Homeಮುಖಪುಟದಲಿತ ಟೆಕ್ಕಿ ಕವಿನ್ ಮರ್ಯಾದೆಗೇಡು ಹತ್ಯೆ: ಪ್ರಮುಖ ಆರೋಪಿ ತಂದೆ ಸಬ್ ಇನ್ಸ್‌ಪೆಕ್ಟರ್ ಬಂಧನ, 5...

ದಲಿತ ಟೆಕ್ಕಿ ಕವಿನ್ ಮರ್ಯಾದೆಗೇಡು ಹತ್ಯೆ: ಪ್ರಮುಖ ಆರೋಪಿ ತಂದೆ ಸಬ್ ಇನ್ಸ್‌ಪೆಕ್ಟರ್ ಬಂಧನ, 5 ದಿನಗಳ ಪ್ರತಿಭಟನೆ ಬಳಿಕ ಮೃತದೇಹ ಸ್ವೀಕಾರ

- Advertisement -
- Advertisement -

ತಿರುನಲ್ವೇಲಿ, ತಮಿಳುನಾಡು: ಪ್ರೇಮಸಂಬಂಧದ ಕಾರಣಕ್ಕೆ ನಡೆದಿದೆ ಎನ್ನಲಾದ ದಲಿತ ಟೆಕ್ಕಿ ಕವಿನ್ ಸೆಲ್ವಗಣೇಶ್‌ (23) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿ ಸುರ್ಜಿತ್‌ನ ತಂದೆ ಮತ್ತು ಸಬ್ ಇನ್ಸ್‌ಪೆಕ್ಟರ್ ಸರವಣನ್ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಹತ್ಯೆಗೆ ಕಾರಣರಾದ ಎಲ್ಲರನ್ನೂ ಬಂಧಿಸುವವರೆಗೂ ಮೃತದೇಹ ಸ್ವೀಕರಿಸುವುದಿಲ್ಲ ಎಂದು ಕವಿನ್ ಕುಟುಂಬ ಐದು ದಿನಗಳ ಕಾಲ ನಡೆಸಿದ ತೀವ್ರ ಪ್ರತಿಭಟನೆಯ ನಂತರ ಈ ಬಂಧನ ನಡೆದಿದೆ.

ಈ ಪ್ರಕರಣದಲ್ಲಿ ಆರೋಪಿ ಸುರ್ಜಿತ್‌ರನ್ನು ಈಗಾಗಲೇ ಬಂಧಿಸಲಾಗಿದ್ದು, ಅವರ ತಂದೆಯನ್ನು ಸಹ ಬಂಧಿಸಬೇಕು ಎಂದು ಕವಿನ್ ಕುಟುಂಬ ಪಟ್ಟು ಹಿಡಿದಿತ್ತು. ಶುಕ್ರವಾರ, ಸಬ್ ಇನ್ಸ್‌ಪೆಕ್ಟರ್ ಸರವಣನ್‌ ಬಂಧನದ ನಂತರ, ಮೃತ ಟೆಕ್ಕಿಯ ಕುಟುಂಬ ತಿರುನಲ್ವೇಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತದೇಹವನ್ನು ಸ್ವೀಕರಿಸಿದೆ. ಈ ವೇಳೆ ಸಚಿವ ಕೆ.ಎನ್. ನೆಹರು ಮತ್ತು ಜಿಲ್ಲಾಧಿಕಾರಿ ಆರ್. ಸುಕುಮಾರ್ ಸಹ ಉಪಸ್ಥಿತರಿದ್ದರು.

