಕ್ಷಕರ ಬಳಿ ದೂರು ನೀಡಲು ಹೋದಾಗ ಶಿಕ್ಷಕಿ ಬಾಲಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದ ನೊಂದ ಬಾಲಕ ಮನೆಯ ಮೇಲ್ಛಾವಣೆಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. 12 ವರ್ಷದ ಬಾಲಕನಿಗೆ ಜಾತಿ ನಿಂದನೆ ಮತ್ತು ಹಲ್ಲೆ ನಡೆಸಿದ ಆರೋಪದ ಮೇಲೆ ಶಿಕ್ಷಕಿ ಶ್ರೀಕಿ ಶರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ಕುರಿತು ಬಾಲಕನ ತಾಯಿಯು ಪೊಲೀಸರಿಗೆ ದೂರು ನೀಡಿದ್ದರು. ಮಗನ ಕೆಲವು ಸಹಪಾಠಿಗಳು ಅವನ ನೀರಿನ ಬಾಟಲಿಗೆ ಮೂತ್ರ ವಿಸರ್ಜನೆ ಮಾಡಿದರು ಮತ್ತು ಅವನು ಬಾಟಲಿಯ ನೀರು ಕುಡಿದ ನಂತರ ಅವನನ್ನು ಹೀಯಾಳಿಸಿದ್ದಾರೆ. ಅವನು ತನ್ನ ತರಗತಿಯ ಶಿಕ್ಷಕರಿಗೆ ದೂರು ನೀಡಿದಾಗ ಶರ್ಮಾ ಅವನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನು ಓದಿ: ಬುಡಕಟ್ಟು ಕುಟುಂಬಗಳಿಗೆ ಬಹಿಷ್ಕಾರ ಹಾಕಿದ ಗ್ರಾಮದ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...