Homeಮುಖಪುಟದಲಿತ ಟೆಕ್ಕಿ ಕವಿನ್ ಮರ್ಯಾದೆಗೇಡು ಹತ್ಯೆ: ಪ್ರಮುಖ ಆರೋಪಿ ತಂದೆ ಸಬ್ ಇನ್ಸ್‌ಪೆಕ್ಟರ್ ಬಂಧನ, 5...

ದಲಿತ ಟೆಕ್ಕಿ ಕವಿನ್ ಮರ್ಯಾದೆಗೇಡು ಹತ್ಯೆ: ಪ್ರಮುಖ ಆರೋಪಿ ತಂದೆ ಸಬ್ ಇನ್ಸ್‌ಪೆಕ್ಟರ್ ಬಂಧನ, 5 ದಿನಗಳ ಪ್ರತಿಭಟನೆ ಬಳಿಕ ಮೃತದೇಹ ಸ್ವೀಕಾರ

- Advertisement -
- Advertisement -

ತಿರುನಲ್ವೇಲಿ, ತಮಿಳುನಾಡು: ಪ್ರೇಮಸಂಬಂಧದ ಕಾರಣಕ್ಕೆ ನಡೆದಿದೆ ಎನ್ನಲಾದ ದಲಿತ ಟೆಕ್ಕಿ ಕವಿನ್ ಸೆಲ್ವಗಣೇಶ್‌ (23) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿ ಸುರ್ಜಿತ್‌ನ ತಂದೆ ಮತ್ತು ಸಬ್ ಇನ್ಸ್‌ಪೆಕ್ಟರ್ ಸರವಣನ್ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಹತ್ಯೆಗೆ ಕಾರಣರಾದ ಎಲ್ಲರನ್ನೂ ಬಂಧಿಸುವವರೆಗೂ ಮೃತದೇಹ ಸ್ವೀಕರಿಸುವುದಿಲ್ಲ ಎಂದು ಕವಿನ್ ಕುಟುಂಬ ಐದು ದಿನಗಳ ಕಾಲ ನಡೆಸಿದ ತೀವ್ರ ಪ್ರತಿಭಟನೆಯ ನಂತರ ಈ ಬಂಧನ ನಡೆದಿದೆ.

ಈ ಪ್ರಕರಣದಲ್ಲಿ ಆರೋಪಿ ಸುರ್ಜಿತ್‌ರನ್ನು ಈಗಾಗಲೇ ಬಂಧಿಸಲಾಗಿದ್ದು, ಅವರ ತಂದೆಯನ್ನು ಸಹ ಬಂಧಿಸಬೇಕು ಎಂದು ಕವಿನ್ ಕುಟುಂಬ ಪಟ್ಟು ಹಿಡಿದಿತ್ತು. ಶುಕ್ರವಾರ, ಸಬ್ ಇನ್ಸ್‌ಪೆಕ್ಟರ್ ಸರವಣನ್‌ ಬಂಧನದ ನಂತರ, ಮೃತ ಟೆಕ್ಕಿಯ ಕುಟುಂಬ ತಿರುನಲ್ವೇಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತದೇಹವನ್ನು ಸ್ವೀಕರಿಸಿದೆ. ಈ ವೇಳೆ ಸಚಿವ ಕೆ.ಎನ್. ನೆಹರು ಮತ್ತು ಜಿಲ್ಲಾಧಿಕಾರಿ ಆರ್. ಸುಕುಮಾರ್ ಸಹ ಉಪಸ್ಥಿತರಿದ್ದರು.