ಪ್ರೀತಿಯೇ ಹತ್ಯೆಗೆ ಕಾರಣ

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಕವಿನ್ ಮತ್ತು ಆರೋಪಿ ಸುರ್ಜಿತ್‌ನ ಸಹೋದರಿ ಸುಭಾಷಿಣಿ ನಡುವಿನ ಪ್ರೇಮಸಂಬಂಧವೇ ಈ ಹತ್ಯೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಆದರೆ, ಸುಭಾಷಿಣಿ ಈ ಕುರಿತು ವಿಡಿಯೋವೊಂದರಲ್ಲಿ ಸ್ಪಷ್ಟಪಡಿಸಿದ್ದು, “ನಾವು ನಿಜವಾಗಿಯೂ ಪರಸ್ಪರ ಪ್ರೀತಿಸುತ್ತಿದ್ದೆವು. ಆದರೆ, ನಮ್ಮ ಸಂಬಂಧದ ಬಗ್ಗೆ ತಕ್ಷಣವೇ ನಮ್ಮ ಪೋಷಕರಿಗೆ ತಿಳಿಸಬಾರದೆಂದು ನಿರ್ಧರಿಸಿದ್ದೆವು. ಮೇ 30ರಂದು ನನ್ನ ಅಣ್ಣ ಸುರ್ಜಿತ್ ಈ ವಿಷಯವನ್ನು ನನ್ನ ತಂದೆಗೆ ತಿಳಿಸಿದ್ದ. ಆದರೆ, ಕವಿನ್ ಸ್ವಲ್ಪ ಸಮಯ ಬೇಕು ಎಂದಿದ್ದರಿಂದ ನಾನು ಸುಮ್ಮನಿದ್ದೆ” ಎಂದು ಹೇಳಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ, ಕವಿನ್ ಅವರ ಸಂಬಂಧಿ ಸೆಲ್ವಂ, “ಇದು ಸ್ಪಷ್ಟವಾಗಿ ಮರ್ಯಾದೆಗೇಡು ಹತ್ಯೆ (Honour killing). ಸುರ್ಜಿತ್‌ ಬಂಧನವಾಗಿದೆ, ಆದರೆ ಅವನ ತಂದೆ-ತಾಯಿಯನ್ನೂ ಬಂಧಿಸಬೇಕು. ಎಫ್‌ಐಆರ್ ಆಧಾರದ ಮೇಲೆ ಅವರನ್ನು ಬಂಧಿಸಲು ಅವಕಾಶವಿದೆ,” ಎಂದು ಒತ್ತಾಯಿಸಿದ್ದರು. ಸಾರ್ವಜನಿಕರ ಆಕ್ರೋಶ ಮತ್ತು ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ತನಿಖೆಗಾಗಿ ಸಿಐಡಿ (Crime Branch–CID) ಗೆ ವರ್ಗಾಯಿಸಲಾಗಿದೆ.

ಪ್ರಕರಣದ ಹಿನ್ನೆಲೆ

ಕವಿನ್ ಸೆಲ್ವಗಣೇಶ್ ಮತ್ತು ಸುಭಾಷಿಣಿ ಪ್ರೀತಿಸುತ್ತಿದ್ದರು. ಈ ಸಂಬಂಧ ಸುರ್ಜಿತ್‌ಗೆ ಇಷ್ಟವಿರಲಿಲ್ಲ. ಮೇ 30ರಂದು ಕವಿನ್‌ರನ್ನು ಆತನ ಪ್ರೇಯಸಿ ಸುಭಾಷಿಣಿ ಕೆಲಸ ಮಾಡುತ್ತಿದ್ದ ಸಿಧಾ ಕೇಂದ್ರದ ಬಳಿ ಸುರ್ಜಿತ್ ಬೈಕಿನಲ್ಲಿ ಕರೆದುಕೊಂಡು ಹೋಗಿದ್ದನು. ಸಿಸಿಟಿವಿ ದೃಶ್ಯಗಳಲ್ಲಿ ಈ ಘಟನೆ ದಾಖಲಾಗಿದೆ. ನಂತರ ಕವಿನ್ ದೇಹವು ತೀವ್ರ ಗಾಯಗಳೊಂದಿಗೆ ಪತ್ತೆಯಾಗಿತ್ತು. ಸುರ್ಜಿತ್‌ನನ್ನು ಕೊಲೆ, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಸಬ್ ಇನ್ಸ್‌ಪೆಕ್ಟರ್ ಸರವಣನ್ ಅವರ ಬಂಧನದ ನಂತರ, ನ್ಯಾಯ ಸಿಗುವ ಭರವಸೆಯಲ್ಲಿ ಕುಟುಂಬವು ಪ್ರತಿಭಟನೆಯನ್ನು ಹಿಂತೆಗೆದುಕೊಂಡು ಮೃತದೇಹವನ್ನು ಸ್ವೀಕರಿಸಿದೆ. ಈ ಘಟನೆ ತಮಿಳುನಾಡಿನಲ್ಲಿ ಜಾತಿವಾದದ ವಿರುದ್ಧ ತೀವ್ರ ಚರ್ಚೆಗೆ ಕಾರಣವಾಗಿದ್ದು, ಕಮಲ್ ಹಾಸನ್ ಸೇರಿದಂತೆ ಹಲವು ರಾಜಕೀಯ ನಾಯಕರು ಖಂಡಿಸಿದ್ದಾರೆ.

ಮುಂಬೈ-ಕೋಲ್ಕತ್ತಾ ಇಂಡಿಗೋ ವಿಮಾನದಲ್ಲಿ ಮುಸ್ಲಿಂ ಪ್ರಯಾಣಿಕನಿಗೆ ಕಪಾಳಮೋಕ್ಷ-video

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...