ಪ್ರೀತಿಯೇ ಹತ್ಯೆಗೆ ಕಾರಣ

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಕವಿನ್ ಮತ್ತು ಆರೋಪಿ ಸುರ್ಜಿತ್‌ನ ಸಹೋದರಿ ಸುಭಾಷಿಣಿ ನಡುವಿನ ಪ್ರೇಮಸಂಬಂಧವೇ ಈ ಹತ್ಯೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಆದರೆ, ಸುಭಾಷಿಣಿ ಈ ಕುರಿತು ವಿಡಿಯೋವೊಂದರಲ್ಲಿ ಸ್ಪಷ್ಟಪಡಿಸಿದ್ದು, “ನಾವು ನಿಜವಾಗಿಯೂ ಪರಸ್ಪರ ಪ್ರೀತಿಸುತ್ತಿದ್ದೆವು. ಆದರೆ, ನಮ್ಮ ಸಂಬಂಧದ ಬಗ್ಗೆ ತಕ್ಷಣವೇ ನಮ್ಮ ಪೋಷಕರಿಗೆ ತಿಳಿಸಬಾರದೆಂದು ನಿರ್ಧರಿಸಿದ್ದೆವು. ಮೇ 30ರಂದು ನನ್ನ ಅಣ್ಣ ಸುರ್ಜಿತ್ ಈ ವಿಷಯವನ್ನು ನನ್ನ ತಂದೆಗೆ ತಿಳಿಸಿದ್ದ. ಆದರೆ, ಕವಿನ್ ಸ್ವಲ್ಪ ಸಮಯ ಬೇಕು ಎಂದಿದ್ದರಿಂದ ನಾನು ಸುಮ್ಮನಿದ್ದೆ” ಎಂದು ಹೇಳಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ, ಕವಿನ್ ಅವರ ಸಂಬಂಧಿ ಸೆಲ್ವಂ, “ಇದು ಸ್ಪಷ್ಟವಾಗಿ ಮರ್ಯಾದೆಗೇಡು ಹತ್ಯೆ (Honour killing). ಸುರ್ಜಿತ್‌ ಬಂಧನವಾಗಿದೆ, ಆದರೆ ಅವನ ತಂದೆ-ತಾಯಿಯನ್ನೂ ಬಂಧಿಸಬೇಕು. ಎಫ್‌ಐಆರ್ ಆಧಾರದ ಮೇಲೆ ಅವರನ್ನು ಬಂಧಿಸಲು ಅವಕಾಶವಿದೆ,” ಎಂದು ಒತ್ತಾಯಿಸಿದ್ದರು. ಸಾರ್ವಜನಿಕರ ಆಕ್ರೋಶ ಮತ್ತು ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ತನಿಖೆಗಾಗಿ ಸಿಐಡಿ (Crime Branch–CID) ಗೆ ವರ್ಗಾಯಿಸಲಾಗಿದೆ.

ಪ್ರಕರಣದ ಹಿನ್ನೆಲೆ

ಕವಿನ್ ಸೆಲ್ವಗಣೇಶ್ ಮತ್ತು ಸುಭಾಷಿಣಿ ಪ್ರೀತಿಸುತ್ತಿದ್ದರು. ಈ ಸಂಬಂಧ ಸುರ್ಜಿತ್‌ಗೆ ಇಷ್ಟವಿರಲಿಲ್ಲ. ಮೇ 30ರಂದು ಕವಿನ್‌ರನ್ನು ಆತನ ಪ್ರೇಯಸಿ ಸುಭಾಷಿಣಿ ಕೆಲಸ ಮಾಡುತ್ತಿದ್ದ ಸಿಧಾ ಕೇಂದ್ರದ ಬಳಿ ಸುರ್ಜಿತ್ ಬೈಕಿನಲ್ಲಿ ಕರೆದುಕೊಂಡು ಹೋಗಿದ್ದನು. ಸಿಸಿಟಿವಿ ದೃಶ್ಯಗಳಲ್ಲಿ ಈ ಘಟನೆ ದಾಖಲಾಗಿದೆ. ನಂತರ ಕವಿನ್ ದೇಹವು ತೀವ್ರ ಗಾಯಗಳೊಂದಿಗೆ ಪತ್ತೆಯಾಗಿತ್ತು. ಸುರ್ಜಿತ್‌ನನ್ನು ಕೊಲೆ, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಸಬ್ ಇನ್ಸ್‌ಪೆಕ್ಟರ್ ಸರವಣನ್ ಅವರ ಬಂಧನದ ನಂತರ, ನ್ಯಾಯ ಸಿಗುವ ಭರವಸೆಯಲ್ಲಿ ಕುಟುಂಬವು ಪ್ರತಿಭಟನೆಯನ್ನು ಹಿಂತೆಗೆದುಕೊಂಡು ಮೃತದೇಹವನ್ನು ಸ್ವೀಕರಿಸಿದೆ. ಈ ಘಟನೆ ತಮಿಳುನಾಡಿನಲ್ಲಿ ಜಾತಿವಾದದ ವಿರುದ್ಧ ತೀವ್ರ ಚರ್ಚೆಗೆ ಕಾರಣವಾಗಿದ್ದು, ಕಮಲ್ ಹಾಸನ್ ಸೇರಿದಂತೆ ಹಲವು ರಾಜಕೀಯ ನಾಯಕರು ಖಂಡಿಸಿದ್ದಾರೆ.

ಮುಂಬೈ-ಕೋಲ್ಕತ್ತಾ ಇಂಡಿಗೋ ವಿಮಾನದಲ್ಲಿ ಮುಸ್ಲಿಂ ಪ್ರಯಾಣಿಕನಿಗೆ ಕಪಾಳಮೋಕ್ಷ-video

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...